Homeಕರ್ನಾಟಕಮತಾಂಧ ಸರ್ವಾಧಿಕಾರದತ್ತ ಕರ್ನಾಟಕ: ವಿಧಾನಸಭೆಯ ಮುಂದೆ ‘ಧಾರ್ಮಿಕ ಬಂದೀಖಾನೆಯ ವಿಧೇಯಕ’

ಮತಾಂಧ ಸರ್ವಾಧಿಕಾರದತ್ತ ಕರ್ನಾಟಕ: ವಿಧಾನಸಭೆಯ ಮುಂದೆ ‘ಧಾರ್ಮಿಕ ಬಂದೀಖಾನೆಯ ವಿಧೇಯಕ’

- Advertisement -
- Advertisement -
  • ನೂರ್‌ ಶ್ರೀಧರ್‌‌

ಭಾರತ ಕಂಡರಿಯದ ಕಠೋರ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿದೆ. ಯುಎಪಿಎ ಕಾಯ್ದೆಗಳೂ ಸಹ ಇಷ್ಟೊಂದು ಕಠೋರ ಎಂಬುದನ್ನು ಗಮನಿಸಬೇಕು. ಈ ವಿಧೇಯಕದಲ್ಲಿ ಏನಿದೆ? ಯಾವ ಉದ್ದೇಶಕ್ಕೆ ಇದನ್ನು ತರಲಾಗಿದೆ? ಇದರ ಪರಣಾಮವೇನು? ಸಂಕ್ಷಿಪ್ತ ಟಿಪ್ಪಣಿ.

ವಿಧೇಯಕ ಏನು ಹೇಳುತ್ತಿದೆ?

  • ವಿಧೇಯಕಕ್ಕೆ “ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ” ಎಂಬ ಸುಂದರ ಹೆಸರನ್ನು ನೀಡಲಾಗಿದೆ.
  • ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ವಂಚನೆ, ಒತ್ತಾಯ, ಆಮಿಷ, ಮದುವೆ, ಮದುವೆ ವಾಗ್ದಾನ ಅಥವಾ ಇನ್ನಾವುದೇ ವಂಚಕ ವಿಧಾನಗಳ ಮೂಲಕ ಮಾಡಲಾಗುವ ಮತಾಂತರವನ್ನು ತಡೆಯುವುದು ಮತ್ತು ಶಿಕ್ಷಿಸುವುದು ಇದರ ಉದ್ದೇಶವಾಗಿ ಹೇಳಲಾಗಿದೆ.
  • ಅಪರಾಧಿಗಳಿಗೆ 3 ರಿಂದ 5 ವರ್ಷಗಳ ತನಕ ಕಾರಾಗೃಹದ ಶಿಕ್ಷೆ.
  • ಅಪ್ರಾಪ್ತ, ಅಸ್ವಸ್ಥಚಿತ್ತ, ಮಹಿಳೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರನ್ನು ಮತಾಂತರ ಮಾಡಿದರೆ ಕಠಿಣ ಶಿಕ್ಷೆ.
  • ಸಾಮೂಹಿಕ ಮತದಾನ ಮಾಡಿದರೆ ಮತ್ತಷ್ಟು ಕಠಿಣ ಶಿಕ್ಷೆ.
  • ಈ ಶಿಕ್ಷೆಗಳ ಪ್ರಮಾಣ ಏರುಗತಿಯಲ್ಲಿರುತ್ತದೆ. ಕನಿಷ್ಟ 3 ವರ್ಷದಿಂದ 10 ವರ್ಷಗಳವರೆಗಿನ ಕಾರಾಗೃಹ, 1 ಲಕ್ಷದವರೆಗೆ ಜುಲ್ಮಾನೆ ಮತ್ತು ಮತಾಂತರಗೊಂಡಿದ್ದವರಿಗೆ ಮತಾಂತರ ಮಾಡಿದವರು 5 ಲಕ್ಷದವರೆಗೆ ಪರಿಹಾರ ನೀಡಬೇಕು.
  • ಇದರಲ್ಲಿ ಯಾವುದಾದರೂ ಸಂಸ್ಥೆ ಒಳಗೊಂಡಿದ್ದರೆ ಅದರ ಮೇಲೂ ಕ್ರಮ ಕೈಗೊಳ್ಳಲಾಗುವುದು. ಅದು ಪಡೆಯುತ್ತಿರಬಹುದಾದ ಅನುದಾನಗಳನ್ನು ನಿಶೇಧಿಸಲಾಗುವುದು.
  • ಅಕ್ರಮ ಮತಾಂತರ ನಡೆದಿದೆ ಎಂಬ ದೂರನ್ನು ಮತಾಂತರಗೊಂಡವರನ್ನು ‘ಬಲ್ಲ’ ಯಾರು ಬೇಕಾದರೂ ದೂರು ನೀಡಬಹುದು.
  • ಈ ಅಪರಾಧವನ್ನು ಹೀನಾಯವಾದುದೆಂದು ಪರಿಗಣಿಸಲಾಗುವುದು ಮತ್ತು ಇದು ಜಾಮೀನು ರಹಿತವಾದದ್ದು.
  • ಆರೋಪ ಮಾಡಿದವರ ಮೇಲೆ ಅದನ್ನು ಸಾಬೀತು ಪಡಿಸುವ ಹೊಣೆ ಇರುವುದಿಲ್ಲ. ತಾನು ನಿರ್ದೂಷಿ ಎಂದು ಸಾಬೀತುಪಡಿಸುವ ಹೊಣೆ ಆರೋಪಕ್ಕೆ ಗುರಿಯಾದವರದು.
  • ಅಪರಾಧಕ್ಕೆ ಸಹಾಯ ಮಾಡಿದವರ ಮೇಲೂ ಮತ್ತು ಅವರ ಪರವಾಗಿ ನಿಲ್ಲುವವರ ಮೇಲೂ ಕ್ರಮ ಜರುಗಿಸಬಹುದು.
  • ಮತಾಂತರದ ಉದ್ದೇಶದಿಂದ ಮದುವೆಯಾಗಿದ್ದರೆ ಅಂತಹ ಅಂತರ್ ಧರ್ಮೀಯ ಮದುವೆಗಳನ್ನು ರದ್ದುಗೊಳಿಸಬಹುದು.
  • ಸಕ್ರಮವಾಗಿ ಮತಾಂತರವಾಗಲು ಬಯಸಿದಲ್ಲಿ ಅದಕ್ಕೆ ಸುದೀರ್ಘ ಪ್ರಕ್ರಿಯೆಯ ಮೂಲಕ ಹಾದು ಹೋಗಬೇಕು: 30 ದಿನಗಳ ಮೊದಲು ಮತಾಂತರವಾಗುವವರು ಮತ್ತು ಮತಾಂತರ ಮಾಡುವವರು ತಮ್ಮ ವಿವರ ಹಾಗೂ ಉದ್ದೇಶಗಳುಳ್ಳ ಅರ್ಜಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಅದರ ಕುರಿತು ತಾಲ್ಲೂಕು ಹಾಗೂ ಜಿಲ್ಲಾಧಿಕಾರಿ ಕಛೇರಿಯಲ್ಲಿ ಪ್ರಕಟಣೆ ಹಾಕಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು, ಬಂದ ಆಕ್ಷೇಪಣೆಗಳನ್ನು ವಿಚಾರಣೆಗೆ ಒಳಪಡಿಸಬೇಕು, ಅನುಮೋದನೆ ದೊರಕಿದಲ್ಲಿ ಅದರ ಪ್ರಕಟಣೆಯನ್ನು ಮತ್ತೆ ಜಿಲ್ಲಾಧಿಕಾರಿ ಕಛೇರಿಗಳಲ್ಲಿ ಹಾಕಬೇಕು. ಅದಕ್ಕೆ ಯಾವ ಆಕ್ಷೇಪಣೆಯೂ ಬರದಿದ್ದಲ್ಲಿ ಆಗ ಅದನ್ನು ಸಕ್ರಮಗೊಳಿಸಲಾಗುವುದು. ಆದರೆ ಈ ಪ್ರಕ್ರಿಯೆಯಲ್ಲಿ ದೋಷ ಅಥವ ದುರುದ್ದೇಶ ಕಂಡುಬಂದಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳು ಪೋಲೀಸರಿಗೆ ಸೂಚಿಸಬಹುದು. ಈ ಕ್ರಮವನ್ನು ಸರಿಯಾಗಿ ಪಾಲಿಸದಿದ್ದಲ್ಲಿ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಬಹುದು.

ಇದನ್ನೂ ಓದಿ:ಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

ಇದರ ಉದ್ದೇಶಗಳೇನು?

  • ಧಾರ್ಮಿಕ ದುರಭಿಮಾನ ಮತ್ತು ವಾಗ್ವಾದಗಳಲ್ಲಿ ರಾಜ್ಯವನ್ನು ಸಿಲುಕಿಸುವುದು ಮತ್ತು ಮುಂದಿನ ಚುನಾವಣೆಯಲ್ಲಿ ಅದರ ರಾಜಕೀಯ ಲಾಭ ಪಡೆಯುವುದು.
  • ದಲಿತ, ಆದಿವಾಸಿ, ಅಲೆಮಾರಿ ಸಮುದಾಯಗಳು ಜಾತಿ ಬಂಧನದಿಂದ ಮುಕ್ತಿ ಪಡೆಯದಂತೆ ಕಟ್ಟಿಡುವುದು.
  • ಅಂತರ್ ಧರ್ಮೀಯ ಮದುವೆಗಳನ್ನು ತಡೆಯುವುದು. ಮಹಳೆಯರನ್ನು ಹೊಸಿಲು ದಾಟದಂತೆ ಬಂಧಿಸುವುದು.
  • ಕ್ರೈಸ್ತ ಮತ್ತು ಇತರೆ ಧಾರ್ಮಿಕ ಸಂಸ್ಥೆಗಳನ್ನು ಗುರಿಯಾಗಿಸಿ ಕಟಕಟೆಯಲ್ಲಿ ನಿಲ್ಲಿಸುವುದು. ಅವರ ಸಂಪನ್ಮೂಲಗಳನ್ನು ರದ್ದುಗೊಳಿಸಿ, ಅವು ಮಾಡುತ್ತಿದ್ದ ಸೇವಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಮಾಡುವುದು.
  • ಹೋರಾಟಗಾರರನ್ನು ಮತ್ತೊಮ್ಮೆ ಭಾವನಾತ್ಮಕ ವಾದ ವಿವಾದದಲ್ಲಿ ಮುಳುಗಿಸಿ ನಿಜವಾದ ವಿಚಾರಗಳ ಸುತ್ತ ಹೋರಾಟಗಳು ಬೆಳೆಯದಂತೆ ನೋಡಿಕೊಳ್ಳುವುದು.

ಇದನ್ನೂ ಓದಿ:ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಇದರ ಪರಿಣಾಮಗಳೇನು?

  • ಆಮಿಷ ಮತ್ತು ಅನುಚಿತ ಪ್ರಭಾವದ ಹೆಸರಿನಲ್ಲಿ ಸಲೀಸಾಗಿ ಅಲ್ಪಸಂಖ್ಯಾತ ಧರ್ಮದ ವ್ಯಕ್ತಿಗಳನ್ನು ಮತ್ತು ಸಂಸ್ಥೆಗಳನ್ನು ಕಟಕಟೆಯಲ್ಲಿ ನಿಲ್ಲಿಸಬಹುದು.
  • ಅವರಿಗೆ ಜಾಮೀನು ಸಿಗದಂತೆ, ಅವರ ಪರವಾಗಿ ಯಾರೂ ದನಿ ಎತ್ತದಂತೆ ಮಾಡಬಹುದು. ಅವರ ಆರ್ಥಿಕ ಸಂಪನ್ಮೂಲಗಳನ್ನೆಲ್ಲಾ ರದ್ದುಗೊಳಿಸಬಹುದು.
  • ಕೇಸರಿ ಪಡೆಗಳಿಗೆ, ಪೋಲೀಸ್ ಪಡೆಗಳಿಗೆ ಮತ್ತು ಅಧಿಕಾರಿಗಳಿಗೆ ಅಲ್ಪಸಂಖ್ಯಾತರನ್ನು ಕಾಡುವ ಅಪರಿಮಿತ ಅಧಿಕಾರವನ್ನು ನೀಡಲಾಗುತ್ತಿದೆ.
  • ಜಾತಿ ಮತ್ತು ಪುರುಷ ಮೇಲಾಧಿಪತ್ಯದಿಂದ ದೌರ್ಜನ್ಯಗಳಿಂದ ಮುಕ್ತಿ ಪಡೆಯಲು ದಲಿತರು, ಆದಿವಾಸಿಗಳು, ಅಲೆಮಾರಿಗಳು ಬೌದ್ಧ, ಕ್ರೈಸ್ತ, ಸಿಖ್ ಅಥವ ಮುಸ್ಲಿಂ ಧರ್ಮಕ್ಕೆ ಮತಾತಂತರಗೊಂಡ ಪರಿಪಾಠ ಇದ್ದದ್ದಿದೆ. ಸ್ವಯಂ ಇಚ್ಛೆ ಮಾತ್ರವಲ್ಲ ಮುಕ್ತಿಯ ಮಾರ್ಗಗಳಾಗಿಯೂ ದಮನಿತ ಜನ ಅದನ್ನು ಪರಿಗಣಿಸಿದ್ದಿದೆ. ಸ್ವಯಂ ಅಂಬೇಡ್ಕರ್ ಅವರು ಮುಂದೆ ನಿಂತು ಅದನ್ನು ಮಾಡಿಸಿದ್ದಾರೆ. ಸ್ವಧರ್ಮದಲ್ಲಿ ಸೂಕ್ತ ಗೌರವ ನೀಡಿ ಉಳಿಸಿಕೊಳ್ಳಲಾಗದ ಜಾತಿಗ್ರಸ್ಥ ಮನಸ್ಸುಗಳು ಈಗ ಬಲವಂತದ ಮೂಲಕ ದಮನಿತ ಸಮುದಾಯಗಳನ್ನು ಜಾತಿ ಮತ್ತು ಪುರುಷಾಧಿಪತ್ಯ ವ್ಯವಸ್ಥೆಯಡಿ ಕಟ್ಟಿಡಲು ಹೊರಟಿದ್ದಾರೆ.
  • ಅಲ್ಪಸಂಖ್ಯಾತ ಸಮುದಾಯಗಳು ದೇಶದ ಉದ್ದಗಲಕ್ಕೂ ಆಹಾರ, ಆರೋಗ್ಯ, ಶಿಕ್ಷಣವನ್ನು ನೀಡುವಂತಹ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಫಲ ಈ ದೇಶದ ದಮನಿತ ಮತ್ತು ಶೋಷಿತ ಜನ ವರ್ಗಗಳು ಪಡೆದಿವೆ, ಪಡೆಯುತ್ತಿವೆ. ಈ ಎಲ್ಲಾ ಸಂಸ್ಥೆಗಳು ಶಂಕಿತ ಸ್ಥಾನದಲ್ಲಿ ನಿಲ್ಲಲಿವೆ ಮತ್ತು ನಿಂತು ಹೋಗುವ ಅಪಾಯವನ್ನು ಎದುರಿಸಲಿವೆ.
  • ಅಂತರ್ ಧರ್ಮೀಯ ಪ್ರೀತಿ ಮತ್ತು ಅಂತರ್ ಧರ್ಮೀಯ ಮದುವೆಗೆ ಶಾಶ್ವತವಾಗಿ ಮುಳ್ಳು ಬೇಲಿಯನ್ನು ಜಡಿಯಲಾಗುತ್ತಿದೆ.

ಮಾಡಬೇಕಾದುದೇನು?

ಮನುಷ್ಯರಾಗಿ ಪ್ರತಿರೋಧಿಸೋಣವೆ? ಗುಲಾಮತೆಯನ್ನು ಒಪ್ಪಿಕೊಳ್ಳೋಣವೆ? ಎಂಬ ತೀರ್ಮಾನಕ್ಕೆ ಬರಬೇಕಿರುವುದು. ಆಯ್ಕೆ ನಿಮ್ಮದು ನಮ್ಮದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನ ವಿರೋಧಿ ಕಾಯಿದೆಯನ್ನು ವಿರೋದಿ ಸುತ್ತನೆ. ವ್ಯಕ್ತಿಯ ಸ್ವಾತಂತ್ರ್ಯಕ್ಕೆ ದಕ್ಕೆ ತರುವ ಈ ಕಾಯಿದೆ ಕರ್ನಾಟಕ ಸರ್ಕಾರ ಕೈಬಿಡಬೇಕು

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...