Homeಮುಖಪುಟತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

- Advertisement -
- Advertisement -

ಥಪ್ಪಡ್‌ (ಕೆನ್ನೆಗೆ ಬಾರಿಸುವುದು) ಎಂಬ ಮಹಿಳಾ ಪ್ರಧಾನ ಚಿತ್ರವೊಂದು ಬಾಲಿವುಡ್‌ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ.  ಮುಖ್ಯ ಪಾತ್ರದಲ್ಲಿ ತಾಪ್ಸಿ ಪನ್ನು ನಟಿಸಿದರೆ ಖ್ಯಾತ ನಿರ್ದೇಶಕ ಅನುಭವ್ ಸಿನ್ಹಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಇವರಿಬ್ಬರೂ ಸಹ ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಅಲ್ಲದೇ ಜೆಎನ್‌ಯು ವಿದ್ಯಾರ್ಥಿಗಳ ಪರ ನಿಂತಿದ್ದಾರೆ.

ಈ ಕಾಂಬಿನೇಷನ್‌ನ ಥಪ್ಪಡ್‌ ಸಿನೆಮಾದ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದಾರೆ. ಥಪ್ಪಡ್‌ ಟ್ರೈಲರ್ ಬಿಡುಗಡೆಯಾದ ಕೆಲವು ದಿನಗಳ ನಂತರ “ನಾನು ಈ ಸಿನಿಮಾವನ್ನು ಖಂಡಿತವಾಗಿಯೂ ನೋಡುತ್ತೇನೆ ಮತ್ತು ಜನರು ಅದನ್ನು ತಮ್ಮ ಕುಟುಂಬಗಳೊಂದಿಗೆ ನೋಡುತ್ತಾರೆ ಎಂದು ಭಾವಿಸುತ್ತೇನೆ” ಎಂದು ಸಚಿವೆ ಹೇಳಿದ್ದಾರೆ.

ಥಪ್ಪಡ್‌ ಚಿತ್ರದ ಟ್ರೈಲರ್

“ನಾನು ನಿರ್ದೇಶಕರ ರಾಜಕೀಯ ಸಿದ್ಧಾಂತವನ್ನು ಬೆಂಬಲಿಸದಿರಬಹುದು ಅಥವಾ ಕೆಲವು ವಿಷಯಗಳ ಬಗ್ಗೆ ಕೆಲವು ನಟಿರೊಂದಿಗೆ ಭಿನ್ನಾಭಿಪ್ರಾಯ ಹೊಂದಿರಬಹುದು ಆದರೆ ಇದು ನಾನು ಖಂಡಿತವಾಗಿ ನೋಡುವ ಕಥೆಯಾಗಿದೆ” ಎಂದು ಸ್ಮೃತಿ ಇರಾನಿ ಇನ್ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ತಮ್ಮ ಪೋಸ್ಟ್ನಲ್ಲಿ, ಸ್ಮೃತಿ ಇರಾನಿ ಅವರು ಕುಟುಂಬದೊಳಗಿನ ಕಿರುಕುಳವನ್ನು ಒಳಗೊಂಡ ಸಂದರ್ಭಗಳಲ್ಲಿ “ಹೊಂದಾಣಿಕೆ” ಮಾಡಬೇಕಾದ ನಿದರ್ಶನಗಳ ಸಿನಿಮಾ ಮಾತನಾಡುತ್ತದೆ. “ಮಹಿಳೆಯರಿಗೆ ಹೊಡೆಯುವುದು ಸರಿಯಲ್ಲ … ಒಂದು ಕಪಾಳಮೋಕ್ಷವೂ ಸರಿಯಲ್ಲ. ಕೇವಲ ಒಂದು ಕಪಾಳಮೋಕ್ಷವೂ ಅಲ್ಲ” ಎಂದು ಬರೆದುಕೊಂಡಿದ್ದಾರೆ.

ಸಂತೋಷದಿಂದ ಮದುವೆಯಾದ ದಂಪತಿಗಳಲ್ಲಿ ಒಂದು ದಿನ ಪತಿಯು ಮನೆಯ ಪಾರ್ಟಿಯಲ್ಲಿ ಕೆಲವು ಅತಿಥಿಗಳ ಮುಂದೆ ಹೆಂಡತಿಗೆ ಕಪಾಳಕ್ಕೆ ಹೊಡೆಯುತ್ತಾನೆ. ಇದನ್ನು ಪ್ರತಿಭಟಿಸಿ ಹೆಂಡತಿ ಮದುವೆಯಿಂದ ಹೊರನಡೆಯಲು ನಿರ್ಧರಿಸುತ್ತಾಳೆ. ಇವೆಲ್ಲವೂಗಳ ನಡುವೆ ನಡೆಯುವ ಕಥೆಯೆ ಥಪ್ಪಡ್‌ ಸಿನಿಮಾವಾಗಿದೆ. ಆರ್ಟಿಕಲ್‌ 15 ಎಂಬ ಜಾತಿ ತಾರತಮ್ಯ ಮತ್ತು ಅತ್ಯಾಚಾರದ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದ ಅನುಭವ್‌ ಸಿನ್ಹಾರವರ ಮುಂದಿನ ಚಿತ್ರ ಇದಾಗಿದೆ.

ಥಪ್ಪಡ್‌ನಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸಿರುವ ತಾಪ್ಸಿ ಪನ್ನು ನಟಿಸಿದ್ದಾರೆ. ಅವರು ಇತ್ತೀಚಿನ ಸಂದರ್ಶನದಲ್ಲಿ ಈ ಪಾತ್ರವು ತನಗೆ ಹೇಗೆ ಸವಾಲಿನದು ಎಂಬುದರ ಕುರಿತು ಮಾತನಾಡುತ್ತಾ, “ಅಮೃತಾ ಪಾತ್ರವು ಕೊನೆಯಲ್ಲಿ ನನಗೆ ಉಸಿರುಗಟ್ಟಿಸುತ್ತಿತ್ತು ಮತ್ತು ನಾನು ಅದನ್ನು ಸವಾಲಾಗಿ ತೆಗೆದುಕೊಂಡೆ. 15 ದಿನಗಳ ಶೂಟಿಂಗ್ ನಂತರ, ನಾನು ಕ್ಲಾಸ್ಟ್ರೋಫೋಬಿಕ್ ಅನ್ನು ಅನುಭವಿಸಲು ಪ್ರಾರಂಭಿಸಿದೆ. ನನ್ನ ಫೈರ್‌ಬ್ರಾಂಡ್ ಇಮೇಜ್ ಮತ್ತು ಮನಸ್ಸಿನ ಸ್ಥಳದಿಂದ ಹೊರಬರಲು ಮತ್ತು ಈ ಪಾತ್ರದಿಂದ ಹೊರಬರುವುದು ನನಗೆ ಕಠಿಣವಾಗಿತ್ತು” ಎಂದು ಹೇಳಿದ್ದರು.

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...