Homeಮುಖಪುಟಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ಉದ್ಯಮಿ ಸುರೇಶ್‌ ಕುಮಾರ್‌ ಜೈನ್‌, "ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ" ಎನ್ನುತ್ತಾರೆ.

- Advertisement -
- Advertisement -

“ಧಾರ್ಮಿಕ ವಿಭಜನೆಯು ಭಾರತದ ಐಟಿಬಿಟಿ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಖ್ಯಾತ ಉದ್ಯಮಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಬಯೋಕಾನ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕಿರಣ್ ಮಜುಂದಾರ್ ಶಾ ಎಚ್ಚರಿಸಿದ್ದಾರೆ.

ಕರ್ನಾಟಕದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೆ ಆತಂಕ ವ್ಯಕ್ತಪಡಿಸಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕಿವಿಮಾತು ಹೇಳಿದ್ದಾರೆ.

ಹಿಂದೂ ದೇವಾಲಯದ ಆವರಣ ಹಾಗೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿರುವ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಮಾಡಿರುವ ವರದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ಕರ್ನಾಟಕ ಸರ್ಕಾರವನ್ನು ಎಚ್ಚರಿಸಿದ್ದಾರೆ.

“ಕರ್ನಾಟಕ ರಾಜ್ಯವು ಯಾವಾಗಲೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಯನ್ನು ರೂಪಿಸುತ್ತದೆ. ಕೋಮುವಾದ ಪ್ರೇರಿತ ಹೊರಗಿಡುವಿಕೆಗೆ ಅವಕಾಶ ನೀಡಬಾರದು. ಐಟಿಬಿಟಿ ಕ್ಷೇತ್ರವೇನಾದರೂ ಕೋಮುವಾದೀಕರಣಗೊಂಡರೆ ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ” ಎಂದು ಕಿರಣ್ ಮಜುಂದಾರ್ ಹೇಳಿದ್ದಾರೆ. 

ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಟ್ಯಾಗ್ ಮಾಡಿರುವ ಅವರು, “ದಯವಿಟ್ಟು ಈ ಬೆಳೆಯುತ್ತಿರುವ ಧಾರ್ಮಿಕ ವಿಭಜನೆಯನ್ನು ಪರಿಹರಿಸಿ” ಎಂದು ಒತ್ತಾಯಿಸಿದ್ದಾರೆ.

 

ಮುಸ್ಲಿಂ ಸಮುದಾಯದ ವ್ಯಾಪಾರವನ್ನು ಬಹಿಷ್ಕರಿಸುವಂತೆ ದ್ವೇಷ ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಎಲ್ಲ ಜಾತಿಗಳ ವರ್ತಕ ಸಮುದಾಯ ಕಟುವಾಗಿ ಟೀಕಿಸುತ್ತಿದೆ. ಹಲಾಲ್ ಹೆಸರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಿಸುತ್ತಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಮೈಸೂರು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಜೈನ್‌, “ಉದ್ಯಮ ಕ್ಷೇತ್ರಕ್ಕೆ ಧರ್ಮವನ್ನು ಯಾವುದೇ ಕಾರಣಕ್ಕೂ ತರಬಾರದು. ಯಾವುದೇ ಧರ್ಮ, ಯಾವುದೇ ಜಾತಿಯಾಗಿದ್ದರೂ ಉದ್ಯಮ ಮಾಡಲು ಈ ಸಂವಿಧಾನದಲ್ಲಿ ಹಕ್ಕಿದೆ. ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ನಡೆಯುತ್ತದೆ. ಅಲ್ಲಿ ಜೈನರೊಬ್ಬರೇ ವ್ಯಾಪಾರ ಮಾಡಬೇಕು, ಬೇರೆಯವರು ಬರಬಾರದು ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

“ನಾವು ಹಿಂದೂಗಳಲ್ಲ, ಜೈನರು. ಹಿಂದೂ, ಮುಸ್ಲಿಂ, ಸಿಖ್‌, ಜೈನ್‌- ಇಲ್ಲರೂ ವಿಭಿನ್ನ ಜನಾಂಗಗಳು. ನಮಗೆ ನಾವೇ ಸೀಮಿತ ಮಾಡಿಕೊಳ್ಳಲು ಆಗುವುದಿಲ್ಲ. ಎಲ್ಲರೂ ಸಹಬಾಳ್ವೆ ಮಾಡಬೇಕು. ನನ್ನ ಕೌಶಲವನ್ನು ನಾನು ತೋರಿಸಬೇಕು. ಅವರ ಕೌಶಲವನ್ನು ಅವರು ತೋರಿಸಬೇಕು. ಒಬ್ಬರಿಗೊಬ್ಬರು ಕೌಶಲವನ್ನು ವಿನಿಮಯ ಮಾಡಿಕೊಳ್ಳಬೇಕು. ಹೀಗಾಗಿ ಇಂದು ಆಗುತ್ತಿರುವ ಬೆಳವಣಿಗೆಗಳನ್ನು ನಾನು ವಿರೋಧಿಸುತ್ತೇನೆ” ಎಂದು ತಿಳಿಸಿದರು.

ಉದ್ಯಮಿ ಸುರೇಶ್‌ಕುಮಾರ್‌ ಜೈನ್‌

ಹಲಾಲ್‌ ಸಂಬಂಧ ಎದ್ದಿರುವ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಹಲಾಲ್‌ ಈ ಕಾಲದಲ್ಲ. ಪ್ರಾಚೀನ ಕಾಲದಿಂದಲೂ ಮುಸ್ಲಿಮರು ಹಲಾಲ್ ಮಾಡುತ್ತಿದ್ದಾರೆ. ಈಗ ಹಿಂದೂ ಮುಸ್ಲಿಂ ಗಲಾಟೆ ಶುರುವಾಗಿದೆ, ಹಿಜಾಬ್ ವಿವಾದವಾಗಿದೆ ಎಂಬ ಕಾರಣಕ್ಕೆ ಹಲಾಲ್‌ ಬ್ರಾಂಡ್ ಸೃಷ್ಟಿಯಾಗಿಲ್ಲ. ಮುಸ್ಲಿಮರು ಹಲಾಲ್‌ ಮಾಡಿದ ಆಹಾರವನ್ನು ತಿನ್ನಬೇಕೆಂಬ ಪದ್ಧತಿ ಇದೆ. ಇತರ ಸಮುದಾಯಗಳಲ್ಲಿ ಹಲಾಲ್ ಮಾಡಿದನ್ನೇ ತಿನ್ನಬೇಕೆಂಬ ಸಂಪ್ರದಾಯ ಇಲ್ಲ. ಹಿಂದೂಗಳ ವ್ಯಾಪಾರ ಹಾಳು ಮಾಡಲೆಂದು ಹಲಾಲ್‌ ಮಾಡಿದ್ದಲ್ಲ. ಅದು ಅವರ ಧಾರ್ಮಿಕರ ಆಚರಣೆ. ಹಲಾಲ್‌ ವಿಚಾರವನ್ನು ಮುನ್ನೆಲೆಗೆ ತಂದು ವ್ಯಾಪಾರಕ್ಕೆ ವಿರೋಧಿಸುತ್ತಿರುವುದು ತೀವ್ರ ವಿಷಾದನೀಯ” ಎಂದರು.

“ಹಿಂದೂ ಮುಸ್ಲಿಂ ಗಲಾಟೆಗಳು ಕಾಂಗ್ರೆಸ್ ಸರ್ಕಾರ ಇದ್ದಾಗಲೂ ನಡೆಯುತ್ತಿದ್ದವು. ಆದರೆ ಈ ಪ್ರಕಾರವಾದ ಪ್ರಚೋದನೆಗಳು ಆಗುತ್ತಿರಲಿಲ್ಲ. ಶಾಂತಿ ಸಭೆಗಳನ್ನು ನಡೆಸಿ ಇತ್ಯರ್ಥ ಮಾಡಲಾಗುತ್ತಿತ್ತು. ವೈಯಕ್ತಿಕ ಭಿನ್ನಾಭಿಪ್ರಾಯಗಳ ಕಾರಣಕ್ಕೋ, ಮತ್ಯಾವುದಕ್ಕೋ ಆಗ ಗಲಾಟೆಗಳು ಆಗುತ್ತಿದ್ದವೇ ಹೊರತು ಈ ಮಾದರಿಯಲ್ಲಿ ನಡೆಯುತ್ತಿರಲಿಲ್ಲ. ಆದರೆ ಇಂದು ನೇರವಾಗಿಯೇ ಎರಡು ಸಮುದಾಯಗಳ ನಡುವೆ ಗೋಡೆ ಕಟ್ಟಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ನಾನು ಜೈನನಾಗಿ ಹೇಳುತ್ತೇನೆ. ಈ ಹಿಂದೆ ಯಾವ ಯಾವ ಸಮುದಾಯಗಳು ಪ್ರಾಬಲ್ಯವನ್ನು ಹೊಂದಿದ್ದವೋ ಅವರು ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ನಾವು ಮತಾಂತರ ಆಗಲಿಲ್ಲವೆಂದು ಸುಮಾರು ಎಂಟು ಸಾವಿರ ಜೈನರನ್ನು ಮಧುರೈನಲ್ಲಿ ಕೊಂದಿರುವ ಕುರಿತು ಸಾಕ್ಷ್ಯಾಧಾರಗಳಿವೆ. ಅನೇಕ ಜೈನ ದೇವಾಲಯಗಳು ವೈಷ್ಣವ, ವೀರಶೈವ ದೇವಾಲಯಗಳಾಗಿ ಬದಲಾಗಿವೆ. ರಾಜಪ್ರಭುತ್ವ ಇದ್ದ ಕಾಲದಲ್ಲಿ ಒಂದು ಜನಾಂಗದ ಮೇಲೆ ಮತ್ತೊಂದು ಜನಾಂಗ ಒತ್ತಡ ಹೇರುವುದು ಸಾಮಾನ್ಯವಾಗಿತ್ತು. ಆದರೆ ಪ್ರಜಾಪ್ರಭುತ್ವದ ಕಾಲದಲ್ಲಿ ಆ ರೀತಿಯ ಒತ್ತಡ, ಹೇರಿಕೆ ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

“ಜೈನ ವಿಗ್ರಹಗಳಿಗೆ ವಿಭೂತಿ ಬಳಿದಿರುವುದನ್ನು ನೋಡಿದ್ದೇವೆ. ಮೈಮೇಲೆ ಉಡುದಾರ, ಬಟ್ಟೆಯೇ ಇರಬಾರದು ಎಂದು ಜೈನ ಮುನಿಗಳು ಹೇಳಿರಬೇಕಾದರೆ ನಮಗೆ ಜನಿವಾರ ಹೇಗೆ ಬೇಕಾಗಿತ್ತು? ಒಂದು ಕಾಲಘಟ್ಟದಲ್ಲಿ ಜನಿವಾರ ಹಾಕಲು ಶುರುಮಾಡಿದರು. ಆನಂತರ ಮುಂದುವರಿತು. ಲಿಂಗಾಯತರು ಹೆಚ್ಚಿರುವ ಊರಲ್ಲಿ ಬಸವ ಜಯಂತಿಯನ್ನು ಜೈನರೂ ಸೇರಿಕೊಂಡೇ ಮಾಡಿರುತ್ತೇವೆ. ಅಂದರೆ ಆಯಾ ಪರಿಸರಕ್ಕೆ ಹೊಂದಿಕೊಂಡು ಸಮಾಜ ಮುಂದುವರಿಯುತ್ತಿದೆ. ಸಹಬಾಳ್ವೆ ಮುಖ್ಯ. ವೈಯಕ್ತಿಕವಾಗಿ ಹೇಳುವುದಾದರೆ ನನ್ನ ಫ್ಯಾಕ್ಟರಿಯಲ್ಲಿ ಸಾಬರೊಂದಿಗೆ ಮೊದಲು ವ್ಯಾಪಾರ ಮಾಡಿದ ಬಳಿಕವೇ ಬೇರೆಯವರೊಂದಿಗೆ ವ್ಯವಹರಿಸುತ್ತೇನೆ. ಇದನ್ನು ನಾನು ರೂಢಿ ಮಾಡಿಕೊಂಡು ಬಂದಿದ್ದೇನೆ. ಅದನ್ನು ಕಿತ್ತುಕೊಳ್ಳುವ ಹಕ್ಕುವ ಯಾರಿಗೂ ಇಲ್ಲ. ಈ ಉದ್ಯಮ ರಾಜಕಾರಣಕ್ಕೆ ಜಾತಿ ರಾಜಕಾರಣ ತರುತ್ತಿರುವುದು ನೋವುಂಟು ಮಾಡಿದೆ” ಎಂದು ವಿಷಾದಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪಿಯುಸಿಎಲ್ ಅಧ್ಯಕ್ಷರಾದ ಅರವಿಂದ್ ನಾರಾಯಣ್‌, ನಾಜಿ ಜರ್ಮನಿಯೊಂದಿಗೆ ಕರ್ನಾಟಕದ ಪರಿಸ್ಥಿತಿಯನ್ನು ಹೋಲಿಸಿದ್ದಾರೆ. “ಹಿಟ್ಲರ್‌ನ ನಾಜಿ ಜರ್ಮನಿಯಲ್ಲಿ ಏನಾಯಿತು? ಮೊದಲು ಯಹೂದಿಗಳ ವಿರುದ್ಧ ದ್ವೇಷದ ಭಾಷಣ ಮಾಡಲಾಯಿತು. ನಂತರ ಯಹೂದಿಗಳಿಂದ ಯಾವುದೇ ವ್ಯಾಪಾರ ವಹಿವಾಟು ಮಾಡದಂತೆ ನಿರ್ಬಂಧಿಸಲಾಯಿತು. ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರದ ಬಳಿಕ ನರಮೇಧದ ನಡೆಯಿತು. ಇತಿಹಾಸದಿಂದ ನಾವು ಪಾಠ ಕಲಿಬೇಕು. ಜೆನೊಸೈಡ್‌ನ ಲಕ್ಷಣಗಳ ಕುರಿತು ಎಚ್ಚರ ವಹಿಸಬೇಕು. ಸರ್ಕಾರ ಈ ರೀತಿಯ ಬೆಳವಣಿಗೆಗಳಿಗೆ ಪ್ರೋತ್ಸಾಹ ನೀಡಬಾರದು” ಎನ್ನುತ್ತಾರೆ ಅರವಿಂದ್‌.


ಇದನ್ನೂ ಓದಿರಿ: Explainer: ಹಲಾಲ್ ಹಾಗೆಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಉದ್ಯಮಿಗಳು. ಪ್ರಗತಿಪರರು. ಹಾಗೂ ಇನ್ನಿತರ ಸಂಘಟನೆಗಳು ಮುಖ್ಯಮಂತ್ರಿಗಳಿಗೆ ಬೇಟಿಯಾಗಿ ಆಗುವ ಅನಾಹುತಗಳ ಬಗ್ಗೆ ವಿವರಿಸಿ ಹೇಳಿ… ಹಾಗೂ ಅವರು ಹಾಕಿಕೊಂಡಿರುವ ಆರೆಸೆಸ್ ಮುಖವಾಡ ಖಳಚಿ ಬನ್ನಿ…

  2. ಸಾಂವಿಧಾನಿಕ ಹಕ್ಕನ್ನು ಯಾರೂ ಕಸಿದುಕೊಳ್ಳಲು ಪ್ರಯತ್ನಿಸಬಾರದು ಜಾತ್ಯತೀತ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಇಂದಿನ ಪರಿಸ್ಥಿತಿಯಲ್ಲಿ ತುಂಬಾ ಉತ್ತಮವಾದ ಸಾಮಾಜಿಕ ನಡವಳಿಕೆ ಎನಿಸುತ್ತದೆ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....