Homeಮುಖಪುಟಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಉದ್ಯಮಿ ಸುರೇಶ್‌ ಕುಮಾರ್‌ ಜೈನ್‌, "ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ" ಎನ್ನುತ್ತಾರೆ.

- Advertisement -
- Advertisement -

“ಧಾರ್ಮಿಕ ವಿಭಜನೆಯು ಭಾರತದ ಐಟಿಬಿಟಿ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಖ್ಯಾತ ಉದ್ಯಮಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಬಯೋಕಾನ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕಿರಣ್ ಮಜುಂದಾರ್ ಶಾ ಎಚ್ಚರಿಸಿದ್ದಾರೆ.

ಕರ್ನಾಟಕದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೆ ಆತಂಕ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕಿವಿಮಾತು ಹೇಳಿದ್ದಾರೆ.

ಹಿಂದೂ ದೇವಾಲಯದ ಆವರಣ ಹಾಗೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಮಾಡಿರುವ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ಕರ್ನಾಟಕ ಸರ್ಕಾರವನ್ನು ಎಚ್ಚರಿಸಿದ್ದಾರೆ.

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಕಿರಣ್ ಮಜುಂದಾರ್ ಹೇಳಿದ್ದಾರೆ. 

ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಟ್ಯಾಗ್ ಮಾಡಿರುವ ಅವರು, “ದಯವಿಟ್ಟು ಈ ಬೆಳೆಯುತ್ತಿರುವ ಧಾರ್ಮಿಕ ವಿಭಜನೆಯನ್ನು ಪರಿಹರಿಸಿ” ಎಂದು ಒತ್ತಾಯಿಸಿದ್ದಾರೆ.

 

ಮುಸ್ಲಿಂ ಸಮುದಾಯದ ವ್ಯಾಪಾರವನ್ನು ಬಹಿಷ್ಕರಿಸುವಂತೆ ದ್ವೇಷ ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಎಲ್ಲ ಜಾತಿಗಳ ವರ್ತಕ ಸಮುದಾಯ ಕಟುವಾಗಿ ಟೀಕಿಸುತ್ತಿದೆ. ಹಲಾಲ್ ಹೆಸರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಿಸುತ್ತಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮೈಸೂರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಜೈನ್‌, “ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ. ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಅಲ್ಲಿ ಜೈನರೊಬ್ಬರೇ ವ್ಯಾಪಾರ ಮಾಡಬೇಕು, ಬೇರೆಯವರು ಬರಬಾರದು ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

“ನಾವು ಹಿಂದೂಗಳಲ್ಲ, ಜೈನರು. ಹಿಂದೂ, ಮುಸ್ಲಿಂ, ಸಿಖ್‌, ಜೈನ್‌- ಇಲ್ಲರೂ ವಿಭಿನ್ನ ಜನಾಂಗಗಳು. ನಮಗೆ ನಾವೇ ಸೀಮಿತ ಮಾಡಿಕೊಳ್ಳಲು ಆಗುವುದಿಲ್ಲ. ಎಲ್ಲರೂ ಸಹಬಾಳ್ವೆ ಮಾಡಬೇಕು. ನನ್ನ ಕೌಶಲವನ್ನು ನಾನು ತೋರಿಸಬೇಕು. ಅವರ ಕೌಶಲವನ್ನು ಅವರು ತೋರಿಸಬೇಕು. ಒಬ್ಬರಿಗೊಬ್ಬರು ಕೌಶಲವನ್ನು ವಿನಿಮಯ ಮಾಡಿಕೊಳ್ಳಬೇಕು. ಹೀಗಾಗಿ ಇಂದು ಆಗುತ್ತಿರುವ ಬೆಳವಣಿಗೆಗಳನ್ನು ನಾನು ವಿರೋಧಿಸುತ್ತೇನೆ” ಎಂದು ತಿಳಿಸಿದರು.

ಉದ್ಯಮಿ ಸುರೇಶ್‌ಕುಮಾರ್‌ ಜೈನ್‌

ಹಲಾಲ್‌ ಸಂಬಂಧ ಎದ್ದಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಹಲಾಲ್‌ ಈ ಕಾಲದಲ್ಲ. ಪ್ರಾಚೀನ ಕಾಲದಿಂದಲೂ ಮುಸ್ಲಿಮರು ಹಲಾಲ್ ಮಾಡುತ್ತಿದ್ದಾರೆ. ಈಗ ಹಿಂದೂ ಮುಸ್ಲಿಂ ಗಲಾಟೆ ಶುರುವಾಗಿದೆ, ಹಿಜಾಬ್ ವಿವಾದವಾಗಿದೆ ಎಂಬ ಕಾರಣಕ್ಕೆ ಹಲಾಲ್‌ ಬ್ರಾಂಡ್ ಸೃಷ್ಟಿಯಾಗಿಲ್ಲ. ಮುಸ್ಲಿಮರು ಹಲಾಲ್‌ ಮಾಡಿದ ಆಹಾರವನ್ನು ತಿನ್ನಬೇಕೆಂಬ ಪದ್ಧತಿ ಇದೆ. ಇತರ ಸಮುದಾಯಗಳಲ್ಲಿ ಹಲಾಲ್ ಮಾಡಿದನ್ನೇ ತಿನ್ನಬೇಕೆಂಬ ಸಂಪ್ರದಾಯ ಇಲ್ಲ. ಹಿಂದೂಗಳ ವ್ಯಾಪಾರ ಹಾಳು ಮಾಡಲೆಂದು ಹಲಾಲ್‌ ಮಾಡಿದ್ದಲ್ಲ. ಅದು ಅವರ ಧಾರ್ಮಿಕರ ಆಚರಣೆ. ಹಲಾಲ್‌ ವಿಚಾರವನ್ನು ಮುನ್ನೆಲೆಗೆ ತಂದು ವ್ಯಾಪಾರಕ್ಕೆ ವಿರೋಧಿಸುತ್ತಿರುವುದು ತೀವ್ರ ವಿಷಾದನೀಯ” ಎಂದರು.

“ಹಿಂದೂ ಮುಸ್ಲಿಂ ಗಲಾಟೆಗಳು ಕಾಂಗ್ರೆಸ್ ಸರ್ಕಾರ ಇದ್ದಾಗಲೂ ನಡೆಯುತ್ತಿದ್ದವು. ಆದರೆ ಈ ಪ್ರಕಾರವಾದ ಪ್ರಚೋದನೆಗಳು ಆಗುತ್ತಿರಲಿಲ್ಲ. ಶಾಂತಿ ಸಭೆಗಳನ್ನು ನಡೆಸಿ ಇತ್ಯರ್ಥ ಮಾಡಲಾಗುತ್ತಿತ್ತು. ವೈಯಕ್ತಿಕ ಭಿನ್ನಾಭಿಪ್ರಾಯಗಳ ಕಾರಣಕ್ಕೋ, ಮತ್ಯಾವುದಕ್ಕೋ ಆಗ ಗಲಾಟೆಗಳು ಆಗುತ್ತಿದ್ದವೇ ಹೊರತು ಈ ಮಾದರಿಯಲ್ಲಿ ನಡೆಯುತ್ತಿರಲಿಲ್ಲ. ಆದರೆ ಇಂದು ನೇರವಾಗಿಯೇ ಎರಡು ಸಮುದಾಯಗಳ ನಡುವೆ ಗೋಡೆ ಕಟ್ಟಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ನಾನು ಜೈನನಾಗಿ ಹೇಳುತ್ತೇನೆ. ಈ ಹಿಂದೆ ಯಾವ ಯಾವ ಸಮುದಾಯಗಳು ಪ್ರಾಬಲ್ಯವನ್ನು ಹೊಂದಿದ್ದವೋ ಅವರು ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನಾವು ಮತಾಂತರ ಆಗಲಿಲ್ಲವೆಂದು ಸುಮಾರು ಎಂಟು ಸಾವಿರ ಜೈನರನ್ನು ಮಧುರೈನಲ್ಲಿ ಕೊಂದಿರುವ ಕುರಿತು ಸಾಕ್ಷ್ಯಾಧಾರಗಳಿವೆ. ಅನೇಕ ಜೈನ ದೇವಾಲಯಗಳು ವೈಷ್ಣವ, ವೀರಶೈವ ದೇವಾಲಯಗಳಾಗಿ ಬದಲಾಗಿವೆ. ರಾಜಪ್ರಭುತ್ವ ಇದ್ದ ಕಾಲದಲ್ಲಿ ಒಂದು ಜನಾಂಗದ ಮೇಲೆ ಮತ್ತೊಂದು ಜನಾಂಗ ಒತ್ತಡ ಹೇರುವುದು ಸಾಮಾನ್ಯವಾಗಿತ್ತು. ಆದರೆ ಪ್ರಜಾಪ್ರಭುತ್ವದ ಕಾಲದಲ್ಲಿ ಆ ರೀತಿಯ ಒತ್ತಡ, ಹೇರಿಕೆ ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಜೈನ ವಿಗ್ರಹಗಳಿಗೆ ವಿಭೂತಿ ಬಳಿದಿರುವುದನ್ನು ನೋಡಿದ್ದೇವೆ. ಮೈಮೇಲೆ ಉಡುದಾರ, ಬಟ್ಟೆಯೇ ಇರಬಾರದು ಎಂದು ಜೈನ ಮುನಿಗಳು ಹೇಳಿರಬೇಕಾದರೆ ನಮಗೆ ಜನಿವಾರ ಹೇಗೆ ಬೇಕಾಗಿತ್ತು? ಒಂದು ಕಾಲಘಟ್ಟದಲ್ಲಿ ಜನಿವಾರ ಹಾಕಲು ಶುರುಮಾಡಿದರು. ಆನಂತರ ಮುಂದುವರಿತು. ಲಿಂಗಾಯತರು ಹೆಚ್ಚಿರುವ ಊರಲ್ಲಿ ಬಸವ ಜಯಂತಿಯನ್ನು ಜೈನರೂ ಸೇರಿಕೊಂಡೇ ಮಾಡಿರುತ್ತೇವೆ. ಅಂದರೆ ಆಯಾ ಪರಿಸರಕ್ಕೆ ಹೊಂದಿಕೊಂಡು ಸಮಾಜ ಮುಂದುವರಿಯುತ್ತಿದೆ. ಸಹಬಾಳ್ವೆ ಮುಖ್ಯ. ವೈಯಕ್ತಿಕವಾಗಿ ಹೇಳುವುದಾದರೆ ನನ್ನ ಫ್ಯಾಕ್ಟರಿಯಲ್ಲಿ ಸಾಬರೊಂದಿಗೆ ಮೊದಲು ವ್ಯಾಪಾರ ಮಾಡಿದ ಬಳಿಕವೇ ಬೇರೆಯವರೊಂದಿಗೆ ವ್ಯವಹರಿಸುತ್ತೇನೆ. ಇದನ್ನು ನಾನು ರೂಢಿ ಮಾಡಿಕೊಂಡು ಬಂದಿದ್ದೇನೆ. ಅದನ್ನು ಕಿತ್ತುಕೊಳ್ಳುವ ಹಕ್ಕುವ ಯಾರಿಗೂ ಇಲ್ಲ. ಈ ಉದ್ಯಮ ರಾಜಕಾರಣಕ್ಕೆ ಜಾತಿ ರಾಜಕಾರಣ ತರುತ್ತಿರುವುದು ನೋವುಂಟು ಮಾಡಿದೆ” ಎಂದು ವಿಷಾದಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪಿಯುಸಿಎಲ್ ಅಧ್ಯಕ್ಷರಾದ ಅರವಿಂದ್ ನಾರಾಯಣ್‌, ನಾಜಿ ಜರ್ಮನಿಯೊಂದಿಗೆ ಕರ್ನಾಟಕದ ಪರಿಸ್ಥಿತಿಯನ್ನು ಹೋಲಿಸಿದ್ದಾರೆ. “ಹಿಟ್ಲರ್‌ನ ನಾಜಿ ಜರ್ಮನಿಯಲ್ಲಿ ಏನಾಯಿತು? ಮೊದಲು ಯಹೂದಿಗಳ ವಿರುದ್ಧ ದ್ವೇಷದ ಭಾಷಣ ಮಾಡಲಾಯಿತು. ನಂತರ ಯಹೂದಿಗಳಿಂದ ಯಾವುದೇ ವ್ಯಾಪಾರ ವಹಿವಾಟು ಮಾಡದಂತೆ ನಿರ್ಬಂಧಿಸಲಾಯಿತು. ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರದ ಬಳಿಕ ನರಮೇಧದ ನಡೆಯಿತು. ಇತಿಹಾಸದಿಂದ ನಾವು ಪಾಠ ಕಲಿಬೇಕು. ಜೆನೊಸೈಡ್‌ನ ಲಕ್ಷಣಗಳ ಕುರಿತು ಎಚ್ಚರ ವಹಿಸಬೇಕು. ಸರ್ಕಾರ ಈ ರೀತಿಯ ಬೆಳವಣಿಗೆಗಳಿಗೆ ಪ್ರೋತ್ಸಾಹ ನೀಡಬಾರದು” ಎನ್ನುತ್ತಾರೆ ಅರವಿಂದ್‌.


ಇದನ್ನೂ ಓದಿರಿ: Explainer: ಹಲಾಲ್ ಹಾಗೆಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಉದ್ಯಮಿಗಳು. ಪ್ರಗತಿಪರರು. ಹಾಗೂ ಇನ್ನಿತರ ಸಂಘಟನೆಗಳು ಮುಖ್ಯಮಂತ್ರಿಗಳಿಗೆ ಬೇಟಿಯಾಗಿ ಆಗುವ ಅನಾಹುತಗಳ ಬಗ್ಗೆ ವಿವರಿಸಿ ಹೇಳಿ… ಹಾಗೂ ಅವರು ಹಾಕಿಕೊಂಡಿರುವ ಆರೆಸೆಸ್ ಮುಖವಾಡ ಖಳಚಿ ಬನ್ನಿ…

  2. ಸಾಂವಿಧಾನಿಕ ಹಕ್ಕನ್ನು ಯಾರೂ ಕಸಿದುಕೊಳ್ಳಲು ಪ್ರಯತ್ನಿಸಬಾರದು ಜಾತ್ಯತೀತ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಇಂದಿನ ಪರಿಸ್ಥಿತಿಯಲ್ಲಿ ತುಂಬಾ ಉತ್ತಮವಾದ ಸಾಮಾಜಿಕ ನಡವಳಿಕೆ ಎನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...