Homeನ್ಯಾಯ ಪಥರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

ರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

- Advertisement -
- Advertisement -

ಕೊರೊನಾ ಚಿಕಿತ್ಸೆಯಲ್ಲಿ ರೆಮ್‌ಡೆಸಿವಿರ್ “ಜೀವರಕ್ಷಕ” ಔಷಧಿಯೇನಲ್ಲ. ಹೆಚ್ಚೆಂದರೆ ಮಧ್ಯಮ ತೀವ್ರತೆಯ ರೋಗ ಇರುವವರಲ್ಲಿ ಅದು ಉಪಕಾರ ಮಾಡೀತು ಎಂದು ವೈದ್ಯಕೀಯ ಪರಿಣತರು ಮತ್ತೆ ಮತ್ತೆ ಹೇಳುತ್ತಿದ್ದರೂ, ಆ ಔಷಧಿಯ ಪ್ರಚಾರ-ಪ್ರಸಾರ ಭರಾಟೆ ಹಾಗೂ ಅದಕ್ಕೆ ಪ್ರಭುತ್ವದ ಹಿನ್ನೆಲೆ ಸಂಗೀತಗಳನ್ನು ಗಮನಿಸಿದಾಗ ಇದೆಲ್ಲ ಒಂದು ಉದ್ದೇಶಪೂರ್ವಕ ’ಸ್ಕ್ರಿಪ್ಟೆಡ್ ನಾಟಕದ ಒಂದು ಭಾಗ ಅನ್ನಿಸುವುದು ಸುಳ್ಳಲ್ಲ.

ರಾಜ್ಯದಲ್ಲಿ ರೆಮ್‌ಡೆಸಿವಿರ್ ಸರಬರಾಜಿನ ಹೊಣೆ ಹೊತ್ತಿರುವುದು ರಾಜ್ಯಸರ್ಕಾರದ ಅಧೀನದಲ್ಲೇ ಇರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST). ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆಯು ಎರಡನೇ ಅಲೆಗೆ ಹೆಚ್ಚ್ಚಾಗುತ್ತಾ ಹೋದಂತೆ, ರೆಮ್‌ಡೆಸಿವಿರ್ ಬೇಡಿಕೆ ಹೆಚ್ಚಾಗುತ್ತಾ ಹೋಗಿದೆ. ಈ ಏರುತ್ತಿರುವ ಬೇಡಿಕೆಯನ್ನು ನಿಭಾಯಿಸಲು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 21 ಏಪ್ರಿಲ್‌ನಿಂದ 30 ಏಪ್ರಿಲ್ ನಡುವೆ ಬಳಕೆಗಾಗಿ 1,22,000 ವಿಯಾಲ್ ರೆಮ್‌ಡೆಸಿವಿರ್ ಔಷಧಿ ಮಂಜೂರಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರು ಏಪ್ರಿಲ್ 24ರಂದು ಟ್ವೀಟ್ ಮಾಡಿದ್ದರು. ಇದಲ್ಲದೆ ಏಪ್ರಿಲ್21ರಂದು, ರೆಮ್‌ಡೆಸಿವಿರ್ ಮತ್ತು ಆಕ್ಸಿಜನ್ ಬೇಡಿಕೆ/ಲಭ್ಯತೆಯನ್ನು ನಿರ್ವಹಿಸಲು ವಾರ್ ರೂಂ ರಚಿಸಿ 24/7ಕೆಲಸ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿತ್ತು. ಏಪ್ರಿಲ್ 17ರಂದು ರಾಜ್ಯದೆಲ್ಲೆಡೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ರೆಮ್‌ಡೆಸಿವಿರ್ ವಿತರಣೆಯ ಮೇಲೆ ನಿಗಾ ಇರಿಸಲು ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯದ ಸ್ಥಿತಿಯಲ್ಲಿ ರಾಜ್ಯಕ್ಕೆ ರೆಮ್‌ಡೆಸಿವಿರ್ ಕೊರತೆ ಕಾಣಿಸಿಕೊಳ್ಳಬಾರದಿತ್ತು. ಆದರೆ, ಅದಕ್ಕೆ ವ್ಯತಿರಿಕ್ತವಾಗಿ ಎಲ್ಲೆಡೆ ಕಾಳಸಂತೆಯಲ್ಲಿ ಈ ಔಷಧಿ ಮಾರಾಟ ಆಗುತ್ತಿರುವುದು ಕಂಡುಬರುತ್ತಿದೆ.

ನೇರವಾಗಿ ಕೇಳಿದರೆ ಸಿಗದ, ಆದರೆ ಕಾಳಸಂತೆಯಲ್ಲಿ 15,000-25000 ರೂಗಳ ಮೊತ್ತದಲ್ಲಿ ಸಿಗುವ ರೆಮ್‌ಡೆಸಿವಿರ್ ಮಾರುಕಟ್ಟೆಯನ್ನು ಗಮನಿಸಿದಾಗ, ಸದ್ಯಕ್ಕೆ ಎರಡು ರೀತಿಯಲ್ಲಿ ಅವು ಕಾಳಸಂತೆಯಲ್ಲಿ ಲಭ್ಯವಿರುವುದು ಕಾಣಿಸುತ್ತದೆ. ಈ ಔಷಧಿಯ ಮೇಲೆ ಸರ್ಕಾರದ ಹದ್ದಿನ ಕಣ್ಣು ಇದ್ದರೂ ಕಾಳಸಂತೆಯಲ್ಲಿ ಹೇಗೆ ಲಭ್ಯವಾಗುತ್ತಿದೆ ಎಂಬುದನ್ನು ಪರಿಶೀಲಿಸಿದಾಗ ಕಂಡುಬಂದದ್ದು ಇಷ್ಟು:

ವೈದ್ಯ ರಣಹದ್ದುಗಳು

ಸರ್ಕಾರ ರೆಮ್‌ಡೆಸಿವಿರ್ ಮಾರುಕಟ್ಟೆಯ ಮೇಲೆ ನಿಯಂತ್ರಣ ಇರಿಸುವುದಕ್ಕಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅವೇನೆಂದರೆ, ಖಾಸಗಿ-ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ, ಒಬ್ಬರು ಕೊರೊನಾ ರೋಗಿಗೆ ರೆಮ್‌ಡೆಸಿವಿರ್ ಔಷಧಿ ಅಗತ್ಯ ಇದೆ ಎಂಬುದನ್ನು ತಜ್ಞ ವೈದ್ಯರು ಅಥವಾ ಅರಿವಳಿಕೆ ತಜ್ಞರು ಲಿಖಿತವಾಗಿ ಪ್ರಮಾಣೀಕರಿಸಬೇಕು. ಇದಲ್ಲದೇ, ಪ್ರತಿಯೊಂದು ರೆಮ್‌ಡೆಸಿವಿರ್ ಚುಚ್ಚುಮದ್ದು ನೀಡಿದ ಬಳಿಕ ಅದರ ಸ್ಟಿಕರ್‌ಅನ್ನು ರೋಗಿಯ ಕೇಸ್ ಶೀಟಿನ ಮೇಲೆ ಹಚ್ಚಬೇಕು. ಆಗ, ರೆಮ್‌ಡೆಸಿವಿರ್ ದುರ್ಬಳಕೆ ಆಗುವುದಿಲ್ಲ ಎಂಬುದು ಸರ್ಕಾರದ ತರ್ಕ. ಇಷ್ಟೆಲ್ಲ ಬಿಗಿ ಬಂದೋಬಸ್ತ್ ಇದ್ದರೂ ರೆಮ್‌ಡೆಸಿವಿರ್ ಕಾಳಸಂತೆ ಮಾರುಕಟ್ಟೆಯನ್ನು ತಲುಪುವುದು ಹೇಗೆ?

ಇದು ಬಹಳ ಸರಳವಾದ ಸರ್ಕಾರಿ ಪೆದ್ದುತನದ ಮತ್ತು ವೈದ್ಯಕೀಯ ಜಗತ್ತಿನಲ್ಲಿರುವ ಕೆಲವು ಕರಿಕುರಿಗಳ ಅನಾವರಣವಾಗಿದೆ. ಬೆಣ್ಣೆಯಿಂದ ಕೂದಲನ್ನು ಎತ್ತಿ ಎಸೆಯುವ ನಾಜೂಕುತನದಲ್ಲೇ ಖಾಸಗಿ ಮತ್ತು ಕೆಲವೆಡೆ ಸರ್ಕಾರಿ ವೈದ್ಯರು ಇದನ್ನು ನಿರ್ವಹಿಸುತ್ತಿದ್ದಾರೆ. ಅದನ್ನು ಹಂತ ಹಂತವಾಗಿ ಹೀಗೆ ವಿವರಿಸಬಹುದು:
* ಒಬ್ಬ ಕೊರೊನಾ ರೋಗಿಗೆ ಹೆಚ್ಚೇನೂ ರೋಗಲಕ್ಷಣಗಳಿಲ್ಲದಿರುವಾಗಲೂ, ಆತ/ಆಕೆಗೆ ರೆಮ್‌ಡೆಸಿವಿರ್ ಖಂಡಿತಕ್ಕೂ ಅಗತ್ಯವಿಲ್ಲ ಎಂದು ಗೊತ್ತಿರುವಾಗಲೂ “ರೆಮ್‌ಡೆಸಿವಿರ್ ಚಿಕಿತ್ಸೆ ಅಗತ್ಯವಿದೆ ಎಂದು ಆ ರೋಗಿಯ ಕೇಸ್ ಶೀಟಿನಲ್ಲಿ ದಾಖಲಿಸಲಾಗುತ್ತದೆ.
* ಆ ರೋಗಿಗೆ ರೆಮ್‌ಡೆಸಿವಿರ್ ಚುಚ್ಚದಿದ್ದರೂ, ಪ್ರತಿಯೊಂದು ಚುಚ್ಚುಮದ್ದನ್ನು ಕೇಸ್ ಶೀಟಿನಲ್ಲಿ ದಾಖಲಿಸಿ, ಅದರ ಸ್ಟಿಕರ್‌ಅನ್ನು ಕೇಸ್ ಶೀಟಿಗೆ ಅಂಟಿಸಲಾಗುತ್ತದೆ.
* ಅಲ್ಲಿಂದ ಬಳಕೆಯಾಗದ ರೆಮ್‌ಡೆಸಿವಿರ್ ಚುಚ್ಚುಮದ್ದು ಬಾಟಲಿಗಳು ಆಸ್ಪತ್ರೆಯ ಆಯಕಟ್ಟಿನ ಜಾಗದ ಸಿಬ್ಬಂದಿಗಳ ಮೂಲಕ ಕಾಳಸಂತೆಕೋರರನ್ನು ತಲುಪುತ್ತದೆ.
* ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಯಾವುದಾದರೂ ರೋಗಿಗೆ ನಿಜಕ್ಕೂ ರೆಮ್‌ಡೆಸಿವಿರ್ ಚುಚ್ಚುಮದ್ದು ಬೇಕಾದಾಗ, ಚಿಕಿತ್ಸೆ ನಡೆಸುವ ವೈದ್ಯರು ಅಥವಾ ನಿಗಾ ಇರಿಸುವ ನೋಡಲ್ ಅಧಿಕಾರಿ, ಕಂಗಾಲಾಗಿ ಔಷಧಿಗೆ ಹುಡುಕಾಡುತ್ತಿರುವ ರೋಗಿಯ ಸಂಬಂಧಿಕರಿಗೆ ಮಹದುಪಕಾರ ಮಾಡುತ್ತಿರುವ ಪೋಸ್ ನೀಡಿ, ಈ ಕಾಳಸಂತೆಕೋರರ ಸಂಪರ್ಕ ನಂಬರ್‌ಗಳನ್ನು ಒದಗಿಸುತ್ತಾರೆ.
* ಕಾಳಸಂತೆಕೋರರು ತಾವು ಹೇಳಿದ ದರ ಸಿಕ್ಕಿದರೆ, ಈ ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ರೋಗಿಯ ಸಂಬಂಧಿಕರಿಗೆ ಒದಗಿಸುತ್ತಾರೆ. ತಮ್ಮ ಪ್ರೀತಿಪಾತ್ರರ ಬದುಕಿನ ಮುಂದೆ ಅವರಿಗೆ ಆ ಕ್ಷಣಕ್ಕೆ ಉಳಿದೆಲ್ಲ ಗೌಣವಾಗಿರುತ್ತದೆ.

ಎಲ್ಲ ಪರ್ಸೆಂಟೇಜ್ ವ್ಯವಹಾರ!
ಈ ಕಾಳಸಂತೆ ಆಟದಲ್ಲಿ ಆಸ್ಪತ್ರೆಯ ವೈದ್ಯರು ಮಾತ್ರವಲ್ಲದೇ ಇಲಾಖೆ, ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳಿಗೂ ಪಾಲಿರುತ್ತದೆ ಎಂದು ಹೇಳಲಾಗಿದೆ. ಇಷ್ಟು ಮಾತ್ರವಲ್ಲದೇ ಆಂಬ್ಯುಲೆನ್ಸ್ ಸೇವೆಗಳಲ್ಲಿ, ಬೇರೆ ದೂರದ ಸುಸಜ್ಜಿತ ಆಸ್ಪತ್ರೆಗಳಿಗೆ ರೆಫರಲ್‌ಗಳಲ್ಲೂ ಕಿಕ್ ಬ್ಯಾಕ್ ವ್ಯವಹಾರ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂತಹ ಸ್ಥಿತಿಯಲ್ಲೂ ಸರ್ಕಾರ ಇವನ್ನೆಲ್ಲ ಎಚ್ಚರದಿಂದ ಗಮನಿಸಿ ಕ್ರಮ ಕೈಗೊಳ್ಳದಿದ್ದರೆ, ಸ್ವತಃ ಸರ್ಕಾರದ ಮಟ್ಟದಲ್ಲೇ ಈ ಗೋಲ್‌ಮಾಲ್ ನಡೆಯುತ್ತಿದೆ ಎಂದೇ ಸಾರ್ವಜನಿಕರು ಊಹಿಸಿಕೊಳ್ಳಬೇಕಾಗುತ್ತದೆ.

– ವಿಶೇಷ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...

ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ

ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಹಿಂದುತ್ವ ಗುಂಪುಗಳು ಅಡ್ಡಿಪಡಿಸುತ್ತಿವೆ ಎಂಬ ಆರೋಪದ ಕುರಿತು ಕೇರಳದ ಶಿಕ್ಷಣ ಸಚಿವ ಶಿವನ್ ಕುಟ್ಟಿ ಭಾನುವಾರ (ಡಿ.22) ಪ್ರತಿಕ್ರಿಯಿಸಿದ್ದು, ಶಿಕ್ಷಣ ಸಂಸ್ಥೆಗಳು ಕೋಮುವಾದದ ಪ್ರಯೋಗ ಶಾಲೆಗಳಾಗಲು ಅವಕಾಶ ನೀಡುವುದಿಲ್ಲ...

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ...

ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು 'ನ್ಯೂ ಇಂಡಿಯನ್...

ಬಾಂಗ್ಲಾ ಉದ್ವಿಗ್ನತೆ: ಮತ್ತೊಬ್ಬ ಯುವ ನಾಯಕ ಮುಹಮ್ಮದ್ ಮೊತಾಲೆಬ್ ಸಿಕ್ದಾರ್ ಮೇಲೆ ಗುಂಡಿನ ದಾಳಿ 

ದೇಶದಲ್ಲಿ ವ್ಯಾಪಕ ಅಶಾಂತಿಗೆ ಕಾರಣವಾದ ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಬಿನ್ ಹಾದಿ ಅವರ ಮರಣದ ಕೆಲವು ದಿನಗಳ ನಂತರ, ಸೋಮವಾರ ಮತ್ತೊಬ್ಬ ನಾಯಕನ ಮೇಲೆ ಗುಂಡು ಹಾರಿಸಲಾಯಿತು. ಗಾಯಗೊಂಡ...

ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

ಕೇರಳದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ಛತ್ತೀಸ್‌ಗಢದ ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯರ್ತರು ಭಾಗಿಯಾಗಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ನಾಯಕರು ಆರೋಪಿಸಿದ್ದಾರೆ. ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ ರಾಜೇಶ್ ಆರಂಭದಲ್ಲಿ ಈ ಆರೋಪ ಮಾಡಿದ್ದು,...

‘ಹಿಂದೂಸ್ತಾನಿ ಅವಾಮ್ ಮೋರ್ಚಾಕ್ಕೆ ರಾಜ್ಯಸಭಾ ಸೀಟು ನೀಡಿ’: ದಲಿತ ನಾಯಕ ಜಿತನ್ ರಾಮ್ ಮಾಂಝಿ ಬೇಡಿಕೆ

ಬಿಹಾರ: ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಉಸ್ತುವಾರಿ ಜಿತನ್ ರಾಮ್ ಮಾಂಝಿ ಅವರು 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಹಾರದಲ್ಲಿ NDA ಮೈತ್ರಿಕೂಟದ ಭಾಗವಾಗಿ ನೀಡಿದ ಭರವಸೆಗಳನ್ನು ನೆನಪಿಸಿಕೊಂಡು...

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ...