Homeನ್ಯಾಯ ಪಥರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

ರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

- Advertisement -
- Advertisement -

ಕೊರೊನಾ ಚಿಕಿತ್ಸೆಯಲ್ಲಿ ರೆಮ್‌ಡೆಸಿವಿರ್ “ಜೀವರಕ್ಷಕ” ಔಷಧಿಯೇನಲ್ಲ. ಹೆಚ್ಚೆಂದರೆ ಮಧ್ಯಮ ತೀವ್ರತೆಯ ರೋಗ ಇರುವವರಲ್ಲಿ ಅದು ಉಪಕಾರ ಮಾಡೀತು ಎಂದು ವೈದ್ಯಕೀಯ ಪರಿಣತರು ಮತ್ತೆ ಮತ್ತೆ ಹೇಳುತ್ತಿದ್ದರೂ, ಆ ಔಷಧಿಯ ಪ್ರಚಾರ-ಪ್ರಸಾರ ಭರಾಟೆ ಹಾಗೂ ಅದಕ್ಕೆ ಪ್ರಭುತ್ವದ ಹಿನ್ನೆಲೆ ಸಂಗೀತಗಳನ್ನು ಗಮನಿಸಿದಾಗ ಇದೆಲ್ಲ ಒಂದು ಉದ್ದೇಶಪೂರ್ವಕ ’ಸ್ಕ್ರಿಪ್ಟೆಡ್ ನಾಟಕದ ಒಂದು ಭಾಗ ಅನ್ನಿಸುವುದು ಸುಳ್ಳಲ್ಲ.

ರಾಜ್ಯದಲ್ಲಿ ರೆಮ್‌ಡೆಸಿವಿರ್ ಸರಬರಾಜಿನ ಹೊಣೆ ಹೊತ್ತಿರುವುದು ರಾಜ್ಯಸರ್ಕಾರದ ಅಧೀನದಲ್ಲೇ ಇರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST). ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆಯು ಎರಡನೇ ಅಲೆಗೆ ಹೆಚ್ಚ್ಚಾಗುತ್ತಾ ಹೋದಂತೆ, ರೆಮ್‌ಡೆಸಿವಿರ್ ಬೇಡಿಕೆ ಹೆಚ್ಚಾಗುತ್ತಾ ಹೋಗಿದೆ. ಈ ಏರುತ್ತಿರುವ ಬೇಡಿಕೆಯನ್ನು ನಿಭಾಯಿಸಲು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 21 ಏಪ್ರಿಲ್‌ನಿಂದ 30 ಏಪ್ರಿಲ್ ನಡುವೆ ಬಳಕೆಗಾಗಿ 1,22,000 ವಿಯಾಲ್ ರೆಮ್‌ಡೆಸಿವಿರ್ ಔಷಧಿ ಮಂಜೂರಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರು ಏಪ್ರಿಲ್ 24ರಂದು ಟ್ವೀಟ್ ಮಾಡಿದ್ದರು. ಇದಲ್ಲದೆ ಏಪ್ರಿಲ್21ರಂದು, ರೆಮ್‌ಡೆಸಿವಿರ್ ಮತ್ತು ಆಕ್ಸಿಜನ್ ಬೇಡಿಕೆ/ಲಭ್ಯತೆಯನ್ನು ನಿರ್ವಹಿಸಲು ವಾರ್ ರೂಂ ರಚಿಸಿ 24/7ಕೆಲಸ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿತ್ತು. ಏಪ್ರಿಲ್ 17ರಂದು ರಾಜ್ಯದೆಲ್ಲೆಡೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ರೆಮ್‌ಡೆಸಿವಿರ್ ವಿತರಣೆಯ ಮೇಲೆ ನಿಗಾ ಇರಿಸಲು ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯದ ಸ್ಥಿತಿಯಲ್ಲಿ ರಾಜ್ಯಕ್ಕೆ ರೆಮ್‌ಡೆಸಿವಿರ್ ಕೊರತೆ ಕಾಣಿಸಿಕೊಳ್ಳಬಾರದಿತ್ತು. ಆದರೆ, ಅದಕ್ಕೆ ವ್ಯತಿರಿಕ್ತವಾಗಿ ಎಲ್ಲೆಡೆ ಕಾಳಸಂತೆಯಲ್ಲಿ ಈ ಔಷಧಿ ಮಾರಾಟ ಆಗುತ್ತಿರುವುದು ಕಂಡುಬರುತ್ತಿದೆ.

ನೇರವಾಗಿ ಕೇಳಿದರೆ ಸಿಗದ, ಆದರೆ ಕಾಳಸಂತೆಯಲ್ಲಿ 15,000-25000 ರೂಗಳ ಮೊತ್ತದಲ್ಲಿ ಸಿಗುವ ರೆಮ್‌ಡೆಸಿವಿರ್ ಮಾರುಕಟ್ಟೆಯನ್ನು ಗಮನಿಸಿದಾಗ, ಸದ್ಯಕ್ಕೆ ಎರಡು ರೀತಿಯಲ್ಲಿ ಅವು ಕಾಳಸಂತೆಯಲ್ಲಿ ಲಭ್ಯವಿರುವುದು ಕಾಣಿಸುತ್ತದೆ. ಈ ಔಷಧಿಯ ಮೇಲೆ ಸರ್ಕಾರದ ಹದ್ದಿನ ಕಣ್ಣು ಇದ್ದರೂ ಕಾಳಸಂತೆಯಲ್ಲಿ ಹೇಗೆ ಲಭ್ಯವಾಗುತ್ತಿದೆ ಎಂಬುದನ್ನು ಪರಿಶೀಲಿಸಿದಾಗ ಕಂಡುಬಂದದ್ದು ಇಷ್ಟು:

ವೈದ್ಯ ರಣಹದ್ದುಗಳು

ಸರ್ಕಾರ ರೆಮ್‌ಡೆಸಿವಿರ್ ಮಾರುಕಟ್ಟೆಯ ಮೇಲೆ ನಿಯಂತ್ರಣ ಇರಿಸುವುದಕ್ಕಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅವೇನೆಂದರೆ, ಖಾಸಗಿ-ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ, ಒಬ್ಬರು ಕೊರೊನಾ ರೋಗಿಗೆ ರೆಮ್‌ಡೆಸಿವಿರ್ ಔಷಧಿ ಅಗತ್ಯ ಇದೆ ಎಂಬುದನ್ನು ತಜ್ಞ ವೈದ್ಯರು ಅಥವಾ ಅರಿವಳಿಕೆ ತಜ್ಞರು ಲಿಖಿತವಾಗಿ ಪ್ರಮಾಣೀಕರಿಸಬೇಕು. ಇದಲ್ಲದೇ, ಪ್ರತಿಯೊಂದು ರೆಮ್‌ಡೆಸಿವಿರ್ ಚುಚ್ಚುಮದ್ದು ನೀಡಿದ ಬಳಿಕ ಅದರ ಸ್ಟಿಕರ್‌ಅನ್ನು ರೋಗಿಯ ಕೇಸ್ ಶೀಟಿನ ಮೇಲೆ ಹಚ್ಚಬೇಕು. ಆಗ, ರೆಮ್‌ಡೆಸಿವಿರ್ ದುರ್ಬಳಕೆ ಆಗುವುದಿಲ್ಲ ಎಂಬುದು ಸರ್ಕಾರದ ತರ್ಕ. ಇಷ್ಟೆಲ್ಲ ಬಿಗಿ ಬಂದೋಬಸ್ತ್ ಇದ್ದರೂ ರೆಮ್‌ಡೆಸಿವಿರ್ ಕಾಳಸಂತೆ ಮಾರುಕಟ್ಟೆಯನ್ನು ತಲುಪುವುದು ಹೇಗೆ?

ಇದು ಬಹಳ ಸರಳವಾದ ಸರ್ಕಾರಿ ಪೆದ್ದುತನದ ಮತ್ತು ವೈದ್ಯಕೀಯ ಜಗತ್ತಿನಲ್ಲಿರುವ ಕೆಲವು ಕರಿಕುರಿಗಳ ಅನಾವರಣವಾಗಿದೆ. ಬೆಣ್ಣೆಯಿಂದ ಕೂದಲನ್ನು ಎತ್ತಿ ಎಸೆಯುವ ನಾಜೂಕುತನದಲ್ಲೇ ಖಾಸಗಿ ಮತ್ತು ಕೆಲವೆಡೆ ಸರ್ಕಾರಿ ವೈದ್ಯರು ಇದನ್ನು ನಿರ್ವಹಿಸುತ್ತಿದ್ದಾರೆ. ಅದನ್ನು ಹಂತ ಹಂತವಾಗಿ ಹೀಗೆ ವಿವರಿಸಬಹುದು:
* ಒಬ್ಬ ಕೊರೊನಾ ರೋಗಿಗೆ ಹೆಚ್ಚೇನೂ ರೋಗಲಕ್ಷಣಗಳಿಲ್ಲದಿರುವಾಗಲೂ, ಆತ/ಆಕೆಗೆ ರೆಮ್‌ಡೆಸಿವಿರ್ ಖಂಡಿತಕ್ಕೂ ಅಗತ್ಯವಿಲ್ಲ ಎಂದು ಗೊತ್ತಿರುವಾಗಲೂ “ರೆಮ್‌ಡೆಸಿವಿರ್ ಚಿಕಿತ್ಸೆ ಅಗತ್ಯವಿದೆ ಎಂದು ಆ ರೋಗಿಯ ಕೇಸ್ ಶೀಟಿನಲ್ಲಿ ದಾಖಲಿಸಲಾಗುತ್ತದೆ.
* ಆ ರೋಗಿಗೆ ರೆಮ್‌ಡೆಸಿವಿರ್ ಚುಚ್ಚದಿದ್ದರೂ, ಪ್ರತಿಯೊಂದು ಚುಚ್ಚುಮದ್ದನ್ನು ಕೇಸ್ ಶೀಟಿನಲ್ಲಿ ದಾಖಲಿಸಿ, ಅದರ ಸ್ಟಿಕರ್‌ಅನ್ನು ಕೇಸ್ ಶೀಟಿಗೆ ಅಂಟಿಸಲಾಗುತ್ತದೆ.
* ಅಲ್ಲಿಂದ ಬಳಕೆಯಾಗದ ರೆಮ್‌ಡೆಸಿವಿರ್ ಚುಚ್ಚುಮದ್ದು ಬಾಟಲಿಗಳು ಆಸ್ಪತ್ರೆಯ ಆಯಕಟ್ಟಿನ ಜಾಗದ ಸಿಬ್ಬಂದಿಗಳ ಮೂಲಕ ಕಾಳಸಂತೆಕೋರರನ್ನು ತಲುಪುತ್ತದೆ.
* ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಯಾವುದಾದರೂ ರೋಗಿಗೆ ನಿಜಕ್ಕೂ ರೆಮ್‌ಡೆಸಿವಿರ್ ಚುಚ್ಚುಮದ್ದು ಬೇಕಾದಾಗ, ಚಿಕಿತ್ಸೆ ನಡೆಸುವ ವೈದ್ಯರು ಅಥವಾ ನಿಗಾ ಇರಿಸುವ ನೋಡಲ್ ಅಧಿಕಾರಿ, ಕಂಗಾಲಾಗಿ ಔಷಧಿಗೆ ಹುಡುಕಾಡುತ್ತಿರುವ ರೋಗಿಯ ಸಂಬಂಧಿಕರಿಗೆ ಮಹದುಪಕಾರ ಮಾಡುತ್ತಿರುವ ಪೋಸ್ ನೀಡಿ, ಈ ಕಾಳಸಂತೆಕೋರರ ಸಂಪರ್ಕ ನಂಬರ್‌ಗಳನ್ನು ಒದಗಿಸುತ್ತಾರೆ.
* ಕಾಳಸಂತೆಕೋರರು ತಾವು ಹೇಳಿದ ದರ ಸಿಕ್ಕಿದರೆ, ಈ ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ರೋಗಿಯ ಸಂಬಂಧಿಕರಿಗೆ ಒದಗಿಸುತ್ತಾರೆ. ತಮ್ಮ ಪ್ರೀತಿಪಾತ್ರರ ಬದುಕಿನ ಮುಂದೆ ಅವರಿಗೆ ಆ ಕ್ಷಣಕ್ಕೆ ಉಳಿದೆಲ್ಲ ಗೌಣವಾಗಿರುತ್ತದೆ.

ಎಲ್ಲ ಪರ್ಸೆಂಟೇಜ್ ವ್ಯವಹಾರ!
ಈ ಕಾಳಸಂತೆ ಆಟದಲ್ಲಿ ಆಸ್ಪತ್ರೆಯ ವೈದ್ಯರು ಮಾತ್ರವಲ್ಲದೇ ಇಲಾಖೆ, ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳಿಗೂ ಪಾಲಿರುತ್ತದೆ ಎಂದು ಹೇಳಲಾಗಿದೆ. ಇಷ್ಟು ಮಾತ್ರವಲ್ಲದೇ ಆಂಬ್ಯುಲೆನ್ಸ್ ಸೇವೆಗಳಲ್ಲಿ, ಬೇರೆ ದೂರದ ಸುಸಜ್ಜಿತ ಆಸ್ಪತ್ರೆಗಳಿಗೆ ರೆಫರಲ್‌ಗಳಲ್ಲೂ ಕಿಕ್ ಬ್ಯಾಕ್ ವ್ಯವಹಾರ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂತಹ ಸ್ಥಿತಿಯಲ್ಲೂ ಸರ್ಕಾರ ಇವನ್ನೆಲ್ಲ ಎಚ್ಚರದಿಂದ ಗಮನಿಸಿ ಕ್ರಮ ಕೈಗೊಳ್ಳದಿದ್ದರೆ, ಸ್ವತಃ ಸರ್ಕಾರದ ಮಟ್ಟದಲ್ಲೇ ಈ ಗೋಲ್‌ಮಾಲ್ ನಡೆಯುತ್ತಿದೆ ಎಂದೇ ಸಾರ್ವಜನಿಕರು ಊಹಿಸಿಕೊಳ್ಳಬೇಕಾಗುತ್ತದೆ.

– ವಿಶೇಷ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...