Homeಕರೋನಾ ತಲ್ಲಣಬದುಕುವ ಹಕ್ಕಿಗೆ ತೊಂದರೆಯಾದಾಗ ಧಾರ್ಮಿಕ ಹಕ್ಕನ್ನು ಹಿಂದಕ್ಕೆ ತಳ್ಳಬಹುದು: ಮದ್ರಾಸ್ ಹೈಕೋರ್ಟ್‌

ಬದುಕುವ ಹಕ್ಕಿಗೆ ತೊಂದರೆಯಾದಾಗ ಧಾರ್ಮಿಕ ಹಕ್ಕನ್ನು ಹಿಂದಕ್ಕೆ ತಳ್ಳಬಹುದು: ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ಧರ್ಮವನ್ನು ಆಚರಿಸುವ ಹಕ್ಕು ಖಂಡಿತವಾಗಿಯೂ ಜೀವಿಸುವ ಹಕ್ಕಿಗೆ ಅಧೀನವಾಗಿದ್ದು, ಜೀವಿಸುವ ಹಕ್ಕಿಗೆ ತೊಂದರೆಯಾದಾಗ, ಧಾರ್ಮಿಕ ಆಚರಣೆಯ ಹಕ್ಕನ್ನು ಹಿಂದಕ್ಕೆ ತಳ್ಳಬಹುದು ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ಕೊರೊನಾ ಲಾಕ್‌ಡೌನ್ ನಿರ್ಬಂಧದಿಂದಾಗಿ ಮುಚ್ಚಲ್ಪಟ್ಟ ದೇವಾಲಯಗಳನ್ನು ಪೂರ್ಣವಾಗಿ ಪುನಃ ತೆರೆಯಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯ ಮನವಿಯನ್ನು ನ್ಯಾಯಾಲಯವು ನಿರಾಕರಿಸಿತು.

ಕೆ.ಕೆ.ರಮೇಶ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂಥಿಲ್‌‌ಕುಮಾರ್ ರಾಮಮೂರ್ತಿ ಅವರ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಸ್ ಸೇವೆಗಳನ್ನು ಸಂಪೂರ್ಣವಾಗಿ ಪುನರಾರಂಭಿಸಲು ಕೋರಿದ್ದರು.

ಇದನ್ನೂ ಓದಿ: ಕೊರೊನಾ ನಿರ್ಬಂಧದಿಂದಾಗಿ ತೊಂದರೆಯಾದವರ ನೆರವಿಗೆ ಒಂದು ತಿಂಗಳ ಸಂಬಳ ನೀಡಿದ ಮದ್ರಾಸ್‌ ಹೈಕೋರ್ಟ್‌ ನ್ಯಾಯಮೂರ್ತಿ

ನ್ಯಾಯಪೀಠವು ಮನವಿಯನ್ನು ವಿಲೇವಾರಿ ಮಾಡಿ, “… ಅಂತಹ ವಿಷಯವನ್ನು ನಿರ್ಬಂಧಗಳನ್ನು ವಿಧಿಸುವ ಮೊದಲು ಅಥವಾ ಅವುಗಳನ್ನು ಸರಾಗಗೊಳಿಸುವ ಮೊದಲು ಸಂಬಂಧಿತ ಡೇಟಾ ಮತ್ತು ತಜ್ಞರ ಸಲಹೆಯನ್ನು ಪಡೆಯಲು ರಾಜ್ಯಕ್ಕೆ ಬಿಡಲಾಗುತ್ತದೆ. ಈ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ರೀತಿಯಲ್ಲಿ ರಾಜ್ಯದ ಕಡೆಯಿಂದ ಯಾವುದೇ ಅನಿಯಂತ್ರಿತ ಕ್ರಮಗಳು ಕಂಡುಬರುತ್ತಿಲ್ಲ” ಎಂದು ನ್ಯಾಯಾಲಯವು ಹೇಳಿದೆ.

ಈ ಮಧ್ಯೆ, ಒಕ್ಕೂಟ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗರ್ಭಿಣಿಯರು ಕೊರೊನಾ ವ್ಯಾಕ್ಸಿನೇಷನ್‌ಗೆ ಅರ್ಹರು ಎಂದು ಶುಕ್ರವಾರ ಘೋಷಿಸಿದೆ. ರೋಗನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮೂಹದ (ಎನ್‌ಟಿಎಜಿಐ) ಶಿಫಾರಸುಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ವೀಕರಿಸಿದೆ. “ಗರ್ಭಿಣಿಯರು ಈಗ ಕೋವಿನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ ಲಸಿಕೆ ಪಡೆಯಲು ಹತ್ತಿರದ ಕೋವಿಡ್ ವ್ಯಾಕ್ಸಿನೇಷನ್ ಸೆಂಟರ್ (ಸಿವಿಸಿ) ಗೆ ತೆರಳಬಹುದು” ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಇದುವರೆಗೂ 27.56 ಕೋಟಿ ಜನರು ಒಂದು ಡೋಸ್‌ ಕೊರೊನಾ ವ್ಯಾಕ್ಸೀನ್ ಪಡೆದುಕೊಂಡಿದ್ದು, 5.9 ಕೋಟಿ ಜನರು ಎರಡು ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಹಾಗಾಗಿ ದೇಶದಲ್ಲಿ ಲಸಿಕೆ ಪಡೆಯಲು ಅರ್ಹರಾಗಿರುವ 4.3% ಜನರಷ್ಟೇ ಕೊರೊನಾ ಲಸಿಕೆ ಪಡೆದುಕೊಂಡಂತಾಗಿದೆ. ದೇಶದಲ್ಲಿ ಇದುವರೆಗೂ 3.05 ಕೋಟಿ ಜನರು ಸೋಂಕಿಗೆ ಒಳಗಾಗಿದ್ದು, 4 ಲಕ್ಷ ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ಸೋಂಕಿನಿಂದ ಇದುವರೆಗೂ 2.95 ಕೋಟಿ ಜನರು ಚೇತರಿಸಿಕೊಂಡಿದ್ದು, 5.17 ಲಕ್ಷ ಸಕ್ರಿಯ ಸೋಂಕಿತರಿದ್ದಾರೆ.

ಇದನ್ನೂ ಓದಿ: ಸಾಲಿಟರ್‌ ಜನರಲ್‌ ಹುದ್ದೆಯಿಂದ ತುಷಾರ್‌ ಮೆಹ್ತಾರನ್ನು ಕಿತ್ತು ಹಾಕಿ: ಮೋದಿಗೆ ಟಿಎಂಸಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...