Homeನ್ಯಾಯ ಪಥರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

ರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

- Advertisement -
- Advertisement -

ಕೊರೊನಾ ಚಿಕಿತ್ಸೆಯಲ್ಲಿ ರೆಮ್‌ಡೆಸಿವಿರ್ “ಜೀವರಕ್ಷಕ” ಔಷಧಿಯೇನಲ್ಲ. ಹೆಚ್ಚೆಂದರೆ ಮಧ್ಯಮ ತೀವ್ರತೆಯ ರೋಗ ಇರುವವರಲ್ಲಿ ಅದು ಉಪಕಾರ ಮಾಡೀತು ಎಂದು ವೈದ್ಯಕೀಯ ಪರಿಣತರು ಮತ್ತೆ ಮತ್ತೆ ಹೇಳುತ್ತಿದ್ದರೂ, ಆ ಔಷಧಿಯ ಪ್ರಚಾರ-ಪ್ರಸಾರ ಭರಾಟೆ ಹಾಗೂ ಅದಕ್ಕೆ ಪ್ರಭುತ್ವದ ಹಿನ್ನೆಲೆ ಸಂಗೀತಗಳನ್ನು ಗಮನಿಸಿದಾಗ ಇದೆಲ್ಲ ಒಂದು ಉದ್ದೇಶಪೂರ್ವಕ ’ಸ್ಕ್ರಿಪ್ಟೆಡ್ ನಾಟಕದ ಒಂದು ಭಾಗ ಅನ್ನಿಸುವುದು ಸುಳ್ಳಲ್ಲ.

ರಾಜ್ಯದಲ್ಲಿ ರೆಮ್‌ಡೆಸಿವಿರ್ ಸರಬರಾಜಿನ ಹೊಣೆ ಹೊತ್ತಿರುವುದು ರಾಜ್ಯಸರ್ಕಾರದ ಅಧೀನದಲ್ಲೇ ಇರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST). ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆಯು ಎರಡನೇ ಅಲೆಗೆ ಹೆಚ್ಚ್ಚಾಗುತ್ತಾ ಹೋದಂತೆ, ರೆಮ್‌ಡೆಸಿವಿರ್ ಬೇಡಿಕೆ ಹೆಚ್ಚಾಗುತ್ತಾ ಹೋಗಿದೆ. ಈ ಏರುತ್ತಿರುವ ಬೇಡಿಕೆಯನ್ನು ನಿಭಾಯಿಸಲು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 21 ಏಪ್ರಿಲ್‌ನಿಂದ 30 ಏಪ್ರಿಲ್ ನಡುವೆ ಬಳಕೆಗಾಗಿ 1,22,000 ವಿಯಾಲ್ ರೆಮ್‌ಡೆಸಿವಿರ್ ಔಷಧಿ ಮಂಜೂರಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರು ಏಪ್ರಿಲ್ 24ರಂದು ಟ್ವೀಟ್ ಮಾಡಿದ್ದರು. ಇದಲ್ಲದೆ ಏಪ್ರಿಲ್21ರಂದು, ರೆಮ್‌ಡೆಸಿವಿರ್ ಮತ್ತು ಆಕ್ಸಿಜನ್ ಬೇಡಿಕೆ/ಲಭ್ಯತೆಯನ್ನು ನಿರ್ವಹಿಸಲು ವಾರ್ ರೂಂ ರಚಿಸಿ 24/7ಕೆಲಸ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿತ್ತು. ಏಪ್ರಿಲ್ 17ರಂದು ರಾಜ್ಯದೆಲ್ಲೆಡೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ರೆಮ್‌ಡೆಸಿವಿರ್ ವಿತರಣೆಯ ಮೇಲೆ ನಿಗಾ ಇರಿಸಲು ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯದ ಸ್ಥಿತಿಯಲ್ಲಿ ರಾಜ್ಯಕ್ಕೆ ರೆಮ್‌ಡೆಸಿವಿರ್ ಕೊರತೆ ಕಾಣಿಸಿಕೊಳ್ಳಬಾರದಿತ್ತು. ಆದರೆ, ಅದಕ್ಕೆ ವ್ಯತಿರಿಕ್ತವಾಗಿ ಎಲ್ಲೆಡೆ ಕಾಳಸಂತೆಯಲ್ಲಿ ಈ ಔಷಧಿ ಮಾರಾಟ ಆಗುತ್ತಿರುವುದು ಕಂಡುಬರುತ್ತಿದೆ.

ನೇರವಾಗಿ ಕೇಳಿದರೆ ಸಿಗದ, ಆದರೆ ಕಾಳಸಂತೆಯಲ್ಲಿ 15,000-25000 ರೂಗಳ ಮೊತ್ತದಲ್ಲಿ ಸಿಗುವ ರೆಮ್‌ಡೆಸಿವಿರ್ ಮಾರುಕಟ್ಟೆಯನ್ನು ಗಮನಿಸಿದಾಗ, ಸದ್ಯಕ್ಕೆ ಎರಡು ರೀತಿಯಲ್ಲಿ ಅವು ಕಾಳಸಂತೆಯಲ್ಲಿ ಲಭ್ಯವಿರುವುದು ಕಾಣಿಸುತ್ತದೆ. ಈ ಔಷಧಿಯ ಮೇಲೆ ಸರ್ಕಾರದ ಹದ್ದಿನ ಕಣ್ಣು ಇದ್ದರೂ ಕಾಳಸಂತೆಯಲ್ಲಿ ಹೇಗೆ ಲಭ್ಯವಾಗುತ್ತಿದೆ ಎಂಬುದನ್ನು ಪರಿಶೀಲಿಸಿದಾಗ ಕಂಡುಬಂದದ್ದು ಇಷ್ಟು:

ವೈದ್ಯ ರಣಹದ್ದುಗಳು

ಸರ್ಕಾರ ರೆಮ್‌ಡೆಸಿವಿರ್ ಮಾರುಕಟ್ಟೆಯ ಮೇಲೆ ನಿಯಂತ್ರಣ ಇರಿಸುವುದಕ್ಕಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅವೇನೆಂದರೆ, ಖಾಸಗಿ-ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ, ಒಬ್ಬರು ಕೊರೊನಾ ರೋಗಿಗೆ ರೆಮ್‌ಡೆಸಿವಿರ್ ಔಷಧಿ ಅಗತ್ಯ ಇದೆ ಎಂಬುದನ್ನು ತಜ್ಞ ವೈದ್ಯರು ಅಥವಾ ಅರಿವಳಿಕೆ ತಜ್ಞರು ಲಿಖಿತವಾಗಿ ಪ್ರಮಾಣೀಕರಿಸಬೇಕು. ಇದಲ್ಲದೇ, ಪ್ರತಿಯೊಂದು ರೆಮ್‌ಡೆಸಿವಿರ್ ಚುಚ್ಚುಮದ್ದು ನೀಡಿದ ಬಳಿಕ ಅದರ ಸ್ಟಿಕರ್‌ಅನ್ನು ರೋಗಿಯ ಕೇಸ್ ಶೀಟಿನ ಮೇಲೆ ಹಚ್ಚಬೇಕು. ಆಗ, ರೆಮ್‌ಡೆಸಿವಿರ್ ದುರ್ಬಳಕೆ ಆಗುವುದಿಲ್ಲ ಎಂಬುದು ಸರ್ಕಾರದ ತರ್ಕ. ಇಷ್ಟೆಲ್ಲ ಬಿಗಿ ಬಂದೋಬಸ್ತ್ ಇದ್ದರೂ ರೆಮ್‌ಡೆಸಿವಿರ್ ಕಾಳಸಂತೆ ಮಾರುಕಟ್ಟೆಯನ್ನು ತಲುಪುವುದು ಹೇಗೆ?

ಇದು ಬಹಳ ಸರಳವಾದ ಸರ್ಕಾರಿ ಪೆದ್ದುತನದ ಮತ್ತು ವೈದ್ಯಕೀಯ ಜಗತ್ತಿನಲ್ಲಿರುವ ಕೆಲವು ಕರಿಕುರಿಗಳ ಅನಾವರಣವಾಗಿದೆ. ಬೆಣ್ಣೆಯಿಂದ ಕೂದಲನ್ನು ಎತ್ತಿ ಎಸೆಯುವ ನಾಜೂಕುತನದಲ್ಲೇ ಖಾಸಗಿ ಮತ್ತು ಕೆಲವೆಡೆ ಸರ್ಕಾರಿ ವೈದ್ಯರು ಇದನ್ನು ನಿರ್ವಹಿಸುತ್ತಿದ್ದಾರೆ. ಅದನ್ನು ಹಂತ ಹಂತವಾಗಿ ಹೀಗೆ ವಿವರಿಸಬಹುದು:
* ಒಬ್ಬ ಕೊರೊನಾ ರೋಗಿಗೆ ಹೆಚ್ಚೇನೂ ರೋಗಲಕ್ಷಣಗಳಿಲ್ಲದಿರುವಾಗಲೂ, ಆತ/ಆಕೆಗೆ ರೆಮ್‌ಡೆಸಿವಿರ್ ಖಂಡಿತಕ್ಕೂ ಅಗತ್ಯವಿಲ್ಲ ಎಂದು ಗೊತ್ತಿರುವಾಗಲೂ “ರೆಮ್‌ಡೆಸಿವಿರ್ ಚಿಕಿತ್ಸೆ ಅಗತ್ಯವಿದೆ ಎಂದು ಆ ರೋಗಿಯ ಕೇಸ್ ಶೀಟಿನಲ್ಲಿ ದಾಖಲಿಸಲಾಗುತ್ತದೆ.
* ಆ ರೋಗಿಗೆ ರೆಮ್‌ಡೆಸಿವಿರ್ ಚುಚ್ಚದಿದ್ದರೂ, ಪ್ರತಿಯೊಂದು ಚುಚ್ಚುಮದ್ದನ್ನು ಕೇಸ್ ಶೀಟಿನಲ್ಲಿ ದಾಖಲಿಸಿ, ಅದರ ಸ್ಟಿಕರ್‌ಅನ್ನು ಕೇಸ್ ಶೀಟಿಗೆ ಅಂಟಿಸಲಾಗುತ್ತದೆ.
* ಅಲ್ಲಿಂದ ಬಳಕೆಯಾಗದ ರೆಮ್‌ಡೆಸಿವಿರ್ ಚುಚ್ಚುಮದ್ದು ಬಾಟಲಿಗಳು ಆಸ್ಪತ್ರೆಯ ಆಯಕಟ್ಟಿನ ಜಾಗದ ಸಿಬ್ಬಂದಿಗಳ ಮೂಲಕ ಕಾಳಸಂತೆಕೋರರನ್ನು ತಲುಪುತ್ತದೆ.
* ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಯಾವುದಾದರೂ ರೋಗಿಗೆ ನಿಜಕ್ಕೂ ರೆಮ್‌ಡೆಸಿವಿರ್ ಚುಚ್ಚುಮದ್ದು ಬೇಕಾದಾಗ, ಚಿಕಿತ್ಸೆ ನಡೆಸುವ ವೈದ್ಯರು ಅಥವಾ ನಿಗಾ ಇರಿಸುವ ನೋಡಲ್ ಅಧಿಕಾರಿ, ಕಂಗಾಲಾಗಿ ಔಷಧಿಗೆ ಹುಡುಕಾಡುತ್ತಿರುವ ರೋಗಿಯ ಸಂಬಂಧಿಕರಿಗೆ ಮಹದುಪಕಾರ ಮಾಡುತ್ತಿರುವ ಪೋಸ್ ನೀಡಿ, ಈ ಕಾಳಸಂತೆಕೋರರ ಸಂಪರ್ಕ ನಂಬರ್‌ಗಳನ್ನು ಒದಗಿಸುತ್ತಾರೆ.
* ಕಾಳಸಂತೆಕೋರರು ತಾವು ಹೇಳಿದ ದರ ಸಿಕ್ಕಿದರೆ, ಈ ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ರೋಗಿಯ ಸಂಬಂಧಿಕರಿಗೆ ಒದಗಿಸುತ್ತಾರೆ. ತಮ್ಮ ಪ್ರೀತಿಪಾತ್ರರ ಬದುಕಿನ ಮುಂದೆ ಅವರಿಗೆ ಆ ಕ್ಷಣಕ್ಕೆ ಉಳಿದೆಲ್ಲ ಗೌಣವಾಗಿರುತ್ತದೆ.

ಎಲ್ಲ ಪರ್ಸೆಂಟೇಜ್ ವ್ಯವಹಾರ!
ಈ ಕಾಳಸಂತೆ ಆಟದಲ್ಲಿ ಆಸ್ಪತ್ರೆಯ ವೈದ್ಯರು ಮಾತ್ರವಲ್ಲದೇ ಇಲಾಖೆ, ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳಿಗೂ ಪಾಲಿರುತ್ತದೆ ಎಂದು ಹೇಳಲಾಗಿದೆ. ಇಷ್ಟು ಮಾತ್ರವಲ್ಲದೇ ಆಂಬ್ಯುಲೆನ್ಸ್ ಸೇವೆಗಳಲ್ಲಿ, ಬೇರೆ ದೂರದ ಸುಸಜ್ಜಿತ ಆಸ್ಪತ್ರೆಗಳಿಗೆ ರೆಫರಲ್‌ಗಳಲ್ಲೂ ಕಿಕ್ ಬ್ಯಾಕ್ ವ್ಯವಹಾರ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂತಹ ಸ್ಥಿತಿಯಲ್ಲೂ ಸರ್ಕಾರ ಇವನ್ನೆಲ್ಲ ಎಚ್ಚರದಿಂದ ಗಮನಿಸಿ ಕ್ರಮ ಕೈಗೊಳ್ಳದಿದ್ದರೆ, ಸ್ವತಃ ಸರ್ಕಾರದ ಮಟ್ಟದಲ್ಲೇ ಈ ಗೋಲ್‌ಮಾಲ್ ನಡೆಯುತ್ತಿದೆ ಎಂದೇ ಸಾರ್ವಜನಿಕರು ಊಹಿಸಿಕೊಳ್ಳಬೇಕಾಗುತ್ತದೆ.

– ವಿಶೇಷ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...