Homeಮುಖಪುಟತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

- Advertisement -
- Advertisement -

ಥಪ್ಪಡ್‌ (ಕೆನ್ನೆಗೆ ಬಾರಿಸುವುದು) ಎಂಬ ಮಹಿಳಾ ಪ್ರಧಾನ ಚಿತ್ರವೊಂದು ಬಾಲಿವುಡ್‌ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ.  ಮುಖ್ಯ ಪಾತ್ರದಲ್ಲಿ ತಾಪ್ಸಿ ಪನ್ನು ನಟಿಸಿದರೆ ಖ್ಯಾತ ನಿರ್ದೇಶಕ ಅನುಭವ್ ಸಿನ್ಹಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಇವರಿಬ್ಬರೂ ಸಹ ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಅಲ್ಲದೇ ಜೆಎನ್‌ಯು ವಿದ್ಯಾರ್ಥಿಗಳ ಪರ ನಿಂತಿದ್ದಾರೆ.

ಈ ಕಾಂಬಿನೇಷನ್‌ನ ಥಪ್ಪಡ್‌ ಸಿನೆಮಾದ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದಾರೆ. ಥಪ್ಪಡ್‌ ಟ್ರೈಲರ್ ಬಿಡುಗಡೆಯಾದ ಕೆಲವು ದಿನಗಳ ನಂತರ “ನಾನು ಈ ಸಿನಿಮಾವನ್ನು ಖಂಡಿತವಾಗಿಯೂ ನೋಡುತ್ತೇನೆ ಮತ್ತು ಜನರು ಅದನ್ನು ತಮ್ಮ ಕುಟುಂಬಗಳೊಂದಿಗೆ ನೋಡುತ್ತಾರೆ ಎಂದು ಭಾವಿಸುತ್ತೇನೆ” ಎಂದು ಸಚಿವೆ ಹೇಳಿದ್ದಾರೆ.

ಥಪ್ಪಡ್‌ ಚಿತ್ರದ ಟ್ರೈಲರ್

“ನಾನು ನಿರ್ದೇಶಕರ ರಾಜಕೀಯ ಸಿದ್ಧಾಂತವನ್ನು ಬೆಂಬಲಿಸದಿರಬಹುದು ಅಥವಾ ಕೆಲವು ವಿಷಯಗಳ ಬಗ್ಗೆ ಕೆಲವು ನಟಿರೊಂದಿಗೆ ಭಿನ್ನಾಭಿಪ್ರಾಯ ಹೊಂದಿರಬಹುದು ಆದರೆ ಇದು ನಾನು ಖಂಡಿತವಾಗಿ ನೋಡುವ ಕಥೆಯಾಗಿದೆ” ಎಂದು ಸ್ಮೃತಿ ಇರಾನಿ ಇನ್ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ತಮ್ಮ ಪೋಸ್ಟ್ನಲ್ಲಿ, ಸ್ಮೃತಿ ಇರಾನಿ ಅವರು ಕುಟುಂಬದೊಳಗಿನ ಕಿರುಕುಳವನ್ನು ಒಳಗೊಂಡ ಸಂದರ್ಭಗಳಲ್ಲಿ “ಹೊಂದಾಣಿಕೆ” ಮಾಡಬೇಕಾದ ನಿದರ್ಶನಗಳ ಸಿನಿಮಾ ಮಾತನಾಡುತ್ತದೆ. “ಮಹಿಳೆಯರಿಗೆ ಹೊಡೆಯುವುದು ಸರಿಯಲ್ಲ … ಒಂದು ಕಪಾಳಮೋಕ್ಷವೂ ಸರಿಯಲ್ಲ. ಕೇವಲ ಒಂದು ಕಪಾಳಮೋಕ್ಷವೂ ಅಲ್ಲ” ಎಂದು ಬರೆದುಕೊಂಡಿದ್ದಾರೆ.

ಸಂತೋಷದಿಂದ ಮದುವೆಯಾದ ದಂಪತಿಗಳಲ್ಲಿ ಒಂದು ದಿನ ಪತಿಯು ಮನೆಯ ಪಾರ್ಟಿಯಲ್ಲಿ ಕೆಲವು ಅತಿಥಿಗಳ ಮುಂದೆ ಹೆಂಡತಿಗೆ ಕಪಾಳಕ್ಕೆ ಹೊಡೆಯುತ್ತಾನೆ. ಇದನ್ನು ಪ್ರತಿಭಟಿಸಿ ಹೆಂಡತಿ ಮದುವೆಯಿಂದ ಹೊರನಡೆಯಲು ನಿರ್ಧರಿಸುತ್ತಾಳೆ. ಇವೆಲ್ಲವೂಗಳ ನಡುವೆ ನಡೆಯುವ ಕಥೆಯೆ ಥಪ್ಪಡ್‌ ಸಿನಿಮಾವಾಗಿದೆ. ಆರ್ಟಿಕಲ್‌ 15 ಎಂಬ ಜಾತಿ ತಾರತಮ್ಯ ಮತ್ತು ಅತ್ಯಾಚಾರದ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದ ಅನುಭವ್‌ ಸಿನ್ಹಾರವರ ಮುಂದಿನ ಚಿತ್ರ ಇದಾಗಿದೆ.

ಥಪ್ಪಡ್‌ನಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸಿರುವ ತಾಪ್ಸಿ ಪನ್ನು ನಟಿಸಿದ್ದಾರೆ. ಅವರು ಇತ್ತೀಚಿನ ಸಂದರ್ಶನದಲ್ಲಿ ಈ ಪಾತ್ರವು ತನಗೆ ಹೇಗೆ ಸವಾಲಿನದು ಎಂಬುದರ ಕುರಿತು ಮಾತನಾಡುತ್ತಾ, “ಅಮೃತಾ ಪಾತ್ರವು ಕೊನೆಯಲ್ಲಿ ನನಗೆ ಉಸಿರುಗಟ್ಟಿಸುತ್ತಿತ್ತು ಮತ್ತು ನಾನು ಅದನ್ನು ಸವಾಲಾಗಿ ತೆಗೆದುಕೊಂಡೆ. 15 ದಿನಗಳ ಶೂಟಿಂಗ್ ನಂತರ, ನಾನು ಕ್ಲಾಸ್ಟ್ರೋಫೋಬಿಕ್ ಅನ್ನು ಅನುಭವಿಸಲು ಪ್ರಾರಂಭಿಸಿದೆ. ನನ್ನ ಫೈರ್‌ಬ್ರಾಂಡ್ ಇಮೇಜ್ ಮತ್ತು ಮನಸ್ಸಿನ ಸ್ಥಳದಿಂದ ಹೊರಬರಲು ಮತ್ತು ಈ ಪಾತ್ರದಿಂದ ಹೊರಬರುವುದು ನನಗೆ ಕಠಿಣವಾಗಿತ್ತು” ಎಂದು ಹೇಳಿದ್ದರು.

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...