Homeಮುಖಪುಟನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

ನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

- Advertisement -
- Advertisement -

ಕಳೆದ ಐದು ವರ್ಷಗಳಲ್ಲಿ ಬಹುಸಂಖ್ಯಾತ ಹಿಂದೂ ಜನಸಂಖ್ಯೆಗೆ ಹೋಲಿಸಿದರೆ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಸಿಖ್‌ನಂತಹ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ನಿಯಮಿತ ವೇತನ ಹೊಂದಿರುವ ಉದ್ಯೋಗಿಗಳಾಗಿ ಕೆಲಸ ಮಾಡುವ ಜನರ ಪಾಲಿನಲ್ಲಿ ಹೆಚ್ಚಿನ ಕುಸಿತವನ್ನು ಕಂಡಿದೆ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ಇತ್ತೀಚಿನ ವಿಶ್ಲೇಷಣೆಯಲ್ಲಿ ತಿಳಿಸಿದೆ.

ಆವರ್ತಕ ಕಾರ್ಮಿಕ ಪಡೆ ಸಮೀಕ್ಷೆ(Periodic Labour Force Survey (PLFS) ದತ್ತಾಂಶ ಈ ಶಾಕಿಂಗ್‌ ಮಾಹಿತಿಯನ್ನು ಹೊರಗಿಟ್ಟಿದೆ. ಈ ಅಲ್ಪಸಂಖ್ಯಾತರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಕಾರ್ಮಿಕರು 2018-19 ಮತ್ತು 2022-23ರ ನಡುವೆ ನಿಯಮಿತ ವೇತನದ ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಕುಸಿತವನ್ನು ಕಂಡಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

ಏಪ್ರಿಲ್ 2017ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿಯಿಂದ PLFSನ್ನು ಪ್ರಾರಂಭಿಸಲಾಯಿತು. ಇದು ಪ್ರಮುಖ ಉದ್ಯೋಗ ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತ, ಕಾರ್ಮಿಕ ಭಾಗವಹಿಸುವಿಕೆ ದರ ಮತ್ತು ನಿರುದ್ಯೋಗ ದರ,  ಸಾಮಾಜಿಕ ಮತ್ತು ಧಾರ್ಮಿಕ ಗುಂಪುಗಳಲ್ಲಿ ಉದ್ಯೋಗದ ಸ್ಥಿತಿಯನ್ನು ಅವಲೋಕಿಸಿ ವರದಿಯನ್ನು ಸಿದ್ದಪಡಿಸುತ್ತದೆ.

ಬಿಸಿನೆಸ್ ಸ್ಟ್ಯಾಂಡರ್ಡ್ ಇತ್ತೀಚಿನ ವಿಶ್ಲೇಷಣೆ ಪ್ರಕಾರ, 2018-19ರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 22.1% ಕಾರ್ಮಿಕರು ನಿಯಮಿತ ವೇತನ ಉದ್ಯೋಗಿಗಳಾಗಿ ಕೆಲಸ ಮಾಡಿದ್ದರೆ, 2022-23ರಲ್ಲಿ ಈ ಪಾಲು 15.3%ಕ್ಕೆ ಇಳಿದಿದೆ, ಇದು 6.8 ಶೇಕಡಾ ಪಾಯಿಂಟ್ ಕುಸಿತವನ್ನು ದಾಖಲಿಸಿದೆ.

ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಜನಸಂಖ್ಯೆಯು 3.2 ಶೇಕಡಾ ಪಾಯಿಂಟ್ ಕುಸಿತವನ್ನು ಕಂಡಿದೆ,  2022-23 ರಲ್ಲಿ ಕೇವಲ 28% ಕ್ರಿಶ್ಚಿಯನ್ ಕೆಲಸಗಾರರು ನಿಯಮಿತ ಉದ್ಯೋಗಗಳನ್ನು ಹೊಂದಿದ್ದಾರೆ. 2018-19 ರಲ್ಲಿ ಇದರ ಅಂಕಿ-ಅಂಶಗಳು 31.2% ರಷ್ಟಿತ್ತು.

ಸಿಖ್ ಸಮುದಾಯದಲ್ಲಿ ಈ ಅಂಕಿ-ಅಂಶಗಳು ಶೇಕಡಾ 2.5 ಪಾಯಿಂಟ್ ಕುಸಿತವನ್ನು ಕಂಡಿದೆ. 2022-23ರಲ್ಲಿ ಕೇವಲ 26% ಸಿಖ್ ಕಾರ್ಮಿಕರು ನಿಯಮಿತ ವೇತನದ ಉದ್ಯೋಗವನ್ನು ಹೊಂದಿದ್ದರು, 2018-19ರಲ್ಲಿ ಇದರ ಪಾಲು 28.5% ಇತ್ತು.

ಬಹುಸಂಖ್ಯಾತ ಹಿಂದೂ ಸಮುದಾಯಕ್ಕೆ ಉದ್ಯೋಗದ ಗುಣಮಟ್ಟದಲ್ಲಿ ಕ್ಷೀಣತೆ ಕಡಿಮೆಯಾಗಿದೆ. 21.4% ಕಾರ್ಮಿಕರು 2022-23ರಲ್ಲಿ ನಿಯಮಿತ ಸಂಬಳದ ಉದ್ಯೋಗಗಳನ್ನು ಹೊಂದಿದ್ದರು, 2018-19 ರಲ್ಲಿ ಇದು 23.7% ಇತ್ತು. ಅಂದರೆ 2.3 ಶೇಕಡಾ ಮಾತ್ರ ಕಡಿಮೆಯಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಸ್ವಯಂ ಉದ್ಯೋಗ ಹೊಂದಿರುವವರ ಸಂಖ್ಯೆಯಲ್ಲಿ ಹೆಚ್ಚುತ್ತಿರುವಾಗ, ಅರೆಕಾಲಿಕ ಕೆಲಸಗಾರರ ಪಾಲು ಮುಸ್ಲಿಂ ಸಮುದಾಯದಲ್ಲಿ ಮಾತ್ರ ಹೆಚ್ಚಾಗಿದೆ ಎಂದು ದಿನಪತ್ರಿಕೆ ವರದಿ ಮಾಡಿದೆ. ಸುಮಾರು 26.3% ಮುಸ್ಲಿಂ ಕಾರ್ಮಿಕರು 2022-23 ರಲ್ಲಿ ಅರೆಕಾಲಿಕ ಕಾರ್ಮಿಕರಾಗಿ ಕೆಲಸ ಮಾಡಿದರು, 2018-19 ರಲ್ಲಿ ಇದರ ಅಂಕಿ-ಅಂಶಗಳು 25.7% ರಷ್ಟಿತ್ತು. ಇದು ಹಿಂದೂಗಳು, ಸಿಖ್ಖರು ಮತ್ತು ಕ್ರಿಶ್ಚಿಯನ್ನರಂತಹ ಇತರ ಧಾರ್ಮಿಕ ಗುಂಪುಗಳಿಗೆ ಹೋಲಿಸಿದರೆ ವ್ಯತಿರಿಕ್ತವಾಗಿದೆ, ಈ ಸಮುದಾಯಗಳಲ್ಲಿ ಅರೆಕಾಲಿಕ ಕಾರ್ಮಿಕರಾಗಿ ಕೆಲಸ ಮಾಡುವ ಜನಸಂಖ್ಯೆಯ ಪಾಲು ಇಳಿಮುಖವಾಗಿದೆ ಎಂದು ವರದಿ ಹೇಳಿದೆ.

ಅಕ್ಟೋಬರ್ 2023ರಲ್ಲಿ ಮುಸ್ಲಿಂ ಧಾರ್ಮಿಕ ಗುಂಪುಗಳಲ್ಲಿ ಕಾರ್ಮಿಕ ಬಲದ ಭಾಗವಹಿಸುವಿಕೆ ದರ (LFPR) ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತ (WPR) ಕುಸಿದಿದೆ ಎಂದು ವರದಿ ಮಾಡಿದೆ. ಕಾರ್ಮಿಕ ಬಲದ ಭಾಗವಹಿಸುವಿಕೆಯ ಪ್ರಮಾಣವು ಕೆಲಸವನ್ನು ಹುಡುಕುತ್ತಿರುವ ಜನಸಂಖ್ಯೆಯ ಪಾಲು ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತವು ಕೆಲಸ ಮಾಡುವ ದುಡಿಯುವ ವಯಸ್ಸಿನ ಜನಸಂಖ್ಯೆಯ ಪಾಲು ಆಗಿದೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಪ್ರಾಧ್ಯಾಪಕ ಸಂತೋಷ್ ಮೆಹ್ರೋತ್ರಾ ಅವರು ಈ ದತ್ತಾಂಶವನ್ನು ವಿವರಿಸುತ್ತಾ, ಮುಸ್ಲಿಮರು ಗ್ರಾಮೀಣ ಜನಸಂಖ್ಯೆಗಿಂತ ನಗರ ಜನಸಂಖ್ಯೆಯಲ್ಲಿ ಹೆಚ್ಚಿನ ಪಾಲು ಹೊಂದಿದ್ದಾರೆ. ಏಕೆಂದರೆ ಹೆಚ್ಚಿನ ಮುಸ್ಲಿಮರು ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಆದ್ದರಿಂದ, ಮೊದಲ ಕೋವಿಡ್ ನಂತರದ ವರ್ಷದಲ್ಲಿ ಕಾರ್ಮಿಕ ಮಾರುಕಟ್ಟೆ ಪುನಶ್ಚೇತನಗೊಂಡಾಗ ಮುಸ್ಲಿಮರ ವರ್ಕಿಂಗ್‌ ಪಾಪ್ಯುಲೇಷನ್‌ ಅನುಪಾತದಲ್ಲಿ 2 ಶೇಕಡಾವಾರು ಕುಸಿತ ಕಂಡು ಬಂದಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ನೀಡಿರುವುದು ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಝಮೀರ್ ಅಹ್ಮದ್ ಖಾನ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...