Homeಕರ್ನಾಟಕಮತಾಂಧ ಸರ್ವಾಧಿಕಾರದತ್ತ ಕರ್ನಾಟಕ: ವಿಧಾನಸಭೆಯ ಮುಂದೆ ‘ಧಾರ್ಮಿಕ ಬಂದೀಖಾನೆಯ ವಿಧೇಯಕ’

ಮತಾಂಧ ಸರ್ವಾಧಿಕಾರದತ್ತ ಕರ್ನಾಟಕ: ವಿಧಾನಸಭೆಯ ಮುಂದೆ ‘ಧಾರ್ಮಿಕ ಬಂದೀಖಾನೆಯ ವಿಧೇಯಕ’

- Advertisement -
- Advertisement -
  • ನೂರ್‌ ಶ್ರೀಧರ್‌‌

ಭಾರತ ಕಂಡರಿಯದ ಕಠೋರ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿದೆ. ಯುಎಪಿಎ ಕಾಯ್ದೆಗಳೂ ಸಹ ಇಷ್ಟೊಂದು ಕಠೋರ ಎಂಬುದನ್ನು ಗಮನಿಸಬೇಕು. ಈ ವಿಧೇಯಕದಲ್ಲಿ ಏನಿದೆ? ಯಾವ ಉದ್ದೇಶಕ್ಕೆ ಇದನ್ನು ತರಲಾಗಿದೆ? ಇದರ ಪರಣಾಮವೇನು? ಸಂಕ್ಷಿಪ್ತ ಟಿಪ್ಪಣಿ.

ವಿಧೇಯಕ ಏನು ಹೇಳುತ್ತಿದೆ?

  • ವಿಧೇಯಕಕ್ಕೆ “ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ” ಎಂಬ ಸುಂದರ ಹೆಸರನ್ನು ನೀಡಲಾಗಿದೆ.
  • ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ವಂಚನೆ, ಒತ್ತಾಯ, ಆಮಿಷ, ಮದುವೆ, ಮದುವೆ ವಾಗ್ದಾನ ಅಥವಾ ಇನ್ನಾವುದೇ ವಂಚಕ ವಿಧಾನಗಳ ಮೂಲಕ ಮಾಡಲಾಗುವ ಮತಾಂತರವನ್ನು ತಡೆಯುವುದು ಮತ್ತು ಶಿಕ್ಷಿಸುವುದು ಇದರ ಉದ್ದೇಶವಾಗಿ ಹೇಳಲಾಗಿದೆ.
  • ಅಪರಾಧಿಗಳಿಗೆ 3 ರಿಂದ 5 ವರ್ಷಗಳ ತನಕ ಕಾರಾಗೃಹದ ಶಿಕ್ಷೆ.
  • ಅಪ್ರಾಪ್ತ, ಅಸ್ವಸ್ಥಚಿತ್ತ, ಮಹಿಳೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರನ್ನು ಮತಾಂತರ ಮಾಡಿದರೆ ಕಠಿಣ ಶಿಕ್ಷೆ.
  • ಸಾಮೂಹಿಕ ಮತದಾನ ಮಾಡಿದರೆ ಮತ್ತಷ್ಟು ಕಠಿಣ ಶಿಕ್ಷೆ.
  • ಈ ಶಿಕ್ಷೆಗಳ ಪ್ರಮಾಣ ಏರುಗತಿಯಲ್ಲಿರುತ್ತದೆ. ಕನಿಷ್ಟ 3 ವರ್ಷದಿಂದ 10 ವರ್ಷಗಳವರೆಗಿನ ಕಾರಾಗೃಹ, 1 ಲಕ್ಷದವರೆಗೆ ಜುಲ್ಮಾನೆ ಮತ್ತು ಮತಾಂತರಗೊಂಡಿದ್ದವರಿಗೆ ಮತಾಂತರ ಮಾಡಿದವರು 5 ಲಕ್ಷದವರೆಗೆ ಪರಿಹಾರ ನೀಡಬೇಕು.
  • ಇದರಲ್ಲಿ ಯಾವುದಾದರೂ ಸಂಸ್ಥೆ ಒಳಗೊಂಡಿದ್ದರೆ ಅದರ ಮೇಲೂ ಕ್ರಮ ಕೈಗೊಳ್ಳಲಾಗುವುದು. ಅದು ಪಡೆಯುತ್ತಿರಬಹುದಾದ ಅನುದಾನಗಳನ್ನು ನಿಶೇಧಿಸಲಾಗುವುದು.
  • ಅಕ್ರಮ ಮತಾಂತರ ನಡೆದಿದೆ ಎಂಬ ದೂರನ್ನು ಮತಾಂತರಗೊಂಡವರನ್ನು ‘ಬಲ್ಲ’ ಯಾರು ಬೇಕಾದರೂ ದೂರು ನೀಡಬಹುದು.
  • ಈ ಅಪರಾಧವನ್ನು ಹೀನಾಯವಾದುದೆಂದು ಪರಿಗಣಿಸಲಾಗುವುದು ಮತ್ತು ಇದು ಜಾಮೀನು ರಹಿತವಾದದ್ದು.
  • ಆರೋಪ ಮಾಡಿದವರ ಮೇಲೆ ಅದನ್ನು ಸಾಬೀತು ಪಡಿಸುವ ಹೊಣೆ ಇರುವುದಿಲ್ಲ. ತಾನು ನಿರ್ದೂಷಿ ಎಂದು ಸಾಬೀತುಪಡಿಸುವ ಹೊಣೆ ಆರೋಪಕ್ಕೆ ಗುರಿಯಾದವರದು.
  • ಅಪರಾಧಕ್ಕೆ ಸಹಾಯ ಮಾಡಿದವರ ಮೇಲೂ ಮತ್ತು ಅವರ ಪರವಾಗಿ ನಿಲ್ಲುವವರ ಮೇಲೂ ಕ್ರಮ ಜರುಗಿಸಬಹುದು.
  • ಮತಾಂತರದ ಉದ್ದೇಶದಿಂದ ಮದುವೆಯಾಗಿದ್ದರೆ ಅಂತಹ ಅಂತರ್ ಧರ್ಮೀಯ ಮದುವೆಗಳನ್ನು ರದ್ದುಗೊಳಿಸಬಹುದು.
  • ಸಕ್ರಮವಾಗಿ ಮತಾಂತರವಾಗಲು ಬಯಸಿದಲ್ಲಿ ಅದಕ್ಕೆ ಸುದೀರ್ಘ ಪ್ರಕ್ರಿಯೆಯ ಮೂಲಕ ಹಾದು ಹೋಗಬೇಕು: 30 ದಿನಗಳ ಮೊದಲು ಮತಾಂತರವಾಗುವವರು ಮತ್ತು ಮತಾಂತರ ಮಾಡುವವರು ತಮ್ಮ ವಿವರ ಹಾಗೂ ಉದ್ದೇಶಗಳುಳ್ಳ ಅರ್ಜಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಅದರ ಕುರಿತು ತಾಲ್ಲೂಕು ಹಾಗೂ ಜಿಲ್ಲಾಧಿಕಾರಿ ಕಛೇರಿಯಲ್ಲಿ ಪ್ರಕಟಣೆ ಹಾಕಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು, ಬಂದ ಆಕ್ಷೇಪಣೆಗಳನ್ನು ವಿಚಾರಣೆಗೆ ಒಳಪಡಿಸಬೇಕು, ಅನುಮೋದನೆ ದೊರಕಿದಲ್ಲಿ ಅದರ ಪ್ರಕಟಣೆಯನ್ನು ಮತ್ತೆ ಜಿಲ್ಲಾಧಿಕಾರಿ ಕಛೇರಿಗಳಲ್ಲಿ ಹಾಕಬೇಕು. ಅದಕ್ಕೆ ಯಾವ ಆಕ್ಷೇಪಣೆಯೂ ಬರದಿದ್ದಲ್ಲಿ ಆಗ ಅದನ್ನು ಸಕ್ರಮಗೊಳಿಸಲಾಗುವುದು. ಆದರೆ ಈ ಪ್ರಕ್ರಿಯೆಯಲ್ಲಿ ದೋಷ ಅಥವ ದುರುದ್ದೇಶ ಕಂಡುಬಂದಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳು ಪೋಲೀಸರಿಗೆ ಸೂಚಿಸಬಹುದು. ಈ ಕ್ರಮವನ್ನು ಸರಿಯಾಗಿ ಪಾಲಿಸದಿದ್ದಲ್ಲಿ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಬಹುದು.

ಇದನ್ನೂ ಓದಿ:ಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

ಇದರ ಉದ್ದೇಶಗಳೇನು?

  • ಧಾರ್ಮಿಕ ದುರಭಿಮಾನ ಮತ್ತು ವಾಗ್ವಾದಗಳಲ್ಲಿ ರಾಜ್ಯವನ್ನು ಸಿಲುಕಿಸುವುದು ಮತ್ತು ಮುಂದಿನ ಚುನಾವಣೆಯಲ್ಲಿ ಅದರ ರಾಜಕೀಯ ಲಾಭ ಪಡೆಯುವುದು.
  • ದಲಿತ, ಆದಿವಾಸಿ, ಅಲೆಮಾರಿ ಸಮುದಾಯಗಳು ಜಾತಿ ಬಂಧನದಿಂದ ಮುಕ್ತಿ ಪಡೆಯದಂತೆ ಕಟ್ಟಿಡುವುದು.
  • ಅಂತರ್ ಧರ್ಮೀಯ ಮದುವೆಗಳನ್ನು ತಡೆಯುವುದು. ಮಹಳೆಯರನ್ನು ಹೊಸಿಲು ದಾಟದಂತೆ ಬಂಧಿಸುವುದು.
  • ಕ್ರೈಸ್ತ ಮತ್ತು ಇತರೆ ಧಾರ್ಮಿಕ ಸಂಸ್ಥೆಗಳನ್ನು ಗುರಿಯಾಗಿಸಿ ಕಟಕಟೆಯಲ್ಲಿ ನಿಲ್ಲಿಸುವುದು. ಅವರ ಸಂಪನ್ಮೂಲಗಳನ್ನು ರದ್ದುಗೊಳಿಸಿ, ಅವು ಮಾಡುತ್ತಿದ್ದ ಸೇವಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಮಾಡುವುದು.
  • ಹೋರಾಟಗಾರರನ್ನು ಮತ್ತೊಮ್ಮೆ ಭಾವನಾತ್ಮಕ ವಾದ ವಿವಾದದಲ್ಲಿ ಮುಳುಗಿಸಿ ನಿಜವಾದ ವಿಚಾರಗಳ ಸುತ್ತ ಹೋರಾಟಗಳು ಬೆಳೆಯದಂತೆ ನೋಡಿಕೊಳ್ಳುವುದು.

ಇದನ್ನೂ ಓದಿ:ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಇದರ ಪರಿಣಾಮಗಳೇನು?

  • ಆಮಿಷ ಮತ್ತು ಅನುಚಿತ ಪ್ರಭಾವದ ಹೆಸರಿನಲ್ಲಿ ಸಲೀಸಾಗಿ ಅಲ್ಪಸಂಖ್ಯಾತ ಧರ್ಮದ ವ್ಯಕ್ತಿಗಳನ್ನು ಮತ್ತು ಸಂಸ್ಥೆಗಳನ್ನು ಕಟಕಟೆಯಲ್ಲಿ ನಿಲ್ಲಿಸಬಹುದು.
  • ಅವರಿಗೆ ಜಾಮೀನು ಸಿಗದಂತೆ, ಅವರ ಪರವಾಗಿ ಯಾರೂ ದನಿ ಎತ್ತದಂತೆ ಮಾಡಬಹುದು. ಅವರ ಆರ್ಥಿಕ ಸಂಪನ್ಮೂಲಗಳನ್ನೆಲ್ಲಾ ರದ್ದುಗೊಳಿಸಬಹುದು.
  • ಕೇಸರಿ ಪಡೆಗಳಿಗೆ, ಪೋಲೀಸ್ ಪಡೆಗಳಿಗೆ ಮತ್ತು ಅಧಿಕಾರಿಗಳಿಗೆ ಅಲ್ಪಸಂಖ್ಯಾತರನ್ನು ಕಾಡುವ ಅಪರಿಮಿತ ಅಧಿಕಾರವನ್ನು ನೀಡಲಾಗುತ್ತಿದೆ.
  • ಜಾತಿ ಮತ್ತು ಪುರುಷ ಮೇಲಾಧಿಪತ್ಯದಿಂದ ದೌರ್ಜನ್ಯಗಳಿಂದ ಮುಕ್ತಿ ಪಡೆಯಲು ದಲಿತರು, ಆದಿವಾಸಿಗಳು, ಅಲೆಮಾರಿಗಳು ಬೌದ್ಧ, ಕ್ರೈಸ್ತ, ಸಿಖ್ ಅಥವ ಮುಸ್ಲಿಂ ಧರ್ಮಕ್ಕೆ ಮತಾತಂತರಗೊಂಡ ಪರಿಪಾಠ ಇದ್ದದ್ದಿದೆ. ಸ್ವಯಂ ಇಚ್ಛೆ ಮಾತ್ರವಲ್ಲ ಮುಕ್ತಿಯ ಮಾರ್ಗಗಳಾಗಿಯೂ ದಮನಿತ ಜನ ಅದನ್ನು ಪರಿಗಣಿಸಿದ್ದಿದೆ. ಸ್ವಯಂ ಅಂಬೇಡ್ಕರ್ ಅವರು ಮುಂದೆ ನಿಂತು ಅದನ್ನು ಮಾಡಿಸಿದ್ದಾರೆ. ಸ್ವಧರ್ಮದಲ್ಲಿ ಸೂಕ್ತ ಗೌರವ ನೀಡಿ ಉಳಿಸಿಕೊಳ್ಳಲಾಗದ ಜಾತಿಗ್ರಸ್ಥ ಮನಸ್ಸುಗಳು ಈಗ ಬಲವಂತದ ಮೂಲಕ ದಮನಿತ ಸಮುದಾಯಗಳನ್ನು ಜಾತಿ ಮತ್ತು ಪುರುಷಾಧಿಪತ್ಯ ವ್ಯವಸ್ಥೆಯಡಿ ಕಟ್ಟಿಡಲು ಹೊರಟಿದ್ದಾರೆ.
  • ಅಲ್ಪಸಂಖ್ಯಾತ ಸಮುದಾಯಗಳು ದೇಶದ ಉದ್ದಗಲಕ್ಕೂ ಆಹಾರ, ಆರೋಗ್ಯ, ಶಿಕ್ಷಣವನ್ನು ನೀಡುವಂತಹ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಫಲ ಈ ದೇಶದ ದಮನಿತ ಮತ್ತು ಶೋಷಿತ ಜನ ವರ್ಗಗಳು ಪಡೆದಿವೆ, ಪಡೆಯುತ್ತಿವೆ. ಈ ಎಲ್ಲಾ ಸಂಸ್ಥೆಗಳು ಶಂಕಿತ ಸ್ಥಾನದಲ್ಲಿ ನಿಲ್ಲಲಿವೆ ಮತ್ತು ನಿಂತು ಹೋಗುವ ಅಪಾಯವನ್ನು ಎದುರಿಸಲಿವೆ.
  • ಅಂತರ್ ಧರ್ಮೀಯ ಪ್ರೀತಿ ಮತ್ತು ಅಂತರ್ ಧರ್ಮೀಯ ಮದುವೆಗೆ ಶಾಶ್ವತವಾಗಿ ಮುಳ್ಳು ಬೇಲಿಯನ್ನು ಜಡಿಯಲಾಗುತ್ತಿದೆ.

ಮಾಡಬೇಕಾದುದೇನು?

ಮನುಷ್ಯರಾಗಿ ಪ್ರತಿರೋಧಿಸೋಣವೆ? ಗುಲಾಮತೆಯನ್ನು ಒಪ್ಪಿಕೊಳ್ಳೋಣವೆ? ಎಂಬ ತೀರ್ಮಾನಕ್ಕೆ ಬರಬೇಕಿರುವುದು. ಆಯ್ಕೆ ನಿಮ್ಮದು ನಮ್ಮದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನ ವಿರೋಧಿ ಕಾಯಿದೆಯನ್ನು ವಿರೋದಿ ಸುತ್ತನೆ. ವ್ಯಕ್ತಿಯ ಸ್ವಾತಂತ್ರ್ಯಕ್ಕೆ ದಕ್ಕೆ ತರುವ ಈ ಕಾಯಿದೆ ಕರ್ನಾಟಕ ಸರ್ಕಾರ ಕೈಬಿಡಬೇಕು

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...