Homeಮುಖಪುಟಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು ‘ಕಾನೂನು ಬದ್ಧವಾಗಿ ಮಾನ್ಯ’: ಸುಪ್ರೀಂಗೆ ಒಕ್ಕೂಟ ಸರ್ಕಾರ

ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು ‘ಕಾನೂನು ಬದ್ಧವಾಗಿ ಮಾನ್ಯ’: ಸುಪ್ರೀಂಗೆ ಒಕ್ಕೂಟ ಸರ್ಕಾರ

- Advertisement -
- Advertisement -

ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು “ಕಾನೂನುಬದ್ಧವಾಗಿ ಮಾನ್ಯ” ವಾಗಿದ್ದು, ಇದು ಅಸಮಾನತೆಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆಯೆ ಹೊರತು, ಹಿಂದೂಗಳು ಅಥವಾ ಇತರ ಸಮುದಾಯಗಳ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ ತಿಳಿಸಿದೆ.

‘ಕಲ್ಯಾಣ ಯೋಜನೆಗಳು ಧರ್ಮದ ಆಧಾರದ ಮೇಲೆ ಇರಬಾರದು’ ಎಂದು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಒಕ್ಕೂಟ ಸರ್ಕಾರವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಹೇಳಿಕೆಯನ್ನು ನೀಡಲಾಗಿದೆ.

ಇದನ್ನೂ ಓದಿ: ದಿವಂಗತ ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯದ ಕಹಳೆ’ ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

ನೀರಜ್ ಶಂಕರ್ ಸಕ್ಸೇನಾ ಮತ್ತು ಇತರ ಐವರು ಈ ಅರ್ಜಿಯನ್ನು ಸಲ್ಲಿಸಿದ್ದು, ತಾವು ಅಸಂವಿಧಾನಿಕವಾಗಿ ಸವಲತ್ತುಗಳಿಂದ ವಂಚಿತರಾಗಿದ್ದು, ಧಾರ್ಮಿಕ ಅಲ್ಪಸಂಖ್ಯಾತರು ಪಡೆಯುವ ಪ್ರಯೋಜನಗಳನ್ನು ಪಡೆಯಲಾಗುತ್ತಿಲ್ಲ. ಆದ್ದರಿಂದ ತಮಗೆ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ವಾದಿಸಿದ್ದರು.

“ಸಚಿವಾಲಯವು ಜಾರಿಗೆ ತರುತ್ತಿರುವ ಯೋಜನೆಗಳು ಅಲ್ಪಸಂಖ್ಯಾತ ಸಮುದಾಯಗಳಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡುವುದು ಮತ್ತು ಶಿಕ್ಷಣದ ಮಟ್ಟವನ್ನು ಸುಧಾರಿಸುವುದು, ಉದ್ಯೋಗ, ಕೌಶಲ್ಯ ಮತ್ತು ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಭಾಗವಹಿಸುವುದು, ನಾಗರಿಕ ಸೌಲಭ್ಯಗಳು ಅಥವಾ ಮೂಲಸೌಕರ್ಯಗಳ ಕೊರತೆಯನ್ನು ಕಡಿಮೆ ಮಾಡುವುದಾಗಿದೆ” ಎಂದು ಒಕ್ಕೂಟ ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ಹೇಳಿದೆ.

“ಈ ಯೋಜನೆಗಳು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಮಾನತೆಯ ತತ್ವಗಳಿಗೆ ವಿರುದ್ಧವಾಗಿಲ್ಲ. ಯೋಜನೆಗಳು ಕಾನೂನುಬದ್ಧವಾಗಿ ಮಾನ್ಯವಾಗಿರುತ್ತವೆ” ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

“ಕಲ್ಯಾಣ ಯೋಜನೆಗಳು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಆರ್ಥಿಕವಾಗಿ ದುರ್ಬಲವಾಗರುವ ವರ್ಗಕ್ಕೆ, ಸಮುದಾಯದ ಹಿಂದುಳಿದ ವರ್ಗದ ಮಕ್ಕಳಿಗೆ, ಅಭ್ಯರ್ಥಿಗಳಿಗೆ, ಮಹಿಳೆಯರಿಗೆ ಮಾತ್ರವಾಗಿದೆ. ಅದರ ಹೊರತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಎಲ್ಲರಿಗೂ ಅಲ್ಲ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದಲ್ಲದೆ, ವಿದ್ಯಾರ್ಥಿವೇತನ ಯೋಜನೆ, ತರಬೇತಿ ಯೋಜನೆ ಇತ್ಯಾದಿಗಳು ಶೈಕ್ಷಣಿಕ ಅರ್ಹತೆಯನ್ನು ಹೊಂದಿವೆ, ಜೊತೆಗೆ ಮಹಿಳಾ ವಿದ್ಯಾರ್ಥಿಗಳಿಗೆ ಮೀಸಲು ಇವೆ ಎಂದು ತನ್ನ ಅಫಿಡೆವಿಟ್‌ನಲ್ಲಿ ಹೇಳಲಾಗಿದೆ.

“ಅನಗತ್ಯ ಲಾಭ” ನೀಡುವ ಮೂಲಕ ಸರ್ಕಾರವು ಮುಸ್ಲಿಂ ಸಮುದಾಯವನ್ನು ಕಾನೂನು ಮತ್ತು ಸಂವಿಧಾನಕ್ಕಿಂತ ಮೇಲಿರಿಸುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ನೆರವು ಅಗತ್ಯವಿರುವ ಹಿಂದುಳಿದ ವರ್ಗಗಳ ಸ್ಥಿತಿಗತಿಗಳನ್ನು ಕಂಡುಹಿಡಿಯಲು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗವಿದೆ ಎಂದು ಹೇಳಿದ್ದ ಅವರು, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆ 1992 ಅನ್ನು ರದ್ದುಗೊಳಿಸುವಂತೆ ಕೋರಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ದಲಿತ ಮುಸ್ಲಿಂ ಸಮುದಾಯಗಳಿಗೆ ಸಿಕ್ಕ ರಾಜಕೀಯ ಅಧಿಕಾರವೆಷ್ಟು? ಸಿಗಬೇಕಾದುದೆಷ್ಟುಕಾ


ಇದನ್ನೂ ಓದಿ: ಕೊರೊನಾ ಲಾಕ್‌ಡೌನು, ಯಡಿಯೂರಪ್ಪನವರ ಪ್ಯಾಕೇಜು: ನೇಕಾರರಿಗೆ ಸಿಕ್ಕಿದ್ದೆಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...