Homeಕರ್ನಾಟಕಮತಾಂಧ ಸರ್ವಾಧಿಕಾರದತ್ತ ಕರ್ನಾಟಕ: ವಿಧಾನಸಭೆಯ ಮುಂದೆ ‘ಧಾರ್ಮಿಕ ಬಂದೀಖಾನೆಯ ವಿಧೇಯಕ’

ಮತಾಂಧ ಸರ್ವಾಧಿಕಾರದತ್ತ ಕರ್ನಾಟಕ: ವಿಧಾನಸಭೆಯ ಮುಂದೆ ‘ಧಾರ್ಮಿಕ ಬಂದೀಖಾನೆಯ ವಿಧೇಯಕ’

- Advertisement -
- Advertisement -
  • ನೂರ್‌ ಶ್ರೀಧರ್‌‌

ಭಾರತ ಕಂಡರಿಯದ ಕಠೋರ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿದೆ. ಯುಎಪಿಎ ಕಾಯ್ದೆಗಳೂ ಸಹ ಇಷ್ಟೊಂದು ಕಠೋರ ಎಂಬುದನ್ನು ಗಮನಿಸಬೇಕು. ಈ ವಿಧೇಯಕದಲ್ಲಿ ಏನಿದೆ? ಯಾವ ಉದ್ದೇಶಕ್ಕೆ ಇದನ್ನು ತರಲಾಗಿದೆ? ಇದರ ಪರಣಾಮವೇನು? ಸಂಕ್ಷಿಪ್ತ ಟಿಪ್ಪಣಿ.

ವಿಧೇಯಕ ಏನು ಹೇಳುತ್ತಿದೆ?

  • ವಿಧೇಯಕಕ್ಕೆ “ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ” ಎಂಬ ಸುಂದರ ಹೆಸರನ್ನು ನೀಡಲಾಗಿದೆ.
  • ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ವಂಚನೆ, ಒತ್ತಾಯ, ಆಮಿಷ, ಮದುವೆ, ಮದುವೆ ವಾಗ್ದಾನ ಅಥವಾ ಇನ್ನಾವುದೇ ವಂಚಕ ವಿಧಾನಗಳ ಮೂಲಕ ಮಾಡಲಾಗುವ ಮತಾಂತರವನ್ನು ತಡೆಯುವುದು ಮತ್ತು ಶಿಕ್ಷಿಸುವುದು ಇದರ ಉದ್ದೇಶವಾಗಿ ಹೇಳಲಾಗಿದೆ.
  • ಅಪರಾಧಿಗಳಿಗೆ 3 ರಿಂದ 5 ವರ್ಷಗಳ ತನಕ ಕಾರಾಗೃಹದ ಶಿಕ್ಷೆ.
  • ಅಪ್ರಾಪ್ತ, ಅಸ್ವಸ್ಥಚಿತ್ತ, ಮಹಿಳೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರನ್ನು ಮತಾಂತರ ಮಾಡಿದರೆ ಕಠಿಣ ಶಿಕ್ಷೆ.
  • ಸಾಮೂಹಿಕ ಮತದಾನ ಮಾಡಿದರೆ ಮತ್ತಷ್ಟು ಕಠಿಣ ಶಿಕ್ಷೆ.
  • ಈ ಶಿಕ್ಷೆಗಳ ಪ್ರಮಾಣ ಏರುಗತಿಯಲ್ಲಿರುತ್ತದೆ. ಕನಿಷ್ಟ 3 ವರ್ಷದಿಂದ 10 ವರ್ಷಗಳವರೆಗಿನ ಕಾರಾಗೃಹ, 1 ಲಕ್ಷದವರೆಗೆ ಜುಲ್ಮಾನೆ ಮತ್ತು ಮತಾಂತರಗೊಂಡಿದ್ದವರಿಗೆ ಮತಾಂತರ ಮಾಡಿದವರು 5 ಲಕ್ಷದವರೆಗೆ ಪರಿಹಾರ ನೀಡಬೇಕು.
  • ಇದರಲ್ಲಿ ಯಾವುದಾದರೂ ಸಂಸ್ಥೆ ಒಳಗೊಂಡಿದ್ದರೆ ಅದರ ಮೇಲೂ ಕ್ರಮ ಕೈಗೊಳ್ಳಲಾಗುವುದು. ಅದು ಪಡೆಯುತ್ತಿರಬಹುದಾದ ಅನುದಾನಗಳನ್ನು ನಿಶೇಧಿಸಲಾಗುವುದು.
  • ಅಕ್ರಮ ಮತಾಂತರ ನಡೆದಿದೆ ಎಂಬ ದೂರನ್ನು ಮತಾಂತರಗೊಂಡವರನ್ನು ‘ಬಲ್ಲ’ ಯಾರು ಬೇಕಾದರೂ ದೂರು ನೀಡಬಹುದು.
  • ಈ ಅಪರಾಧವನ್ನು ಹೀನಾಯವಾದುದೆಂದು ಪರಿಗಣಿಸಲಾಗುವುದು ಮತ್ತು ಇದು ಜಾಮೀನು ರಹಿತವಾದದ್ದು.
  • ಆರೋಪ ಮಾಡಿದವರ ಮೇಲೆ ಅದನ್ನು ಸಾಬೀತು ಪಡಿಸುವ ಹೊಣೆ ಇರುವುದಿಲ್ಲ. ತಾನು ನಿರ್ದೂಷಿ ಎಂದು ಸಾಬೀತುಪಡಿಸುವ ಹೊಣೆ ಆರೋಪಕ್ಕೆ ಗುರಿಯಾದವರದು.
  • ಅಪರಾಧಕ್ಕೆ ಸಹಾಯ ಮಾಡಿದವರ ಮೇಲೂ ಮತ್ತು ಅವರ ಪರವಾಗಿ ನಿಲ್ಲುವವರ ಮೇಲೂ ಕ್ರಮ ಜರುಗಿಸಬಹುದು.
  • ಮತಾಂತರದ ಉದ್ದೇಶದಿಂದ ಮದುವೆಯಾಗಿದ್ದರೆ ಅಂತಹ ಅಂತರ್ ಧರ್ಮೀಯ ಮದುವೆಗಳನ್ನು ರದ್ದುಗೊಳಿಸಬಹುದು.
  • ಸಕ್ರಮವಾಗಿ ಮತಾಂತರವಾಗಲು ಬಯಸಿದಲ್ಲಿ ಅದಕ್ಕೆ ಸುದೀರ್ಘ ಪ್ರಕ್ರಿಯೆಯ ಮೂಲಕ ಹಾದು ಹೋಗಬೇಕು: 30 ದಿನಗಳ ಮೊದಲು ಮತಾಂತರವಾಗುವವರು ಮತ್ತು ಮತಾಂತರ ಮಾಡುವವರು ತಮ್ಮ ವಿವರ ಹಾಗೂ ಉದ್ದೇಶಗಳುಳ್ಳ ಅರ್ಜಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಅದರ ಕುರಿತು ತಾಲ್ಲೂಕು ಹಾಗೂ ಜಿಲ್ಲಾಧಿಕಾರಿ ಕಛೇರಿಯಲ್ಲಿ ಪ್ರಕಟಣೆ ಹಾಕಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು, ಬಂದ ಆಕ್ಷೇಪಣೆಗಳನ್ನು ವಿಚಾರಣೆಗೆ ಒಳಪಡಿಸಬೇಕು, ಅನುಮೋದನೆ ದೊರಕಿದಲ್ಲಿ ಅದರ ಪ್ರಕಟಣೆಯನ್ನು ಮತ್ತೆ ಜಿಲ್ಲಾಧಿಕಾರಿ ಕಛೇರಿಗಳಲ್ಲಿ ಹಾಕಬೇಕು. ಅದಕ್ಕೆ ಯಾವ ಆಕ್ಷೇಪಣೆಯೂ ಬರದಿದ್ದಲ್ಲಿ ಆಗ ಅದನ್ನು ಸಕ್ರಮಗೊಳಿಸಲಾಗುವುದು. ಆದರೆ ಈ ಪ್ರಕ್ರಿಯೆಯಲ್ಲಿ ದೋಷ ಅಥವ ದುರುದ್ದೇಶ ಕಂಡುಬಂದಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳು ಪೋಲೀಸರಿಗೆ ಸೂಚಿಸಬಹುದು. ಈ ಕ್ರಮವನ್ನು ಸರಿಯಾಗಿ ಪಾಲಿಸದಿದ್ದಲ್ಲಿ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಬಹುದು.

ಇದನ್ನೂ ಓದಿ:ಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

ಇದರ ಉದ್ದೇಶಗಳೇನು?

  • ಧಾರ್ಮಿಕ ದುರಭಿಮಾನ ಮತ್ತು ವಾಗ್ವಾದಗಳಲ್ಲಿ ರಾಜ್ಯವನ್ನು ಸಿಲುಕಿಸುವುದು ಮತ್ತು ಮುಂದಿನ ಚುನಾವಣೆಯಲ್ಲಿ ಅದರ ರಾಜಕೀಯ ಲಾಭ ಪಡೆಯುವುದು.
  • ದಲಿತ, ಆದಿವಾಸಿ, ಅಲೆಮಾರಿ ಸಮುದಾಯಗಳು ಜಾತಿ ಬಂಧನದಿಂದ ಮುಕ್ತಿ ಪಡೆಯದಂತೆ ಕಟ್ಟಿಡುವುದು.
  • ಅಂತರ್ ಧರ್ಮೀಯ ಮದುವೆಗಳನ್ನು ತಡೆಯುವುದು. ಮಹಳೆಯರನ್ನು ಹೊಸಿಲು ದಾಟದಂತೆ ಬಂಧಿಸುವುದು.
  • ಕ್ರೈಸ್ತ ಮತ್ತು ಇತರೆ ಧಾರ್ಮಿಕ ಸಂಸ್ಥೆಗಳನ್ನು ಗುರಿಯಾಗಿಸಿ ಕಟಕಟೆಯಲ್ಲಿ ನಿಲ್ಲಿಸುವುದು. ಅವರ ಸಂಪನ್ಮೂಲಗಳನ್ನು ರದ್ದುಗೊಳಿಸಿ, ಅವು ಮಾಡುತ್ತಿದ್ದ ಸೇವಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಮಾಡುವುದು.
  • ಹೋರಾಟಗಾರರನ್ನು ಮತ್ತೊಮ್ಮೆ ಭಾವನಾತ್ಮಕ ವಾದ ವಿವಾದದಲ್ಲಿ ಮುಳುಗಿಸಿ ನಿಜವಾದ ವಿಚಾರಗಳ ಸುತ್ತ ಹೋರಾಟಗಳು ಬೆಳೆಯದಂತೆ ನೋಡಿಕೊಳ್ಳುವುದು.

ಇದನ್ನೂ ಓದಿ:ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ಇದರ ಪರಿಣಾಮಗಳೇನು?

  • ಆಮಿಷ ಮತ್ತು ಅನುಚಿತ ಪ್ರಭಾವದ ಹೆಸರಿನಲ್ಲಿ ಸಲೀಸಾಗಿ ಅಲ್ಪಸಂಖ್ಯಾತ ಧರ್ಮದ ವ್ಯಕ್ತಿಗಳನ್ನು ಮತ್ತು ಸಂಸ್ಥೆಗಳನ್ನು ಕಟಕಟೆಯಲ್ಲಿ ನಿಲ್ಲಿಸಬಹುದು.
  • ಅವರಿಗೆ ಜಾಮೀನು ಸಿಗದಂತೆ, ಅವರ ಪರವಾಗಿ ಯಾರೂ ದನಿ ಎತ್ತದಂತೆ ಮಾಡಬಹುದು. ಅವರ ಆರ್ಥಿಕ ಸಂಪನ್ಮೂಲಗಳನ್ನೆಲ್ಲಾ ರದ್ದುಗೊಳಿಸಬಹುದು.
  • ಕೇಸರಿ ಪಡೆಗಳಿಗೆ, ಪೋಲೀಸ್ ಪಡೆಗಳಿಗೆ ಮತ್ತು ಅಧಿಕಾರಿಗಳಿಗೆ ಅಲ್ಪಸಂಖ್ಯಾತರನ್ನು ಕಾಡುವ ಅಪರಿಮಿತ ಅಧಿಕಾರವನ್ನು ನೀಡಲಾಗುತ್ತಿದೆ.
  • ಜಾತಿ ಮತ್ತು ಪುರುಷ ಮೇಲಾಧಿಪತ್ಯದಿಂದ ದೌರ್ಜನ್ಯಗಳಿಂದ ಮುಕ್ತಿ ಪಡೆಯಲು ದಲಿತರು, ಆದಿವಾಸಿಗಳು, ಅಲೆಮಾರಿಗಳು ಬೌದ್ಧ, ಕ್ರೈಸ್ತ, ಸಿಖ್ ಅಥವ ಮುಸ್ಲಿಂ ಧರ್ಮಕ್ಕೆ ಮತಾತಂತರಗೊಂಡ ಪರಿಪಾಠ ಇದ್ದದ್ದಿದೆ. ಸ್ವಯಂ ಇಚ್ಛೆ ಮಾತ್ರವಲ್ಲ ಮುಕ್ತಿಯ ಮಾರ್ಗಗಳಾಗಿಯೂ ದಮನಿತ ಜನ ಅದನ್ನು ಪರಿಗಣಿಸಿದ್ದಿದೆ. ಸ್ವಯಂ ಅಂಬೇಡ್ಕರ್ ಅವರು ಮುಂದೆ ನಿಂತು ಅದನ್ನು ಮಾಡಿಸಿದ್ದಾರೆ. ಸ್ವಧರ್ಮದಲ್ಲಿ ಸೂಕ್ತ ಗೌರವ ನೀಡಿ ಉಳಿಸಿಕೊಳ್ಳಲಾಗದ ಜಾತಿಗ್ರಸ್ಥ ಮನಸ್ಸುಗಳು ಈಗ ಬಲವಂತದ ಮೂಲಕ ದಮನಿತ ಸಮುದಾಯಗಳನ್ನು ಜಾತಿ ಮತ್ತು ಪುರುಷಾಧಿಪತ್ಯ ವ್ಯವಸ್ಥೆಯಡಿ ಕಟ್ಟಿಡಲು ಹೊರಟಿದ್ದಾರೆ.
  • ಅಲ್ಪಸಂಖ್ಯಾತ ಸಮುದಾಯಗಳು ದೇಶದ ಉದ್ದಗಲಕ್ಕೂ ಆಹಾರ, ಆರೋಗ್ಯ, ಶಿಕ್ಷಣವನ್ನು ನೀಡುವಂತಹ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಫಲ ಈ ದೇಶದ ದಮನಿತ ಮತ್ತು ಶೋಷಿತ ಜನ ವರ್ಗಗಳು ಪಡೆದಿವೆ, ಪಡೆಯುತ್ತಿವೆ. ಈ ಎಲ್ಲಾ ಸಂಸ್ಥೆಗಳು ಶಂಕಿತ ಸ್ಥಾನದಲ್ಲಿ ನಿಲ್ಲಲಿವೆ ಮತ್ತು ನಿಂತು ಹೋಗುವ ಅಪಾಯವನ್ನು ಎದುರಿಸಲಿವೆ.
  • ಅಂತರ್ ಧರ್ಮೀಯ ಪ್ರೀತಿ ಮತ್ತು ಅಂತರ್ ಧರ್ಮೀಯ ಮದುವೆಗೆ ಶಾಶ್ವತವಾಗಿ ಮುಳ್ಳು ಬೇಲಿಯನ್ನು ಜಡಿಯಲಾಗುತ್ತಿದೆ.

ಮಾಡಬೇಕಾದುದೇನು?

ಮನುಷ್ಯರಾಗಿ ಪ್ರತಿರೋಧಿಸೋಣವೆ? ಗುಲಾಮತೆಯನ್ನು ಒಪ್ಪಿಕೊಳ್ಳೋಣವೆ? ಎಂಬ ತೀರ್ಮಾನಕ್ಕೆ ಬರಬೇಕಿರುವುದು. ಆಯ್ಕೆ ನಿಮ್ಮದು ನಮ್ಮದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸಂವಿಧಾನ ವಿರೋಧಿ ಕಾಯಿದೆಯನ್ನು ವಿರೋದಿ ಸುತ್ತನೆ. ವ್ಯಕ್ತಿಯ ಸ್ವಾತಂತ್ರ್ಯಕ್ಕೆ ದಕ್ಕೆ ತರುವ ಈ ಕಾಯಿದೆ ಕರ್ನಾಟಕ ಸರ್ಕಾರ ಕೈಬಿಡಬೇಕು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...