Homeಮುಖಪುಟಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ...

ಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ ದಂಪತಿ

- Advertisement -
- Advertisement -

ಕೇರಳದ ಕಾಸರಗೋಡಿನ ಮುಸ್ಲಿಂ ದಂಪತಿಗಳು ಮೂರು ದಶಕಗಳ ನಂತರ ವಿಶೇಷ ವಿವಾಹ ಕಾಯ್ದೆಯಡಿ ಮರುಮದುವೆಗೆ ನೋಂದಣಿ ಮಾಡಿಕೊಂಡಿದ್ದು, ಇದನ್ನು ಕೆಲವು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ.

ಮಲಪ್ಪುರಂ ಜಿಲ್ಲೆಯ ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯದ ಅಡಿಯಲ್ಲಿನ ಫತ್ವಾ ಮತ್ತು ಸಂಶೋಧನಾ ಮಂಡಳಿಯು ಈ ನಿರ್ಧಾರವನ್ನು ಖಂಡಿಸಿದೆ.

“ಇಸ್ಲಾಮಿಕ್ ನಂಬಿಕೆಗಳನ್ನು ಅನುಸರಿಸುತ್ತಿರುವ ದಂಪತಿಗಳು ಈಗ ತಮ್ಮ ಸಂಪತ್ತಿನ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರೂಢಿಗಳನ್ನು ಮೀರಲು ವಿವಾಹಕ್ಕೆ ಮರು-ನೋಂದಣಿ ಮಾಡಿಕೊಳ್ಳುತ್ತಿದ್ದಾರೆ” ಎಂದು ಮಂಡಳಿ ಹೇಳಿಕೆ ನೀಡಿದೆ.

“ಇಸ್ಲಾಂನಲ್ಲಿನ ಉತ್ತರಾಧಿಕಾರದ ಕಾನೂನಿನ ಪ್ರಕಾರ, ಮೃತ ತಂದೆಗೆ ಕೇವಲ ಹೆಣ್ಣು ಮಕ್ಕಳಿದ್ದರೆ, ಆಸ್ತಿಯ ಮೂರನೇ ಎರಡರಷ್ಟು ಭಾಗವನ್ನು ತಂದೆಯ ಸಹೋದರಿಯರು ಮತ್ತು ಸಹೋದರರ ನಡುವೆ ಹಂಚಬೇಕು. ತಮ್ಮ ಆಸ್ತಿಯಲ್ಲಿ ಒಡಹುಟ್ಟಿದವರಿಗೆ ಯಾವುದೇ ಭಾಗ ಸಿಗಬಾರದು ಎಂಬ ಸಂಕುಚಿತ ಮನೋಭಾವದಿಂದ ವಕೀಲ ಶುಕ್ಕೂರ್ ಅವರು ಮರುಮದುವೆಯಾಗುತ್ತಿದ್ದಾರೆ” ಎಂದಿದೆ.

ವಕೀಲ ಮತ್ತು ಹಕ್ಕುಗಳ ಹೋರಾಟಗಾರ ಸಿ ಶುಕ್ಕೂರ್ ಮತ್ತು ಅವರ ಪತ್ನಿ ಶೀನಾ ಶುಕ್ಕೂರ್ ಅವರು ತಮ್ಮ ಮೂವರು ಪುತ್ರಿಯರ ಸಮ್ಮುಖದಲ್ಲಿ ಕಾಸರಗೋಡಿನಲ್ಲಿ ಬುಧವಾರ ಮರುವಿವಾಹದ ನೋಂದಣಿ ಮಾಡಿಕೊಂಡರು.

ಹೆಣ್ಣುಮಕ್ಕಳಿಗೆ ಪೋಷಕರ ಸಂಪತ್ತಿನ ಮೂರನೇ ಎರಡರಷ್ಟು ಪಾಲು ನೀಡುವ ಇಸ್ಲಾಮಿಕ್ ಉತ್ತರಾಧಿಕಾರದ ಮಾನದಂಡಗಳನ್ನು ತಿದ್ದುಪಡಿ ಮಾಡುವ ಅಗತ್ಯತೆಯ ಸಂದೇಶವನ್ನು ಸಾರಲು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಯ್ಕೆ ಮಾಡಿಕೊಂಡಿರುವ ಈ ದಂಪತಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆಂದು ವರದಿಯಾಗಿದೆ.

ದಂಪತಿಯು ವಿಶೇಷ ವಿವಾಹ ಕಾಯಿದೆಯಡಿ ಮರುಮದುವೆಯಾಗಿರುವುದಕ್ಕೆ ಮೂವರು ಹೆಣ್ಣುಮಕ್ಕಳು ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿರಿ: ಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

ಶುಕ್ಕೂರ್ ವಕ್ಕೀಲ್ ಅವರು 2022ರ ಚಲನಚಿತ್ರ ‘ನ್ನ ಥಾನ್ ಕೇಸ್ ಕೊಡು’ನಲ್ಲಿ ನಟಿಸಿದ್ದಾರೆ. 51 ವರ್ಷದ ಡಾ ಶೀನಾ ಶುಕ್ಕೂರ್ ಅವರು ಕೊಟ್ಟಾಯಂ ಮೂಲದ ಎಂಜಿ ವಿಶ್ವವಿದ್ಯಾಲಯಕ್ಕೆ (ಎಂಜಿಯು) ಕುಲಪತಿಯಾಗಿದ್ದರು.

ಇಸ್ಲಾಮಿಕ್ ಕಾನೂನು ವ್ಯವಸ್ಥೆಯಾದ ‘ಶರಿಯಾ’ ಅಡಿಯಲ್ಲಿ ಈ ಮೊದಲು ‘ನಿಕಾಹ್’ ಆಗಿದ್ದರೆ, ಎರಡನೆಯ ಬಾರಿಗೆ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ನಡೆದಿದೆ. 1954ರಲ್ಲಿ ಸಂಸತ್ತು ಅಂಗೀಕರಿಸಿದ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ವಿವಾಹವನ್ನು ನೋಂದಣಿ ಮಾಡಿಕೊಳ್ಳಲಾಗಿದೆ.

ಇಸ್ಲಾಮಿಕ್ ಕಾನೂನಿನಡಿಯಲ್ಲಿ 1994 ರಲ್ಲಿ ವಿವಾಹವಾದ ಶುಕ್ಕೂರ್ ಮತ್ತು ಶೀನಾ, ವಿಶೇಷ ವಿವಾಹ ಕಾಯ್ದೆಯಡಿ ಮಾರ್ಚ್ 8, 2023ರಂದು ತಮ್ಮ ವಿವಾಹವನ್ನು ಮತ್ತೆ ನೋಂದಾಯಿಸಿದ್ದಾರೆ. ಲಿಂಗ ತಾರತಮ್ಯದ ಬಗ್ಗೆ ಕೇರಳದಲ್ಲಿ ಹೊಸ ಚರ್ಚೆಯನ್ನು ಈ ವಿವಾಹ ಹುಟ್ಟುಹಾಕಿದೆ.

ಗಂಡು ಸಂತಾನವಿಲ್ಲದ ಕಾರಣ, ತಮ್ಮ ಮೂವರು ಹೆಣ್ಣು ಮಕ್ಕಳಿಗೆ ಉತ್ತರಾಧಿಕಾರದ ಕಾನೂನಿನ ಅಡಚಣೆಯನ್ನು ನಿವಾರಿಸಲು ದಂಪತಿಗಳು ಮರುಮದುವೆಗೆ ನಿರ್ಧರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...