Homeಮುಖಪುಟಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ...

ಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ ದಂಪತಿ

- Advertisement -
- Advertisement -

ಕೇರಳದ ಕಾಸರಗೋಡಿನ ಮುಸ್ಲಿಂ ದಂಪತಿಗಳು ಮೂರು ದಶಕಗಳ ನಂತರ ವಿಶೇಷ ವಿವಾಹ ಕಾಯ್ದೆಯಡಿ ಮರುಮದುವೆಗೆ ನೋಂದಣಿ ಮಾಡಿಕೊಂಡಿದ್ದು, ಇದನ್ನು ಕೆಲವು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ.

ಮಲಪ್ಪುರಂ ಜಿಲ್ಲೆಯ ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯದ ಅಡಿಯಲ್ಲಿನ ಫತ್ವಾ ಮತ್ತು ಸಂಶೋಧನಾ ಮಂಡಳಿಯು ಈ ನಿರ್ಧಾರವನ್ನು ಖಂಡಿಸಿದೆ.

“ಇಸ್ಲಾಮಿಕ್ ನಂಬಿಕೆಗಳನ್ನು ಅನುಸರಿಸುತ್ತಿರುವ ದಂಪತಿಗಳು ಈಗ ತಮ್ಮ ಸಂಪತ್ತಿನ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರೂಢಿಗಳನ್ನು ಮೀರಲು ವಿವಾಹಕ್ಕೆ ಮರು-ನೋಂದಣಿ ಮಾಡಿಕೊಳ್ಳುತ್ತಿದ್ದಾರೆ” ಎಂದು ಮಂಡಳಿ ಹೇಳಿಕೆ ನೀಡಿದೆ.

“ಇಸ್ಲಾಂನಲ್ಲಿನ ಉತ್ತರಾಧಿಕಾರದ ಕಾನೂನಿನ ಪ್ರಕಾರ, ಮೃತ ತಂದೆಗೆ ಕೇವಲ ಹೆಣ್ಣು ಮಕ್ಕಳಿದ್ದರೆ, ಆಸ್ತಿಯ ಮೂರನೇ ಎರಡರಷ್ಟು ಭಾಗವನ್ನು ತಂದೆಯ ಸಹೋದರಿಯರು ಮತ್ತು ಸಹೋದರರ ನಡುವೆ ಹಂಚಬೇಕು. ತಮ್ಮ ಆಸ್ತಿಯಲ್ಲಿ ಒಡಹುಟ್ಟಿದವರಿಗೆ ಯಾವುದೇ ಭಾಗ ಸಿಗಬಾರದು ಎಂಬ ಸಂಕುಚಿತ ಮನೋಭಾವದಿಂದ ವಕೀಲ ಶುಕ್ಕೂರ್ ಅವರು ಮರುಮದುವೆಯಾಗುತ್ತಿದ್ದಾರೆ” ಎಂದಿದೆ.

ವಕೀಲ ಮತ್ತು ಹಕ್ಕುಗಳ ಹೋರಾಟಗಾರ ಸಿ ಶುಕ್ಕೂರ್ ಮತ್ತು ಅವರ ಪತ್ನಿ ಶೀನಾ ಶುಕ್ಕೂರ್ ಅವರು ತಮ್ಮ ಮೂವರು ಪುತ್ರಿಯರ ಸಮ್ಮುಖದಲ್ಲಿ ಕಾಸರಗೋಡಿನಲ್ಲಿ ಬುಧವಾರ ಮರುವಿವಾಹದ ನೋಂದಣಿ ಮಾಡಿಕೊಂಡರು.

ಹೆಣ್ಣುಮಕ್ಕಳಿಗೆ ಪೋಷಕರ ಸಂಪತ್ತಿನ ಮೂರನೇ ಎರಡರಷ್ಟು ಪಾಲು ನೀಡುವ ಇಸ್ಲಾಮಿಕ್ ಉತ್ತರಾಧಿಕಾರದ ಮಾನದಂಡಗಳನ್ನು ತಿದ್ದುಪಡಿ ಮಾಡುವ ಅಗತ್ಯತೆಯ ಸಂದೇಶವನ್ನು ಸಾರಲು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಯ್ಕೆ ಮಾಡಿಕೊಂಡಿರುವ ಈ ದಂಪತಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆಂದು ವರದಿಯಾಗಿದೆ.

ದಂಪತಿಯು ವಿಶೇಷ ವಿವಾಹ ಕಾಯಿದೆಯಡಿ ಮರುಮದುವೆಯಾಗಿರುವುದಕ್ಕೆ ಮೂವರು ಹೆಣ್ಣುಮಕ್ಕಳು ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿರಿ: ಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

ಶುಕ್ಕೂರ್ ವಕ್ಕೀಲ್ ಅವರು 2022ರ ಚಲನಚಿತ್ರ ‘ನ್ನ ಥಾನ್ ಕೇಸ್ ಕೊಡು’ನಲ್ಲಿ ನಟಿಸಿದ್ದಾರೆ. 51 ವರ್ಷದ ಡಾ ಶೀನಾ ಶುಕ್ಕೂರ್ ಅವರು ಕೊಟ್ಟಾಯಂ ಮೂಲದ ಎಂಜಿ ವಿಶ್ವವಿದ್ಯಾಲಯಕ್ಕೆ (ಎಂಜಿಯು) ಕುಲಪತಿಯಾಗಿದ್ದರು.

ಇಸ್ಲಾಮಿಕ್ ಕಾನೂನು ವ್ಯವಸ್ಥೆಯಾದ ‘ಶರಿಯಾ’ ಅಡಿಯಲ್ಲಿ ಈ ಮೊದಲು ‘ನಿಕಾಹ್’ ಆಗಿದ್ದರೆ, ಎರಡನೆಯ ಬಾರಿಗೆ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ನಡೆದಿದೆ. 1954ರಲ್ಲಿ ಸಂಸತ್ತು ಅಂಗೀಕರಿಸಿದ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ವಿವಾಹವನ್ನು ನೋಂದಣಿ ಮಾಡಿಕೊಳ್ಳಲಾಗಿದೆ.

ಇಸ್ಲಾಮಿಕ್ ಕಾನೂನಿನಡಿಯಲ್ಲಿ 1994 ರಲ್ಲಿ ವಿವಾಹವಾದ ಶುಕ್ಕೂರ್ ಮತ್ತು ಶೀನಾ, ವಿಶೇಷ ವಿವಾಹ ಕಾಯ್ದೆಯಡಿ ಮಾರ್ಚ್ 8, 2023ರಂದು ತಮ್ಮ ವಿವಾಹವನ್ನು ಮತ್ತೆ ನೋಂದಾಯಿಸಿದ್ದಾರೆ. ಲಿಂಗ ತಾರತಮ್ಯದ ಬಗ್ಗೆ ಕೇರಳದಲ್ಲಿ ಹೊಸ ಚರ್ಚೆಯನ್ನು ಈ ವಿವಾಹ ಹುಟ್ಟುಹಾಕಿದೆ.

ಗಂಡು ಸಂತಾನವಿಲ್ಲದ ಕಾರಣ, ತಮ್ಮ ಮೂವರು ಹೆಣ್ಣು ಮಕ್ಕಳಿಗೆ ಉತ್ತರಾಧಿಕಾರದ ಕಾನೂನಿನ ಅಡಚಣೆಯನ್ನು ನಿವಾರಿಸಲು ದಂಪತಿಗಳು ಮರುಮದುವೆಗೆ ನಿರ್ಧರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...