Homeಮುಖಪುಟ'ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ': ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್‌ನಲ್ಲೇ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವುದನ್ನು ಹಲವು ಕ್ಷೇತ್ರಗಳ ಪ್ರಮುಖರು ತೀವ್ರವಾಗಿ ಖಂಡಿಸಿದ್ದಾರೆ.

“ಸನಾತನ ಧರ್ಮದ ಹೆಸರಲ್ಲಿ ಸಂವಿಧಾನಾತ್ಮಕವಾಗಿ ಉನ್ನತ ಹುದ್ದೆಯಲ್ಲಿರುವ ಮುಖ್ಯ ನ್ಯಾಯಾಧೀಶರಾದ ಶ್ರೀ ಬಿ ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವುದು ಖಂಡನೀಯ ಬೆಳವಣಿಗೆ” ಎಂದು ಸಚಿವ ಎಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

“ಸಂವಿಧಾನದ ಮೇಲೆ ಮಾಡಲು ಹೊರಟಿರುವ ಈ ಧಾರ್ಮಿಕ ಅಂಧತ್ವದ ಸವಾರಿಯನ್ನು ಜವಾಬ್ದಾರಿಯುತವಾದ ಪ್ರಜೆಗಳಾದ ಎಲ್ಲರೂ ಖಂಡಿಸಬೇಕು” ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಇಂದು ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿರುವುದು ನಾಚಿಕೆಗೇಡು ಮತ್ತು ಅಸಹ್ಯಕರವಾಗಿದೆ. ಇದು ನಮ್ಮ ನ್ಯಾಯಾಂಗದ ಘನತೆ ಮತ್ತು ಕಾನೂನಿನ ಆಡಳಿತದ ಮೇಲಿನ ದಾಳಿಯಾಗಿದೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.

“ಅರ್ಹತೆ, ಸಮಗ್ರತೆ ಮತ್ತು ಪರಿಶ್ರಮದ ಮೂಲಕ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ಏರಿದ ಹಾಲಿ ಮುಖ್ಯ ನ್ಯಾಯಮೂರ್ತಿಯೊಬ್ಬರನ್ನು ಈ ರೀತಿ ಗುರಿಯಾಗಿಸಿಕೊಂಡಾಗ, ಅದು ತೀವ್ರ ಆತಂಕಕಾರಿ ಸಂದೇಶವನ್ನು ರವಾನಿಸುತ್ತದೆ. ಸಂವಿಧಾನವನ್ನು ಎತ್ತಿಹಿಡಿಯಲು ಸಾಮಾಜಿಕ ಅಡೆತಡೆಗಳನ್ನು ಮುರಿದ ವ್ಯಕ್ತಿಯನ್ನು ಬೆದರಿಸುವ ಮತ್ತು ಅವಮಾನಿಸುವ ಪ್ರಯತ್ನವನ್ನು ಇದು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

“ಇಂತಹ ಬುದ್ದಿಹೀನ ಕೃತ್ಯವು ಕಳೆದ ದಶಕದಲ್ಲಿ ನಮ್ಮ ಸಮಾಜವನ್ನು ದ್ವೇಷ, ಮತಾಂಧತೆ ಮತ್ತು ಧರ್ಮಾಂಧತೆ ಹೇಗೆ ಆವರಿಸಿದೆ ಎಂಬುದನ್ನು ತೋರಿಸುತ್ತದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ನ್ಯಾಯಾಂಗದ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯ. ಬೆದರಿಕೆಯಲ್ಲ, ನ್ಯಾಯ ಮತ್ತು ತರ್ಕ ಮೇಲುಗೈ ಸಾಧಿಸಲಿ” ಎಂದು ಖರ್ಗೆ ಹೇಳಿದ್ದಾರೆ.

“ಇದು ಸಿಜೆಐ ಅವರನ್ನು ಬೆದರಿಸಲು ಬ್ರಾಹ್ಮಣ ಮನಸ್ಥಿತಿಯ ವಕೀಲರೊಬ್ಬರು ಮಾಡಿರುವ ಹೇಯ ಪ್ರಯತ್ನ. ಇದು ಕ್ರಿಮಿನಲ್ ನ್ಯಾಯಾಂಗ ನಿಂದನೆಯಾಗಿದೆ. ವಕೀಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ.

“ಸನಾತನ ವಿರೋಧಿ’ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ವಕೀಲರೊಬ್ಬರು ನ್ಯಾಯಾಲಯದಲ್ಲಿ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ಯಾವುದೇ ಕಾರಣಕ್ಕೂ ಒಪ್ಪುವಂತದ್ದಲ್ಲ. ಸಿಜೆಐ ವಿಚಾರಣೆ ವೇಳೆ ವಿಷ್ಣುವಿನ ವಿಗ್ರಹದ ಬಗ್ಗೆ ಮಾಡಿದ ಟೀಕೆಗಳು ಈ ರೀತಿಯ ಹಿಂಸಾತ್ಮಕ ಕೃತ್ಯಕ್ಕೆ ಕಾರಣವಾಗುತ್ತಿದ್ದರೆ, ಇದು ಅತ್ಯಂತ ಆತಂಕದ ವಿಷಯವಾಗಿದೆ” ಎಂದು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಹೇಳಿದ್ದಾರೆ.

“ದುರದೃಷ್ಟವಶಾತ್, ಜಾತಿ ದ್ವೇಷ ಮತ್ತು ಧಾರ್ಮಿಕ ಅಸಹಿಷ್ಣುತೆಯ ಸಂಸ್ಕೃತಿಯು ‘ಸಾಮಾನ್ಯವಾಗುತ್ತಿದೆ. ಸಾಮಾಜಿಕ ಮಾಧ್ಯಮದ ಗುಂಪುಗಳು ಹಾಗೂ ವಿಷಮಯ ಟಿವಿ ‘ವಾದ-ವಿವಾದ’ಗಳಿಂದ ಇಂತಹ ಹಿಂಸೆಯನ್ನು ಉತ್ತೇಜಿಸಲಾಗುತ್ತಿದೆ” ಎಂದಿದ್ದಾರೆ.

‘ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’: ವಕೀಲ ಶೂ ಎಸೆಯಲು ಯತ್ನಿಸಿದ ಬಗ್ಗೆ ಸಿಜೆಐ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...