Homeಮುಖಪುಟಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಉದ್ಯಮಿ ಸುರೇಶ್‌ ಕುಮಾರ್‌ ಜೈನ್‌, "ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ" ಎನ್ನುತ್ತಾರೆ.

- Advertisement -
- Advertisement -

“ಧಾರ್ಮಿಕ ವಿಭಜನೆಯು ಭಾರತದ ಐಟಿಬಿಟಿ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಖ್ಯಾತ ಉದ್ಯಮಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಬಯೋಕಾನ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕಿರಣ್ ಮಜುಂದಾರ್ ಶಾ ಎಚ್ಚರಿಸಿದ್ದಾರೆ.

ಕರ್ನಾಟಕದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೆ ಆತಂಕ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕಿವಿಮಾತು ಹೇಳಿದ್ದಾರೆ.

ಹಿಂದೂ ದೇವಾಲಯದ ಆವರಣ ಹಾಗೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಮಾಡಿರುವ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ಕರ್ನಾಟಕ ಸರ್ಕಾರವನ್ನು ಎಚ್ಚರಿಸಿದ್ದಾರೆ.

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಕಿರಣ್ ಮಜುಂದಾರ್ ಹೇಳಿದ್ದಾರೆ. 

ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಟ್ಯಾಗ್ ಮಾಡಿರುವ ಅವರು, “ದಯವಿಟ್ಟು ಈ ಬೆಳೆಯುತ್ತಿರುವ ಧಾರ್ಮಿಕ ವಿಭಜನೆಯನ್ನು ಪರಿಹರಿಸಿ” ಎಂದು ಒತ್ತಾಯಿಸಿದ್ದಾರೆ.

 

ಮುಸ್ಲಿಂ ಸಮುದಾಯದ ವ್ಯಾಪಾರವನ್ನು ಬಹಿಷ್ಕರಿಸುವಂತೆ ದ್ವೇಷ ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಎಲ್ಲ ಜಾತಿಗಳ ವರ್ತಕ ಸಮುದಾಯ ಕಟುವಾಗಿ ಟೀಕಿಸುತ್ತಿದೆ. ಹಲಾಲ್ ಹೆಸರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಿಸುತ್ತಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮೈಸೂರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಜೈನ್‌, “ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ. ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಅಲ್ಲಿ ಜೈನರೊಬ್ಬರೇ ವ್ಯಾಪಾರ ಮಾಡಬೇಕು, ಬೇರೆಯವರು ಬರಬಾರದು ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

“ನಾವು ಹಿಂದೂಗಳಲ್ಲ, ಜೈನರು. ಹಿಂದೂ, ಮುಸ್ಲಿಂ, ಸಿಖ್‌, ಜೈನ್‌- ಇಲ್ಲರೂ ವಿಭಿನ್ನ ಜನಾಂಗಗಳು. ನಮಗೆ ನಾವೇ ಸೀಮಿತ ಮಾಡಿಕೊಳ್ಳಲು ಆಗುವುದಿಲ್ಲ. ಎಲ್ಲರೂ ಸಹಬಾಳ್ವೆ ಮಾಡಬೇಕು. ನನ್ನ ಕೌಶಲವನ್ನು ನಾನು ತೋರಿಸಬೇಕು. ಅವರ ಕೌಶಲವನ್ನು ಅವರು ತೋರಿಸಬೇಕು. ಒಬ್ಬರಿಗೊಬ್ಬರು ಕೌಶಲವನ್ನು ವಿನಿಮಯ ಮಾಡಿಕೊಳ್ಳಬೇಕು. ಹೀಗಾಗಿ ಇಂದು ಆಗುತ್ತಿರುವ ಬೆಳವಣಿಗೆಗಳನ್ನು ನಾನು ವಿರೋಧಿಸುತ್ತೇನೆ” ಎಂದು ತಿಳಿಸಿದರು.

ಉದ್ಯಮಿ ಸುರೇಶ್‌ಕುಮಾರ್‌ ಜೈನ್‌

ಹಲಾಲ್‌ ಸಂಬಂಧ ಎದ್ದಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಹಲಾಲ್‌ ಈ ಕಾಲದಲ್ಲ. ಪ್ರಾಚೀನ ಕಾಲದಿಂದಲೂ ಮುಸ್ಲಿಮರು ಹಲಾಲ್ ಮಾಡುತ್ತಿದ್ದಾರೆ. ಈಗ ಹಿಂದೂ ಮುಸ್ಲಿಂ ಗಲಾಟೆ ಶುರುವಾಗಿದೆ, ಹಿಜಾಬ್ ವಿವಾದವಾಗಿದೆ ಎಂಬ ಕಾರಣಕ್ಕೆ ಹಲಾಲ್‌ ಬ್ರಾಂಡ್ ಸೃಷ್ಟಿಯಾಗಿಲ್ಲ. ಮುಸ್ಲಿಮರು ಹಲಾಲ್‌ ಮಾಡಿದ ಆಹಾರವನ್ನು ತಿನ್ನಬೇಕೆಂಬ ಪದ್ಧತಿ ಇದೆ. ಇತರ ಸಮುದಾಯಗಳಲ್ಲಿ ಹಲಾಲ್ ಮಾಡಿದನ್ನೇ ತಿನ್ನಬೇಕೆಂಬ ಸಂಪ್ರದಾಯ ಇಲ್ಲ. ಹಿಂದೂಗಳ ವ್ಯಾಪಾರ ಹಾಳು ಮಾಡಲೆಂದು ಹಲಾಲ್‌ ಮಾಡಿದ್ದಲ್ಲ. ಅದು ಅವರ ಧಾರ್ಮಿಕರ ಆಚರಣೆ. ಹಲಾಲ್‌ ವಿಚಾರವನ್ನು ಮುನ್ನೆಲೆಗೆ ತಂದು ವ್ಯಾಪಾರಕ್ಕೆ ವಿರೋಧಿಸುತ್ತಿರುವುದು ತೀವ್ರ ವಿಷಾದನೀಯ” ಎಂದರು.

“ಹಿಂದೂ ಮುಸ್ಲಿಂ ಗಲಾಟೆಗಳು ಕಾಂಗ್ರೆಸ್ ಸರ್ಕಾರ ಇದ್ದಾಗಲೂ ನಡೆಯುತ್ತಿದ್ದವು. ಆದರೆ ಈ ಪ್ರಕಾರವಾದ ಪ್ರಚೋದನೆಗಳು ಆಗುತ್ತಿರಲಿಲ್ಲ. ಶಾಂತಿ ಸಭೆಗಳನ್ನು ನಡೆಸಿ ಇತ್ಯರ್ಥ ಮಾಡಲಾಗುತ್ತಿತ್ತು. ವೈಯಕ್ತಿಕ ಭಿನ್ನಾಭಿಪ್ರಾಯಗಳ ಕಾರಣಕ್ಕೋ, ಮತ್ಯಾವುದಕ್ಕೋ ಆಗ ಗಲಾಟೆಗಳು ಆಗುತ್ತಿದ್ದವೇ ಹೊರತು ಈ ಮಾದರಿಯಲ್ಲಿ ನಡೆಯುತ್ತಿರಲಿಲ್ಲ. ಆದರೆ ಇಂದು ನೇರವಾಗಿಯೇ ಎರಡು ಸಮುದಾಯಗಳ ನಡುವೆ ಗೋಡೆ ಕಟ್ಟಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ನಾನು ಜೈನನಾಗಿ ಹೇಳುತ್ತೇನೆ. ಈ ಹಿಂದೆ ಯಾವ ಯಾವ ಸಮುದಾಯಗಳು ಪ್ರಾಬಲ್ಯವನ್ನು ಹೊಂದಿದ್ದವೋ ಅವರು ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನಾವು ಮತಾಂತರ ಆಗಲಿಲ್ಲವೆಂದು ಸುಮಾರು ಎಂಟು ಸಾವಿರ ಜೈನರನ್ನು ಮಧುರೈನಲ್ಲಿ ಕೊಂದಿರುವ ಕುರಿತು ಸಾಕ್ಷ್ಯಾಧಾರಗಳಿವೆ. ಅನೇಕ ಜೈನ ದೇವಾಲಯಗಳು ವೈಷ್ಣವ, ವೀರಶೈವ ದೇವಾಲಯಗಳಾಗಿ ಬದಲಾಗಿವೆ. ರಾಜಪ್ರಭುತ್ವ ಇದ್ದ ಕಾಲದಲ್ಲಿ ಒಂದು ಜನಾಂಗದ ಮೇಲೆ ಮತ್ತೊಂದು ಜನಾಂಗ ಒತ್ತಡ ಹೇರುವುದು ಸಾಮಾನ್ಯವಾಗಿತ್ತು. ಆದರೆ ಪ್ರಜಾಪ್ರಭುತ್ವದ ಕಾಲದಲ್ಲಿ ಆ ರೀತಿಯ ಒತ್ತಡ, ಹೇರಿಕೆ ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಜೈನ ವಿಗ್ರಹಗಳಿಗೆ ವಿಭೂತಿ ಬಳಿದಿರುವುದನ್ನು ನೋಡಿದ್ದೇವೆ. ಮೈಮೇಲೆ ಉಡುದಾರ, ಬಟ್ಟೆಯೇ ಇರಬಾರದು ಎಂದು ಜೈನ ಮುನಿಗಳು ಹೇಳಿರಬೇಕಾದರೆ ನಮಗೆ ಜನಿವಾರ ಹೇಗೆ ಬೇಕಾಗಿತ್ತು? ಒಂದು ಕಾಲಘಟ್ಟದಲ್ಲಿ ಜನಿವಾರ ಹಾಕಲು ಶುರುಮಾಡಿದರು. ಆನಂತರ ಮುಂದುವರಿತು. ಲಿಂಗಾಯತರು ಹೆಚ್ಚಿರುವ ಊರಲ್ಲಿ ಬಸವ ಜಯಂತಿಯನ್ನು ಜೈನರೂ ಸೇರಿಕೊಂಡೇ ಮಾಡಿರುತ್ತೇವೆ. ಅಂದರೆ ಆಯಾ ಪರಿಸರಕ್ಕೆ ಹೊಂದಿಕೊಂಡು ಸಮಾಜ ಮುಂದುವರಿಯುತ್ತಿದೆ. ಸಹಬಾಳ್ವೆ ಮುಖ್ಯ. ವೈಯಕ್ತಿಕವಾಗಿ ಹೇಳುವುದಾದರೆ ನನ್ನ ಫ್ಯಾಕ್ಟರಿಯಲ್ಲಿ ಸಾಬರೊಂದಿಗೆ ಮೊದಲು ವ್ಯಾಪಾರ ಮಾಡಿದ ಬಳಿಕವೇ ಬೇರೆಯವರೊಂದಿಗೆ ವ್ಯವಹರಿಸುತ್ತೇನೆ. ಇದನ್ನು ನಾನು ರೂಢಿ ಮಾಡಿಕೊಂಡು ಬಂದಿದ್ದೇನೆ. ಅದನ್ನು ಕಿತ್ತುಕೊಳ್ಳುವ ಹಕ್ಕುವ ಯಾರಿಗೂ ಇಲ್ಲ. ಈ ಉದ್ಯಮ ರಾಜಕಾರಣಕ್ಕೆ ಜಾತಿ ರಾಜಕಾರಣ ತರುತ್ತಿರುವುದು ನೋವುಂಟು ಮಾಡಿದೆ” ಎಂದು ವಿಷಾದಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪಿಯುಸಿಎಲ್ ಅಧ್ಯಕ್ಷರಾದ ಅರವಿಂದ್ ನಾರಾಯಣ್‌, ನಾಜಿ ಜರ್ಮನಿಯೊಂದಿಗೆ ಕರ್ನಾಟಕದ ಪರಿಸ್ಥಿತಿಯನ್ನು ಹೋಲಿಸಿದ್ದಾರೆ. “ಹಿಟ್ಲರ್‌ನ ನಾಜಿ ಜರ್ಮನಿಯಲ್ಲಿ ಏನಾಯಿತು? ಮೊದಲು ಯಹೂದಿಗಳ ವಿರುದ್ಧ ದ್ವೇಷದ ಭಾಷಣ ಮಾಡಲಾಯಿತು. ನಂತರ ಯಹೂದಿಗಳಿಂದ ಯಾವುದೇ ವ್ಯಾಪಾರ ವಹಿವಾಟು ಮಾಡದಂತೆ ನಿರ್ಬಂಧಿಸಲಾಯಿತು. ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರದ ಬಳಿಕ ನರಮೇಧದ ನಡೆಯಿತು. ಇತಿಹಾಸದಿಂದ ನಾವು ಪಾಠ ಕಲಿಬೇಕು. ಜೆನೊಸೈಡ್‌ನ ಲಕ್ಷಣಗಳ ಕುರಿತು ಎಚ್ಚರ ವಹಿಸಬೇಕು. ಸರ್ಕಾರ ಈ ರೀತಿಯ ಬೆಳವಣಿಗೆಗಳಿಗೆ ಪ್ರೋತ್ಸಾಹ ನೀಡಬಾರದು” ಎನ್ನುತ್ತಾರೆ ಅರವಿಂದ್‌.


ಇದನ್ನೂ ಓದಿರಿ: Explainer: ಹಲಾಲ್ ಹಾಗೆಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಉದ್ಯಮಿಗಳು. ಪ್ರಗತಿಪರರು. ಹಾಗೂ ಇನ್ನಿತರ ಸಂಘಟನೆಗಳು ಮುಖ್ಯಮಂತ್ರಿಗಳಿಗೆ ಬೇಟಿಯಾಗಿ ಆಗುವ ಅನಾಹುತಗಳ ಬಗ್ಗೆ ವಿವರಿಸಿ ಹೇಳಿ… ಹಾಗೂ ಅವರು ಹಾಕಿಕೊಂಡಿರುವ ಆರೆಸೆಸ್ ಮುಖವಾಡ ಖಳಚಿ ಬನ್ನಿ…

  2. ಸಾಂವಿಧಾನಿಕ ಹಕ್ಕನ್ನು ಯಾರೂ ಕಸಿದುಕೊಳ್ಳಲು ಪ್ರಯತ್ನಿಸಬಾರದು ಜಾತ್ಯತೀತ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಇಂದಿನ ಪರಿಸ್ಥಿತಿಯಲ್ಲಿ ತುಂಬಾ ಉತ್ತಮವಾದ ಸಾಮಾಜಿಕ ನಡವಳಿಕೆ ಎನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....