Homeಮುಖಪುಟನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

ನಿಯಮಿತ ವೇತನದ ಉದ್ಯೋಗ: ಹಿನ್ನೆಡೆ ಕಂಡ ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯ; ವರದಿ

- Advertisement -
- Advertisement -

ಕಳೆದ ಐದು ವರ್ಷಗಳಲ್ಲಿ ಬಹುಸಂಖ್ಯಾತ ಹಿಂದೂ ಜನಸಂಖ್ಯೆಗೆ ಹೋಲಿಸಿದರೆ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಸಿಖ್‌ನಂತಹ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ನಿಯಮಿತ ವೇತನ ಹೊಂದಿರುವ ಉದ್ಯೋಗಿಗಳಾಗಿ ಕೆಲಸ ಮಾಡುವ ಜನರ ಪಾಲಿನಲ್ಲಿ ಹೆಚ್ಚಿನ ಕುಸಿತವನ್ನು ಕಂಡಿದೆ ಎಂದು ಬಿಸಿನೆಸ್ ಸ್ಟ್ಯಾಂಡರ್ಡ್ ಇತ್ತೀಚಿನ ವಿಶ್ಲೇಷಣೆಯಲ್ಲಿ ತಿಳಿಸಿದೆ.

ಆವರ್ತಕ ಕಾರ್ಮಿಕ ಪಡೆ ಸಮೀಕ್ಷೆ(Periodic Labour Force Survey (PLFS) ದತ್ತಾಂಶ ಈ ಶಾಕಿಂಗ್‌ ಮಾಹಿತಿಯನ್ನು ಹೊರಗಿಟ್ಟಿದೆ. ಈ ಅಲ್ಪಸಂಖ್ಯಾತರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಕಾರ್ಮಿಕರು 2018-19 ಮತ್ತು 2022-23ರ ನಡುವೆ ನಿಯಮಿತ ವೇತನದ ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಕುಸಿತವನ್ನು ಕಂಡಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

ಏಪ್ರಿಲ್ 2017ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿಯಿಂದ PLFSನ್ನು ಪ್ರಾರಂಭಿಸಲಾಯಿತು. ಇದು ಪ್ರಮುಖ ಉದ್ಯೋಗ ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತ, ಕಾರ್ಮಿಕ ಭಾಗವಹಿಸುವಿಕೆ ದರ ಮತ್ತು ನಿರುದ್ಯೋಗ ದರ,  ಸಾಮಾಜಿಕ ಮತ್ತು ಧಾರ್ಮಿಕ ಗುಂಪುಗಳಲ್ಲಿ ಉದ್ಯೋಗದ ಸ್ಥಿತಿಯನ್ನು ಅವಲೋಕಿಸಿ ವರದಿಯನ್ನು ಸಿದ್ದಪಡಿಸುತ್ತದೆ.

ಬಿಸಿನೆಸ್ ಸ್ಟ್ಯಾಂಡರ್ಡ್ ಇತ್ತೀಚಿನ ವಿಶ್ಲೇಷಣೆ ಪ್ರಕಾರ, 2018-19ರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ 22.1% ಕಾರ್ಮಿಕರು ನಿಯಮಿತ ವೇತನ ಉದ್ಯೋಗಿಗಳಾಗಿ ಕೆಲಸ ಮಾಡಿದ್ದರೆ, 2022-23ರಲ್ಲಿ ಈ ಪಾಲು 15.3%ಕ್ಕೆ ಇಳಿದಿದೆ, ಇದು 6.8 ಶೇಕಡಾ ಪಾಯಿಂಟ್ ಕುಸಿತವನ್ನು ದಾಖಲಿಸಿದೆ.

ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಜನಸಂಖ್ಯೆಯು 3.2 ಶೇಕಡಾ ಪಾಯಿಂಟ್ ಕುಸಿತವನ್ನು ಕಂಡಿದೆ,  2022-23 ರಲ್ಲಿ ಕೇವಲ 28% ಕ್ರಿಶ್ಚಿಯನ್ ಕೆಲಸಗಾರರು ನಿಯಮಿತ ಉದ್ಯೋಗಗಳನ್ನು ಹೊಂದಿದ್ದಾರೆ. 2018-19 ರಲ್ಲಿ ಇದರ ಅಂಕಿ-ಅಂಶಗಳು 31.2% ರಷ್ಟಿತ್ತು.

ಸಿಖ್ ಸಮುದಾಯದಲ್ಲಿ ಈ ಅಂಕಿ-ಅಂಶಗಳು ಶೇಕಡಾ 2.5 ಪಾಯಿಂಟ್ ಕುಸಿತವನ್ನು ಕಂಡಿದೆ. 2022-23ರಲ್ಲಿ ಕೇವಲ 26% ಸಿಖ್ ಕಾರ್ಮಿಕರು ನಿಯಮಿತ ವೇತನದ ಉದ್ಯೋಗವನ್ನು ಹೊಂದಿದ್ದರು, 2018-19ರಲ್ಲಿ ಇದರ ಪಾಲು 28.5% ಇತ್ತು.

ಬಹುಸಂಖ್ಯಾತ ಹಿಂದೂ ಸಮುದಾಯಕ್ಕೆ ಉದ್ಯೋಗದ ಗುಣಮಟ್ಟದಲ್ಲಿ ಕ್ಷೀಣತೆ ಕಡಿಮೆಯಾಗಿದೆ. 21.4% ಕಾರ್ಮಿಕರು 2022-23ರಲ್ಲಿ ನಿಯಮಿತ ಸಂಬಳದ ಉದ್ಯೋಗಗಳನ್ನು ಹೊಂದಿದ್ದರು, 2018-19 ರಲ್ಲಿ ಇದು 23.7% ಇತ್ತು. ಅಂದರೆ 2.3 ಶೇಕಡಾ ಮಾತ್ರ ಕಡಿಮೆಯಾಗಿದೆ ಎಂದು ವರದಿ ಬಹಿರಂಗಪಡಿಸಿದೆ.

ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಸ್ವಯಂ ಉದ್ಯೋಗ ಹೊಂದಿರುವವರ ಸಂಖ್ಯೆಯಲ್ಲಿ ಹೆಚ್ಚುತ್ತಿರುವಾಗ, ಅರೆಕಾಲಿಕ ಕೆಲಸಗಾರರ ಪಾಲು ಮುಸ್ಲಿಂ ಸಮುದಾಯದಲ್ಲಿ ಮಾತ್ರ ಹೆಚ್ಚಾಗಿದೆ ಎಂದು ದಿನಪತ್ರಿಕೆ ವರದಿ ಮಾಡಿದೆ. ಸುಮಾರು 26.3% ಮುಸ್ಲಿಂ ಕಾರ್ಮಿಕರು 2022-23 ರಲ್ಲಿ ಅರೆಕಾಲಿಕ ಕಾರ್ಮಿಕರಾಗಿ ಕೆಲಸ ಮಾಡಿದರು, 2018-19 ರಲ್ಲಿ ಇದರ ಅಂಕಿ-ಅಂಶಗಳು 25.7% ರಷ್ಟಿತ್ತು. ಇದು ಹಿಂದೂಗಳು, ಸಿಖ್ಖರು ಮತ್ತು ಕ್ರಿಶ್ಚಿಯನ್ನರಂತಹ ಇತರ ಧಾರ್ಮಿಕ ಗುಂಪುಗಳಿಗೆ ಹೋಲಿಸಿದರೆ ವ್ಯತಿರಿಕ್ತವಾಗಿದೆ, ಈ ಸಮುದಾಯಗಳಲ್ಲಿ ಅರೆಕಾಲಿಕ ಕಾರ್ಮಿಕರಾಗಿ ಕೆಲಸ ಮಾಡುವ ಜನಸಂಖ್ಯೆಯ ಪಾಲು ಇಳಿಮುಖವಾಗಿದೆ ಎಂದು ವರದಿ ಹೇಳಿದೆ.

ಅಕ್ಟೋಬರ್ 2023ರಲ್ಲಿ ಮುಸ್ಲಿಂ ಧಾರ್ಮಿಕ ಗುಂಪುಗಳಲ್ಲಿ ಕಾರ್ಮಿಕ ಬಲದ ಭಾಗವಹಿಸುವಿಕೆ ದರ (LFPR) ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತ (WPR) ಕುಸಿದಿದೆ ಎಂದು ವರದಿ ಮಾಡಿದೆ. ಕಾರ್ಮಿಕ ಬಲದ ಭಾಗವಹಿಸುವಿಕೆಯ ಪ್ರಮಾಣವು ಕೆಲಸವನ್ನು ಹುಡುಕುತ್ತಿರುವ ಜನಸಂಖ್ಯೆಯ ಪಾಲು ಮತ್ತು ಕಾರ್ಮಿಕರ ಜನಸಂಖ್ಯೆಯ ಅನುಪಾತವು ಕೆಲಸ ಮಾಡುವ ದುಡಿಯುವ ವಯಸ್ಸಿನ ಜನಸಂಖ್ಯೆಯ ಪಾಲು ಆಗಿದೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಪ್ರಾಧ್ಯಾಪಕ ಸಂತೋಷ್ ಮೆಹ್ರೋತ್ರಾ ಅವರು ಈ ದತ್ತಾಂಶವನ್ನು ವಿವರಿಸುತ್ತಾ, ಮುಸ್ಲಿಮರು ಗ್ರಾಮೀಣ ಜನಸಂಖ್ಯೆಗಿಂತ ನಗರ ಜನಸಂಖ್ಯೆಯಲ್ಲಿ ಹೆಚ್ಚಿನ ಪಾಲು ಹೊಂದಿದ್ದಾರೆ. ಏಕೆಂದರೆ ಹೆಚ್ಚಿನ ಮುಸ್ಲಿಮರು ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಆದ್ದರಿಂದ, ಮೊದಲ ಕೋವಿಡ್ ನಂತರದ ವರ್ಷದಲ್ಲಿ ಕಾರ್ಮಿಕ ಮಾರುಕಟ್ಟೆ ಪುನಶ್ಚೇತನಗೊಂಡಾಗ ಮುಸ್ಲಿಮರ ವರ್ಕಿಂಗ್‌ ಪಾಪ್ಯುಲೇಷನ್‌ ಅನುಪಾತದಲ್ಲಿ 2 ಶೇಕಡಾವಾರು ಕುಸಿತ ಕಂಡು ಬಂದಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ನೀಡಿರುವುದು ಶೇ.1ಕ್ಕಿಂತ ಕಡಿಮೆ ಅನುದಾನ: ಸಚಿವ ಝಮೀರ್ ಅಹ್ಮದ್ ಖಾನ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...