Homeಮುಖಪುಟಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು ‘ಕಾನೂನು ಬದ್ಧವಾಗಿ ಮಾನ್ಯ’: ಸುಪ್ರೀಂಗೆ ಒಕ್ಕೂಟ ಸರ್ಕಾರ

ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು ‘ಕಾನೂನು ಬದ್ಧವಾಗಿ ಮಾನ್ಯ’: ಸುಪ್ರೀಂಗೆ ಒಕ್ಕೂಟ ಸರ್ಕಾರ

- Advertisement -
- Advertisement -

ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ ಯೋಜನೆಗಳು “ಕಾನೂನುಬದ್ಧವಾಗಿ ಮಾನ್ಯ” ವಾಗಿದ್ದು, ಇದು ಅಸಮಾನತೆಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆಯೆ ಹೊರತು, ಹಿಂದೂಗಳು ಅಥವಾ ಇತರ ಸಮುದಾಯಗಳ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ ತಿಳಿಸಿದೆ.

‘ಕಲ್ಯಾಣ ಯೋಜನೆಗಳು ಧರ್ಮದ ಆಧಾರದ ಮೇಲೆ ಇರಬಾರದು’ ಎಂದು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಒಕ್ಕೂಟ ಸರ್ಕಾರವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಹೇಳಿಕೆಯನ್ನು ನೀಡಲಾಗಿದೆ.

ಇದನ್ನೂ ಓದಿ: ದಿವಂಗತ ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯದ ಕಹಳೆ’ ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

ನೀರಜ್ ಶಂಕರ್ ಸಕ್ಸೇನಾ ಮತ್ತು ಇತರ ಐವರು ಈ ಅರ್ಜಿಯನ್ನು ಸಲ್ಲಿಸಿದ್ದು, ತಾವು ಅಸಂವಿಧಾನಿಕವಾಗಿ ಸವಲತ್ತುಗಳಿಂದ ವಂಚಿತರಾಗಿದ್ದು, ಧಾರ್ಮಿಕ ಅಲ್ಪಸಂಖ್ಯಾತರು ಪಡೆಯುವ ಪ್ರಯೋಜನಗಳನ್ನು ಪಡೆಯಲಾಗುತ್ತಿಲ್ಲ. ಆದ್ದರಿಂದ ತಮಗೆ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ವಾದಿಸಿದ್ದರು.

“ಸಚಿವಾಲಯವು ಜಾರಿಗೆ ತರುತ್ತಿರುವ ಯೋಜನೆಗಳು ಅಲ್ಪಸಂಖ್ಯಾತ ಸಮುದಾಯಗಳಲ್ಲಿನ ಅಸಮಾನತೆಗಳನ್ನು ಕಡಿಮೆ ಮಾಡುವುದು ಮತ್ತು ಶಿಕ್ಷಣದ ಮಟ್ಟವನ್ನು ಸುಧಾರಿಸುವುದು, ಉದ್ಯೋಗ, ಕೌಶಲ್ಯ ಮತ್ತು ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಭಾಗವಹಿಸುವುದು, ನಾಗರಿಕ ಸೌಲಭ್ಯಗಳು ಅಥವಾ ಮೂಲಸೌಕರ್ಯಗಳ ಕೊರತೆಯನ್ನು ಕಡಿಮೆ ಮಾಡುವುದಾಗಿದೆ” ಎಂದು ಒಕ್ಕೂಟ ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ಹೇಳಿದೆ.

“ಈ ಯೋಜನೆಗಳು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಮಾನತೆಯ ತತ್ವಗಳಿಗೆ ವಿರುದ್ಧವಾಗಿಲ್ಲ. ಯೋಜನೆಗಳು ಕಾನೂನುಬದ್ಧವಾಗಿ ಮಾನ್ಯವಾಗಿರುತ್ತವೆ” ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

“ಕಲ್ಯಾಣ ಯೋಜನೆಗಳು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಆರ್ಥಿಕವಾಗಿ ದುರ್ಬಲವಾಗರುವ ವರ್ಗಕ್ಕೆ, ಸಮುದಾಯದ ಹಿಂದುಳಿದ ವರ್ಗದ ಮಕ್ಕಳಿಗೆ, ಅಭ್ಯರ್ಥಿಗಳಿಗೆ, ಮಹಿಳೆಯರಿಗೆ ಮಾತ್ರವಾಗಿದೆ. ಅದರ ಹೊರತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಎಲ್ಲರಿಗೂ ಅಲ್ಲ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದಲ್ಲದೆ, ವಿದ್ಯಾರ್ಥಿವೇತನ ಯೋಜನೆ, ತರಬೇತಿ ಯೋಜನೆ ಇತ್ಯಾದಿಗಳು ಶೈಕ್ಷಣಿಕ ಅರ್ಹತೆಯನ್ನು ಹೊಂದಿವೆ, ಜೊತೆಗೆ ಮಹಿಳಾ ವಿದ್ಯಾರ್ಥಿಗಳಿಗೆ ಮೀಸಲು ಇವೆ ಎಂದು ತನ್ನ ಅಫಿಡೆವಿಟ್‌ನಲ್ಲಿ ಹೇಳಲಾಗಿದೆ.

“ಅನಗತ್ಯ ಲಾಭ” ನೀಡುವ ಮೂಲಕ ಸರ್ಕಾರವು ಮುಸ್ಲಿಂ ಸಮುದಾಯವನ್ನು ಕಾನೂನು ಮತ್ತು ಸಂವಿಧಾನಕ್ಕಿಂತ ಮೇಲಿರಿಸುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ನೆರವು ಅಗತ್ಯವಿರುವ ಹಿಂದುಳಿದ ವರ್ಗಗಳ ಸ್ಥಿತಿಗತಿಗಳನ್ನು ಕಂಡುಹಿಡಿಯಲು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗವಿದೆ ಎಂದು ಹೇಳಿದ್ದ ಅವರು, ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆ 1992 ಅನ್ನು ರದ್ದುಗೊಳಿಸುವಂತೆ ಕೋರಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ದಲಿತ ಮುಸ್ಲಿಂ ಸಮುದಾಯಗಳಿಗೆ ಸಿಕ್ಕ ರಾಜಕೀಯ ಅಧಿಕಾರವೆಷ್ಟು? ಸಿಗಬೇಕಾದುದೆಷ್ಟುಕಾ


ಇದನ್ನೂ ಓದಿ: ಕೊರೊನಾ ಲಾಕ್‌ಡೌನು, ಯಡಿಯೂರಪ್ಪನವರ ಪ್ಯಾಕೇಜು: ನೇಕಾರರಿಗೆ ಸಿಕ್ಕಿದ್ದೆಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...