Homeಮುಖಪುಟತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಅಭಿನಯದ ’ಥಪ್ಪಡ್’ ಟ್ರೈಲರ್ ನೋಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದೇನು?

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

- Advertisement -
- Advertisement -

ಥಪ್ಪಡ್‌ (ಕೆನ್ನೆಗೆ ಬಾರಿಸುವುದು) ಎಂಬ ಮಹಿಳಾ ಪ್ರಧಾನ ಚಿತ್ರವೊಂದು ಬಾಲಿವುಡ್‌ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ.  ಮುಖ್ಯ ಪಾತ್ರದಲ್ಲಿ ತಾಪ್ಸಿ ಪನ್ನು ನಟಿಸಿದರೆ ಖ್ಯಾತ ನಿರ್ದೇಶಕ ಅನುಭವ್ ಸಿನ್ಹಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಇವರಿಬ್ಬರೂ ಸಹ ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಅಲ್ಲದೇ ಜೆಎನ್‌ಯು ವಿದ್ಯಾರ್ಥಿಗಳ ಪರ ನಿಂತಿದ್ದಾರೆ.

ಈ ಕಾಂಬಿನೇಷನ್‌ನ ಥಪ್ಪಡ್‌ ಸಿನೆಮಾದ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ್ದಾರೆ. ಥಪ್ಪಡ್‌ ಟ್ರೈಲರ್ ಬಿಡುಗಡೆಯಾದ ಕೆಲವು ದಿನಗಳ ನಂತರ “ನಾನು ಈ ಸಿನಿಮಾವನ್ನು ಖಂಡಿತವಾಗಿಯೂ ನೋಡುತ್ತೇನೆ ಮತ್ತು ಜನರು ಅದನ್ನು ತಮ್ಮ ಕುಟುಂಬಗಳೊಂದಿಗೆ ನೋಡುತ್ತಾರೆ ಎಂದು ಭಾವಿಸುತ್ತೇನೆ” ಎಂದು ಸಚಿವೆ ಹೇಳಿದ್ದಾರೆ.

ಥಪ್ಪಡ್‌ ಚಿತ್ರದ ಟ್ರೈಲರ್

“ನಾನು ನಿರ್ದೇಶಕರ ರಾಜಕೀಯ ಸಿದ್ಧಾಂತವನ್ನು ಬೆಂಬಲಿಸದಿರಬಹುದು ಅಥವಾ ಕೆಲವು ವಿಷಯಗಳ ಬಗ್ಗೆ ಕೆಲವು ನಟಿರೊಂದಿಗೆ ಭಿನ್ನಾಭಿಪ್ರಾಯ ಹೊಂದಿರಬಹುದು ಆದರೆ ಇದು ನಾನು ಖಂಡಿತವಾಗಿ ನೋಡುವ ಕಥೆಯಾಗಿದೆ” ಎಂದು ಸ್ಮೃತಿ ಇರಾನಿ ಇನ್ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ.

ತಮ್ಮ ಪೋಸ್ಟ್ನಲ್ಲಿ, ಸ್ಮೃತಿ ಇರಾನಿ ಅವರು ಕುಟುಂಬದೊಳಗಿನ ಕಿರುಕುಳವನ್ನು ಒಳಗೊಂಡ ಸಂದರ್ಭಗಳಲ್ಲಿ “ಹೊಂದಾಣಿಕೆ” ಮಾಡಬೇಕಾದ ನಿದರ್ಶನಗಳ ಸಿನಿಮಾ ಮಾತನಾಡುತ್ತದೆ. “ಮಹಿಳೆಯರಿಗೆ ಹೊಡೆಯುವುದು ಸರಿಯಲ್ಲ … ಒಂದು ಕಪಾಳಮೋಕ್ಷವೂ ಸರಿಯಲ್ಲ. ಕೇವಲ ಒಂದು ಕಪಾಳಮೋಕ್ಷವೂ ಅಲ್ಲ” ಎಂದು ಬರೆದುಕೊಂಡಿದ್ದಾರೆ.

ಸಂತೋಷದಿಂದ ಮದುವೆಯಾದ ದಂಪತಿಗಳಲ್ಲಿ ಒಂದು ದಿನ ಪತಿಯು ಮನೆಯ ಪಾರ್ಟಿಯಲ್ಲಿ ಕೆಲವು ಅತಿಥಿಗಳ ಮುಂದೆ ಹೆಂಡತಿಗೆ ಕಪಾಳಕ್ಕೆ ಹೊಡೆಯುತ್ತಾನೆ. ಇದನ್ನು ಪ್ರತಿಭಟಿಸಿ ಹೆಂಡತಿ ಮದುವೆಯಿಂದ ಹೊರನಡೆಯಲು ನಿರ್ಧರಿಸುತ್ತಾಳೆ. ಇವೆಲ್ಲವೂಗಳ ನಡುವೆ ನಡೆಯುವ ಕಥೆಯೆ ಥಪ್ಪಡ್‌ ಸಿನಿಮಾವಾಗಿದೆ. ಆರ್ಟಿಕಲ್‌ 15 ಎಂಬ ಜಾತಿ ತಾರತಮ್ಯ ಮತ್ತು ಅತ್ಯಾಚಾರದ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದ ಅನುಭವ್‌ ಸಿನ್ಹಾರವರ ಮುಂದಿನ ಚಿತ್ರ ಇದಾಗಿದೆ.

ಥಪ್ಪಡ್‌ನಲ್ಲಿ ನಾಯಕಿಯ ಪಾತ್ರದಲ್ಲಿ ನಟಿಸಿರುವ ತಾಪ್ಸಿ ಪನ್ನು ನಟಿಸಿದ್ದಾರೆ. ಅವರು ಇತ್ತೀಚಿನ ಸಂದರ್ಶನದಲ್ಲಿ ಈ ಪಾತ್ರವು ತನಗೆ ಹೇಗೆ ಸವಾಲಿನದು ಎಂಬುದರ ಕುರಿತು ಮಾತನಾಡುತ್ತಾ, “ಅಮೃತಾ ಪಾತ್ರವು ಕೊನೆಯಲ್ಲಿ ನನಗೆ ಉಸಿರುಗಟ್ಟಿಸುತ್ತಿತ್ತು ಮತ್ತು ನಾನು ಅದನ್ನು ಸವಾಲಾಗಿ ತೆಗೆದುಕೊಂಡೆ. 15 ದಿನಗಳ ಶೂಟಿಂಗ್ ನಂತರ, ನಾನು ಕ್ಲಾಸ್ಟ್ರೋಫೋಬಿಕ್ ಅನ್ನು ಅನುಭವಿಸಲು ಪ್ರಾರಂಭಿಸಿದೆ. ನನ್ನ ಫೈರ್‌ಬ್ರಾಂಡ್ ಇಮೇಜ್ ಮತ್ತು ಮನಸ್ಸಿನ ಸ್ಥಳದಿಂದ ಹೊರಬರಲು ಮತ್ತು ಈ ಪಾತ್ರದಿಂದ ಹೊರಬರುವುದು ನನಗೆ ಕಠಿಣವಾಗಿತ್ತು” ಎಂದು ಹೇಳಿದ್ದರು.

ತಾಪ್ಸಿ ಪನ್ನು ಹೊರತುಪಡಿಸಿ ಈ ಚಿತ್ರದಲ್ಲಿ ಪಪ್ಪೈಲ್ ಗುಲಾಟಿ, ದಿಯಾ ಮಿರ್ಜಾ, ರತ್ನ ಪಾಠಕ್ ಷಾ, ತನ್ವಿ ಅಜ್ಮಿ, ಕುಮುದ್ ಮಿಶ್ರಾ ಮತ್ತು ಮಾನವ್ ಕೌಲ್ ನಟಿಸಿದ್ದಾರೆ. ಈ ಚಿತ್ರವು ಫೆಬ್ರವರಿ 28 ರಂದು ತೆರೆಗೆ ಬರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....