Homeಮುಖಪುಟಉತ್ತರಾಖಂಡ: ಕೋವಿಡ್‌ ಹಿನ್ನಲೆಯಲ್ಲಿ ಕನ್ವರ್‌ ಯಾತ್ರೆ ರದ್ದುಗೊಳಿಸಿದ ಸರ್ಕಾರ

ಉತ್ತರಾಖಂಡ: ಕೋವಿಡ್‌ ಹಿನ್ನಲೆಯಲ್ಲಿ ಕನ್ವರ್‌ ಯಾತ್ರೆ ರದ್ದುಗೊಳಿಸಿದ ಸರ್ಕಾರ

ಕಳೆದ ಮಾರ್ಚ್ 31 ರಿಂದ ಏಪ್ರಿಲ್‌ 24ರ ಕುಂಭ ಮೇಳದ ಅವಧಿಯಲ್ಲಿ ಉತ್ತರಾಖಂಡದ ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ 1800 ಪಟ್ಟು ಹೆಚ್ಚಳವಾಗಿತ್ತು.

- Advertisement -
- Advertisement -

ಕುಂಭ ಮೇಳದ ಸಂದರ್ಭದಲ್ಲಿ ಘಟಿಸಿದ ಅಚಾತುರ್ಯವನ್ನು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಉತ್ತರಾಖಂಡ ಸರ್ಕಾರ ಮುಂದಾಗಿದೆ. ಲಕ್ಷಾಂತರ ಜನರು ಸೇರುವ ಕನ್ವರ್‌ ಧಾರ್ಮಿಕ ಯಾತ್ರೆಯನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

’ಗದರ್‌ಪುರ್‌ ನಗರದಲ್ಲಿ ಕೋವಿಡ್‌ ರೂಪಾಂತರಿ ವೈರಸ್‌ ಪತ್ತೆಯಾಗಿದ್ದು ಹರಿದ್ವಾರ ನಗರವನ್ನು ಕೋವಿಡ್‌ ಹಬ್‌ ಆಗಿಸಲು ನಮಗೆ ಇಷ್ಟವಿಲ್ಲ’ ಎಂದು ಮುಖ್ಯಮಂತ್ರಿ ಪುಷ್ಕರ್‌ ಸಿಂಗ್ ಧಾಮಿ ಮಂಗಳವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಈ ಯಾತ್ರೆಗೆ ಅವಕಾಶವನ್ನು ನೀಡಿದ್ದು, ಕಳೆದ ವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಆದೇಶವನ್ನು ಹೊರಡಿಸಿದ್ದಾರೆ. ಎಲ್ಲಾ ರೀತಿಯ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡು ಯಾತ್ರೆ ಸುರಕ್ಷಿತವಾಗಿ ನಡೆಯುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಕೊನೆಗೂ ಕುಂಭಮೇಳಕ್ಕೆ ತೆರೆ ಎಳೆಯಲು ಸಿದ್ಧರಾದ ಜುನಾ ಅಖಾರ ಮುಖ್ಯಸ್ಥ ಅವಧೇಶಾನಂದ ಗಿರಿ

ಉತ್ತರಾಖಂಡ ಸರ್ಕಾರ ನೆರೆಯ ರಾಜ್ಯಗಳೊಂದಿಗೆ ಸಮಾಲೋಚನೆಯನ್ನು ನಡೆಸಿ ಈ ನಿರ್ಧಾರವನ್ನು ಕೈಗೊಂಡಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ಕುಂಭ ಯಾತ್ರೆಯಲ್ಲಿ ಘಟಿಸಿದ ದುರಂತ ಮತ್ತೆ ಘಟಿಸದಂತೆ ತಡೆಯಬೇಕು. ಕೋವಿಡ್‌ ಮೂರನೇ ಅಲೆ ಮುನ್ಸೂಚನೆ ನಡುವೆ ಧಾರ್ಮೀಕ ಯಾತ್ರೆಯನ್ನು ನಡೆಸುವುದು ಸುರಕ್ಷಿತವಲ್ಲ ಎಂದು ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಸಿಎಂ ಪುಷ್ಕರ್‌ ಸಿಂಗ್ ಧಾಮಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಲಕ್ಷಾಂತರ ಶಿವ ಭಕ್ತರು ಫಾಲ್ಗೊಳ್ಳುವ ಕನ್ವರ್‌ ಯಾತ್ರೆ ಜುಲೈ 25 ರಿಂದ ಆರಂಭವಾಗಲಿದೆ. ಕಳೆದ ವರ್ಷ ಕೂಡ ಕೋವಿಡ್‌ ಕಾರಣದಿಂದ ಕಂವರ್‌ ಯಾತ್ರೆಯನ್ನು ರದ್ದುಗೊಳಿಸಲಾಗಿತ್ತು.

ಕಳೆದ ಮಾರ್ಚ್ 31 ರಿಂದ ಏಪ್ರಿಲ್‌ 24ರ ಕುಂಭ ಮೇಳದ ಅವಧಿಯಲ್ಲಿ ಉತ್ತರಾಖಂಡದ ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ 1800 ಪಟ್ಟು ಹೆಚ್ಚಳವಾಗಿತ್ತು.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...