Homeಮುಖಪುಟಆಡಳಿತದಲ್ಲಿ ಧರ್ಮ ಬೆರೆಸುವ ಯಾರೊಂದಿಗೂ ನನಗೆ ಸಂಬಂಧವಿರುವುದಿಲ್ಲ: ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ

ಆಡಳಿತದಲ್ಲಿ ಧರ್ಮ ಬೆರೆಸುವ ಯಾರೊಂದಿಗೂ ನನಗೆ ಸಂಬಂಧವಿರುವುದಿಲ್ಲ: ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ

ಕರ್ನಾಟಕದಲ್ಲಿ ಈಗಾಗಲೇ ಹಲವಾರು ಬ್ರಾಹ್ಮಣ್ಯದ ಪಕ್ಷಗಳಿವೆ, ಆಪ್ ರೀತಿಯ ಇನ್ನೊಂದರ ಅಗತ್ಯವಿಲ್ಲ - ನಟ ಚೇತನ್ ಅಭಿಮತ

- Advertisement -
- Advertisement -

ಆಡಳಿತದಲ್ಲಿ ಧರ್ಮ ಬೆರೆಸುವ ಯಾರೊಂದಿಗೂ ನನಗೆ ಯಾವುದೇ ರೀತಿಯ ಸಂಬಂಧವಿರುವುದಿಲ್ಲ ಎಂದು ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ ಸ್ಪಷ್ಟಪಡಿಸಿದ್ದಾರೆ.

ನೋಟುಗಳಲ್ಲಿ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಹಿಂದೆ ಆಮ್ ಆದ್ಮಿ ಪಕ್ಷದ ಬೆಂಬಲಿಗರಾಗಿದ್ದ ವಿಶಾಲ್ ದದ್ಲಾನಿಯವರ ಹೇಳಿಕೆಗಳು ಬಂದಿದೆ.

ತಮ್ಮ ಟ್ವೀಟ್‌ನಲ್ಲಿ ಅರವಿಂದ್ ಕೇಜ್ರಿವಾಲ್ ಅಥವಾ ನೋಟಿನ ವಿಷಯವನ್ನು ಪ್ರಸ್ತಾಪಿಸದ ವಿಶಾಲ್ ದದ್ಲಾನಿಯವರು ಬಹಳ ಸ್ಪಷ್ಟವಾಗಿ ಇನ್ನು ಮುಂದೆ ಆಪ್‌ ಪಕ್ಷದೊಂದಿಗೆ ಯಾವುದೇ ಸಂಬಂಧ ಹೊಂದುವುದಿಲ್ಲ ಎಂದು ತಿಳಿಸಿದ್ದಾರೆ.

“ನಾವು ಜಾತ್ಯಾತೀತ, ಸಮಾಜವಾದಿ ಗಣರಾಜ್ಯ ಎಂದು ನಮ್ಮ ಭಾರತದ ಸಂವಿಧಾನ ಹೇಳುತ್ತದೆ. ಆದ್ದರಿಂದ, ಆಡಳಿತದಲ್ಲಿ ಧರ್ಮಕ್ಕೆ ಯಾವುದೇ ಸ್ಥಾನವಿರುವಂತಿಲ್ಲ. ಇನ್ನೂ ಸ್ಪಷ್ಟವಾಗಿ ಹೇಳಬೇಕೆಂದರೆ, ಸರ್ಕಾರದ ಆಡಳಿತದಲ್ಲಿ ಯಾವುದೇ ಧರ್ಮದ ಯಾವುದೇ ಭಾಗವನ್ನು ತರುವ ಯಾರೊಂದಿಗೂ ನನಗೆ ಯಾವುದೇ ಸಂಬಂಧವಿರುವುದಿಲ್ಲ” ಎಂದು ದದ್ಲಾನಿ ಟ್ವೀಟ್ ಮಾಡಿದ್ದಾರೆ.

ಕನ್ನಡ ಚಿತ್ರನಟ ಚೇತನ್ ಕೂಡ ಕೇಜ್ರಿವಾಲ್ ಮನವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. “ಎಎಪಿ ಪಕ್ಷದ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ಅವರು ಬ್ಯಾಂಕ್ ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮಿ ಫೋಟೋಗಳನ್ನು ಮುದ್ರಿಸಿ ಎಂದು ಆಗ್ರಹ ನೀಡಿದ್ದಾರೆ, ಇದರಿಂದ ದೇಶದ ಆರ್ಥಿಕತೆ ಸುಧಾರಿಸುತ್ತದೆ ಎಂದು ಕೂಡ ವಾದಿಸಿದ್ದಾರೆ. ಎಷ್ಟು ಅಸಂಬದ್ಧವಾದ ಹೇಳಿಕೆ! ಇಂತಹ ಅಸಾಂವಿಧಾನಿಕ ಮೂಢನಂಬಿಕೆಯ ಮೌಢ್ಯಗಳ ಹೇರಿಕೆಯನ್ನು ಕೇಜ್ರಿವಾಲ್ ಅವರು ನಿಲ್ಲಿಸಬೇಕು. ಕರ್ನಾಟಕದಲ್ಲಿ ಈಗಾಗಲೇ ಹಲವಾರು ಬ್ರಾಹ್ಮಣ್ಯದ ಪಕ್ಷಗಳಿವೆ, ಆಪ್ ರೀತಿಯ ಇನ್ನೊಂದರ ಅಗತ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್‌ರವರು ನೋಟುಗಳಲ್ಲಿ ದೇವರ ಚಿತ್ರವಿರಬೇಕೆಂದು ಬುಧವಾರ ಪ್ರತಿಪಾದಿಸಿದ್ದರು. “ಲಕ್ಷ್ಮಿ ಸಮೃದ್ಧಿಯ ದೇವತೆ ಮತ್ತು ಗಣೇಶನು ತೊಂದರೆಗಳನ್ನು ದೂರವಿಡುವ ದೇವರಾಗಿದ್ದು, ಈ ದೇವರುಗಳ ಚಿತ್ರ ನೋಟುಗಳ ಮೇಲೆ ಇದ್ದರೆ, ಇಡೀ ದೇಶವು ಅವರ ಆಶೀರ್ವಾದವನ್ನು ಪಡೆಯುತ್ತದೆ” ಎಂದು ಅವರು ಹೇಳಿದರು.

ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ ಎಂದು ತಮ್ಮ ಭಾಷಣವನ್ನು ಪ್ರಾರಂಭಿಸಿದ ಅವರು, “ಆರ್ಥಿಕತೆ ಸುಧಾರಿಸುವುದನ್ನು ಖಚಿತಪಡಿಸಿಕೊಳ್ಳಲು ಹಲವಾರು ಹಂತಗಳಿವೆ. ಇದರಲ್ಲಿ ಹೆಚ್ಚಿನ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ದೇಶದಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದು ಸೇರಿವೆ” ಎಂದು ಅವರು ಹೇಳಿದರು.

ಆದರೆ, ನಾವು ಎಷ್ಟೇ ಪ್ರಯತ್ನ ಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ, ಅದಕ್ಕಾಗಿ ನಮಗೆ ದೇವರ ಆಶೀರ್ವಾದ ಬೇಕು. ಉದ್ಯಮಿಗಳು ತಮ್ಮ ಕೆಲಸದ ಸ್ಥಳದಲ್ಲಿ ಗಣೇಶ ಮತ್ತು ಲಕ್ಷ್ಮಿ ವಿಗ್ರಹಗಳನ್ನು ಇಟ್ಟುಕೊಂಡು, ದಿನದ ಕೆಲಸವನ್ನು ಪ್ರಾರಂಭಿಸುವ ಮೊದಲು ಪ್ರತಿದಿನ ಪೂಜೆ ಮಾಡುತ್ತಾರೆ. ಅದೇ ರೀತಿ ಕರೆನ್ಸಿ ನೋಟುಗಳಲ್ಲಿ ದೇವರ ಫೋಟೋ ಹಾಕಿದರೆ ದೇಶದ ಆರ್ಥಿಕತೆ ಸುಧಾರಣೆಗೆ ಕೈಗೊಂಡಿರುವ ಪ್ರಯತ್ನ ಫಲ ನೀಡುವುದು ಖಚಿತ ಎಂದು ಮುಖ್ಯಮಂತ್ರಿ ಹೇಳಿದರು.

ಅರವಿಂದ್ ಕೇಜ್ರಿವಾಲ್‌ರವರ ಹೇಳಿಕೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅರವಿಂದ ಕೇಜ್ರಿವಾಲ್ ಈ ಹಿಂದೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿ ಆಗಿದ್ದವರು ಮತ್ತು, ಈಗ ಒಂದು ಸರ್ಕಾರದ ಮುಖ್ಯಸ್ಥ. ಅವರಿದ್ದ ಮತ್ತು ಈಗಿರುವ ಸ್ಥಾನ, ಧರ್ಮ ನಿರಪೇಕ್ಷ ಮನಸ್ಥಿತಿಯನ್ನು ಅನಿವಾರ್ಯವಾಗಿ ಬಯಸುವತ್ತದೆ. ನೋಟಿನ ಮೇಲೆ ಗಣೇಶ ಮತ್ತು ಲಕ್ಷ್ಮಿ ಚಿತ್ರ ಹಾಕಿದರೆ, ಇಂದಿನ ಭಾರತದ ಸಮಸ್ಯೆಗಳಿಗೆ ಪರಿಹಾರ ಸಿಕ್ಕುತ್ತದೆ ಎಂದು ಹೇಳುವ ಇವರು, ತಮ್ಮ ಹಿಂದಿನ ಮತ್ತು ಈಗಿನ ಕೆಲಸಗಳನ್ನು ತರ್ಕಬದ್ಧವಾಗಿ ಮಾಡಿರುವ ಬಗ್ಗೆ ಹಾಗೂ, ಮುಂದೆ ಮಾಡುವ ಬಗ್ಗೆ ಕೂಡಾ ಗಂಭೀರ ಅನುಮಾನಕ್ಕೆ ಎಡೆ ಮಾಡಿಕೊಡುತ್ತದೆ. ಇದು ಖೇದಕರ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...