Homeಕರೋನಾ ತಲ್ಲಣಬದುಕುವ ಹಕ್ಕಿಗೆ ತೊಂದರೆಯಾದಾಗ ಧಾರ್ಮಿಕ ಹಕ್ಕನ್ನು ಹಿಂದಕ್ಕೆ ತಳ್ಳಬಹುದು: ಮದ್ರಾಸ್ ಹೈಕೋರ್ಟ್‌

ಬದುಕುವ ಹಕ್ಕಿಗೆ ತೊಂದರೆಯಾದಾಗ ಧಾರ್ಮಿಕ ಹಕ್ಕನ್ನು ಹಿಂದಕ್ಕೆ ತಳ್ಳಬಹುದು: ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ಧರ್ಮವನ್ನು ಆಚರಿಸುವ ಹಕ್ಕು ಖಂಡಿತವಾಗಿಯೂ ಜೀವಿಸುವ ಹಕ್ಕಿಗೆ ಅಧೀನವಾಗಿದ್ದು, ಜೀವಿಸುವ ಹಕ್ಕಿಗೆ ತೊಂದರೆಯಾದಾಗ, ಧಾರ್ಮಿಕ ಆಚರಣೆಯ ಹಕ್ಕನ್ನು ಹಿಂದಕ್ಕೆ ತಳ್ಳಬಹುದು ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ಕೊರೊನಾ ಲಾಕ್‌ಡೌನ್ ನಿರ್ಬಂಧದಿಂದಾಗಿ ಮುಚ್ಚಲ್ಪಟ್ಟ ದೇವಾಲಯಗಳನ್ನು ಪೂರ್ಣವಾಗಿ ಪುನಃ ತೆರೆಯಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯ ಮನವಿಯನ್ನು ನ್ಯಾಯಾಲಯವು ನಿರಾಕರಿಸಿತು.

ಕೆ.ಕೆ.ರಮೇಶ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂಥಿಲ್‌‌ಕುಮಾರ್ ರಾಮಮೂರ್ತಿ ಅವರ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಸ್ ಸೇವೆಗಳನ್ನು ಸಂಪೂರ್ಣವಾಗಿ ಪುನರಾರಂಭಿಸಲು ಕೋರಿದ್ದರು.

ಇದನ್ನೂ ಓದಿ: ಕೊರೊನಾ ನಿರ್ಬಂಧದಿಂದಾಗಿ ತೊಂದರೆಯಾದವರ ನೆರವಿಗೆ ಒಂದು ತಿಂಗಳ ಸಂಬಳ ನೀಡಿದ ಮದ್ರಾಸ್‌ ಹೈಕೋರ್ಟ್‌ ನ್ಯಾಯಮೂರ್ತಿ

ನ್ಯಾಯಪೀಠವು ಮನವಿಯನ್ನು ವಿಲೇವಾರಿ ಮಾಡಿ, “… ಅಂತಹ ವಿಷಯವನ್ನು ನಿರ್ಬಂಧಗಳನ್ನು ವಿಧಿಸುವ ಮೊದಲು ಅಥವಾ ಅವುಗಳನ್ನು ಸರಾಗಗೊಳಿಸುವ ಮೊದಲು ಸಂಬಂಧಿತ ಡೇಟಾ ಮತ್ತು ತಜ್ಞರ ಸಲಹೆಯನ್ನು ಪಡೆಯಲು ರಾಜ್ಯಕ್ಕೆ ಬಿಡಲಾಗುತ್ತದೆ. ಈ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ರೀತಿಯಲ್ಲಿ ರಾಜ್ಯದ ಕಡೆಯಿಂದ ಯಾವುದೇ ಅನಿಯಂತ್ರಿತ ಕ್ರಮಗಳು ಕಂಡುಬರುತ್ತಿಲ್ಲ” ಎಂದು ನ್ಯಾಯಾಲಯವು ಹೇಳಿದೆ.

ಈ ಮಧ್ಯೆ, ಒಕ್ಕೂಟ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗರ್ಭಿಣಿಯರು ಕೊರೊನಾ ವ್ಯಾಕ್ಸಿನೇಷನ್‌ಗೆ ಅರ್ಹರು ಎಂದು ಶುಕ್ರವಾರ ಘೋಷಿಸಿದೆ. ರೋಗನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮೂಹದ (ಎನ್‌ಟಿಎಜಿಐ) ಶಿಫಾರಸುಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ವೀಕರಿಸಿದೆ. “ಗರ್ಭಿಣಿಯರು ಈಗ ಕೋವಿನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ ಲಸಿಕೆ ಪಡೆಯಲು ಹತ್ತಿರದ ಕೋವಿಡ್ ವ್ಯಾಕ್ಸಿನೇಷನ್ ಸೆಂಟರ್ (ಸಿವಿಸಿ) ಗೆ ತೆರಳಬಹುದು” ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಇದುವರೆಗೂ 27.56 ಕೋಟಿ ಜನರು ಒಂದು ಡೋಸ್‌ ಕೊರೊನಾ ವ್ಯಾಕ್ಸೀನ್ ಪಡೆದುಕೊಂಡಿದ್ದು, 5.9 ಕೋಟಿ ಜನರು ಎರಡು ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಹಾಗಾಗಿ ದೇಶದಲ್ಲಿ ಲಸಿಕೆ ಪಡೆಯಲು ಅರ್ಹರಾಗಿರುವ 4.3% ಜನರಷ್ಟೇ ಕೊರೊನಾ ಲಸಿಕೆ ಪಡೆದುಕೊಂಡಂತಾಗಿದೆ. ದೇಶದಲ್ಲಿ ಇದುವರೆಗೂ 3.05 ಕೋಟಿ ಜನರು ಸೋಂಕಿಗೆ ಒಳಗಾಗಿದ್ದು, 4 ಲಕ್ಷ ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ಸೋಂಕಿನಿಂದ ಇದುವರೆಗೂ 2.95 ಕೋಟಿ ಜನರು ಚೇತರಿಸಿಕೊಂಡಿದ್ದು, 5.17 ಲಕ್ಷ ಸಕ್ರಿಯ ಸೋಂಕಿತರಿದ್ದಾರೆ.

ಇದನ್ನೂ ಓದಿ: ಸಾಲಿಟರ್‌ ಜನರಲ್‌ ಹುದ್ದೆಯಿಂದ ತುಷಾರ್‌ ಮೆಹ್ತಾರನ್ನು ಕಿತ್ತು ಹಾಕಿ: ಮೋದಿಗೆ ಟಿಎಂಸಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....