Homeಕರ್ನಾಟಕಮತಾಂಧ ಸರ್ವಾಧಿಕಾರದತ್ತ ಕರ್ನಾಟಕ: ವಿಧಾನಸಭೆಯ ಮುಂದೆ ‘ಧಾರ್ಮಿಕ ಬಂದೀಖಾನೆಯ ವಿಧೇಯಕ’

ಮತಾಂಧ ಸರ್ವಾಧಿಕಾರದತ್ತ ಕರ್ನಾಟಕ: ವಿಧಾನಸಭೆಯ ಮುಂದೆ ‘ಧಾರ್ಮಿಕ ಬಂದೀಖಾನೆಯ ವಿಧೇಯಕ’

- Advertisement -
- Advertisement -
  • ನೂರ್‌ ಶ್ರೀಧರ್‌‌

ಭಾರತ ಕಂಡರಿಯದ ಕಠೋರ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿದೆ. ಯುಎಪಿಎ ಕಾಯ್ದೆಗಳೂ ಸಹ ಇಷ್ಟೊಂದು ಕಠೋರ ಎಂಬುದನ್ನು ಗಮನಿಸಬೇಕು. ಈ ವಿಧೇಯಕದಲ್ಲಿ ಏನಿದೆ? ಯಾವ ಉದ್ದೇಶಕ್ಕೆ ಇದನ್ನು ತರಲಾಗಿದೆ? ಇದರ ಪರಣಾಮವೇನು? ಸಂಕ್ಷಿಪ್ತ ಟಿಪ್ಪಣಿ.

ವಿಧೇಯಕ ಏನು ಹೇಳುತ್ತಿದೆ?

  • ವಿಧೇಯಕಕ್ಕೆ “ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ” ಎಂಬ ಸುಂದರ ಹೆಸರನ್ನು ನೀಡಲಾಗಿದೆ.
  • ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ವಂಚನೆ, ಒತ್ತಾಯ, ಆಮಿಷ, ಮದುವೆ, ಮದುವೆ ವಾಗ್ದಾನ ಅಥವಾ ಇನ್ನಾವುದೇ ವಂಚಕ ವಿಧಾನಗಳ ಮೂಲಕ ಮಾಡಲಾಗುವ ಮತಾಂತರವನ್ನು ತಡೆಯುವುದು ಮತ್ತು ಶಿಕ್ಷಿಸುವುದು ಇದರ ಉದ್ದೇಶವಾಗಿ ಹೇಳಲಾಗಿದೆ.
  • ಅಪರಾಧಿಗಳಿಗೆ 3 ರಿಂದ 5 ವರ್ಷಗಳ ತನಕ ಕಾರಾಗೃಹದ ಶಿಕ್ಷೆ.
  • ಅಪ್ರಾಪ್ತ, ಅಸ್ವಸ್ಥಚಿತ್ತ, ಮಹಿಳೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರನ್ನು ಮತಾಂತರ ಮಾಡಿದರೆ ಕಠಿಣ ಶಿಕ್ಷೆ.
  • ಸಾಮೂಹಿಕ ಮತದಾನ ಮಾಡಿದರೆ ಮತ್ತಷ್ಟು ಕಠಿಣ ಶಿಕ್ಷೆ.
  • ಈ ಶಿಕ್ಷೆಗಳ ಪ್ರಮಾಣ ಏರುಗತಿಯಲ್ಲಿರುತ್ತದೆ. ಕನಿಷ್ಟ 3 ವರ್ಷದಿಂದ 10 ವರ್ಷಗಳವರೆಗಿನ ಕಾರಾಗೃಹ, 1 ಲಕ್ಷದವರೆಗೆ ಜುಲ್ಮಾನೆ ಮತ್ತು ಮತಾಂತರಗೊಂಡಿದ್ದವರಿಗೆ ಮತಾಂತರ ಮಾಡಿದವರು 5 ಲಕ್ಷದವರೆಗೆ ಪರಿಹಾರ ನೀಡಬೇಕು.
  • ಇದರಲ್ಲಿ ಯಾವುದಾದರೂ ಸಂಸ್ಥೆ ಒಳಗೊಂಡಿದ್ದರೆ ಅದರ ಮೇಲೂ ಕ್ರಮ ಕೈಗೊಳ್ಳಲಾಗುವುದು. ಅದು ಪಡೆಯುತ್ತಿರಬಹುದಾದ ಅನುದಾನಗಳನ್ನು ನಿಶೇಧಿಸಲಾಗುವುದು.
  • ಅಕ್ರಮ ಮತಾಂತರ ನಡೆದಿದೆ ಎಂಬ ದೂರನ್ನು ಮತಾಂತರಗೊಂಡವರನ್ನು ‘ಬಲ್ಲ’ ಯಾರು ಬೇಕಾದರೂ ದೂರು ನೀಡಬಹುದು.
  • ಈ ಅಪರಾಧವನ್ನು ಹೀನಾಯವಾದುದೆಂದು ಪರಿಗಣಿಸಲಾಗುವುದು ಮತ್ತು ಇದು ಜಾಮೀನು ರಹಿತವಾದದ್ದು.
  • ಆರೋಪ ಮಾಡಿದವರ ಮೇಲೆ ಅದನ್ನು ಸಾಬೀತು ಪಡಿಸುವ ಹೊಣೆ ಇರುವುದಿಲ್ಲ. ತಾನು ನಿರ್ದೂಷಿ ಎಂದು ಸಾಬೀತುಪಡಿಸುವ ಹೊಣೆ ಆರೋಪಕ್ಕೆ ಗುರಿಯಾದವರದು.
  • ಅಪರಾಧಕ್ಕೆ ಸಹಾಯ ಮಾಡಿದವರ ಮೇಲೂ ಮತ್ತು ಅವರ ಪರವಾಗಿ ನಿಲ್ಲುವವರ ಮೇಲೂ ಕ್ರಮ ಜರುಗಿಸಬಹುದು.
  • ಮತಾಂತರದ ಉದ್ದೇಶದಿಂದ ಮದುವೆಯಾಗಿದ್ದರೆ ಅಂತಹ ಅಂತರ್ ಧರ್ಮೀಯ ಮದುವೆಗಳನ್ನು ರದ್ದುಗೊಳಿಸಬಹುದು.
  • ಸಕ್ರಮವಾಗಿ ಮತಾಂತರವಾಗಲು ಬಯಸಿದಲ್ಲಿ ಅದಕ್ಕೆ ಸುದೀರ್ಘ ಪ್ರಕ್ರಿಯೆಯ ಮೂಲಕ ಹಾದು ಹೋಗಬೇಕು: 30 ದಿನಗಳ ಮೊದಲು ಮತಾಂತರವಾಗುವವರು ಮತ್ತು ಮತಾಂತರ ಮಾಡುವವರು ತಮ್ಮ ವಿವರ ಹಾಗೂ ಉದ್ದೇಶಗಳುಳ್ಳ ಅರ್ಜಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಅದರ ಕುರಿತು ತಾಲ್ಲೂಕು ಹಾಗೂ ಜಿಲ್ಲಾಧಿಕಾರಿ ಕಛೇರಿಯಲ್ಲಿ ಪ್ರಕಟಣೆ ಹಾಕಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು, ಬಂದ ಆಕ್ಷೇಪಣೆಗಳನ್ನು ವಿಚಾರಣೆಗೆ ಒಳಪಡಿಸಬೇಕು, ಅನುಮೋದನೆ ದೊರಕಿದಲ್ಲಿ ಅದರ ಪ್ರಕಟಣೆಯನ್ನು ಮತ್ತೆ ಜಿಲ್ಲಾಧಿಕಾರಿ ಕಛೇರಿಗಳಲ್ಲಿ ಹಾಕಬೇಕು. ಅದಕ್ಕೆ ಯಾವ ಆಕ್ಷೇಪಣೆಯೂ ಬರದಿದ್ದಲ್ಲಿ ಆಗ ಅದನ್ನು ಸಕ್ರಮಗೊಳಿಸಲಾಗುವುದು. ಆದರೆ ಈ ಪ್ರಕ್ರಿಯೆಯಲ್ಲಿ ದೋಷ ಅಥವ ದುರುದ್ದೇಶ ಕಂಡುಬಂದಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳು ಪೋಲೀಸರಿಗೆ ಸೂಚಿಸಬಹುದು. ಈ ಕ್ರಮವನ್ನು ಸರಿಯಾಗಿ ಪಾಲಿಸದಿದ್ದಲ್ಲಿ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಬಹುದು.

ಇದನ್ನೂ ಓದಿ:ಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

ಇದರ ಉದ್ದೇಶಗಳೇನು?

  • ಧಾರ್ಮಿಕ ದುರಭಿಮಾನ ಮತ್ತು ವಾಗ್ವಾದಗಳಲ್ಲಿ ರಾಜ್ಯವನ್ನು ಸಿಲುಕಿಸುವುದು ಮತ್ತು ಮುಂದಿನ ಚುನಾವಣೆಯಲ್ಲಿ ಅದರ ರಾಜಕೀಯ ಲಾಭ ಪಡೆಯುವುದು.
  • ದಲಿತ, ಆದಿವಾಸಿ, ಅಲೆಮಾರಿ ಸಮುದಾಯಗಳು ಜಾತಿ ಬಂಧನದಿಂದ ಮುಕ್ತಿ ಪಡೆಯದಂತೆ ಕಟ್ಟಿಡುವುದು.
  • ಅಂತರ್ ಧರ್ಮೀಯ ಮದುವೆಗಳನ್ನು ತಡೆಯುವುದು. ಮಹಳೆಯರನ್ನು ಹೊಸಿಲು ದಾಟದಂತೆ ಬಂಧಿಸುವುದು.
  • ಕ್ರೈಸ್ತ ಮತ್ತು ಇತರೆ ಧಾರ್ಮಿಕ ಸಂಸ್ಥೆಗಳನ್ನು ಗುರಿಯಾಗಿಸಿ ಕಟಕಟೆಯಲ್ಲಿ ನಿಲ್ಲಿಸುವುದು. ಅವರ ಸಂಪನ್ಮೂಲಗಳನ್ನು ರದ್ದುಗೊಳಿಸಿ, ಅವು ಮಾಡುತ್ತಿದ್ದ ಸೇವಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಮಾಡುವುದು.
  • ಹೋರಾಟಗಾರರನ್ನು ಮತ್ತೊಮ್ಮೆ ಭಾವನಾತ್ಮಕ ವಾದ ವಿವಾದದಲ್ಲಿ ಮುಳುಗಿಸಿ ನಿಜವಾದ ವಿಚಾರಗಳ ಸುತ್ತ ಹೋರಾಟಗಳು ಬೆಳೆಯದಂತೆ ನೋಡಿಕೊಳ್ಳುವುದು.

ಇದನ್ನೂ ಓದಿ:ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಇದರ ಪರಿಣಾಮಗಳೇನು?

  • ಆಮಿಷ ಮತ್ತು ಅನುಚಿತ ಪ್ರಭಾವದ ಹೆಸರಿನಲ್ಲಿ ಸಲೀಸಾಗಿ ಅಲ್ಪಸಂಖ್ಯಾತ ಧರ್ಮದ ವ್ಯಕ್ತಿಗಳನ್ನು ಮತ್ತು ಸಂಸ್ಥೆಗಳನ್ನು ಕಟಕಟೆಯಲ್ಲಿ ನಿಲ್ಲಿಸಬಹುದು.
  • ಅವರಿಗೆ ಜಾಮೀನು ಸಿಗದಂತೆ, ಅವರ ಪರವಾಗಿ ಯಾರೂ ದನಿ ಎತ್ತದಂತೆ ಮಾಡಬಹುದು. ಅವರ ಆರ್ಥಿಕ ಸಂಪನ್ಮೂಲಗಳನ್ನೆಲ್ಲಾ ರದ್ದುಗೊಳಿಸಬಹುದು.
  • ಕೇಸರಿ ಪಡೆಗಳಿಗೆ, ಪೋಲೀಸ್ ಪಡೆಗಳಿಗೆ ಮತ್ತು ಅಧಿಕಾರಿಗಳಿಗೆ ಅಲ್ಪಸಂಖ್ಯಾತರನ್ನು ಕಾಡುವ ಅಪರಿಮಿತ ಅಧಿಕಾರವನ್ನು ನೀಡಲಾಗುತ್ತಿದೆ.
  • ಜಾತಿ ಮತ್ತು ಪುರುಷ ಮೇಲಾಧಿಪತ್ಯದಿಂದ ದೌರ್ಜನ್ಯಗಳಿಂದ ಮುಕ್ತಿ ಪಡೆಯಲು ದಲಿತರು, ಆದಿವಾಸಿಗಳು, ಅಲೆಮಾರಿಗಳು ಬೌದ್ಧ, ಕ್ರೈಸ್ತ, ಸಿಖ್ ಅಥವ ಮುಸ್ಲಿಂ ಧರ್ಮಕ್ಕೆ ಮತಾತಂತರಗೊಂಡ ಪರಿಪಾಠ ಇದ್ದದ್ದಿದೆ. ಸ್ವಯಂ ಇಚ್ಛೆ ಮಾತ್ರವಲ್ಲ ಮುಕ್ತಿಯ ಮಾರ್ಗಗಳಾಗಿಯೂ ದಮನಿತ ಜನ ಅದನ್ನು ಪರಿಗಣಿಸಿದ್ದಿದೆ. ಸ್ವಯಂ ಅಂಬೇಡ್ಕರ್ ಅವರು ಮುಂದೆ ನಿಂತು ಅದನ್ನು ಮಾಡಿಸಿದ್ದಾರೆ. ಸ್ವಧರ್ಮದಲ್ಲಿ ಸೂಕ್ತ ಗೌರವ ನೀಡಿ ಉಳಿಸಿಕೊಳ್ಳಲಾಗದ ಜಾತಿಗ್ರಸ್ಥ ಮನಸ್ಸುಗಳು ಈಗ ಬಲವಂತದ ಮೂಲಕ ದಮನಿತ ಸಮುದಾಯಗಳನ್ನು ಜಾತಿ ಮತ್ತು ಪುರುಷಾಧಿಪತ್ಯ ವ್ಯವಸ್ಥೆಯಡಿ ಕಟ್ಟಿಡಲು ಹೊರಟಿದ್ದಾರೆ.
  • ಅಲ್ಪಸಂಖ್ಯಾತ ಸಮುದಾಯಗಳು ದೇಶದ ಉದ್ದಗಲಕ್ಕೂ ಆಹಾರ, ಆರೋಗ್ಯ, ಶಿಕ್ಷಣವನ್ನು ನೀಡುವಂತಹ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಫಲ ಈ ದೇಶದ ದಮನಿತ ಮತ್ತು ಶೋಷಿತ ಜನ ವರ್ಗಗಳು ಪಡೆದಿವೆ, ಪಡೆಯುತ್ತಿವೆ. ಈ ಎಲ್ಲಾ ಸಂಸ್ಥೆಗಳು ಶಂಕಿತ ಸ್ಥಾನದಲ್ಲಿ ನಿಲ್ಲಲಿವೆ ಮತ್ತು ನಿಂತು ಹೋಗುವ ಅಪಾಯವನ್ನು ಎದುರಿಸಲಿವೆ.
  • ಅಂತರ್ ಧರ್ಮೀಯ ಪ್ರೀತಿ ಮತ್ತು ಅಂತರ್ ಧರ್ಮೀಯ ಮದುವೆಗೆ ಶಾಶ್ವತವಾಗಿ ಮುಳ್ಳು ಬೇಲಿಯನ್ನು ಜಡಿಯಲಾಗುತ್ತಿದೆ.

ಮಾಡಬೇಕಾದುದೇನು?

ಮನುಷ್ಯರಾಗಿ ಪ್ರತಿರೋಧಿಸೋಣವೆ? ಗುಲಾಮತೆಯನ್ನು ಒಪ್ಪಿಕೊಳ್ಳೋಣವೆ? ಎಂಬ ತೀರ್ಮಾನಕ್ಕೆ ಬರಬೇಕಿರುವುದು. ಆಯ್ಕೆ ನಿಮ್ಮದು ನಮ್ಮದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನ ವಿರೋಧಿ ಕಾಯಿದೆಯನ್ನು ವಿರೋದಿ ಸುತ್ತನೆ. ವ್ಯಕ್ತಿಯ ಸ್ವಾತಂತ್ರ್ಯಕ್ಕೆ ದಕ್ಕೆ ತರುವ ಈ ಕಾಯಿದೆ ಕರ್ನಾಟಕ ಸರ್ಕಾರ ಕೈಬಿಡಬೇಕು

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...