Homeಮುಖಪುಟಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಉದ್ಯಮಿ ಸುರೇಶ್‌ ಕುಮಾರ್‌ ಜೈನ್‌, "ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ" ಎನ್ನುತ್ತಾರೆ.

- Advertisement -
- Advertisement -

“ಧಾರ್ಮಿಕ ವಿಭಜನೆಯು ಭಾರತದ ಐಟಿಬಿಟಿ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಖ್ಯಾತ ಉದ್ಯಮಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಬಯೋಕಾನ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕಿರಣ್ ಮಜುಂದಾರ್ ಶಾ ಎಚ್ಚರಿಸಿದ್ದಾರೆ.

ಕರ್ನಾಟಕದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೆ ಆತಂಕ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕಿವಿಮಾತು ಹೇಳಿದ್ದಾರೆ.

ಹಿಂದೂ ದೇವಾಲಯದ ಆವರಣ ಹಾಗೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಮಾಡಿರುವ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ಕರ್ನಾಟಕ ಸರ್ಕಾರವನ್ನು ಎಚ್ಚರಿಸಿದ್ದಾರೆ.

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಕಿರಣ್ ಮಜುಂದಾರ್ ಹೇಳಿದ್ದಾರೆ. 

ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಟ್ಯಾಗ್ ಮಾಡಿರುವ ಅವರು, “ದಯವಿಟ್ಟು ಈ ಬೆಳೆಯುತ್ತಿರುವ ಧಾರ್ಮಿಕ ವಿಭಜನೆಯನ್ನು ಪರಿಹರಿಸಿ” ಎಂದು ಒತ್ತಾಯಿಸಿದ್ದಾರೆ.

 

ಮುಸ್ಲಿಂ ಸಮುದಾಯದ ವ್ಯಾಪಾರವನ್ನು ಬಹಿಷ್ಕರಿಸುವಂತೆ ದ್ವೇಷ ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಎಲ್ಲ ಜಾತಿಗಳ ವರ್ತಕ ಸಮುದಾಯ ಕಟುವಾಗಿ ಟೀಕಿಸುತ್ತಿದೆ. ಹಲಾಲ್ ಹೆಸರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಿಸುತ್ತಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮೈಸೂರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಜೈನ್‌, “ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ. ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಅಲ್ಲಿ ಜೈನರೊಬ್ಬರೇ ವ್ಯಾಪಾರ ಮಾಡಬೇಕು, ಬೇರೆಯವರು ಬರಬಾರದು ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

“ನಾವು ಹಿಂದೂಗಳಲ್ಲ, ಜೈನರು. ಹಿಂದೂ, ಮುಸ್ಲಿಂ, ಸಿಖ್‌, ಜೈನ್‌- ಇಲ್ಲರೂ ವಿಭಿನ್ನ ಜನಾಂಗಗಳು. ನಮಗೆ ನಾವೇ ಸೀಮಿತ ಮಾಡಿಕೊಳ್ಳಲು ಆಗುವುದಿಲ್ಲ. ಎಲ್ಲರೂ ಸಹಬಾಳ್ವೆ ಮಾಡಬೇಕು. ನನ್ನ ಕೌಶಲವನ್ನು ನಾನು ತೋರಿಸಬೇಕು. ಅವರ ಕೌಶಲವನ್ನು ಅವರು ತೋರಿಸಬೇಕು. ಒಬ್ಬರಿಗೊಬ್ಬರು ಕೌಶಲವನ್ನು ವಿನಿಮಯ ಮಾಡಿಕೊಳ್ಳಬೇಕು. ಹೀಗಾಗಿ ಇಂದು ಆಗುತ್ತಿರುವ ಬೆಳವಣಿಗೆಗಳನ್ನು ನಾನು ವಿರೋಧಿಸುತ್ತೇನೆ” ಎಂದು ತಿಳಿಸಿದರು.

ಉದ್ಯಮಿ ಸುರೇಶ್‌ಕುಮಾರ್‌ ಜೈನ್‌

ಹಲಾಲ್‌ ಸಂಬಂಧ ಎದ್ದಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಹಲಾಲ್‌ ಈ ಕಾಲದಲ್ಲ. ಪ್ರಾಚೀನ ಕಾಲದಿಂದಲೂ ಮುಸ್ಲಿಮರು ಹಲಾಲ್ ಮಾಡುತ್ತಿದ್ದಾರೆ. ಈಗ ಹಿಂದೂ ಮುಸ್ಲಿಂ ಗಲಾಟೆ ಶುರುವಾಗಿದೆ, ಹಿಜಾಬ್ ವಿವಾದವಾಗಿದೆ ಎಂಬ ಕಾರಣಕ್ಕೆ ಹಲಾಲ್‌ ಬ್ರಾಂಡ್ ಸೃಷ್ಟಿಯಾಗಿಲ್ಲ. ಮುಸ್ಲಿಮರು ಹಲಾಲ್‌ ಮಾಡಿದ ಆಹಾರವನ್ನು ತಿನ್ನಬೇಕೆಂಬ ಪದ್ಧತಿ ಇದೆ. ಇತರ ಸಮುದಾಯಗಳಲ್ಲಿ ಹಲಾಲ್ ಮಾಡಿದನ್ನೇ ತಿನ್ನಬೇಕೆಂಬ ಸಂಪ್ರದಾಯ ಇಲ್ಲ. ಹಿಂದೂಗಳ ವ್ಯಾಪಾರ ಹಾಳು ಮಾಡಲೆಂದು ಹಲಾಲ್‌ ಮಾಡಿದ್ದಲ್ಲ. ಅದು ಅವರ ಧಾರ್ಮಿಕರ ಆಚರಣೆ. ಹಲಾಲ್‌ ವಿಚಾರವನ್ನು ಮುನ್ನೆಲೆಗೆ ತಂದು ವ್ಯಾಪಾರಕ್ಕೆ ವಿರೋಧಿಸುತ್ತಿರುವುದು ತೀವ್ರ ವಿಷಾದನೀಯ” ಎಂದರು.

“ಹಿಂದೂ ಮುಸ್ಲಿಂ ಗಲಾಟೆಗಳು ಕಾಂಗ್ರೆಸ್ ಸರ್ಕಾರ ಇದ್ದಾಗಲೂ ನಡೆಯುತ್ತಿದ್ದವು. ಆದರೆ ಈ ಪ್ರಕಾರವಾದ ಪ್ರಚೋದನೆಗಳು ಆಗುತ್ತಿರಲಿಲ್ಲ. ಶಾಂತಿ ಸಭೆಗಳನ್ನು ನಡೆಸಿ ಇತ್ಯರ್ಥ ಮಾಡಲಾಗುತ್ತಿತ್ತು. ವೈಯಕ್ತಿಕ ಭಿನ್ನಾಭಿಪ್ರಾಯಗಳ ಕಾರಣಕ್ಕೋ, ಮತ್ಯಾವುದಕ್ಕೋ ಆಗ ಗಲಾಟೆಗಳು ಆಗುತ್ತಿದ್ದವೇ ಹೊರತು ಈ ಮಾದರಿಯಲ್ಲಿ ನಡೆಯುತ್ತಿರಲಿಲ್ಲ. ಆದರೆ ಇಂದು ನೇರವಾಗಿಯೇ ಎರಡು ಸಮುದಾಯಗಳ ನಡುವೆ ಗೋಡೆ ಕಟ್ಟಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ನಾನು ಜೈನನಾಗಿ ಹೇಳುತ್ತೇನೆ. ಈ ಹಿಂದೆ ಯಾವ ಯಾವ ಸಮುದಾಯಗಳು ಪ್ರಾಬಲ್ಯವನ್ನು ಹೊಂದಿದ್ದವೋ ಅವರು ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನಾವು ಮತಾಂತರ ಆಗಲಿಲ್ಲವೆಂದು ಸುಮಾರು ಎಂಟು ಸಾವಿರ ಜೈನರನ್ನು ಮಧುರೈನಲ್ಲಿ ಕೊಂದಿರುವ ಕುರಿತು ಸಾಕ್ಷ್ಯಾಧಾರಗಳಿವೆ. ಅನೇಕ ಜೈನ ದೇವಾಲಯಗಳು ವೈಷ್ಣವ, ವೀರಶೈವ ದೇವಾಲಯಗಳಾಗಿ ಬದಲಾಗಿವೆ. ರಾಜಪ್ರಭುತ್ವ ಇದ್ದ ಕಾಲದಲ್ಲಿ ಒಂದು ಜನಾಂಗದ ಮೇಲೆ ಮತ್ತೊಂದು ಜನಾಂಗ ಒತ್ತಡ ಹೇರುವುದು ಸಾಮಾನ್ಯವಾಗಿತ್ತು. ಆದರೆ ಪ್ರಜಾಪ್ರಭುತ್ವದ ಕಾಲದಲ್ಲಿ ಆ ರೀತಿಯ ಒತ್ತಡ, ಹೇರಿಕೆ ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಜೈನ ವಿಗ್ರಹಗಳಿಗೆ ವಿಭೂತಿ ಬಳಿದಿರುವುದನ್ನು ನೋಡಿದ್ದೇವೆ. ಮೈಮೇಲೆ ಉಡುದಾರ, ಬಟ್ಟೆಯೇ ಇರಬಾರದು ಎಂದು ಜೈನ ಮುನಿಗಳು ಹೇಳಿರಬೇಕಾದರೆ ನಮಗೆ ಜನಿವಾರ ಹೇಗೆ ಬೇಕಾಗಿತ್ತು? ಒಂದು ಕಾಲಘಟ್ಟದಲ್ಲಿ ಜನಿವಾರ ಹಾಕಲು ಶುರುಮಾಡಿದರು. ಆನಂತರ ಮುಂದುವರಿತು. ಲಿಂಗಾಯತರು ಹೆಚ್ಚಿರುವ ಊರಲ್ಲಿ ಬಸವ ಜಯಂತಿಯನ್ನು ಜೈನರೂ ಸೇರಿಕೊಂಡೇ ಮಾಡಿರುತ್ತೇವೆ. ಅಂದರೆ ಆಯಾ ಪರಿಸರಕ್ಕೆ ಹೊಂದಿಕೊಂಡು ಸಮಾಜ ಮುಂದುವರಿಯುತ್ತಿದೆ. ಸಹಬಾಳ್ವೆ ಮುಖ್ಯ. ವೈಯಕ್ತಿಕವಾಗಿ ಹೇಳುವುದಾದರೆ ನನ್ನ ಫ್ಯಾಕ್ಟರಿಯಲ್ಲಿ ಸಾಬರೊಂದಿಗೆ ಮೊದಲು ವ್ಯಾಪಾರ ಮಾಡಿದ ಬಳಿಕವೇ ಬೇರೆಯವರೊಂದಿಗೆ ವ್ಯವಹರಿಸುತ್ತೇನೆ. ಇದನ್ನು ನಾನು ರೂಢಿ ಮಾಡಿಕೊಂಡು ಬಂದಿದ್ದೇನೆ. ಅದನ್ನು ಕಿತ್ತುಕೊಳ್ಳುವ ಹಕ್ಕುವ ಯಾರಿಗೂ ಇಲ್ಲ. ಈ ಉದ್ಯಮ ರಾಜಕಾರಣಕ್ಕೆ ಜಾತಿ ರಾಜಕಾರಣ ತರುತ್ತಿರುವುದು ನೋವುಂಟು ಮಾಡಿದೆ” ಎಂದು ವಿಷಾದಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪಿಯುಸಿಎಲ್ ಅಧ್ಯಕ್ಷರಾದ ಅರವಿಂದ್ ನಾರಾಯಣ್‌, ನಾಜಿ ಜರ್ಮನಿಯೊಂದಿಗೆ ಕರ್ನಾಟಕದ ಪರಿಸ್ಥಿತಿಯನ್ನು ಹೋಲಿಸಿದ್ದಾರೆ. “ಹಿಟ್ಲರ್‌ನ ನಾಜಿ ಜರ್ಮನಿಯಲ್ಲಿ ಏನಾಯಿತು? ಮೊದಲು ಯಹೂದಿಗಳ ವಿರುದ್ಧ ದ್ವೇಷದ ಭಾಷಣ ಮಾಡಲಾಯಿತು. ನಂತರ ಯಹೂದಿಗಳಿಂದ ಯಾವುದೇ ವ್ಯಾಪಾರ ವಹಿವಾಟು ಮಾಡದಂತೆ ನಿರ್ಬಂಧಿಸಲಾಯಿತು. ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರದ ಬಳಿಕ ನರಮೇಧದ ನಡೆಯಿತು. ಇತಿಹಾಸದಿಂದ ನಾವು ಪಾಠ ಕಲಿಬೇಕು. ಜೆನೊಸೈಡ್‌ನ ಲಕ್ಷಣಗಳ ಕುರಿತು ಎಚ್ಚರ ವಹಿಸಬೇಕು. ಸರ್ಕಾರ ಈ ರೀತಿಯ ಬೆಳವಣಿಗೆಗಳಿಗೆ ಪ್ರೋತ್ಸಾಹ ನೀಡಬಾರದು” ಎನ್ನುತ್ತಾರೆ ಅರವಿಂದ್‌.


ಇದನ್ನೂ ಓದಿರಿ: Explainer: ಹಲಾಲ್ ಹಾಗೆಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಉದ್ಯಮಿಗಳು. ಪ್ರಗತಿಪರರು. ಹಾಗೂ ಇನ್ನಿತರ ಸಂಘಟನೆಗಳು ಮುಖ್ಯಮಂತ್ರಿಗಳಿಗೆ ಬೇಟಿಯಾಗಿ ಆಗುವ ಅನಾಹುತಗಳ ಬಗ್ಗೆ ವಿವರಿಸಿ ಹೇಳಿ… ಹಾಗೂ ಅವರು ಹಾಕಿಕೊಂಡಿರುವ ಆರೆಸೆಸ್ ಮುಖವಾಡ ಖಳಚಿ ಬನ್ನಿ…

  2. ಸಾಂವಿಧಾನಿಕ ಹಕ್ಕನ್ನು ಯಾರೂ ಕಸಿದುಕೊಳ್ಳಲು ಪ್ರಯತ್ನಿಸಬಾರದು ಜಾತ್ಯತೀತ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಇಂದಿನ ಪರಿಸ್ಥಿತಿಯಲ್ಲಿ ತುಂಬಾ ಉತ್ತಮವಾದ ಸಾಮಾಜಿಕ ನಡವಳಿಕೆ ಎನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...