Homeಮುಖಪುಟತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

- Advertisement -
- Advertisement -

ಥಪ್ಪಡ್‌ (ಕೆನ್ನೆಗೆ ಬಾರಿಸುವುದು) ಎಂಬ ಮಹಿಳಾ ಪ್ರಧಾನ ಚಿತ್ರವೊಂದು ಬಾಲಿವುಡ್‌ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ.  ಮುಖ್ಯ ಪಾತ್ರದಲ್ಲಿ ತಾಪ್ಸಿ ಪನ್ನು ನಟಿಸಿದರೆ ಖ್ಯಾತ ನಿರ್ದೇಶಕ ಅನುಭವ್ ಸಿನ್ಹಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಇವರಿಬ್ಬರೂ ಸಹ ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಅಲ್ಲದೇ ಜೆಎನ್‌ಯು ವಿದ್ಯಾರ್ಥಿಗಳ ಪರ ನಿಂತಿದ್ದಾರೆ.

ಈ ಕಾಂಬಿನೇಷನ್‌ನ ಥಪ್ಪಡ್‌ ಸಿನೆಮಾದ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದಾರೆ. ಥಪ್ಪಡ್‌ ಟ್ರೈಲರ್ ಬಿಡುಗಡೆಯಾದ ಕೆಲವು ದಿನಗಳ ನಂತರ “ನಾನು ಈ ಸಿನಿಮಾವನ್ನು ಖಂಡಿತವಾಗಿಯೂ ನೋಡುತ್ತೇನೆ ಮತ್ತು ಜನರು ಅದನ್ನು ತಮ್ಮ ಕುಟುಂಬಗಳೊಂದಿಗೆ ನೋಡುತ್ತಾರೆ ಎಂದು ಭಾವಿಸುತ್ತೇನೆ” ಎಂದು ಸಚಿವೆ ಹೇಳಿದ್ದಾರೆ.

ಥಪ್ಪಡ್‌ ಚಿತ್ರದ ಟ್ರೈಲರ್

“ನಾನು ನಿರ್ದೇಶಕರ ರಾಜಕೀಯ ಸಿದ್ಧಾಂತವನ್ನು ಬೆಂಬಲಿಸದಿರಬಹುದು ಅಥವಾ ಕೆಲವು ವಿಷಯಗಳ ಬಗ್ಗೆ ಕೆಲವು ನಟಿರೊಂದಿಗೆ ಭಿನ್ನಾಭಿಪ್ರಾಯ ಹೊಂದಿರಬಹುದು ಆದರೆ ಇದು ನಾನು ಖಂಡಿತವಾಗಿ ನೋಡುವ ಕಥೆಯಾಗಿದೆ” ಎಂದು ಸ್ಮೃತಿ ಇರಾನಿ ಇನ್ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ತಮ್ಮ ಪೋಸ್ಟ್ನಲ್ಲಿ, ಸ್ಮೃತಿ ಇರಾನಿ ಅವರು ಕುಟುಂಬದೊಳಗಿನ ಕಿರುಕುಳವನ್ನು ಒಳಗೊಂಡ ಸಂದರ್ಭಗಳಲ್ಲಿ “ಹೊಂದಾಣಿಕೆ” ಮಾಡಬೇಕಾದ ನಿದರ್ಶನಗಳ ಸಿನಿಮಾ ಮಾತನಾಡುತ್ತದೆ. “ಮಹಿಳೆಯರಿಗೆ ಹೊಡೆಯುವುದು ಸರಿಯಲ್ಲ … ಒಂದು ಕಪಾಳಮೋಕ್ಷವೂ ಸರಿಯಲ್ಲ. ಕೇವಲ ಒಂದು ಕಪಾಳಮೋಕ್ಷವೂ ಅಲ್ಲ” ಎಂದು ಬರೆದುಕೊಂಡಿದ್ದಾರೆ.

ಸಂತೋಷದಿಂದ ಮದುವೆಯಾದ ದಂಪತಿಗಳಲ್ಲಿ ಒಂದು ದಿನ ಪತಿಯು ಮನೆಯ ಪಾರ್ಟಿಯಲ್ಲಿ ಕೆಲವು ಅತಿಥಿಗಳ ಮುಂದೆ ಹೆಂಡತಿಗೆ ಕಪಾಳಕ್ಕೆ ಹೊಡೆಯುತ್ತಾನೆ. ಇದನ್ನು ಪ್ರತಿಭಟಿಸಿ ಹೆಂಡತಿ ಮದುವೆಯಿಂದ ಹೊರನಡೆಯಲು ನಿರ್ಧರಿಸುತ್ತಾಳೆ. ಇವೆಲ್ಲವೂಗಳ ನಡುವೆ ನಡೆಯುವ ಕಥೆಯೆ ಥಪ್ಪಡ್‌ ಸಿನಿಮಾವಾಗಿದೆ. ಆರ್ಟಿಕಲ್‌ 15 ಎಂಬ ಜಾತಿ ತಾರತಮ್ಯ ಮತ್ತು ಅತ್ಯಾಚಾರದ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದ ಅನುಭವ್‌ ಸಿನ್ಹಾರವರ ಮುಂದಿನ ಚಿತ್ರ ಇದಾಗಿದೆ.

ಥಪ್ಪಡ್‌ನಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸಿರುವ ತಾಪ್ಸಿ ಪನ್ನು ನಟಿಸಿದ್ದಾರೆ. ಅವರು ಇತ್ತೀಚಿನ ಸಂದರ್ಶನದಲ್ಲಿ ಈ ಪಾತ್ರವು ತನಗೆ ಹೇಗೆ ಸವಾಲಿನದು ಎಂಬುದರ ಕುರಿತು ಮಾತನಾಡುತ್ತಾ, “ಅಮೃತಾ ಪಾತ್ರವು ಕೊನೆಯಲ್ಲಿ ನನಗೆ ಉಸಿರುಗಟ್ಟಿಸುತ್ತಿತ್ತು ಮತ್ತು ನಾನು ಅದನ್ನು ಸವಾಲಾಗಿ ತೆಗೆದುಕೊಂಡೆ. 15 ದಿನಗಳ ಶೂಟಿಂಗ್ ನಂತರ, ನಾನು ಕ್ಲಾಸ್ಟ್ರೋಫೋಬಿಕ್ ಅನ್ನು ಅನುಭವಿಸಲು ಪ್ರಾರಂಭಿಸಿದೆ. ನನ್ನ ಫೈರ್‌ಬ್ರಾಂಡ್ ಇಮೇಜ್ ಮತ್ತು ಮನಸ್ಸಿನ ಸ್ಥಳದಿಂದ ಹೊರಬರಲು ಮತ್ತು ಈ ಪಾತ್ರದಿಂದ ಹೊರಬರುವುದು ನನಗೆ ಕಠಿಣವಾಗಿತ್ತು” ಎಂದು ಹೇಳಿದ್ದರು.

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...