Homeಮುಖಪುಟಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಉದ್ಯಮಿ ಸುರೇಶ್‌ ಕುಮಾರ್‌ ಜೈನ್‌, "ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ" ಎನ್ನುತ್ತಾರೆ.

- Advertisement -
- Advertisement -

“ಧಾರ್ಮಿಕ ವಿಭಜನೆಯು ಭಾರತದ ಐಟಿಬಿಟಿ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಖ್ಯಾತ ಉದ್ಯಮಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಬಯೋಕಾನ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕಿರಣ್ ಮಜುಂದಾರ್ ಶಾ ಎಚ್ಚರಿಸಿದ್ದಾರೆ.

ಕರ್ನಾಟಕದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೆ ಆತಂಕ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕಿವಿಮಾತು ಹೇಳಿದ್ದಾರೆ.

ಹಿಂದೂ ದೇವಾಲಯದ ಆವರಣ ಹಾಗೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಮಾಡಿರುವ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ಕರ್ನಾಟಕ ಸರ್ಕಾರವನ್ನು ಎಚ್ಚರಿಸಿದ್ದಾರೆ.

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಕಿರಣ್ ಮಜುಂದಾರ್ ಹೇಳಿದ್ದಾರೆ. 

ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಟ್ಯಾಗ್ ಮಾಡಿರುವ ಅವರು, “ದಯವಿಟ್ಟು ಈ ಬೆಳೆಯುತ್ತಿರುವ ಧಾರ್ಮಿಕ ವಿಭಜನೆಯನ್ನು ಪರಿಹರಿಸಿ” ಎಂದು ಒತ್ತಾಯಿಸಿದ್ದಾರೆ.

 

ಮುಸ್ಲಿಂ ಸಮುದಾಯದ ವ್ಯಾಪಾರವನ್ನು ಬಹಿಷ್ಕರಿಸುವಂತೆ ದ್ವೇಷ ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಎಲ್ಲ ಜಾತಿಗಳ ವರ್ತಕ ಸಮುದಾಯ ಕಟುವಾಗಿ ಟೀಕಿಸುತ್ತಿದೆ. ಹಲಾಲ್ ಹೆಸರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಿಸುತ್ತಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮೈಸೂರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಜೈನ್‌, “ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ. ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಅಲ್ಲಿ ಜೈನರೊಬ್ಬರೇ ವ್ಯಾಪಾರ ಮಾಡಬೇಕು, ಬೇರೆಯವರು ಬರಬಾರದು ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

“ನಾವು ಹಿಂದೂಗಳಲ್ಲ, ಜೈನರು. ಹಿಂದೂ, ಮುಸ್ಲಿಂ, ಸಿಖ್‌, ಜೈನ್‌- ಇಲ್ಲರೂ ವಿಭಿನ್ನ ಜನಾಂಗಗಳು. ನಮಗೆ ನಾವೇ ಸೀಮಿತ ಮಾಡಿಕೊಳ್ಳಲು ಆಗುವುದಿಲ್ಲ. ಎಲ್ಲರೂ ಸಹಬಾಳ್ವೆ ಮಾಡಬೇಕು. ನನ್ನ ಕೌಶಲವನ್ನು ನಾನು ತೋರಿಸಬೇಕು. ಅವರ ಕೌಶಲವನ್ನು ಅವರು ತೋರಿಸಬೇಕು. ಒಬ್ಬರಿಗೊಬ್ಬರು ಕೌಶಲವನ್ನು ವಿನಿಮಯ ಮಾಡಿಕೊಳ್ಳಬೇಕು. ಹೀಗಾಗಿ ಇಂದು ಆಗುತ್ತಿರುವ ಬೆಳವಣಿಗೆಗಳನ್ನು ನಾನು ವಿರೋಧಿಸುತ್ತೇನೆ” ಎಂದು ತಿಳಿಸಿದರು.

ಉದ್ಯಮಿ ಸುರೇಶ್‌ಕುಮಾರ್‌ ಜೈನ್‌

ಹಲಾಲ್‌ ಸಂಬಂಧ ಎದ್ದಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಹಲಾಲ್‌ ಈ ಕಾಲದಲ್ಲ. ಪ್ರಾಚೀನ ಕಾಲದಿಂದಲೂ ಮುಸ್ಲಿಮರು ಹಲಾಲ್ ಮಾಡುತ್ತಿದ್ದಾರೆ. ಈಗ ಹಿಂದೂ ಮುಸ್ಲಿಂ ಗಲಾಟೆ ಶುರುವಾಗಿದೆ, ಹಿಜಾಬ್ ವಿವಾದವಾಗಿದೆ ಎಂಬ ಕಾರಣಕ್ಕೆ ಹಲಾಲ್‌ ಬ್ರಾಂಡ್ ಸೃಷ್ಟಿಯಾಗಿಲ್ಲ. ಮುಸ್ಲಿಮರು ಹಲಾಲ್‌ ಮಾಡಿದ ಆಹಾರವನ್ನು ತಿನ್ನಬೇಕೆಂಬ ಪದ್ಧತಿ ಇದೆ. ಇತರ ಸಮುದಾಯಗಳಲ್ಲಿ ಹಲಾಲ್ ಮಾಡಿದನ್ನೇ ತಿನ್ನಬೇಕೆಂಬ ಸಂಪ್ರದಾಯ ಇಲ್ಲ. ಹಿಂದೂಗಳ ವ್ಯಾಪಾರ ಹಾಳು ಮಾಡಲೆಂದು ಹಲಾಲ್‌ ಮಾಡಿದ್ದಲ್ಲ. ಅದು ಅವರ ಧಾರ್ಮಿಕರ ಆಚರಣೆ. ಹಲಾಲ್‌ ವಿಚಾರವನ್ನು ಮುನ್ನೆಲೆಗೆ ತಂದು ವ್ಯಾಪಾರಕ್ಕೆ ವಿರೋಧಿಸುತ್ತಿರುವುದು ತೀವ್ರ ವಿಷಾದನೀಯ” ಎಂದರು.

“ಹಿಂದೂ ಮುಸ್ಲಿಂ ಗಲಾಟೆಗಳು ಕಾಂಗ್ರೆಸ್ ಸರ್ಕಾರ ಇದ್ದಾಗಲೂ ನಡೆಯುತ್ತಿದ್ದವು. ಆದರೆ ಈ ಪ್ರಕಾರವಾದ ಪ್ರಚೋದನೆಗಳು ಆಗುತ್ತಿರಲಿಲ್ಲ. ಶಾಂತಿ ಸಭೆಗಳನ್ನು ನಡೆಸಿ ಇತ್ಯರ್ಥ ಮಾಡಲಾಗುತ್ತಿತ್ತು. ವೈಯಕ್ತಿಕ ಭಿನ್ನಾಭಿಪ್ರಾಯಗಳ ಕಾರಣಕ್ಕೋ, ಮತ್ಯಾವುದಕ್ಕೋ ಆಗ ಗಲಾಟೆಗಳು ಆಗುತ್ತಿದ್ದವೇ ಹೊರತು ಈ ಮಾದರಿಯಲ್ಲಿ ನಡೆಯುತ್ತಿರಲಿಲ್ಲ. ಆದರೆ ಇಂದು ನೇರವಾಗಿಯೇ ಎರಡು ಸಮುದಾಯಗಳ ನಡುವೆ ಗೋಡೆ ಕಟ್ಟಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ನಾನು ಜೈನನಾಗಿ ಹೇಳುತ್ತೇನೆ. ಈ ಹಿಂದೆ ಯಾವ ಯಾವ ಸಮುದಾಯಗಳು ಪ್ರಾಬಲ್ಯವನ್ನು ಹೊಂದಿದ್ದವೋ ಅವರು ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನಾವು ಮತಾಂತರ ಆಗಲಿಲ್ಲವೆಂದು ಸುಮಾರು ಎಂಟು ಸಾವಿರ ಜೈನರನ್ನು ಮಧುರೈನಲ್ಲಿ ಕೊಂದಿರುವ ಕುರಿತು ಸಾಕ್ಷ್ಯಾಧಾರಗಳಿವೆ. ಅನೇಕ ಜೈನ ದೇವಾಲಯಗಳು ವೈಷ್ಣವ, ವೀರಶೈವ ದೇವಾಲಯಗಳಾಗಿ ಬದಲಾಗಿವೆ. ರಾಜಪ್ರಭುತ್ವ ಇದ್ದ ಕಾಲದಲ್ಲಿ ಒಂದು ಜನಾಂಗದ ಮೇಲೆ ಮತ್ತೊಂದು ಜನಾಂಗ ಒತ್ತಡ ಹೇರುವುದು ಸಾಮಾನ್ಯವಾಗಿತ್ತು. ಆದರೆ ಪ್ರಜಾಪ್ರಭುತ್ವದ ಕಾಲದಲ್ಲಿ ಆ ರೀತಿಯ ಒತ್ತಡ, ಹೇರಿಕೆ ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಜೈನ ವಿಗ್ರಹಗಳಿಗೆ ವಿಭೂತಿ ಬಳಿದಿರುವುದನ್ನು ನೋಡಿದ್ದೇವೆ. ಮೈಮೇಲೆ ಉಡುದಾರ, ಬಟ್ಟೆಯೇ ಇರಬಾರದು ಎಂದು ಜೈನ ಮುನಿಗಳು ಹೇಳಿರಬೇಕಾದರೆ ನಮಗೆ ಜನಿವಾರ ಹೇಗೆ ಬೇಕಾಗಿತ್ತು? ಒಂದು ಕಾಲಘಟ್ಟದಲ್ಲಿ ಜನಿವಾರ ಹಾಕಲು ಶುರುಮಾಡಿದರು. ಆನಂತರ ಮುಂದುವರಿತು. ಲಿಂಗಾಯತರು ಹೆಚ್ಚಿರುವ ಊರಲ್ಲಿ ಬಸವ ಜಯಂತಿಯನ್ನು ಜೈನರೂ ಸೇರಿಕೊಂಡೇ ಮಾಡಿರುತ್ತೇವೆ. ಅಂದರೆ ಆಯಾ ಪರಿಸರಕ್ಕೆ ಹೊಂದಿಕೊಂಡು ಸಮಾಜ ಮುಂದುವರಿಯುತ್ತಿದೆ. ಸಹಬಾಳ್ವೆ ಮುಖ್ಯ. ವೈಯಕ್ತಿಕವಾಗಿ ಹೇಳುವುದಾದರೆ ನನ್ನ ಫ್ಯಾಕ್ಟರಿಯಲ್ಲಿ ಸಾಬರೊಂದಿಗೆ ಮೊದಲು ವ್ಯಾಪಾರ ಮಾಡಿದ ಬಳಿಕವೇ ಬೇರೆಯವರೊಂದಿಗೆ ವ್ಯವಹರಿಸುತ್ತೇನೆ. ಇದನ್ನು ನಾನು ರೂಢಿ ಮಾಡಿಕೊಂಡು ಬಂದಿದ್ದೇನೆ. ಅದನ್ನು ಕಿತ್ತುಕೊಳ್ಳುವ ಹಕ್ಕುವ ಯಾರಿಗೂ ಇಲ್ಲ. ಈ ಉದ್ಯಮ ರಾಜಕಾರಣಕ್ಕೆ ಜಾತಿ ರಾಜಕಾರಣ ತರುತ್ತಿರುವುದು ನೋವುಂಟು ಮಾಡಿದೆ” ಎಂದು ವಿಷಾದಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪಿಯುಸಿಎಲ್ ಅಧ್ಯಕ್ಷರಾದ ಅರವಿಂದ್ ನಾರಾಯಣ್‌, ನಾಜಿ ಜರ್ಮನಿಯೊಂದಿಗೆ ಕರ್ನಾಟಕದ ಪರಿಸ್ಥಿತಿಯನ್ನು ಹೋಲಿಸಿದ್ದಾರೆ. “ಹಿಟ್ಲರ್‌ನ ನಾಜಿ ಜರ್ಮನಿಯಲ್ಲಿ ಏನಾಯಿತು? ಮೊದಲು ಯಹೂದಿಗಳ ವಿರುದ್ಧ ದ್ವೇಷದ ಭಾಷಣ ಮಾಡಲಾಯಿತು. ನಂತರ ಯಹೂದಿಗಳಿಂದ ಯಾವುದೇ ವ್ಯಾಪಾರ ವಹಿವಾಟು ಮಾಡದಂತೆ ನಿರ್ಬಂಧಿಸಲಾಯಿತು. ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರದ ಬಳಿಕ ನರಮೇಧದ ನಡೆಯಿತು. ಇತಿಹಾಸದಿಂದ ನಾವು ಪಾಠ ಕಲಿಬೇಕು. ಜೆನೊಸೈಡ್‌ನ ಲಕ್ಷಣಗಳ ಕುರಿತು ಎಚ್ಚರ ವಹಿಸಬೇಕು. ಸರ್ಕಾರ ಈ ರೀತಿಯ ಬೆಳವಣಿಗೆಗಳಿಗೆ ಪ್ರೋತ್ಸಾಹ ನೀಡಬಾರದು” ಎನ್ನುತ್ತಾರೆ ಅರವಿಂದ್‌.


ಇದನ್ನೂ ಓದಿರಿ: Explainer: ಹಲಾಲ್ ಹಾಗೆಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಉದ್ಯಮಿಗಳು. ಪ್ರಗತಿಪರರು. ಹಾಗೂ ಇನ್ನಿತರ ಸಂಘಟನೆಗಳು ಮುಖ್ಯಮಂತ್ರಿಗಳಿಗೆ ಬೇಟಿಯಾಗಿ ಆಗುವ ಅನಾಹುತಗಳ ಬಗ್ಗೆ ವಿವರಿಸಿ ಹೇಳಿ… ಹಾಗೂ ಅವರು ಹಾಕಿಕೊಂಡಿರುವ ಆರೆಸೆಸ್ ಮುಖವಾಡ ಖಳಚಿ ಬನ್ನಿ…

  2. ಸಾಂವಿಧಾನಿಕ ಹಕ್ಕನ್ನು ಯಾರೂ ಕಸಿದುಕೊಳ್ಳಲು ಪ್ರಯತ್ನಿಸಬಾರದು ಜಾತ್ಯತೀತ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಇಂದಿನ ಪರಿಸ್ಥಿತಿಯಲ್ಲಿ ತುಂಬಾ ಉತ್ತಮವಾದ ಸಾಮಾಜಿಕ ನಡವಳಿಕೆ ಎನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...