Homeಕರೋನಾ ತಲ್ಲಣಬದುಕುವ ಹಕ್ಕಿಗೆ ತೊಂದರೆಯಾದಾಗ ಧಾರ್ಮಿಕ ಹಕ್ಕನ್ನು ಹಿಂದಕ್ಕೆ ತಳ್ಳಬಹುದು: ಮದ್ರಾಸ್ ಹೈಕೋರ್ಟ್‌

ಬದುಕುವ ಹಕ್ಕಿಗೆ ತೊಂದರೆಯಾದಾಗ ಧಾರ್ಮಿಕ ಹಕ್ಕನ್ನು ಹಿಂದಕ್ಕೆ ತಳ್ಳಬಹುದು: ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ಧರ್ಮವನ್ನು ಆಚರಿಸುವ ಹಕ್ಕು ಖಂಡಿತವಾಗಿಯೂ ಜೀವಿಸುವ ಹಕ್ಕಿಗೆ ಅಧೀನವಾಗಿದ್ದು, ಜೀವಿಸುವ ಹಕ್ಕಿಗೆ ತೊಂದರೆಯಾದಾಗ, ಧಾರ್ಮಿಕ ಆಚರಣೆಯ ಹಕ್ಕನ್ನು ಹಿಂದಕ್ಕೆ ತಳ್ಳಬಹುದು ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ಕೊರೊನಾ ಲಾಕ್‌ಡೌನ್ ನಿರ್ಬಂಧದಿಂದಾಗಿ ಮುಚ್ಚಲ್ಪಟ್ಟ ದೇವಾಲಯಗಳನ್ನು ಪೂರ್ಣವಾಗಿ ಪುನಃ ತೆರೆಯಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯ ಮನವಿಯನ್ನು ನ್ಯಾಯಾಲಯವು ನಿರಾಕರಿಸಿತು.

ಕೆ.ಕೆ.ರಮೇಶ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂಥಿಲ್‌‌ಕುಮಾರ್ ರಾಮಮೂರ್ತಿ ಅವರ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಸ್ ಸೇವೆಗಳನ್ನು ಸಂಪೂರ್ಣವಾಗಿ ಪುನರಾರಂಭಿಸಲು ಕೋರಿದ್ದರು.

ಇದನ್ನೂ ಓದಿ: ಕೊರೊನಾ ನಿರ್ಬಂಧದಿಂದಾಗಿ ತೊಂದರೆಯಾದವರ ನೆರವಿಗೆ ಒಂದು ತಿಂಗಳ ಸಂಬಳ ನೀಡಿದ ಮದ್ರಾಸ್‌ ಹೈಕೋರ್ಟ್‌ ನ್ಯಾಯಮೂರ್ತಿ

ನ್ಯಾಯಪೀಠವು ಮನವಿಯನ್ನು ವಿಲೇವಾರಿ ಮಾಡಿ, “… ಅಂತಹ ವಿಷಯವನ್ನು ನಿರ್ಬಂಧಗಳನ್ನು ವಿಧಿಸುವ ಮೊದಲು ಅಥವಾ ಅವುಗಳನ್ನು ಸರಾಗಗೊಳಿಸುವ ಮೊದಲು ಸಂಬಂಧಿತ ಡೇಟಾ ಮತ್ತು ತಜ್ಞರ ಸಲಹೆಯನ್ನು ಪಡೆಯಲು ರಾಜ್ಯಕ್ಕೆ ಬಿಡಲಾಗುತ್ತದೆ. ಈ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ರೀತಿಯಲ್ಲಿ ರಾಜ್ಯದ ಕಡೆಯಿಂದ ಯಾವುದೇ ಅನಿಯಂತ್ರಿತ ಕ್ರಮಗಳು ಕಂಡುಬರುತ್ತಿಲ್ಲ” ಎಂದು ನ್ಯಾಯಾಲಯವು ಹೇಳಿದೆ.

ಈ ಮಧ್ಯೆ, ಒಕ್ಕೂಟ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗರ್ಭಿಣಿಯರು ಕೊರೊನಾ ವ್ಯಾಕ್ಸಿನೇಷನ್‌ಗೆ ಅರ್ಹರು ಎಂದು ಶುಕ್ರವಾರ ಘೋಷಿಸಿದೆ. ರೋಗನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮೂಹದ (ಎನ್‌ಟಿಎಜಿಐ) ಶಿಫಾರಸುಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ವೀಕರಿಸಿದೆ. “ಗರ್ಭಿಣಿಯರು ಈಗ ಕೋವಿನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ ಲಸಿಕೆ ಪಡೆಯಲು ಹತ್ತಿರದ ಕೋವಿಡ್ ವ್ಯಾಕ್ಸಿನೇಷನ್ ಸೆಂಟರ್ (ಸಿವಿಸಿ) ಗೆ ತೆರಳಬಹುದು” ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಇದುವರೆಗೂ 27.56 ಕೋಟಿ ಜನರು ಒಂದು ಡೋಸ್‌ ಕೊರೊನಾ ವ್ಯಾಕ್ಸೀನ್ ಪಡೆದುಕೊಂಡಿದ್ದು, 5.9 ಕೋಟಿ ಜನರು ಎರಡು ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಹಾಗಾಗಿ ದೇಶದಲ್ಲಿ ಲಸಿಕೆ ಪಡೆಯಲು ಅರ್ಹರಾಗಿರುವ 4.3% ಜನರಷ್ಟೇ ಕೊರೊನಾ ಲಸಿಕೆ ಪಡೆದುಕೊಂಡಂತಾಗಿದೆ. ದೇಶದಲ್ಲಿ ಇದುವರೆಗೂ 3.05 ಕೋಟಿ ಜನರು ಸೋಂಕಿಗೆ ಒಳಗಾಗಿದ್ದು, 4 ಲಕ್ಷ ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ಸೋಂಕಿನಿಂದ ಇದುವರೆಗೂ 2.95 ಕೋಟಿ ಜನರು ಚೇತರಿಸಿಕೊಂಡಿದ್ದು, 5.17 ಲಕ್ಷ ಸಕ್ರಿಯ ಸೋಂಕಿತರಿದ್ದಾರೆ.

ಇದನ್ನೂ ಓದಿ: ಸಾಲಿಟರ್‌ ಜನರಲ್‌ ಹುದ್ದೆಯಿಂದ ತುಷಾರ್‌ ಮೆಹ್ತಾರನ್ನು ಕಿತ್ತು ಹಾಕಿ: ಮೋದಿಗೆ ಟಿಎಂಸಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...