Homeಮುಖಪುಟತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

- Advertisement -
- Advertisement -

ಥಪ್ಪಡ್‌ (ಕೆನ್ನೆಗೆ ಬಾರಿಸುವುದು) ಎಂಬ ಮಹಿಳಾ ಪ್ರಧಾನ ಚಿತ್ರವೊಂದು ಬಾಲಿವುಡ್‌ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ.  ಮುಖ್ಯ ಪಾತ್ರದಲ್ಲಿ ತಾಪ್ಸಿ ಪನ್ನು ನಟಿಸಿದರೆ ಖ್ಯಾತ ನಿರ್ದೇಶಕ ಅನುಭವ್ ಸಿನ್ಹಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಇವರಿಬ್ಬರೂ ಸಹ ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಅಲ್ಲದೇ ಜೆಎನ್‌ಯು ವಿದ್ಯಾರ್ಥಿಗಳ ಪರ ನಿಂತಿದ್ದಾರೆ.

ಈ ಕಾಂಬಿನೇಷನ್‌ನ ಥಪ್ಪಡ್‌ ಸಿನೆಮಾದ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದಾರೆ. ಥಪ್ಪಡ್‌ ಟ್ರೈಲರ್ ಬಿಡುಗಡೆಯಾದ ಕೆಲವು ದಿನಗಳ ನಂತರ “ನಾನು ಈ ಸಿನಿಮಾವನ್ನು ಖಂಡಿತವಾಗಿಯೂ ನೋಡುತ್ತೇನೆ ಮತ್ತು ಜನರು ಅದನ್ನು ತಮ್ಮ ಕುಟುಂಬಗಳೊಂದಿಗೆ ನೋಡುತ್ತಾರೆ ಎಂದು ಭಾವಿಸುತ್ತೇನೆ” ಎಂದು ಸಚಿವೆ ಹೇಳಿದ್ದಾರೆ.

ಥಪ್ಪಡ್‌ ಚಿತ್ರದ ಟ್ರೈಲರ್

“ನಾನು ನಿರ್ದೇಶಕರ ರಾಜಕೀಯ ಸಿದ್ಧಾಂತವನ್ನು ಬೆಂಬಲಿಸದಿರಬಹುದು ಅಥವಾ ಕೆಲವು ವಿಷಯಗಳ ಬಗ್ಗೆ ಕೆಲವು ನಟಿರೊಂದಿಗೆ ಭಿನ್ನಾಭಿಪ್ರಾಯ ಹೊಂದಿರಬಹುದು ಆದರೆ ಇದು ನಾನು ಖಂಡಿತವಾಗಿ ನೋಡುವ ಕಥೆಯಾಗಿದೆ” ಎಂದು ಸ್ಮೃತಿ ಇರಾನಿ ಇನ್ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ತಮ್ಮ ಪೋಸ್ಟ್ನಲ್ಲಿ, ಸ್ಮೃತಿ ಇರಾನಿ ಅವರು ಕುಟುಂಬದೊಳಗಿನ ಕಿರುಕುಳವನ್ನು ಒಳಗೊಂಡ ಸಂದರ್ಭಗಳಲ್ಲಿ “ಹೊಂದಾಣಿಕೆ” ಮಾಡಬೇಕಾದ ನಿದರ್ಶನಗಳ ಸಿನಿಮಾ ಮಾತನಾಡುತ್ತದೆ. “ಮಹಿಳೆಯರಿಗೆ ಹೊಡೆಯುವುದು ಸರಿಯಲ್ಲ … ಒಂದು ಕಪಾಳಮೋಕ್ಷವೂ ಸರಿಯಲ್ಲ. ಕೇವಲ ಒಂದು ಕಪಾಳಮೋಕ್ಷವೂ ಅಲ್ಲ” ಎಂದು ಬರೆದುಕೊಂಡಿದ್ದಾರೆ.

ಸಂತೋಷದಿಂದ ಮದುವೆಯಾದ ದಂಪತಿಗಳಲ್ಲಿ ಒಂದು ದಿನ ಪತಿಯು ಮನೆಯ ಪಾರ್ಟಿಯಲ್ಲಿ ಕೆಲವು ಅತಿಥಿಗಳ ಮುಂದೆ ಹೆಂಡತಿಗೆ ಕಪಾಳಕ್ಕೆ ಹೊಡೆಯುತ್ತಾನೆ. ಇದನ್ನು ಪ್ರತಿಭಟಿಸಿ ಹೆಂಡತಿ ಮದುವೆಯಿಂದ ಹೊರನಡೆಯಲು ನಿರ್ಧರಿಸುತ್ತಾಳೆ. ಇವೆಲ್ಲವೂಗಳ ನಡುವೆ ನಡೆಯುವ ಕಥೆಯೆ ಥಪ್ಪಡ್‌ ಸಿನಿಮಾವಾಗಿದೆ. ಆರ್ಟಿಕಲ್‌ 15 ಎಂಬ ಜಾತಿ ತಾರತಮ್ಯ ಮತ್ತು ಅತ್ಯಾಚಾರದ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದ ಅನುಭವ್‌ ಸಿನ್ಹಾರವರ ಮುಂದಿನ ಚಿತ್ರ ಇದಾಗಿದೆ.

ಥಪ್ಪಡ್‌ನಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸಿರುವ ತಾಪ್ಸಿ ಪನ್ನು ನಟಿಸಿದ್ದಾರೆ. ಅವರು ಇತ್ತೀಚಿನ ಸಂದರ್ಶನದಲ್ಲಿ ಈ ಪಾತ್ರವು ತನಗೆ ಹೇಗೆ ಸವಾಲಿನದು ಎಂಬುದರ ಕುರಿತು ಮಾತನಾಡುತ್ತಾ, “ಅಮೃತಾ ಪಾತ್ರವು ಕೊನೆಯಲ್ಲಿ ನನಗೆ ಉಸಿರುಗಟ್ಟಿಸುತ್ತಿತ್ತು ಮತ್ತು ನಾನು ಅದನ್ನು ಸವಾಲಾಗಿ ತೆಗೆದುಕೊಂಡೆ. 15 ದಿನಗಳ ಶೂಟಿಂಗ್ ನಂತರ, ನಾನು ಕ್ಲಾಸ್ಟ್ರೋಫೋಬಿಕ್ ಅನ್ನು ಅನುಭವಿಸಲು ಪ್ರಾರಂಭಿಸಿದೆ. ನನ್ನ ಫೈರ್‌ಬ್ರಾಂಡ್ ಇಮೇಜ್ ಮತ್ತು ಮನಸ್ಸಿನ ಸ್ಥಳದಿಂದ ಹೊರಬರಲು ಮತ್ತು ಈ ಪಾತ್ರದಿಂದ ಹೊರಬರುವುದು ನನಗೆ ಕಠಿಣವಾಗಿತ್ತು” ಎಂದು ಹೇಳಿದ್ದರು.

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...