Homeನ್ಯಾಯ ಪಥರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

ರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

- Advertisement -
- Advertisement -

ಕೊರೊನಾ ಚಿಕಿತ್ಸೆಯಲ್ಲಿ ರೆಮ್‌ಡೆಸಿವಿರ್ “ಜೀವರಕ್ಷಕ” ಔಷಧಿಯೇನಲ್ಲ. ಹೆಚ್ಚೆಂದರೆ ಮಧ್ಯಮ ತೀವ್ರತೆಯ ರೋಗ ಇರುವವರಲ್ಲಿ ಅದು ಉಪಕಾರ ಮಾಡೀತು ಎಂದು ವೈದ್ಯಕೀಯ ಪರಿಣತರು ಮತ್ತೆ ಮತ್ತೆ ಹೇಳುತ್ತಿದ್ದರೂ, ಆ ಔಷಧಿಯ ಪ್ರಚಾರ-ಪ್ರಸಾರ ಭರಾಟೆ ಹಾಗೂ ಅದಕ್ಕೆ ಪ್ರಭುತ್ವದ ಹಿನ್ನೆಲೆ ಸಂಗೀತಗಳನ್ನು ಗಮನಿಸಿದಾಗ ಇದೆಲ್ಲ ಒಂದು ಉದ್ದೇಶಪೂರ್ವಕ ’ಸ್ಕ್ರಿಪ್ಟೆಡ್ ನಾಟಕದ ಒಂದು ಭಾಗ ಅನ್ನಿಸುವುದು ಸುಳ್ಳಲ್ಲ.

ರಾಜ್ಯದಲ್ಲಿ ರೆಮ್‌ಡೆಸಿವಿರ್ ಸರಬರಾಜಿನ ಹೊಣೆ ಹೊತ್ತಿರುವುದು ರಾಜ್ಯಸರ್ಕಾರದ ಅಧೀನದಲ್ಲೇ ಇರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST). ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆಯು ಎರಡನೇ ಅಲೆಗೆ ಹೆಚ್ಚ್ಚಾಗುತ್ತಾ ಹೋದಂತೆ, ರೆಮ್‌ಡೆಸಿವಿರ್ ಬೇಡಿಕೆ ಹೆಚ್ಚಾಗುತ್ತಾ ಹೋಗಿದೆ. ಈ ಏರುತ್ತಿರುವ ಬೇಡಿಕೆಯನ್ನು ನಿಭಾಯಿಸಲು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 21 ಏಪ್ರಿಲ್‌ನಿಂದ 30 ಏಪ್ರಿಲ್ ನಡುವೆ ಬಳಕೆಗಾಗಿ 1,22,000 ವಿಯಾಲ್ ರೆಮ್‌ಡೆಸಿವಿರ್ ಔಷಧಿ ಮಂಜೂರಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರು ಏಪ್ರಿಲ್ 24ರಂದು ಟ್ವೀಟ್ ಮಾಡಿದ್ದರು. ಇದಲ್ಲದೆ ಏಪ್ರಿಲ್21ರಂದು, ರೆಮ್‌ಡೆಸಿವಿರ್ ಮತ್ತು ಆಕ್ಸಿಜನ್ ಬೇಡಿಕೆ/ಲಭ್ಯತೆಯನ್ನು ನಿರ್ವಹಿಸಲು ವಾರ್ ರೂಂ ರಚಿಸಿ 24/7ಕೆಲಸ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿತ್ತು. ಏಪ್ರಿಲ್ 17ರಂದು ರಾಜ್ಯದೆಲ್ಲೆಡೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ರೆಮ್‌ಡೆಸಿವಿರ್ ವಿತರಣೆಯ ಮೇಲೆ ನಿಗಾ ಇರಿಸಲು ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯದ ಸ್ಥಿತಿಯಲ್ಲಿ ರಾಜ್ಯಕ್ಕೆ ರೆಮ್‌ಡೆಸಿವಿರ್ ಕೊರತೆ ಕಾಣಿಸಿಕೊಳ್ಳಬಾರದಿತ್ತು. ಆದರೆ, ಅದಕ್ಕೆ ವ್ಯತಿರಿಕ್ತವಾಗಿ ಎಲ್ಲೆಡೆ ಕಾಳಸಂತೆಯಲ್ಲಿ ಈ ಔಷಧಿ ಮಾರಾಟ ಆಗುತ್ತಿರುವುದು ಕಂಡುಬರುತ್ತಿದೆ.

ನೇರವಾಗಿ ಕೇಳಿದರೆ ಸಿಗದ, ಆದರೆ ಕಾಳಸಂತೆಯಲ್ಲಿ 15,000-25000 ರೂಗಳ ಮೊತ್ತದಲ್ಲಿ ಸಿಗುವ ರೆಮ್‌ಡೆಸಿವಿರ್ ಮಾರುಕಟ್ಟೆಯನ್ನು ಗಮನಿಸಿದಾಗ, ಸದ್ಯಕ್ಕೆ ಎರಡು ರೀತಿಯಲ್ಲಿ ಅವು ಕಾಳಸಂತೆಯಲ್ಲಿ ಲಭ್ಯವಿರುವುದು ಕಾಣಿಸುತ್ತದೆ. ಈ ಔಷಧಿಯ ಮೇಲೆ ಸರ್ಕಾರದ ಹದ್ದಿನ ಕಣ್ಣು ಇದ್ದರೂ ಕಾಳಸಂತೆಯಲ್ಲಿ ಹೇಗೆ ಲಭ್ಯವಾಗುತ್ತಿದೆ ಎಂಬುದನ್ನು ಪರಿಶೀಲಿಸಿದಾಗ ಕಂಡುಬಂದದ್ದು ಇಷ್ಟು:

ವೈದ್ಯ ರಣಹದ್ದುಗಳು

ಸರ್ಕಾರ ರೆಮ್‌ಡೆಸಿವಿರ್ ಮಾರುಕಟ್ಟೆಯ ಮೇಲೆ ನಿಯಂತ್ರಣ ಇರಿಸುವುದಕ್ಕಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅವೇನೆಂದರೆ, ಖಾಸಗಿ-ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ, ಒಬ್ಬರು ಕೊರೊನಾ ರೋಗಿಗೆ ರೆಮ್‌ಡೆಸಿವಿರ್ ಔಷಧಿ ಅಗತ್ಯ ಇದೆ ಎಂಬುದನ್ನು ತಜ್ಞ ವೈದ್ಯರು ಅಥವಾ ಅರಿವಳಿಕೆ ತಜ್ಞರು ಲಿಖಿತವಾಗಿ ಪ್ರಮಾಣೀಕರಿಸಬೇಕು. ಇದಲ್ಲದೇ, ಪ್ರತಿಯೊಂದು ರೆಮ್‌ಡೆಸಿವಿರ್ ಚುಚ್ಚುಮದ್ದು ನೀಡಿದ ಬಳಿಕ ಅದರ ಸ್ಟಿಕರ್‌ಅನ್ನು ರೋಗಿಯ ಕೇಸ್ ಶೀಟಿನ ಮೇಲೆ ಹಚ್ಚಬೇಕು. ಆಗ, ರೆಮ್‌ಡೆಸಿವಿರ್ ದುರ್ಬಳಕೆ ಆಗುವುದಿಲ್ಲ ಎಂಬುದು ಸರ್ಕಾರದ ತರ್ಕ. ಇಷ್ಟೆಲ್ಲ ಬಿಗಿ ಬಂದೋಬಸ್ತ್ ಇದ್ದರೂ ರೆಮ್‌ಡೆಸಿವಿರ್ ಕಾಳಸಂತೆ ಮಾರುಕಟ್ಟೆಯನ್ನು ತಲುಪುವುದು ಹೇಗೆ?

ಇದು ಬಹಳ ಸರಳವಾದ ಸರ್ಕಾರಿ ಪೆದ್ದುತನದ ಮತ್ತು ವೈದ್ಯಕೀಯ ಜಗತ್ತಿನಲ್ಲಿರುವ ಕೆಲವು ಕರಿಕುರಿಗಳ ಅನಾವರಣವಾಗಿದೆ. ಬೆಣ್ಣೆಯಿಂದ ಕೂದಲನ್ನು ಎತ್ತಿ ಎಸೆಯುವ ನಾಜೂಕುತನದಲ್ಲೇ ಖಾಸಗಿ ಮತ್ತು ಕೆಲವೆಡೆ ಸರ್ಕಾರಿ ವೈದ್ಯರು ಇದನ್ನು ನಿರ್ವಹಿಸುತ್ತಿದ್ದಾರೆ. ಅದನ್ನು ಹಂತ ಹಂತವಾಗಿ ಹೀಗೆ ವಿವರಿಸಬಹುದು:
* ಒಬ್ಬ ಕೊರೊನಾ ರೋಗಿಗೆ ಹೆಚ್ಚೇನೂ ರೋಗಲಕ್ಷಣಗಳಿಲ್ಲದಿರುವಾಗಲೂ, ಆತ/ಆಕೆಗೆ ರೆಮ್‌ಡೆಸಿವಿರ್ ಖಂಡಿತಕ್ಕೂ ಅಗತ್ಯವಿಲ್ಲ ಎಂದು ಗೊತ್ತಿರುವಾಗಲೂ “ರೆಮ್‌ಡೆಸಿವಿರ್ ಚಿಕಿತ್ಸೆ ಅಗತ್ಯವಿದೆ ಎಂದು ಆ ರೋಗಿಯ ಕೇಸ್ ಶೀಟಿನಲ್ಲಿ ದಾಖಲಿಸಲಾಗುತ್ತದೆ.
* ಆ ರೋಗಿಗೆ ರೆಮ್‌ಡೆಸಿವಿರ್ ಚುಚ್ಚದಿದ್ದರೂ, ಪ್ರತಿಯೊಂದು ಚುಚ್ಚುಮದ್ದನ್ನು ಕೇಸ್ ಶೀಟಿನಲ್ಲಿ ದಾಖಲಿಸಿ, ಅದರ ಸ್ಟಿಕರ್‌ಅನ್ನು ಕೇಸ್ ಶೀಟಿಗೆ ಅಂಟಿಸಲಾಗುತ್ತದೆ.
* ಅಲ್ಲಿಂದ ಬಳಕೆಯಾಗದ ರೆಮ್‌ಡೆಸಿವಿರ್ ಚುಚ್ಚುಮದ್ದು ಬಾಟಲಿಗಳು ಆಸ್ಪತ್ರೆಯ ಆಯಕಟ್ಟಿನ ಜಾಗದ ಸಿಬ್ಬಂದಿಗಳ ಮೂಲಕ ಕಾಳಸಂತೆಕೋರರನ್ನು ತಲುಪುತ್ತದೆ.
* ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಯಾವುದಾದರೂ ರೋಗಿಗೆ ನಿಜಕ್ಕೂ ರೆಮ್‌ಡೆಸಿವಿರ್ ಚುಚ್ಚುಮದ್ದು ಬೇಕಾದಾಗ, ಚಿಕಿತ್ಸೆ ನಡೆಸುವ ವೈದ್ಯರು ಅಥವಾ ನಿಗಾ ಇರಿಸುವ ನೋಡಲ್ ಅಧಿಕಾರಿ, ಕಂಗಾಲಾಗಿ ಔಷಧಿಗೆ ಹುಡುಕಾಡುತ್ತಿರುವ ರೋಗಿಯ ಸಂಬಂಧಿಕರಿಗೆ ಮಹದುಪಕಾರ ಮಾಡುತ್ತಿರುವ ಪೋಸ್ ನೀಡಿ, ಈ ಕಾಳಸಂತೆಕೋರರ ಸಂಪರ್ಕ ನಂಬರ್‌ಗಳನ್ನು ಒದಗಿಸುತ್ತಾರೆ.
* ಕಾಳಸಂತೆಕೋರರು ತಾವು ಹೇಳಿದ ದರ ಸಿಕ್ಕಿದರೆ, ಈ ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ರೋಗಿಯ ಸಂಬಂಧಿಕರಿಗೆ ಒದಗಿಸುತ್ತಾರೆ. ತಮ್ಮ ಪ್ರೀತಿಪಾತ್ರರ ಬದುಕಿನ ಮುಂದೆ ಅವರಿಗೆ ಆ ಕ್ಷಣಕ್ಕೆ ಉಳಿದೆಲ್ಲ ಗೌಣವಾಗಿರುತ್ತದೆ.

ಎಲ್ಲ ಪರ್ಸೆಂಟೇಜ್ ವ್ಯವಹಾರ!
ಈ ಕಾಳಸಂತೆ ಆಟದಲ್ಲಿ ಆಸ್ಪತ್ರೆಯ ವೈದ್ಯರು ಮಾತ್ರವಲ್ಲದೇ ಇಲಾಖೆ, ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳಿಗೂ ಪಾಲಿರುತ್ತದೆ ಎಂದು ಹೇಳಲಾಗಿದೆ. ಇಷ್ಟು ಮಾತ್ರವಲ್ಲದೇ ಆಂಬ್ಯುಲೆನ್ಸ್ ಸೇವೆಗಳಲ್ಲಿ, ಬೇರೆ ದೂರದ ಸುಸಜ್ಜಿತ ಆಸ್ಪತ್ರೆಗಳಿಗೆ ರೆಫರಲ್‌ಗಳಲ್ಲೂ ಕಿಕ್ ಬ್ಯಾಕ್ ವ್ಯವಹಾರ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂತಹ ಸ್ಥಿತಿಯಲ್ಲೂ ಸರ್ಕಾರ ಇವನ್ನೆಲ್ಲ ಎಚ್ಚರದಿಂದ ಗಮನಿಸಿ ಕ್ರಮ ಕೈಗೊಳ್ಳದಿದ್ದರೆ, ಸ್ವತಃ ಸರ್ಕಾರದ ಮಟ್ಟದಲ್ಲೇ ಈ ಗೋಲ್‌ಮಾಲ್ ನಡೆಯುತ್ತಿದೆ ಎಂದೇ ಸಾರ್ವಜನಿಕರು ಊಹಿಸಿಕೊಳ್ಳಬೇಕಾಗುತ್ತದೆ.

– ವಿಶೇಷ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...