Homeಮುಖಪುಟಧರ್ಮವೆಂಬುದು ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧವಾಗಿದೆ: ಎಂಕೆ ಸ್ಟಾಲಿನ್

ಧರ್ಮವೆಂಬುದು ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧವಾಗಿದೆ: ಎಂಕೆ ಸ್ಟಾಲಿನ್

- Advertisement -
- Advertisement -

ಧರ್ಮವೆಂಬುದು ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧದಂತೆ ಬಳಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕಿಡಿಕಾರಿದ್ದಾರೆ.

ಸ್ಪೀಕಿಂಗ್ ಫಾರ್ ಇಂಡಿಯಾ ಪಾಡ್​ಕಾಸ್ಟ್​ನಲ್ಲಿ ಮಾತನಾಡಿರುವ ಅವರು, ”ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಉರಿಯುತ್ತಿರುವ ಜ್ವಾಲೆಯಲ್ಲಿ ತಾವು ಬೆಚ್ಚಗಿರಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯು ಏಕತೆಯ ಪ್ರಜ್ಞೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ” ಎಂದು ಹೇಳಿದ್ದಾರೆ.

”ಮಣಿಪುರದಲ್ಲಿ ಹೊತ್ತಿಕೊಂಡ ಮತೀಯ ಬೆಂಕಿಯು ರಾಜ್ಯವನ್ನು ಸುಟ್ಟುಹಾಕಿತು. ಹರಿಯಾಣದಲ್ಲಿ ಧಾರ್ಮಿಕ ಮತಾಂಧತೆಯ ಬೆಂಕಿ ಅಮಾಯಕರ ಜೀವ ಮತ್ತು ಆಸ್ತಿಯನ್ನು ಬಲಿಪಡೆಯಿತು” ಎಂದು ಕಿಡಿಕಾರಿದ್ದಾರೆ.

”2024ರ ಚುನಾವಣೆಯಲ್ಲಿ ಯಾರು ಅಧಿಕಾರಕ್ಕೆ ಬರಬೇಕು ಎಂಬುದಕ್ಕಿಂತ, ಯಾರು ಅಧಿಕಾರಕ್ಕೆ ಬರಬಾರದು ಎಂಬುದು ಮುಖ್ಯವಾಗಿದೆ” ಎಂದು ಸ್ಟಾಲಿನ್ ಹೇಳಿದರು.

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಉದಯನಿಧಿ ಸ್ಟಾಲಿನ್

”ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಈ ರೋಗಿಗಳ ವಿರುದ್ಧ ಹೋರಾಡಿದರೆ ಸಾಲದು ಅದನ್ನು ಬುಡಸಮೇತ ಹೇಗೆ ನಿರ್ಮೂಲನೆ ಮಾಡಬೇಕೋ ಹಾಗೆಯೇ ಸನಾತನ ಧರ್ಮವನ್ನು ಕೂಡ ನಿರ್ಮೂಲನೆ ಮಾಡಬೇಕು” ಎಂದು ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು.

”ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ . ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ” ಎಂದಿದ್ದರು.

”ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವವರ ಪರವಾಗಿ ಮಾತನಾಡಿದ್ದೇನೆ” ಎಂದು ಉದಯನಿಧಿ ಸ್ಟಾಲಿನ್ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾದಂತೆ ನಿರ್ಮೂಲನೆ ಮಾಡಬೇಕು: ಉದಯನಿಧಿ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ಗುಂಡಿಕ್ಕುವ ಬೆದರಿಕೆ: ಬಿಜೆಪಿ ನಾಯಕನ ವಿರುದ್ಧ FIR

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...