Homeಮುಖಪುಟನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

ನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

- Advertisement -
- Advertisement -

ಕಳೆದ ಐದು ವರ್ಷಗಳಲ್ಲಿ ಬಹುಸಂಖ್ಯಾತ ಹಿಂದೂ ಜನಸಂಖ್ಯೆಗೆ ಹೋಲಿಸಿದರೆ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಸಿಖ್‌ನಂತಹ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ನಿಯಮಿತ ವೇತನ ಹೊಂದಿರುವ ಉದ್ಯೋಗಿಗಳಾಗಿ ಕೆಲಸ ಮಾಡುವ ಜನರ ಪಾಲಿನಲ್ಲಿ ಹೆಚ್ಚಿನ ಕುಸಿತವನ್ನು ಕಂಡಿದೆ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ಇತ್ತೀಚಿನ ವಿಶ್ಲೇಷಣೆಯಲ್ಲಿ ತಿಳಿಸಿದೆ.

ಆವರ್ತಕ ಕಾರ್ಮಿಕ ಪಡೆ ಸಮೀಕ್ಷೆ(Periodic Labour Force Survey (PLFS) ದತ್ತಾಂಶ ಈ ಶಾಕಿಂಗ್‌ ಮಾಹಿತಿಯನ್ನು ಹೊರಗಿಟ್ಟಿದೆ. ಈ ಅಲ್ಪಸಂಖ್ಯಾತರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಕಾರ್ಮಿಕರು 2018-19 ಮತ್ತು 2022-23ರ ನಡುವೆ ನಿಯಮಿತ ವೇತನದ ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಕುಸಿತವನ್ನು ಕಂಡಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

ಏಪ್ರಿಲ್ 2017ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿಯಿಂದ PLFSನ್ನು ಪ್ರಾರಂಭಿಸಲಾಯಿತು. ಇದು ಪ್ರಮುಖ ಉದ್ಯೋಗ ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತ, ಕಾರ್ಮಿಕ ಭಾಗವಹಿಸುವಿಕೆ ದರ ಮತ್ತು ನಿರುದ್ಯೋಗ ದರ,  ಸಾಮಾಜಿಕ ಮತ್ತು ಧಾರ್ಮಿಕ ಗುಂಪುಗಳಲ್ಲಿ ಉದ್ಯೋಗದ ಸ್ಥಿತಿಯನ್ನು ಅವಲೋಕಿಸಿ ವರದಿಯನ್ನು ಸಿದ್ದಪಡಿಸುತ್ತದೆ.

ಬಿಸಿನೆಸ್ ಸ್ಟ್ಯಾಂಡರ್ಡ್ ಇತ್ತೀಚಿನ ವಿಶ್ಲೇಷಣೆ ಪ್ರಕಾರ, 2018-19ರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 22.1% ಕಾರ್ಮಿಕರು ನಿಯಮಿತ ವೇತನ ಉದ್ಯೋಗಿಗಳಾಗಿ ಕೆಲಸ ಮಾಡಿದ್ದರೆ, 2022-23ರಲ್ಲಿ ಈ ಪಾಲು 15.3%ಕ್ಕೆ ಇಳಿದಿದೆ, ಇದು 6.8 ಶೇಕಡಾ ಪಾಯಿಂಟ್ ಕುಸಿತವನ್ನು ದಾಖಲಿಸಿದೆ.

ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಜನಸಂಖ್ಯೆಯು 3.2 ಶೇಕಡಾ ಪಾಯಿಂಟ್ ಕುಸಿತವನ್ನು ಕಂಡಿದೆ,  2022-23 ರಲ್ಲಿ ಕೇವಲ 28% ಕ್ರಿಶ್ಚಿಯನ್ ಕೆಲಸಗಾರರು ನಿಯಮಿತ ಉದ್ಯೋಗಗಳನ್ನು ಹೊಂದಿದ್ದಾರೆ. 2018-19 ರಲ್ಲಿ ಇದರ ಅಂಕಿ-ಅಂಶಗಳು 31.2% ರಷ್ಟಿತ್ತು.

ಸಿಖ್ ಸಮುದಾಯದಲ್ಲಿ ಈ ಅಂಕಿ-ಅಂಶಗಳು ಶೇಕಡಾ 2.5 ಪಾಯಿಂಟ್ ಕುಸಿತವನ್ನು ಕಂಡಿದೆ. 2022-23ರಲ್ಲಿ ಕೇವಲ 26% ಸಿಖ್ ಕಾರ್ಮಿಕರು ನಿಯಮಿತ ವೇತನದ ಉದ್ಯೋಗವನ್ನು ಹೊಂದಿದ್ದರು, 2018-19ರಲ್ಲಿ ಇದರ ಪಾಲು 28.5% ಇತ್ತು.

ಬಹುಸಂಖ್ಯಾತ ಹಿಂದೂ ಸಮುದಾಯಕ್ಕೆ ಉದ್ಯೋಗದ ಗುಣಮಟ್ಟದಲ್ಲಿ ಕ್ಷೀಣತೆ ಕಡಿಮೆಯಾಗಿದೆ. 21.4% ಕಾರ್ಮಿಕರು 2022-23ರಲ್ಲಿ ನಿಯಮಿತ ಸಂಬಳದ ಉದ್ಯೋಗಗಳನ್ನು ಹೊಂದಿದ್ದರು, 2018-19 ರಲ್ಲಿ ಇದು 23.7% ಇತ್ತು. ಅಂದರೆ 2.3 ಶೇಕಡಾ ಮಾತ್ರ ಕಡಿಮೆಯಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಸ್ವಯಂ ಉದ್ಯೋಗ ಹೊಂದಿರುವವರ ಸಂಖ್ಯೆಯಲ್ಲಿ ಹೆಚ್ಚುತ್ತಿರುವಾಗ, ಅರೆಕಾಲಿಕ ಕೆಲಸಗಾರರ ಪಾಲು ಮುಸ್ಲಿಂ ಸಮುದಾಯದಲ್ಲಿ ಮಾತ್ರ ಹೆಚ್ಚಾಗಿದೆ ಎಂದು ದಿನಪತ್ರಿಕೆ ವರದಿ ಮಾಡಿದೆ. ಸುಮಾರು 26.3% ಮುಸ್ಲಿಂ ಕಾರ್ಮಿಕರು 2022-23 ರಲ್ಲಿ ಅರೆಕಾಲಿಕ ಕಾರ್ಮಿಕರಾಗಿ ಕೆಲಸ ಮಾಡಿದರು, 2018-19 ರಲ್ಲಿ ಇದರ ಅಂಕಿ-ಅಂಶಗಳು 25.7% ರಷ್ಟಿತ್ತು. ಇದು ಹಿಂದೂಗಳು, ಸಿಖ್ಖರು ಮತ್ತು ಕ್ರಿಶ್ಚಿಯನ್ನರಂತಹ ಇತರ ಧಾರ್ಮಿಕ ಗುಂಪುಗಳಿಗೆ ಹೋಲಿಸಿದರೆ ವ್ಯತಿರಿಕ್ತವಾಗಿದೆ, ಈ ಸಮುದಾಯಗಳಲ್ಲಿ ಅರೆಕಾಲಿಕ ಕಾರ್ಮಿಕರಾಗಿ ಕೆಲಸ ಮಾಡುವ ಜನಸಂಖ್ಯೆಯ ಪಾಲು ಇಳಿಮುಖವಾಗಿದೆ ಎಂದು ವರದಿ ಹೇಳಿದೆ.

ಅಕ್ಟೋಬರ್ 2023ರಲ್ಲಿ ಮುಸ್ಲಿಂ ಧಾರ್ಮಿಕ ಗುಂಪುಗಳಲ್ಲಿ ಕಾರ್ಮಿಕ ಬಲದ ಭಾಗವಹಿಸುವಿಕೆ ದರ (LFPR) ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತ (WPR) ಕುಸಿದಿದೆ ಎಂದು ವರದಿ ಮಾಡಿದೆ. ಕಾರ್ಮಿಕ ಬಲದ ಭಾಗವಹಿಸುವಿಕೆಯ ಪ್ರಮಾಣವು ಕೆಲಸವನ್ನು ಹುಡುಕುತ್ತಿರುವ ಜನಸಂಖ್ಯೆಯ ಪಾಲು ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತವು ಕೆಲಸ ಮಾಡುವ ದುಡಿಯುವ ವಯಸ್ಸಿನ ಜನಸಂಖ್ಯೆಯ ಪಾಲು ಆಗಿದೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಪ್ರಾಧ್ಯಾಪಕ ಸಂತೋಷ್ ಮೆಹ್ರೋತ್ರಾ ಅವರು ಈ ದತ್ತಾಂಶವನ್ನು ವಿವರಿಸುತ್ತಾ, ಮುಸ್ಲಿಮರು ಗ್ರಾಮೀಣ ಜನಸಂಖ್ಯೆಗಿಂತ ನಗರ ಜನಸಂಖ್ಯೆಯಲ್ಲಿ ಹೆಚ್ಚಿನ ಪಾಲು ಹೊಂದಿದ್ದಾರೆ. ಏಕೆಂದರೆ ಹೆಚ್ಚಿನ ಮುಸ್ಲಿಮರು ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಆದ್ದರಿಂದ, ಮೊದಲ ಕೋವಿಡ್ ನಂತರದ ವರ್ಷದಲ್ಲಿ ಕಾರ್ಮಿಕ ಮಾರುಕಟ್ಟೆ ಪುನಶ್ಚೇತನಗೊಂಡಾಗ ಮುಸ್ಲಿಮರ ವರ್ಕಿಂಗ್‌ ಪಾಪ್ಯುಲೇಷನ್‌ ಅನುಪಾತದಲ್ಲಿ 2 ಶೇಕಡಾವಾರು ಕುಸಿತ ಕಂಡು ಬಂದಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ನೀಡಿರುವುದು ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಝಮೀರ್ ಅಹ್ಮದ್ ಖಾನ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...