Homeಮುಖಪುಟಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ...

ಮೂರು ದಶಕಗಳ ನಂತರ ಮರುಮದುವೆ; ಮಕ್ಕಳಿಗೆ ಆಸ್ತಿ ಉಳಿಸಲು ವಿಶೇಷ ವಿವಾಹ ಕಾಯ್ದೆಯ ಮೊರೆಹೋದ ಮುಸ್ಲಿಂ ದಂಪತಿ

- Advertisement -
- Advertisement -

ಕೇರಳದ ಕಾಸರಗೋಡಿನ ಮುಸ್ಲಿಂ ದಂಪತಿಗಳು ಮೂರು ದಶಕಗಳ ನಂತರ ವಿಶೇಷ ವಿವಾಹ ಕಾಯ್ದೆಯಡಿ ಮರುಮದುವೆಗೆ ನೋಂದಣಿ ಮಾಡಿಕೊಂಡಿದ್ದು, ಇದನ್ನು ಕೆಲವು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ.

ಮಲಪ್ಪುರಂ ಜಿಲ್ಲೆಯ ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯದ ಅಡಿಯಲ್ಲಿನ ಫತ್ವಾ ಮತ್ತು ಸಂಶೋಧನಾ ಮಂಡಳಿಯು ಈ ನಿರ್ಧಾರವನ್ನು ಖಂಡಿಸಿದೆ.

“ಇಸ್ಲಾಮಿಕ್ ನಂಬಿಕೆಗಳನ್ನು ಅನುಸರಿಸುತ್ತಿರುವ ದಂಪತಿಗಳು ಈಗ ತಮ್ಮ ಸಂಪತ್ತಿನ ಉತ್ತರಾಧಿಕಾರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರೂಢಿಗಳನ್ನು ಮೀರಲು ವಿವಾಹಕ್ಕೆ ಮರು-ನೋಂದಣಿ ಮಾಡಿಕೊಳ್ಳುತ್ತಿದ್ದಾರೆ” ಎಂದು ಮಂಡಳಿ ಹೇಳಿಕೆ ನೀಡಿದೆ.

“ಇಸ್ಲಾಂನಲ್ಲಿನ ಉತ್ತರಾಧಿಕಾರದ ಕಾನೂನಿನ ಪ್ರಕಾರ, ಮೃತ ತಂದೆಗೆ ಕೇವಲ ಹೆಣ್ಣು ಮಕ್ಕಳಿದ್ದರೆ, ಆಸ್ತಿಯ ಮೂರನೇ ಎರಡರಷ್ಟು ಭಾಗವನ್ನು ತಂದೆಯ ಸಹೋದರಿಯರು ಮತ್ತು ಸಹೋದರರ ನಡುವೆ ಹಂಚಬೇಕು. ತಮ್ಮ ಆಸ್ತಿಯಲ್ಲಿ ಒಡಹುಟ್ಟಿದವರಿಗೆ ಯಾವುದೇ ಭಾಗ ಸಿಗಬಾರದು ಎಂಬ ಸಂಕುಚಿತ ಮನೋಭಾವದಿಂದ ವಕೀಲ ಶುಕ್ಕೂರ್ ಅವರು ಮರುಮದುವೆಯಾಗುತ್ತಿದ್ದಾರೆ” ಎಂದಿದೆ.

ವಕೀಲ ಮತ್ತು ಹಕ್ಕುಗಳ ಹೋರಾಟಗಾರ ಸಿ ಶುಕ್ಕೂರ್ ಮತ್ತು ಅವರ ಪತ್ನಿ ಶೀನಾ ಶುಕ್ಕೂರ್ ಅವರು ತಮ್ಮ ಮೂವರು ಪುತ್ರಿಯರ ಸಮ್ಮುಖದಲ್ಲಿ ಕಾಸರಗೋಡಿನಲ್ಲಿ ಬುಧವಾರ ಮರುವಿವಾಹದ ನೋಂದಣಿ ಮಾಡಿಕೊಂಡರು.

ಹೆಣ್ಣುಮಕ್ಕಳಿಗೆ ಪೋಷಕರ ಸಂಪತ್ತಿನ ಮೂರನೇ ಎರಡರಷ್ಟು ಪಾಲು ನೀಡುವ ಇಸ್ಲಾಮಿಕ್ ಉತ್ತರಾಧಿಕಾರದ ಮಾನದಂಡಗಳನ್ನು ತಿದ್ದುಪಡಿ ಮಾಡುವ ಅಗತ್ಯತೆಯ ಸಂದೇಶವನ್ನು ಸಾರಲು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಯ್ಕೆ ಮಾಡಿಕೊಂಡಿರುವ ಈ ದಂಪತಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆಂದು ವರದಿಯಾಗಿದೆ.

ದಂಪತಿಯು ವಿಶೇಷ ವಿವಾಹ ಕಾಯಿದೆಯಡಿ ಮರುಮದುವೆಯಾಗಿರುವುದಕ್ಕೆ ಮೂವರು ಹೆಣ್ಣುಮಕ್ಕಳು ಸಾಕ್ಷಿಯಾಗಿದ್ದಾರೆ.

ಇದನ್ನೂ ಓದಿರಿ: ಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

ಶುಕ್ಕೂರ್ ವಕ್ಕೀಲ್ ಅವರು 2022ರ ಚಲನಚಿತ್ರ ‘ನ್ನ ಥಾನ್ ಕೇಸ್ ಕೊಡು’ನಲ್ಲಿ ನಟಿಸಿದ್ದಾರೆ. 51 ವರ್ಷದ ಡಾ ಶೀನಾ ಶುಕ್ಕೂರ್ ಅವರು ಕೊಟ್ಟಾಯಂ ಮೂಲದ ಎಂಜಿ ವಿಶ್ವವಿದ್ಯಾಲಯಕ್ಕೆ (ಎಂಜಿಯು) ಕುಲಪತಿಯಾಗಿದ್ದರು.

ಇಸ್ಲಾಮಿಕ್ ಕಾನೂನು ವ್ಯವಸ್ಥೆಯಾದ ‘ಶರಿಯಾ’ ಅಡಿಯಲ್ಲಿ ಈ ಮೊದಲು ‘ನಿಕಾಹ್’ ಆಗಿದ್ದರೆ, ಎರಡನೆಯ ಬಾರಿಗೆ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ನಡೆದಿದೆ. 1954ರಲ್ಲಿ ಸಂಸತ್ತು ಅಂಗೀಕರಿಸಿದ ವಿಶೇಷ ವಿವಾಹ ಕಾಯಿದೆಯಡಿಯಲ್ಲಿ ವಿವಾಹವನ್ನು ನೋಂದಣಿ ಮಾಡಿಕೊಳ್ಳಲಾಗಿದೆ.

ಇಸ್ಲಾಮಿಕ್ ಕಾನೂನಿನಡಿಯಲ್ಲಿ 1994 ರಲ್ಲಿ ವಿವಾಹವಾದ ಶುಕ್ಕೂರ್ ಮತ್ತು ಶೀನಾ, ವಿಶೇಷ ವಿವಾಹ ಕಾಯ್ದೆಯಡಿ ಮಾರ್ಚ್ 8, 2023ರಂದು ತಮ್ಮ ವಿವಾಹವನ್ನು ಮತ್ತೆ ನೋಂದಾಯಿಸಿದ್ದಾರೆ. ಲಿಂಗ ತಾರತಮ್ಯದ ಬಗ್ಗೆ ಕೇರಳದಲ್ಲಿ ಹೊಸ ಚರ್ಚೆಯನ್ನು ಈ ವಿವಾಹ ಹುಟ್ಟುಹಾಕಿದೆ.

ಗಂಡು ಸಂತಾನವಿಲ್ಲದ ಕಾರಣ, ತಮ್ಮ ಮೂವರು ಹೆಣ್ಣು ಮಕ್ಕಳಿಗೆ ಉತ್ತರಾಧಿಕಾರದ ಕಾನೂನಿನ ಅಡಚಣೆಯನ್ನು ನಿವಾರಿಸಲು ದಂಪತಿಗಳು ಮರುಮದುವೆಗೆ ನಿರ್ಧರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...