Homeಮುಖಪುಟಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಉದ್ಯಮಿ ಸುರೇಶ್‌ ಕುಮಾರ್‌ ಜೈನ್‌, "ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ" ಎನ್ನುತ್ತಾರೆ.

- Advertisement -
- Advertisement -

“ಧಾರ್ಮಿಕ ವಿಭಜನೆಯು ಭಾರತದ ಐಟಿಬಿಟಿ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಖ್ಯಾತ ಉದ್ಯಮಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಬಯೋಕಾನ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕಿರಣ್ ಮಜುಂದಾರ್ ಶಾ ಎಚ್ಚರಿಸಿದ್ದಾರೆ.

ಕರ್ನಾಟಕದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೆ ಆತಂಕ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕಿವಿಮಾತು ಹೇಳಿದ್ದಾರೆ.

ಹಿಂದೂ ದೇವಾಲಯದ ಆವರಣ ಹಾಗೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಮಾಡಿರುವ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ಕರ್ನಾಟಕ ಸರ್ಕಾರವನ್ನು ಎಚ್ಚರಿಸಿದ್ದಾರೆ.

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಕಿರಣ್ ಮಜುಂದಾರ್ ಹೇಳಿದ್ದಾರೆ. 

ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಟ್ಯಾಗ್ ಮಾಡಿರುವ ಅವರು, “ದಯವಿಟ್ಟು ಈ ಬೆಳೆಯುತ್ತಿರುವ ಧಾರ್ಮಿಕ ವಿಭಜನೆಯನ್ನು ಪರಿಹರಿಸಿ” ಎಂದು ಒತ್ತಾಯಿಸಿದ್ದಾರೆ.

 

ಮುಸ್ಲಿಂ ಸಮುದಾಯದ ವ್ಯಾಪಾರವನ್ನು ಬಹಿಷ್ಕರಿಸುವಂತೆ ದ್ವೇಷ ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಎಲ್ಲ ಜಾತಿಗಳ ವರ್ತಕ ಸಮುದಾಯ ಕಟುವಾಗಿ ಟೀಕಿಸುತ್ತಿದೆ. ಹಲಾಲ್ ಹೆಸರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಿಸುತ್ತಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮೈಸೂರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಜೈನ್‌, “ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ. ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಅಲ್ಲಿ ಜೈನರೊಬ್ಬರೇ ವ್ಯಾಪಾರ ಮಾಡಬೇಕು, ಬೇರೆಯವರು ಬರಬಾರದು ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

“ನಾವು ಹಿಂದೂಗಳಲ್ಲ, ಜೈನರು. ಹಿಂದೂ, ಮುಸ್ಲಿಂ, ಸಿಖ್‌, ಜೈನ್‌- ಇಲ್ಲರೂ ವಿಭಿನ್ನ ಜನಾಂಗಗಳು. ನಮಗೆ ನಾವೇ ಸೀಮಿತ ಮಾಡಿಕೊಳ್ಳಲು ಆಗುವುದಿಲ್ಲ. ಎಲ್ಲರೂ ಸಹಬಾಳ್ವೆ ಮಾಡಬೇಕು. ನನ್ನ ಕೌಶಲವನ್ನು ನಾನು ತೋರಿಸಬೇಕು. ಅವರ ಕೌಶಲವನ್ನು ಅವರು ತೋರಿಸಬೇಕು. ಒಬ್ಬರಿಗೊಬ್ಬರು ಕೌಶಲವನ್ನು ವಿನಿಮಯ ಮಾಡಿಕೊಳ್ಳಬೇಕು. ಹೀಗಾಗಿ ಇಂದು ಆಗುತ್ತಿರುವ ಬೆಳವಣಿಗೆಗಳನ್ನು ನಾನು ವಿರೋಧಿಸುತ್ತೇನೆ” ಎಂದು ತಿಳಿಸಿದರು.

ಉದ್ಯಮಿ ಸುರೇಶ್‌ಕುಮಾರ್‌ ಜೈನ್‌

ಹಲಾಲ್‌ ಸಂಬಂಧ ಎದ್ದಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಹಲಾಲ್‌ ಈ ಕಾಲದಲ್ಲ. ಪ್ರಾಚೀನ ಕಾಲದಿಂದಲೂ ಮುಸ್ಲಿಮರು ಹಲಾಲ್ ಮಾಡುತ್ತಿದ್ದಾರೆ. ಈಗ ಹಿಂದೂ ಮುಸ್ಲಿಂ ಗಲಾಟೆ ಶುರುವಾಗಿದೆ, ಹಿಜಾಬ್ ವಿವಾದವಾಗಿದೆ ಎಂಬ ಕಾರಣಕ್ಕೆ ಹಲಾಲ್‌ ಬ್ರಾಂಡ್ ಸೃಷ್ಟಿಯಾಗಿಲ್ಲ. ಮುಸ್ಲಿಮರು ಹಲಾಲ್‌ ಮಾಡಿದ ಆಹಾರವನ್ನು ತಿನ್ನಬೇಕೆಂಬ ಪದ್ಧತಿ ಇದೆ. ಇತರ ಸಮುದಾಯಗಳಲ್ಲಿ ಹಲಾಲ್ ಮಾಡಿದನ್ನೇ ತಿನ್ನಬೇಕೆಂಬ ಸಂಪ್ರದಾಯ ಇಲ್ಲ. ಹಿಂದೂಗಳ ವ್ಯಾಪಾರ ಹಾಳು ಮಾಡಲೆಂದು ಹಲಾಲ್‌ ಮಾಡಿದ್ದಲ್ಲ. ಅದು ಅವರ ಧಾರ್ಮಿಕರ ಆಚರಣೆ. ಹಲಾಲ್‌ ವಿಚಾರವನ್ನು ಮುನ್ನೆಲೆಗೆ ತಂದು ವ್ಯಾಪಾರಕ್ಕೆ ವಿರೋಧಿಸುತ್ತಿರುವುದು ತೀವ್ರ ವಿಷಾದನೀಯ” ಎಂದರು.

“ಹಿಂದೂ ಮುಸ್ಲಿಂ ಗಲಾಟೆಗಳು ಕಾಂಗ್ರೆಸ್ ಸರ್ಕಾರ ಇದ್ದಾಗಲೂ ನಡೆಯುತ್ತಿದ್ದವು. ಆದರೆ ಈ ಪ್ರಕಾರವಾದ ಪ್ರಚೋದನೆಗಳು ಆಗುತ್ತಿರಲಿಲ್ಲ. ಶಾಂತಿ ಸಭೆಗಳನ್ನು ನಡೆಸಿ ಇತ್ಯರ್ಥ ಮಾಡಲಾಗುತ್ತಿತ್ತು. ವೈಯಕ್ತಿಕ ಭಿನ್ನಾಭಿಪ್ರಾಯಗಳ ಕಾರಣಕ್ಕೋ, ಮತ್ಯಾವುದಕ್ಕೋ ಆಗ ಗಲಾಟೆಗಳು ಆಗುತ್ತಿದ್ದವೇ ಹೊರತು ಈ ಮಾದರಿಯಲ್ಲಿ ನಡೆಯುತ್ತಿರಲಿಲ್ಲ. ಆದರೆ ಇಂದು ನೇರವಾಗಿಯೇ ಎರಡು ಸಮುದಾಯಗಳ ನಡುವೆ ಗೋಡೆ ಕಟ್ಟಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ನಾನು ಜೈನನಾಗಿ ಹೇಳುತ್ತೇನೆ. ಈ ಹಿಂದೆ ಯಾವ ಯಾವ ಸಮುದಾಯಗಳು ಪ್ರಾಬಲ್ಯವನ್ನು ಹೊಂದಿದ್ದವೋ ಅವರು ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನಾವು ಮತಾಂತರ ಆಗಲಿಲ್ಲವೆಂದು ಸುಮಾರು ಎಂಟು ಸಾವಿರ ಜೈನರನ್ನು ಮಧುರೈನಲ್ಲಿ ಕೊಂದಿರುವ ಕುರಿತು ಸಾಕ್ಷ್ಯಾಧಾರಗಳಿವೆ. ಅನೇಕ ಜೈನ ದೇವಾಲಯಗಳು ವೈಷ್ಣವ, ವೀರಶೈವ ದೇವಾಲಯಗಳಾಗಿ ಬದಲಾಗಿವೆ. ರಾಜಪ್ರಭುತ್ವ ಇದ್ದ ಕಾಲದಲ್ಲಿ ಒಂದು ಜನಾಂಗದ ಮೇಲೆ ಮತ್ತೊಂದು ಜನಾಂಗ ಒತ್ತಡ ಹೇರುವುದು ಸಾಮಾನ್ಯವಾಗಿತ್ತು. ಆದರೆ ಪ್ರಜಾಪ್ರಭುತ್ವದ ಕಾಲದಲ್ಲಿ ಆ ರೀತಿಯ ಒತ್ತಡ, ಹೇರಿಕೆ ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಜೈನ ವಿಗ್ರಹಗಳಿಗೆ ವಿಭೂತಿ ಬಳಿದಿರುವುದನ್ನು ನೋಡಿದ್ದೇವೆ. ಮೈಮೇಲೆ ಉಡುದಾರ, ಬಟ್ಟೆಯೇ ಇರಬಾರದು ಎಂದು ಜೈನ ಮುನಿಗಳು ಹೇಳಿರಬೇಕಾದರೆ ನಮಗೆ ಜನಿವಾರ ಹೇಗೆ ಬೇಕಾಗಿತ್ತು? ಒಂದು ಕಾಲಘಟ್ಟದಲ್ಲಿ ಜನಿವಾರ ಹಾಕಲು ಶುರುಮಾಡಿದರು. ಆನಂತರ ಮುಂದುವರಿತು. ಲಿಂಗಾಯತರು ಹೆಚ್ಚಿರುವ ಊರಲ್ಲಿ ಬಸವ ಜಯಂತಿಯನ್ನು ಜೈನರೂ ಸೇರಿಕೊಂಡೇ ಮಾಡಿರುತ್ತೇವೆ. ಅಂದರೆ ಆಯಾ ಪರಿಸರಕ್ಕೆ ಹೊಂದಿಕೊಂಡು ಸಮಾಜ ಮುಂದುವರಿಯುತ್ತಿದೆ. ಸಹಬಾಳ್ವೆ ಮುಖ್ಯ. ವೈಯಕ್ತಿಕವಾಗಿ ಹೇಳುವುದಾದರೆ ನನ್ನ ಫ್ಯಾಕ್ಟರಿಯಲ್ಲಿ ಸಾಬರೊಂದಿಗೆ ಮೊದಲು ವ್ಯಾಪಾರ ಮಾಡಿದ ಬಳಿಕವೇ ಬೇರೆಯವರೊಂದಿಗೆ ವ್ಯವಹರಿಸುತ್ತೇನೆ. ಇದನ್ನು ನಾನು ರೂಢಿ ಮಾಡಿಕೊಂಡು ಬಂದಿದ್ದೇನೆ. ಅದನ್ನು ಕಿತ್ತುಕೊಳ್ಳುವ ಹಕ್ಕುವ ಯಾರಿಗೂ ಇಲ್ಲ. ಈ ಉದ್ಯಮ ರಾಜಕಾರಣಕ್ಕೆ ಜಾತಿ ರಾಜಕಾರಣ ತರುತ್ತಿರುವುದು ನೋವುಂಟು ಮಾಡಿದೆ” ಎಂದು ವಿಷಾದಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪಿಯುಸಿಎಲ್ ಅಧ್ಯಕ್ಷರಾದ ಅರವಿಂದ್ ನಾರಾಯಣ್‌, ನಾಜಿ ಜರ್ಮನಿಯೊಂದಿಗೆ ಕರ್ನಾಟಕದ ಪರಿಸ್ಥಿತಿಯನ್ನು ಹೋಲಿಸಿದ್ದಾರೆ. “ಹಿಟ್ಲರ್‌ನ ನಾಜಿ ಜರ್ಮನಿಯಲ್ಲಿ ಏನಾಯಿತು? ಮೊದಲು ಯಹೂದಿಗಳ ವಿರುದ್ಧ ದ್ವೇಷದ ಭಾಷಣ ಮಾಡಲಾಯಿತು. ನಂತರ ಯಹೂದಿಗಳಿಂದ ಯಾವುದೇ ವ್ಯಾಪಾರ ವಹಿವಾಟು ಮಾಡದಂತೆ ನಿರ್ಬಂಧಿಸಲಾಯಿತು. ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರದ ಬಳಿಕ ನರಮೇಧದ ನಡೆಯಿತು. ಇತಿಹಾಸದಿಂದ ನಾವು ಪಾಠ ಕಲಿಬೇಕು. ಜೆನೊಸೈಡ್‌ನ ಲಕ್ಷಣಗಳ ಕುರಿತು ಎಚ್ಚರ ವಹಿಸಬೇಕು. ಸರ್ಕಾರ ಈ ರೀತಿಯ ಬೆಳವಣಿಗೆಗಳಿಗೆ ಪ್ರೋತ್ಸಾಹ ನೀಡಬಾರದು” ಎನ್ನುತ್ತಾರೆ ಅರವಿಂದ್‌.


ಇದನ್ನೂ ಓದಿರಿ: Explainer: ಹಲಾಲ್ ಹಾಗೆಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಉದ್ಯಮಿಗಳು. ಪ್ರಗತಿಪರರು. ಹಾಗೂ ಇನ್ನಿತರ ಸಂಘಟನೆಗಳು ಮುಖ್ಯಮಂತ್ರಿಗಳಿಗೆ ಬೇಟಿಯಾಗಿ ಆಗುವ ಅನಾಹುತಗಳ ಬಗ್ಗೆ ವಿವರಿಸಿ ಹೇಳಿ… ಹಾಗೂ ಅವರು ಹಾಕಿಕೊಂಡಿರುವ ಆರೆಸೆಸ್ ಮುಖವಾಡ ಖಳಚಿ ಬನ್ನಿ…

  2. ಸಾಂವಿಧಾನಿಕ ಹಕ್ಕನ್ನು ಯಾರೂ ಕಸಿದುಕೊಳ್ಳಲು ಪ್ರಯತ್ನಿಸಬಾರದು ಜಾತ್ಯತೀತ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಇಂದಿನ ಪರಿಸ್ಥಿತಿಯಲ್ಲಿ ತುಂಬಾ ಉತ್ತಮವಾದ ಸಾಮಾಜಿಕ ನಡವಳಿಕೆ ಎನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...