Homeಮುಖಪುಟಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು ‘ಕಾನೂನು ಬದ್ಧವಾಗಿ ಮಾನ್ಯ’: ಸುಪ್ರೀಂಗೆ ಒಕ್ಕೂಟ ಸರ್ಕಾರ

ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು ‘ಕಾನೂನು ಬದ್ಧವಾಗಿ ಮಾನ್ಯ’: ಸುಪ್ರೀಂಗೆ ಒಕ್ಕೂಟ ಸರ್ಕಾರ

- Advertisement -
- Advertisement -

ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು “ಕಾನೂನುಬದ್ಧವಾಗಿ ಮಾನ್ಯ” ವಾಗಿದ್ದು, ಇದು ಅಸಮಾನತೆಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆಯೆ ಹೊರತು, ಹಿಂದೂಗಳು ಅಥವಾ ಇತರ ಸಮುದಾಯಗಳ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ ತಿಳಿಸಿದೆ.

‘ಕಲ್ಯಾಣ ಯೋಜನೆಗಳು ಧರ್ಮದ ಆಧಾರದ ಮೇಲೆ ಇರಬಾರದು’ ಎಂದು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಒಕ್ಕೂಟ ಸರ್ಕಾರವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಹೇಳಿಕೆಯನ್ನು ನೀಡಲಾಗಿದೆ.

ಇದನ್ನೂ ಓದಿ: ದಿವಂಗತ ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯದ ಕಹಳೆ’ ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

ನೀರಜ್ ಶಂಕರ್ ಸಕ್ಸೇನಾ ಮತ್ತು ಇತರ ಐವರು ಈ ಅರ್ಜಿಯನ್ನು ಸಲ್ಲಿಸಿದ್ದು, ತಾವು ಅಸಂವಿಧಾನಿಕವಾಗಿ ಸವಲತ್ತುಗಳಿಂದ ವಂಚಿತರಾಗಿದ್ದು, ಧಾರ್ಮಿಕ ಅಲ್ಪಸಂಖ್ಯಾತರು ಪಡೆಯುವ ಪ್ರಯೋಜನಗಳನ್ನು ಪಡೆಯಲಾಗುತ್ತಿಲ್ಲ. ಆದ್ದರಿಂದ ತಮಗೆ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ವಾದಿಸಿದ್ದರು.

“ಸಚಿವಾಲಯವು ಜಾರಿಗೆ ತರುತ್ತಿರುವ ಯೋಜನೆಗಳು ಅಲ್ಪಸಂಖ್ಯಾತ ಸಮುದಾಯಗಳಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡುವುದು ಮತ್ತು ಶಿಕ್ಷಣದ ಮಟ್ಟವನ್ನು ಸುಧಾರಿಸುವುದು, ಉದ್ಯೋಗ, ಕೌಶಲ್ಯ ಮತ್ತು ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಭಾಗವಹಿಸುವುದು, ನಾಗರಿಕ ಸೌಲಭ್ಯಗಳು ಅಥವಾ ಮೂಲಸೌಕರ್ಯಗಳ ಕೊರತೆಯನ್ನು ಕಡಿಮೆ ಮಾಡುವುದಾಗಿದೆ” ಎಂದು ಒಕ್ಕೂಟ ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ಹೇಳಿದೆ.

“ಈ ಯೋಜನೆಗಳು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಮಾನತೆಯ ತತ್ವಗಳಿಗೆ ವಿರುದ್ಧವಾಗಿಲ್ಲ. ಯೋಜನೆಗಳು ಕಾನೂನುಬದ್ಧವಾಗಿ ಮಾನ್ಯವಾಗಿರುತ್ತವೆ” ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

“ಕಲ್ಯಾಣ ಯೋಜನೆಗಳು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಆರ್ಥಿಕವಾಗಿ ದುರ್ಬಲವಾಗರುವ ವರ್ಗಕ್ಕೆ, ಸಮುದಾಯದ ಹಿಂದುಳಿದ ವರ್ಗದ ಮಕ್ಕಳಿಗೆ, ಅಭ್ಯರ್ಥಿಗಳಿಗೆ, ಮಹಿಳೆಯರಿಗೆ ಮಾತ್ರವಾಗಿದೆ. ಅದರ ಹೊರತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಎಲ್ಲರಿಗೂ ಅಲ್ಲ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದಲ್ಲದೆ, ವಿದ್ಯಾರ್ಥಿವೇತನ ಯೋಜನೆ, ತರಬೇತಿ ಯೋಜನೆ ಇತ್ಯಾದಿಗಳು ಶೈಕ್ಷಣಿಕ ಅರ್ಹತೆಯನ್ನು ಹೊಂದಿವೆ, ಜೊತೆಗೆ ಮಹಿಳಾ ವಿದ್ಯಾರ್ಥಿಗಳಿಗೆ ಮೀಸಲು ಇವೆ ಎಂದು ತನ್ನ ಅಫಿಡೆವಿಟ್‌ನಲ್ಲಿ ಹೇಳಲಾಗಿದೆ.

“ಅನಗತ್ಯ ಲಾಭ” ನೀಡುವ ಮೂಲಕ ಸರ್ಕಾರವು ಮುಸ್ಲಿಂ ಸಮುದಾಯವನ್ನು ಕಾನೂನು ಮತ್ತು ಸಂವಿಧಾನಕ್ಕಿಂತ ಮೇಲಿರಿಸುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ನೆರವು ಅಗತ್ಯವಿರುವ ಹಿಂದುಳಿದ ವರ್ಗಗಳ ಸ್ಥಿತಿಗತಿಗಳನ್ನು ಕಂಡುಹಿಡಿಯಲು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗವಿದೆ ಎಂದು ಹೇಳಿದ್ದ ಅವರು, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆ 1992 ಅನ್ನು ರದ್ದುಗೊಳಿಸುವಂತೆ ಕೋರಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ದಲಿತ ಮುಸ್ಲಿಂ ಸಮುದಾಯಗಳಿಗೆ ಸಿಕ್ಕ ರಾಜಕೀಯ ಅಧಿಕಾರವೆಷ್ಟು? ಸಿಗಬೇಕಾದುದೆಷ್ಟುಕಾ


ಇದನ್ನೂ ಓದಿ: ಕೊರೊನಾ ಲಾಕ್‌ಡೌನು, ಯಡಿಯೂರಪ್ಪನವರ ಪ್ಯಾಕೇಜು: ನೇಕಾರರಿಗೆ ಸಿಕ್ಕಿದ್ದೆಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...