Homeಮುಖಪುಟಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ...

ಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ ದಂಪತಿ

- Advertisement -
- Advertisement -

ಕೇರಳದ ಕಾಸರಗೋಡಿನ ಮುಸ್ಲಿಂ ದಂಪತಿಗಳು ಮೂರು ದಶಕಗಳ ನಂತರ ವಿಶೇಷ ವಿವಾಹ ಕಾಯ್ದೆಯಡಿ ಮರುಮದುವೆಗೆ ನೋಂದಣಿ ಮಾಡಿಕೊಂಡಿದ್ದು, ಇದನ್ನು ಕೆಲವು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ.

ಮಲಪ್ಪುರಂ ಜಿಲ್ಲೆಯ ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯದ ಅಡಿಯಲ್ಲಿನ ಫತ್ವಾ ಮತ್ತು ಸಂಶೋಧನಾ ಮಂಡಳಿಯು ಈ ನಿರ್ಧಾರವನ್ನು ಖಂಡಿಸಿದೆ.

“ಇಸ್ಲಾಮಿಕ್ ನಂಬಿಕೆಗಳನ್ನು ಅನುಸರಿಸುತ್ತಿರುವ ದಂಪತಿಗಳು ಈಗ ತಮ್ಮ ಸಂಪತ್ತಿನ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರೂಢಿಗಳನ್ನು ಮೀರಲು ವಿವಾಹಕ್ಕೆ ಮರು-ನೋಂದಣಿ ಮಾಡಿಕೊಳ್ಳುತ್ತಿದ್ದಾರೆ” ಎಂದು ಮಂಡಳಿ ಹೇಳಿಕೆ ನೀಡಿದೆ.

“ಇಸ್ಲಾಂನಲ್ಲಿನ ಉತ್ತರಾಧಿಕಾರದ ಕಾನೂನಿನ ಪ್ರಕಾರ, ಮೃತ ತಂದೆಗೆ ಕೇವಲ ಹೆಣ್ಣು ಮಕ್ಕಳಿದ್ದರೆ, ಆಸ್ತಿಯ ಮೂರನೇ ಎರಡರಷ್ಟು ಭಾಗವನ್ನು ತಂದೆಯ ಸಹೋದರಿಯರು ಮತ್ತು ಸಹೋದರರ ನಡುವೆ ಹಂಚಬೇಕು. ತಮ್ಮ ಆಸ್ತಿಯಲ್ಲಿ ಒಡಹುಟ್ಟಿದವರಿಗೆ ಯಾವುದೇ ಭಾಗ ಸಿಗಬಾರದು ಎಂಬ ಸಂಕುಚಿತ ಮನೋಭಾವದಿಂದ ವಕೀಲ ಶುಕ್ಕೂರ್ ಅವರು ಮರುಮದುವೆಯಾಗುತ್ತಿದ್ದಾರೆ” ಎಂದಿದೆ.

ವಕೀಲ ಮತ್ತು ಹಕ್ಕುಗಳ ಹೋರಾಟಗಾರ ಸಿ ಶುಕ್ಕೂರ್ ಮತ್ತು ಅವರ ಪತ್ನಿ ಶೀನಾ ಶುಕ್ಕೂರ್ ಅವರು ತಮ್ಮ ಮೂವರು ಪುತ್ರಿಯರ ಸಮ್ಮುಖದಲ್ಲಿ ಕಾಸರಗೋಡಿನಲ್ಲಿ ಬುಧವಾರ ಮರುವಿವಾಹದ ನೋಂದಣಿ ಮಾಡಿಕೊಂಡರು.

ಹೆಣ್ಣುಮಕ್ಕಳಿಗೆ ಪೋಷಕರ ಸಂಪತ್ತಿನ ಮೂರನೇ ಎರಡರಷ್ಟು ಪಾಲು ನೀಡುವ ಇಸ್ಲಾಮಿಕ್ ಉತ್ತರಾಧಿಕಾರದ ಮಾನದಂಡಗಳನ್ನು ತಿದ್ದುಪಡಿ ಮಾಡುವ ಅಗತ್ಯತೆಯ ಸಂದೇಶವನ್ನು ಸಾರಲು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಯ್ಕೆ ಮಾಡಿಕೊಂಡಿರುವ ಈ ದಂಪತಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆಂದು ವರದಿಯಾಗಿದೆ.

ದಂಪತಿಯು ವಿಶೇಷ ವಿವಾಹ ಕಾಯಿದೆಯಡಿ ಮರುಮದುವೆಯಾಗಿರುವುದಕ್ಕೆ ಮೂವರು ಹೆಣ್ಣುಮಕ್ಕಳು ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿರಿ: ಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

ಶುಕ್ಕೂರ್ ವಕ್ಕೀಲ್ ಅವರು 2022ರ ಚಲನಚಿತ್ರ ‘ನ್ನ ಥಾನ್ ಕೇಸ್ ಕೊಡು’ನಲ್ಲಿ ನಟಿಸಿದ್ದಾರೆ. 51 ವರ್ಷದ ಡಾ ಶೀನಾ ಶುಕ್ಕೂರ್ ಅವರು ಕೊಟ್ಟಾಯಂ ಮೂಲದ ಎಂಜಿ ವಿಶ್ವವಿದ್ಯಾಲಯಕ್ಕೆ (ಎಂಜಿಯು) ಕುಲಪತಿಯಾಗಿದ್ದರು.

ಇಸ್ಲಾಮಿಕ್ ಕಾನೂನು ವ್ಯವಸ್ಥೆಯಾದ ‘ಶರಿಯಾ’ ಅಡಿಯಲ್ಲಿ ಈ ಮೊದಲು ‘ನಿಕಾಹ್’ ಆಗಿದ್ದರೆ, ಎರಡನೆಯ ಬಾರಿಗೆ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ನಡೆದಿದೆ. 1954ರಲ್ಲಿ ಸಂಸತ್ತು ಅಂಗೀಕರಿಸಿದ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ವಿವಾಹವನ್ನು ನೋಂದಣಿ ಮಾಡಿಕೊಳ್ಳಲಾಗಿದೆ.

ಇಸ್ಲಾಮಿಕ್ ಕಾನೂನಿನಡಿಯಲ್ಲಿ 1994 ರಲ್ಲಿ ವಿವಾಹವಾದ ಶುಕ್ಕೂರ್ ಮತ್ತು ಶೀನಾ, ವಿಶೇಷ ವಿವಾಹ ಕಾಯ್ದೆಯಡಿ ಮಾರ್ಚ್ 8, 2023ರಂದು ತಮ್ಮ ವಿವಾಹವನ್ನು ಮತ್ತೆ ನೋಂದಾಯಿಸಿದ್ದಾರೆ. ಲಿಂಗ ತಾರತಮ್ಯದ ಬಗ್ಗೆ ಕೇರಳದಲ್ಲಿ ಹೊಸ ಚರ್ಚೆಯನ್ನು ಈ ವಿವಾಹ ಹುಟ್ಟುಹಾಕಿದೆ.

ಗಂಡು ಸಂತಾನವಿಲ್ಲದ ಕಾರಣ, ತಮ್ಮ ಮೂವರು ಹೆಣ್ಣು ಮಕ್ಕಳಿಗೆ ಉತ್ತರಾಧಿಕಾರದ ಕಾನೂನಿನ ಅಡಚಣೆಯನ್ನು ನಿವಾರಿಸಲು ದಂಪತಿಗಳು ಮರುಮದುವೆಗೆ ನಿರ್ಧರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...