Homeಕರ್ನಾಟಕಬಡವರ ಮಕ್ಕಳನ್ನು ಧರ್ಮ ರಕ್ಷಣೆ, ಗೋ ರಕ್ಷಣೆಗೆ ಬೀದಿಗೆ ಬಿಡುತ್ತಾರೆ, ತಮ್ಮ ಮಕ್ಕಳಿಗೆ ವಿದೇಶದಲ್ಲಿ ಉನ್ನತ...

ಬಡವರ ಮಕ್ಕಳನ್ನು ಧರ್ಮ ರಕ್ಷಣೆ, ಗೋ ರಕ್ಷಣೆಗೆ ಬೀದಿಗೆ ಬಿಡುತ್ತಾರೆ, ತಮ್ಮ ಮಕ್ಕಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬಡವರ ಮಕ್ಕಳಿಗೆ ಶಾಲ್ ಹಾಕಿಸಿ ಧರ್ಮ ರಕ್ಷಣೆಗೆ ಹಾಗೂ ಗೋ ರಕ್ಷಣೆಗೆ ಬೀದಿಗೆ ಬಿಡುತ್ತಾರೆ ಆದರೆ ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ. ಧರ್ಮ ರಕ್ಷಣೆಗೆ ಯಾಕೆ ತಮ್ಮ ಮಕ್ಕಳನ್ನು ಕಳಿಸುವುದಿಲ್ಲ? ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಿ ಮಾತನಾಡುತ್ತಿದ ಅವರು, ”ಪ್ರಧಾನಿ ನರೇಂದ್ರ ಮೋದಿ ವೈಜ್ಞಾನಿಕ ಮನೋಭಾವನೆಗೆ ಒತ್ತು ನೀಡದೆ 5000 ವರ್ಷಗಳ ಹಿಂದಿನ ಆಚರಣೆಗಳನ್ನು ಅನುಸರಿಸುವಂತೆ ಕರೆ ನೀಡುತ್ತಾ ಅವುಗಳನ್ನು ಅಳವಡಿಸಿಕೊಳ್ಳುವಂತೆ ಇಂಡಿಯನ್ ಸೈನ್ಸ್ ಕಾಂಗ್ರೆಸ್‌ನ ಕಾರ್ಯಕ್ರಮದಲ್ಲಿ ಹೇಳುತ್ತಾರೆ. ನಾನು ಹೇಳುವುದು ಇಷ್ಟೆ, ಎಲ್ಲವನ್ನೂ ಮಕ್ಕಳು ಓದಲಿ ಆದರೆ, ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಇತ್ತೀಚಿಗೆ ನಾನು ಅಮೆರಿಕಗೆ ಹೋದಾಗ ನಮ್ಮ ರಾಜ್ಯದ ಐತಿಹಾಸಿಕ ಹಿನ್ನೆಲೆಯ ಬಗ್ಗೆ ಅಲ್ಲಿ ವಿವರಿಸಿ ಹೇಳಬೇಕಿತ್ತು. ಅಲ್ಲಿನ ಕಂಪನಿಗಳ ಪ್ರಮುಖರು ಭಾರತದಲ್ಲಿ ಬಂಡವಾಳ ಹೂಡುವುದಕ್ಕೆ ಆಸಕ್ತಿ ತೋರಿಸಿದ್ದರು ಕಾರಣ ಇಲ್ಲಿನ ಮಾನವಸಂಪನ್ಮೂಲ… ಈ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಬಗ್ಗೆ ಅವರು ಉತ್ಸುಕರಾಗಿದ್ದಾರೆ. ಇದಕ್ಕೆ ಗುಣಮಟ್ಟದ ಶಿಕ್ಷಣ ಕಾರಣವಾಗಿದೆ ಎಂದು ಹೇಳಿದರು.

”ನಮ್ಮದೇಶದ ಪ್ರಬಲ ಶಕ್ತಿಯೇ ಮಾನವ ಸಂಪನ್ಮೂಲ, ಈ ಸಂಪನ್ಮೂಲಕ್ಕೆ ಇಡೀ ವಿಶ್ವದಲ್ಲೇ ಬೇಡಿಕೆ ಇದೆ. ಸಶಕ್ತ ರಾಷ್ಟ್ರ ನಿರ್ಮಾಣವಾಗಬೇಕಾದರೆ ಯುವಶಕ್ತಿಯನ್ನು ಬೆಳೆಸಬೇಕು. ಯುವಕರ ಸಂಖ್ಯಾಬಲಕ್ಕೆ ಸರಿಯಾದ ಶಿಕ್ಷಣ ನೀಡಿದಾಗ ಮಾತ್ರ ರಾಷ್ಟ್ರ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಅಣೆಕಟ್ಟು ಹಾಗೂ ರಸ್ತೆ ನಿರ್ಮಾಣದ ಜೊತೆಗೆ ಯುವಶಕ್ತಿಗೆ ವೈಜ್ಞಾನಿಕ ಶಿಕ್ಷಣ ನೀಡಿದಾಗ ಮಾತ್ರ ಸುಭದ್ರ ರಾಷ್ಟ್ರವಾಗಲಿದೆ” ಎಂದರು.

”ಸಂವಿಧಾನದ ಅಡಿಯಲ್ಲಿ ದೊರಕುವ ಸೌಲಭ್ಯಗಳನ್ನು ಬಳಸಿಕೊಂಡು ಎಲ್ಲರೂ ಉತ್ತಮ ಶಿಕ್ಷಣದೊಂದಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು, ಬಿ.ಆರ್.ಪಾಟೀಲ್ ಅವರಂತ ಪ್ರಗತಿಪರ
ಮನೋಭಾವದವರಿದ್ದು ಇದರಿಂದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆಯ ಬೆಳವಣಿಗೆಗೆ ಸಹಕಾರಿಯಾಗಲಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...