Homeಮುಖಪುಟನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

ನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

- Advertisement -
- Advertisement -

ಕಳೆದ ಐದು ವರ್ಷಗಳಲ್ಲಿ ಬಹುಸಂಖ್ಯಾತ ಹಿಂದೂ ಜನಸಂಖ್ಯೆಗೆ ಹೋಲಿಸಿದರೆ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಸಿಖ್‌ನಂತಹ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ನಿಯಮಿತ ವೇತನ ಹೊಂದಿರುವ ಉದ್ಯೋಗಿಗಳಾಗಿ ಕೆಲಸ ಮಾಡುವ ಜನರ ಪಾಲಿನಲ್ಲಿ ಹೆಚ್ಚಿನ ಕುಸಿತವನ್ನು ಕಂಡಿದೆ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ಇತ್ತೀಚಿನ ವಿಶ್ಲೇಷಣೆಯಲ್ಲಿ ತಿಳಿಸಿದೆ.

ಆವರ್ತಕ ಕಾರ್ಮಿಕ ಪಡೆ ಸಮೀಕ್ಷೆ(Periodic Labour Force Survey (PLFS) ದತ್ತಾಂಶ ಈ ಶಾಕಿಂಗ್‌ ಮಾಹಿತಿಯನ್ನು ಹೊರಗಿಟ್ಟಿದೆ. ಈ ಅಲ್ಪಸಂಖ್ಯಾತರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಕಾರ್ಮಿಕರು 2018-19 ಮತ್ತು 2022-23ರ ನಡುವೆ ನಿಯಮಿತ ವೇತನದ ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಕುಸಿತವನ್ನು ಕಂಡಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

ಏಪ್ರಿಲ್ 2017ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿಯಿಂದ PLFSನ್ನು ಪ್ರಾರಂಭಿಸಲಾಯಿತು. ಇದು ಪ್ರಮುಖ ಉದ್ಯೋಗ ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತ, ಕಾರ್ಮಿಕ ಭಾಗವಹಿಸುವಿಕೆ ದರ ಮತ್ತು ನಿರುದ್ಯೋಗ ದರ,  ಸಾಮಾಜಿಕ ಮತ್ತು ಧಾರ್ಮಿಕ ಗುಂಪುಗಳಲ್ಲಿ ಉದ್ಯೋಗದ ಸ್ಥಿತಿಯನ್ನು ಅವಲೋಕಿಸಿ ವರದಿಯನ್ನು ಸಿದ್ದಪಡಿಸುತ್ತದೆ.

ಬಿಸಿನೆಸ್ ಸ್ಟ್ಯಾಂಡರ್ಡ್ ಇತ್ತೀಚಿನ ವಿಶ್ಲೇಷಣೆ ಪ್ರಕಾರ, 2018-19ರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 22.1% ಕಾರ್ಮಿಕರು ನಿಯಮಿತ ವೇತನ ಉದ್ಯೋಗಿಗಳಾಗಿ ಕೆಲಸ ಮಾಡಿದ್ದರೆ, 2022-23ರಲ್ಲಿ ಈ ಪಾಲು 15.3%ಕ್ಕೆ ಇಳಿದಿದೆ, ಇದು 6.8 ಶೇಕಡಾ ಪಾಯಿಂಟ್ ಕುಸಿತವನ್ನು ದಾಖಲಿಸಿದೆ.

ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಜನಸಂಖ್ಯೆಯು 3.2 ಶೇಕಡಾ ಪಾಯಿಂಟ್ ಕುಸಿತವನ್ನು ಕಂಡಿದೆ,  2022-23 ರಲ್ಲಿ ಕೇವಲ 28% ಕ್ರಿಶ್ಚಿಯನ್ ಕೆಲಸಗಾರರು ನಿಯಮಿತ ಉದ್ಯೋಗಗಳನ್ನು ಹೊಂದಿದ್ದಾರೆ. 2018-19 ರಲ್ಲಿ ಇದರ ಅಂಕಿ-ಅಂಶಗಳು 31.2% ರಷ್ಟಿತ್ತು.

ಸಿಖ್ ಸಮುದಾಯದಲ್ಲಿ ಈ ಅಂಕಿ-ಅಂಶಗಳು ಶೇಕಡಾ 2.5 ಪಾಯಿಂಟ್ ಕುಸಿತವನ್ನು ಕಂಡಿದೆ. 2022-23ರಲ್ಲಿ ಕೇವಲ 26% ಸಿಖ್ ಕಾರ್ಮಿಕರು ನಿಯಮಿತ ವೇತನದ ಉದ್ಯೋಗವನ್ನು ಹೊಂದಿದ್ದರು, 2018-19ರಲ್ಲಿ ಇದರ ಪಾಲು 28.5% ಇತ್ತು.

ಬಹುಸಂಖ್ಯಾತ ಹಿಂದೂ ಸಮುದಾಯಕ್ಕೆ ಉದ್ಯೋಗದ ಗುಣಮಟ್ಟದಲ್ಲಿ ಕ್ಷೀಣತೆ ಕಡಿಮೆಯಾಗಿದೆ. 21.4% ಕಾರ್ಮಿಕರು 2022-23ರಲ್ಲಿ ನಿಯಮಿತ ಸಂಬಳದ ಉದ್ಯೋಗಗಳನ್ನು ಹೊಂದಿದ್ದರು, 2018-19 ರಲ್ಲಿ ಇದು 23.7% ಇತ್ತು. ಅಂದರೆ 2.3 ಶೇಕಡಾ ಮಾತ್ರ ಕಡಿಮೆಯಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಸ್ವಯಂ ಉದ್ಯೋಗ ಹೊಂದಿರುವವರ ಸಂಖ್ಯೆಯಲ್ಲಿ ಹೆಚ್ಚುತ್ತಿರುವಾಗ, ಅರೆಕಾಲಿಕ ಕೆಲಸಗಾರರ ಪಾಲು ಮುಸ್ಲಿಂ ಸಮುದಾಯದಲ್ಲಿ ಮಾತ್ರ ಹೆಚ್ಚಾಗಿದೆ ಎಂದು ದಿನಪತ್ರಿಕೆ ವರದಿ ಮಾಡಿದೆ. ಸುಮಾರು 26.3% ಮುಸ್ಲಿಂ ಕಾರ್ಮಿಕರು 2022-23 ರಲ್ಲಿ ಅರೆಕಾಲಿಕ ಕಾರ್ಮಿಕರಾಗಿ ಕೆಲಸ ಮಾಡಿದರು, 2018-19 ರಲ್ಲಿ ಇದರ ಅಂಕಿ-ಅಂಶಗಳು 25.7% ರಷ್ಟಿತ್ತು. ಇದು ಹಿಂದೂಗಳು, ಸಿಖ್ಖರು ಮತ್ತು ಕ್ರಿಶ್ಚಿಯನ್ನರಂತಹ ಇತರ ಧಾರ್ಮಿಕ ಗುಂಪುಗಳಿಗೆ ಹೋಲಿಸಿದರೆ ವ್ಯತಿರಿಕ್ತವಾಗಿದೆ, ಈ ಸಮುದಾಯಗಳಲ್ಲಿ ಅರೆಕಾಲಿಕ ಕಾರ್ಮಿಕರಾಗಿ ಕೆಲಸ ಮಾಡುವ ಜನಸಂಖ್ಯೆಯ ಪಾಲು ಇಳಿಮುಖವಾಗಿದೆ ಎಂದು ವರದಿ ಹೇಳಿದೆ.

ಅಕ್ಟೋಬರ್ 2023ರಲ್ಲಿ ಮುಸ್ಲಿಂ ಧಾರ್ಮಿಕ ಗುಂಪುಗಳಲ್ಲಿ ಕಾರ್ಮಿಕ ಬಲದ ಭಾಗವಹಿಸುವಿಕೆ ದರ (LFPR) ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತ (WPR) ಕುಸಿದಿದೆ ಎಂದು ವರದಿ ಮಾಡಿದೆ. ಕಾರ್ಮಿಕ ಬಲದ ಭಾಗವಹಿಸುವಿಕೆಯ ಪ್ರಮಾಣವು ಕೆಲಸವನ್ನು ಹುಡುಕುತ್ತಿರುವ ಜನಸಂಖ್ಯೆಯ ಪಾಲು ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತವು ಕೆಲಸ ಮಾಡುವ ದುಡಿಯುವ ವಯಸ್ಸಿನ ಜನಸಂಖ್ಯೆಯ ಪಾಲು ಆಗಿದೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಪ್ರಾಧ್ಯಾಪಕ ಸಂತೋಷ್ ಮೆಹ್ರೋತ್ರಾ ಅವರು ಈ ದತ್ತಾಂಶವನ್ನು ವಿವರಿಸುತ್ತಾ, ಮುಸ್ಲಿಮರು ಗ್ರಾಮೀಣ ಜನಸಂಖ್ಯೆಗಿಂತ ನಗರ ಜನಸಂಖ್ಯೆಯಲ್ಲಿ ಹೆಚ್ಚಿನ ಪಾಲು ಹೊಂದಿದ್ದಾರೆ. ಏಕೆಂದರೆ ಹೆಚ್ಚಿನ ಮುಸ್ಲಿಮರು ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಆದ್ದರಿಂದ, ಮೊದಲ ಕೋವಿಡ್ ನಂತರದ ವರ್ಷದಲ್ಲಿ ಕಾರ್ಮಿಕ ಮಾರುಕಟ್ಟೆ ಪುನಶ್ಚೇತನಗೊಂಡಾಗ ಮುಸ್ಲಿಮರ ವರ್ಕಿಂಗ್‌ ಪಾಪ್ಯುಲೇಷನ್‌ ಅನುಪಾತದಲ್ಲಿ 2 ಶೇಕಡಾವಾರು ಕುಸಿತ ಕಂಡು ಬಂದಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ನೀಡಿರುವುದು ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಝಮೀರ್ ಅಹ್ಮದ್ ಖಾನ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...