HomeಮುಖಪುಟCMDRF ಪ್ರಕರಣ: ಅರ್ಜಿ ವಜಾಗೊಳಿಸಿದ ಲೋಕಾಯುಕ್ತ ಪೀಠ; ಕೇರಳ ಸಿಎಂಗೆ ರಿಲೀಫ್

CMDRF ಪ್ರಕರಣ: ಅರ್ಜಿ ವಜಾಗೊಳಿಸಿದ ಲೋಕಾಯುಕ್ತ ಪೀಠ; ಕೇರಳ ಸಿಎಂಗೆ ರಿಲೀಫ್

- Advertisement -
- Advertisement -

ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿ (ಸಿಎಮ್‌ಡಿಆರ್‌ಎಫ್) ಅಡಿ ಹಣ ಬಿಡುಗಡೆ ಮಾಡುವಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ವಜನಪಕ್ಷಪಾತ ಮತ್ತು ಅವ್ಯವಹಾರ ಮಾಡಿದ್ದಾರೆ ಎನ್ನುವ ಆರೋಪಗಳ ಮೇಲೆ ಇತರ 18 ಜನರ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಲೋಕಾಯುಕ್ತದ ತ್ರಿಸದಸ್ಯ ಪೀಠ ಸೋಮವಾರ ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ಸಿಎಂ ಮತ್ತು ಇತರರ ವಿರುದ್ಧದ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪಗಳಲ್ಲಿ ಯಾವುದೇ ಪುರಾವೆಗಳಿಲ್ಲ ಎಂದು ಲೋಕಾಯುಕ್ತ ಪೀಠವು ಹೇಳಿದೆ.

ಈ ಪ್ರಕರಣದ ಆದೇಶವನ್ನು ಒಂದು ವರ್ಷಕ್ಕೂ ಹೆಚ್ಚು ಅವಧಿಗೆ ಕಾಯ್ದಿರಿಸಿದ ನಂತರ ಇದೀಗ ಲೋಕಾಯುಕ್ತರ ನಿರ್ಧಾರ ಹೊರಬಿದ್ದಿದೆ. ಸಾಂವಿಧಾನಿಕ ಸಂಸ್ಥೆಯ ಇಬ್ಬರು ನ್ಯಾಯಮೂರ್ತಿಗಳ ನಡುವಿನ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ಈ ವರ್ಷದ ಮಾರ್ಚ್‌ನಲ್ಲಿ ಲೋಕಾಯುಕ್ತದ ಪೂರ್ಣ ಪೀಠಕ್ಕೆ ಉಲ್ಲೇಖಿಸಲಾಗಿತ್ತು.

ಲೋಕಾಯುಕ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಹರುನ್ ಅಲ್ ರಶೀದ್ ಮತ್ತು ನ್ಯಾಯಮೂರ್ತಿ ಬಾಬು ಮ್ಯಾಥ್ಯೂ ಪಿ ಜೋಸೆಫ್ ಅವರಿದ್ದ ಪೀಠ ಸೋಮವಾರ ತೀರ್ಪು ನೀಡಿದ್ದು, ಸಿಎಂಡಿಆರ್‌ಎಫ್‌ನಿಂದ ಹಣ ಬಿಡುಗಡೆ ಮಾಡುವ ಅಧಿಕಾರ ಮುಖ್ಯಮಂತ್ರಿಗೆ ಇದೆ ಎಂದು ಹೇಳಿದ್ದಾರೆ.

ಸಿಎಂಡಿಆರ್‌ಎಫ್‌ನಿಂದ ಹಣ ಬಿಡುಗಡೆ ಮಾಡುವಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಮಾಡಿದ್ದಾರೆ ಎಂದು 2018ರಲ್ಲಿ ಕೇರಳ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಆರ್‌ಎಸ್ ಶಶಿಕುಮಾರ್ ಅವರು ಮುಖ್ಯಮಂತ್ರಿ ಮತ್ತು ಹಿಂದಿನ ಎಲ್‌ಡಿಎಫ್ ಕ್ಯಾಬಿನೆಟ್‌ನ ಸದಸ್ಯರು ಸೇರಿದಂತೆ 18 ಇತರರ ವಿರುದ್ಧ ಆರೋಪ ಮಾಡಿದ್ದರು.

ಅರ್ಜಿದಾರರು ಮುಖ್ಯವಾಗಿ 2017ರ ಕ್ಯಾಬಿನೆಟ್‌ನ ಕೆಲವು ನಿರ್ಧಾರಗಳನ್ನು ಪ್ರಶ್ನಿಸಿದ್ದಾರೆ, ಅಲ್ಲಿ ದಿವಂಗತ ಎನ್‌ಸಿಪಿ ರಾಜ್ಯಾಧ್ಯಕ್ಷ ಉಜವೂರ್ ವಿಜಯನ್ ಅವರ ಕುಟುಂಬದ ಚಿಕಿತ್ಸೆ ಮತ್ತು ಅವರ ಮಕ್ಕಳ ಶೈಕ್ಷಣಿಕ ವೆಚ್ಚಗಳಿಗಾಗಿ ಹಣಕಾಸಿನ ನೆರವು, ದಿವಂಗತ ಸಿಪಿಎಂ ಶಾಸಕ ಕೆಕೆ ರಾಮಚಂದ್ರನ್ ಅವರ ಕುಟುಂಬಕ್ಕೆ ನೀಡಿದ ಹಣ ಮತ್ತು ಅವರ ಮಗನಿಗೆ ಉದ್ಯೋಗ ಮತ್ತು ಆಗಿನ ರಾಜ್ಯ ಗೃಹ ಸಚಿವರಿಗೆ ಎಸ್ಕಾರ್ಟ್ ಡ್ಯೂಟಿ ಮಾಡುವಾಗ ಮೋಟಾರು ಅಪಘಾತದಲ್ಲಿ ಸಾವನ್ನಪ್ಪಿದ ಸಿವಿಲ್ ಪೊಲೀಸ್ ಅಧಿಕಾರಿಯ ಸಂಬಂಧಿಕರಿಗೆ ಆರ್ಥಿಕ ನೆರವು ನೀಡಲಾಯಿತು. ಈ ವಿಚಾರಗಳನ್ನು ಅರ್ಜಿದಾರರು ಪ್ರಸ್ತಾಪಿಸಿದ್ದಾರೆ.

ಸೋಮವಾರ ಅವರ ಅರ್ಜಿಯನ್ನು ವಜಾಗೊಳಿಸಿದ ನಂತರ, ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಶಶಿಕುಮಾರ್ ಹೇಳಿದ್ದಾರೆ.

”ಲೋಕಾಯುಕ್ತದ ಮೂವರೂ ನ್ಯಾಯಾಧೀಶರು (ರಾಜಕೀಯವಾಗಿ) ಪ್ರಭಾವಿತರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ನ್ಯಾಯಾಧೀಶರ ಕಡೆಯಿಂದ ಅಪ್ರಾಮಾಣಿಕತೆ ಕಂಡುಬಂದಿದೆ. ಇದು ಸತ್ಯವಾದ ತೀರ್ಪು ಅಲ್ಲ. ಸದ್ಯದಲ್ಲೇ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಿದ್ದು, ಅಲ್ಲಿಯೂ ನನಗೆ ನ್ಯಾಯ ಸಿಗದಿದ್ದರೆ ಸುಪ್ರೀಂ ಕೋರ್ಟ್‌ನ ಮೊರೆ ಹೋಗುತ್ತೇನೆ” ಎಂದು ಶಶಿಕುಮಾರ್ ಹೇಳಿದ್ದಾರೆ.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಲೋಕಾಯುಕ್ತರ ಆದೇಶವನ್ನು ಸ್ವಾಗತಿಸಿದ್ದಾರೆ. ”ಲೋಕಾಯುಕ್ತರ ಮುಂದೆ ಅರ್ಜಿ ಸಲ್ಲಿಸಿದ ವ್ಯಕ್ತಿ (ಕೇರಳ) ವಿಶ್ವವಿದ್ಯಾಲಯದ ಕಾಂಗ್ರೆಸ್ ಸಂಘಟನೆಯ ನಾಯಕರಾಗಿದ್ದರು. ಅಂತಹ ಅರ್ಜಿಗಳು ಸತ್ಯದಿಂದ ದೂರವಿರುತ್ತವೆ ಮತ್ತು ರಾಜಕೀಯ ಪ್ರೇರಿತವಾಗಿವೆ. ಈ ಹಿಂದೆ ವಿಶ್ವವಿದ್ಯಾನಿಲಯಗಳಿಗೆ ಸಂಬಂಧಿಸಿದಂತೆ ಅವರು ಸಲ್ಲಿಸಿದ್ದ ಅರ್ಜಿಗಳು ಸಹ ಇದೇ ರೀತಿಯಾಗಿದ್ದು, ಅವುಗಳನ್ನು ವಜಾಗೊಳಿಸಲಾಗಿದೆ” ಎಂದು ಸಿಪಿಐ(ಎಂ) ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಮಧ್ಯಪ್ರದೇಶ ದೇಶದ ‘ಭ್ರಷ್ಟಾಚಾರದ ರಾಜಧಾನಿ’: ರಾಹುಲ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...