Homeಕರೋನಾ ತಲ್ಲಣರೆಮ್‌ಡೆಸಿವಿರ್‌ ಕಾಳ ದಂಧೆ - 6 ಜನರು ಕೋಲಾರ ಪೊಲೀಸರ ಬಲೆಗೆ

ರೆಮ್‌ಡೆಸಿವಿರ್‌ ಕಾಳ ದಂಧೆ – 6 ಜನರು ಕೋಲಾರ ಪೊಲೀಸರ ಬಲೆಗೆ

- Advertisement -
- Advertisement -

ಆಂಟಿ-ವೈರಲ್ ರೆಮ್‌ಡೆಸಿವಿರ್‌ ಇಂಜೆಕ್ಷನ್ ಅನ್ನು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ ಆರು ಜನರನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಂಗಳವಾರ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡವು ನೇರ ಮೇಲ್ವಿಚಾರಣೆಯಲ್ಲಿ ಆರು ಜನರನ್ನು ಬಂಧಿಸಿದೆ ಮತ್ತು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ರೆಮ್‌ಡೆಸಿವಿರ್‌ ಇಂಜೆಕ್ಷನ್‌ನ ಆರು ಬಾಟಲುಗಳನ್ನು ವಶಪಡಿಸಿಕೊಂಡಿದೆ ಎಂದು ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಬಂಧನಕ್ಕೊಳಗಾದವರಲ್ಲಿ ಲ್ಯಾಬ್ ತಂತ್ರಜ್ಞ, ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನರ್ಸಿಂಗ್ ಅಧೀಕ್ಷಕ ಮತ್ತು ಔಷಧಿಕಾರರು ಸೇರಿದ್ದಾರೆ. ರೆಮ್‌ಡೆಸಿವಿರ್‌ ಚುಚ್ಚುಮದ್ದನ್ನು ಪ್ರಿಸ್ಕ್ರಿಪ್ಷನ್ ಇಲ್ಲದೆ ನಗರದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಂಡವನ್ನು ರಚಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್: ಫಿರಂಗಿಗಳು ಘರ್ಜಿಸುತ್ತಿರುವಾಗಲೂ ನಡೆಯುತ್ತಿವೆ ಮುಸ್ಲೀಮರು ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು!

ಹೆಚ್ಚುವರಿ ಎಸ್‌ಪಿ ನಾರಾಯಣಸ್ವಾಮಿ, ಸಹಾಯಕ ಎಸ್‌ಪಿ ಸಾಹಿಲ್ ಬಾಗ್ಲಾ, ಡಿವೈಎಸ್‌ಪಿ ಕೆ.ಸಿ.ಗಿರಿ, ಇನ್ಸ್‌ಪೆಕ್ಟರ್ ರಂಗಸಾಮಯ್ಯ ಅವರನ್ನು ಒಳಗೊಂಡ ಸೈಬರ್ ಅಪರಾಧ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ನಡೆಸಿದ್ದರು. ಅವರು ಆರೋಪಿಗಳ ಮೊಬೈಲ್ ಸಂಖ್ಯೆ, ಇತರ ಚಲನವಲನಗಳನ್ನು ಮತ್ತು ಸಂಪರ್ಕಗಳನ್ನು ಟ್ರ್ಯಾಕ್ ಮಾಡಿದ್ದರು.

ಆರೋಪಿಗಳನ್ನು ಲ್ಯಾಬ್ ತಂತ್ರಜ್ಞ ಶಿವ ಕುಮಾರ್, ನರ್ಸಿಂಗ್ ಮೇಲ್ವಿಚಾರಕ ನಾಗರಾಜ್ ಮತ್ತು ಮಹೇಶ್ ಎಂದು ಗುರುತಿಸಲಾಗಿದೆ. ಅವರಿಂದ ರೆಮ್‌ಡೆಸಿವಿರ್‌ನ ನಾಲ್ಕು ಬಾಟಲುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅದೇ ತಂಡವು ಮತ್ತೊಂದು ಪ್ರಕರಣದಲ್ಲಿ, ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಫಾರ್ಮಸಿ ಅಸಿಸ್ಟೆಂಟ್ ಆಗಿರುವ ನಾಗೇಶ್ ಮತ್ತು ನವೀನ್, ಸಂದೀಪ್ ಮತ್ತು ದರ್ಶನ್ ಅವರನ್ನು ಬಂಧಿಸಿ ರೆಮ್‌ಡೆಸಿವಿರ್‌ನ ಎರಡು ಬಾಟಲುಗಳನ್ನು ವಶಪಡಿಸಿಕೊಂಡಿದೆ.

ಆರೋಪಿಗಳು ರೆಮ್‌ಡೆಸಿವಿರ್‌ನ ಒಂದು ಬಾಟಲಿಗೆ 40 ಸಾವಿರ ರೂಗಳಷ್ಟು ದರವನ್ನು ವಿಧಿಸಿದ್ದರು ಎಂದು ಪೊಲೀಸರು ಕಂಡುಹಿಡಿದಿದ್ದಾರೆ.

ಅಕ್ರಮ ಮಾರಾಟವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿದ ತಂಡವನ್ನು ಸೆಂಟ್ರಲ್‌ ರೇಂಜ್‌ ಇನ್ಸ್‌ಪೆಕ್ಟರ್ ಜನರಲ್ ಎಂ. ಚಂದ್ರಶೇಖರ್ ಶ್ಲಾಘಿಸಿದ್ದಾರೆ. ಅಕ್ರಮ ಮಾರಾಟದ ಹಿಂದಿನ ಸೂತ್ರಧಾರಿಗಳನ್ನು ಪತ್ತೆಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...