Homeನ್ಯಾಯ ಪಥರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

ರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

- Advertisement -
- Advertisement -

ಕೊರೊನಾ ಚಿಕಿತ್ಸೆಯಲ್ಲಿ ರೆಮ್‌ಡೆಸಿವಿರ್ “ಜೀವರಕ್ಷಕ” ಔಷಧಿಯೇನಲ್ಲ. ಹೆಚ್ಚೆಂದರೆ ಮಧ್ಯಮ ತೀವ್ರತೆಯ ರೋಗ ಇರುವವರಲ್ಲಿ ಅದು ಉಪಕಾರ ಮಾಡೀತು ಎಂದು ವೈದ್ಯಕೀಯ ಪರಿಣತರು ಮತ್ತೆ ಮತ್ತೆ ಹೇಳುತ್ತಿದ್ದರೂ, ಆ ಔಷಧಿಯ ಪ್ರಚಾರ-ಪ್ರಸಾರ ಭರಾಟೆ ಹಾಗೂ ಅದಕ್ಕೆ ಪ್ರಭುತ್ವದ ಹಿನ್ನೆಲೆ ಸಂಗೀತಗಳನ್ನು ಗಮನಿಸಿದಾಗ ಇದೆಲ್ಲ ಒಂದು ಉದ್ದೇಶಪೂರ್ವಕ ’ಸ್ಕ್ರಿಪ್ಟೆಡ್ ನಾಟಕದ ಒಂದು ಭಾಗ ಅನ್ನಿಸುವುದು ಸುಳ್ಳಲ್ಲ.

ರಾಜ್ಯದಲ್ಲಿ ರೆಮ್‌ಡೆಸಿವಿರ್ ಸರಬರಾಜಿನ ಹೊಣೆ ಹೊತ್ತಿರುವುದು ರಾಜ್ಯಸರ್ಕಾರದ ಅಧೀನದಲ್ಲೇ ಇರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST). ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆಯು ಎರಡನೇ ಅಲೆಗೆ ಹೆಚ್ಚ್ಚಾಗುತ್ತಾ ಹೋದಂತೆ, ರೆಮ್‌ಡೆಸಿವಿರ್ ಬೇಡಿಕೆ ಹೆಚ್ಚಾಗುತ್ತಾ ಹೋಗಿದೆ. ಈ ಏರುತ್ತಿರುವ ಬೇಡಿಕೆಯನ್ನು ನಿಭಾಯಿಸಲು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 21 ಏಪ್ರಿಲ್‌ನಿಂದ 30 ಏಪ್ರಿಲ್ ನಡುವೆ ಬಳಕೆಗಾಗಿ 1,22,000 ವಿಯಾಲ್ ರೆಮ್‌ಡೆಸಿವಿರ್ ಔಷಧಿ ಮಂಜೂರಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರು ಏಪ್ರಿಲ್ 24ರಂದು ಟ್ವೀಟ್ ಮಾಡಿದ್ದರು. ಇದಲ್ಲದೆ ಏಪ್ರಿಲ್21ರಂದು, ರೆಮ್‌ಡೆಸಿವಿರ್ ಮತ್ತು ಆಕ್ಸಿಜನ್ ಬೇಡಿಕೆ/ಲಭ್ಯತೆಯನ್ನು ನಿರ್ವಹಿಸಲು ವಾರ್ ರೂಂ ರಚಿಸಿ 24/7ಕೆಲಸ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿತ್ತು. ಏಪ್ರಿಲ್ 17ರಂದು ರಾಜ್ಯದೆಲ್ಲೆಡೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ರೆಮ್‌ಡೆಸಿವಿರ್ ವಿತರಣೆಯ ಮೇಲೆ ನಿಗಾ ಇರಿಸಲು ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯದ ಸ್ಥಿತಿಯಲ್ಲಿ ರಾಜ್ಯಕ್ಕೆ ರೆಮ್‌ಡೆಸಿವಿರ್ ಕೊರತೆ ಕಾಣಿಸಿಕೊಳ್ಳಬಾರದಿತ್ತು. ಆದರೆ, ಅದಕ್ಕೆ ವ್ಯತಿರಿಕ್ತವಾಗಿ ಎಲ್ಲೆಡೆ ಕಾಳಸಂತೆಯಲ್ಲಿ ಈ ಔಷಧಿ ಮಾರಾಟ ಆಗುತ್ತಿರುವುದು ಕಂಡುಬರುತ್ತಿದೆ.

ನೇರವಾಗಿ ಕೇಳಿದರೆ ಸಿಗದ, ಆದರೆ ಕಾಳಸಂತೆಯಲ್ಲಿ 15,000-25000 ರೂಗಳ ಮೊತ್ತದಲ್ಲಿ ಸಿಗುವ ರೆಮ್‌ಡೆಸಿವಿರ್ ಮಾರುಕಟ್ಟೆಯನ್ನು ಗಮನಿಸಿದಾಗ, ಸದ್ಯಕ್ಕೆ ಎರಡು ರೀತಿಯಲ್ಲಿ ಅವು ಕಾಳಸಂತೆಯಲ್ಲಿ ಲಭ್ಯವಿರುವುದು ಕಾಣಿಸುತ್ತದೆ. ಈ ಔಷಧಿಯ ಮೇಲೆ ಸರ್ಕಾರದ ಹದ್ದಿನ ಕಣ್ಣು ಇದ್ದರೂ ಕಾಳಸಂತೆಯಲ್ಲಿ ಹೇಗೆ ಲಭ್ಯವಾಗುತ್ತಿದೆ ಎಂಬುದನ್ನು ಪರಿಶೀಲಿಸಿದಾಗ ಕಂಡುಬಂದದ್ದು ಇಷ್ಟು:

ವೈದ್ಯ ರಣಹದ್ದುಗಳು

ಸರ್ಕಾರ ರೆಮ್‌ಡೆಸಿವಿರ್ ಮಾರುಕಟ್ಟೆಯ ಮೇಲೆ ನಿಯಂತ್ರಣ ಇರಿಸುವುದಕ್ಕಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅವೇನೆಂದರೆ, ಖಾಸಗಿ-ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ, ಒಬ್ಬರು ಕೊರೊನಾ ರೋಗಿಗೆ ರೆಮ್‌ಡೆಸಿವಿರ್ ಔಷಧಿ ಅಗತ್ಯ ಇದೆ ಎಂಬುದನ್ನು ತಜ್ಞ ವೈದ್ಯರು ಅಥವಾ ಅರಿವಳಿಕೆ ತಜ್ಞರು ಲಿಖಿತವಾಗಿ ಪ್ರಮಾಣೀಕರಿಸಬೇಕು. ಇದಲ್ಲದೇ, ಪ್ರತಿಯೊಂದು ರೆಮ್‌ಡೆಸಿವಿರ್ ಚುಚ್ಚುಮದ್ದು ನೀಡಿದ ಬಳಿಕ ಅದರ ಸ್ಟಿಕರ್‌ಅನ್ನು ರೋಗಿಯ ಕೇಸ್ ಶೀಟಿನ ಮೇಲೆ ಹಚ್ಚಬೇಕು. ಆಗ, ರೆಮ್‌ಡೆಸಿವಿರ್ ದುರ್ಬಳಕೆ ಆಗುವುದಿಲ್ಲ ಎಂಬುದು ಸರ್ಕಾರದ ತರ್ಕ. ಇಷ್ಟೆಲ್ಲ ಬಿಗಿ ಬಂದೋಬಸ್ತ್ ಇದ್ದರೂ ರೆಮ್‌ಡೆಸಿವಿರ್ ಕಾಳಸಂತೆ ಮಾರುಕಟ್ಟೆಯನ್ನು ತಲುಪುವುದು ಹೇಗೆ?

ಇದು ಬಹಳ ಸರಳವಾದ ಸರ್ಕಾರಿ ಪೆದ್ದುತನದ ಮತ್ತು ವೈದ್ಯಕೀಯ ಜಗತ್ತಿನಲ್ಲಿರುವ ಕೆಲವು ಕರಿಕುರಿಗಳ ಅನಾವರಣವಾಗಿದೆ. ಬೆಣ್ಣೆಯಿಂದ ಕೂದಲನ್ನು ಎತ್ತಿ ಎಸೆಯುವ ನಾಜೂಕುತನದಲ್ಲೇ ಖಾಸಗಿ ಮತ್ತು ಕೆಲವೆಡೆ ಸರ್ಕಾರಿ ವೈದ್ಯರು ಇದನ್ನು ನಿರ್ವಹಿಸುತ್ತಿದ್ದಾರೆ. ಅದನ್ನು ಹಂತ ಹಂತವಾಗಿ ಹೀಗೆ ವಿವರಿಸಬಹುದು:
* ಒಬ್ಬ ಕೊರೊನಾ ರೋಗಿಗೆ ಹೆಚ್ಚೇನೂ ರೋಗಲಕ್ಷಣಗಳಿಲ್ಲದಿರುವಾಗಲೂ, ಆತ/ಆಕೆಗೆ ರೆಮ್‌ಡೆಸಿವಿರ್ ಖಂಡಿತಕ್ಕೂ ಅಗತ್ಯವಿಲ್ಲ ಎಂದು ಗೊತ್ತಿರುವಾಗಲೂ “ರೆಮ್‌ಡೆಸಿವಿರ್ ಚಿಕಿತ್ಸೆ ಅಗತ್ಯವಿದೆ ಎಂದು ಆ ರೋಗಿಯ ಕೇಸ್ ಶೀಟಿನಲ್ಲಿ ದಾಖಲಿಸಲಾಗುತ್ತದೆ.
* ಆ ರೋಗಿಗೆ ರೆಮ್‌ಡೆಸಿವಿರ್ ಚುಚ್ಚದಿದ್ದರೂ, ಪ್ರತಿಯೊಂದು ಚುಚ್ಚುಮದ್ದನ್ನು ಕೇಸ್ ಶೀಟಿನಲ್ಲಿ ದಾಖಲಿಸಿ, ಅದರ ಸ್ಟಿಕರ್‌ಅನ್ನು ಕೇಸ್ ಶೀಟಿಗೆ ಅಂಟಿಸಲಾಗುತ್ತದೆ.
* ಅಲ್ಲಿಂದ ಬಳಕೆಯಾಗದ ರೆಮ್‌ಡೆಸಿವಿರ್ ಚುಚ್ಚುಮದ್ದು ಬಾಟಲಿಗಳು ಆಸ್ಪತ್ರೆಯ ಆಯಕಟ್ಟಿನ ಜಾಗದ ಸಿಬ್ಬಂದಿಗಳ ಮೂಲಕ ಕಾಳಸಂತೆಕೋರರನ್ನು ತಲುಪುತ್ತದೆ.
* ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಯಾವುದಾದರೂ ರೋಗಿಗೆ ನಿಜಕ್ಕೂ ರೆಮ್‌ಡೆಸಿವಿರ್ ಚುಚ್ಚುಮದ್ದು ಬೇಕಾದಾಗ, ಚಿಕಿತ್ಸೆ ನಡೆಸುವ ವೈದ್ಯರು ಅಥವಾ ನಿಗಾ ಇರಿಸುವ ನೋಡಲ್ ಅಧಿಕಾರಿ, ಕಂಗಾಲಾಗಿ ಔಷಧಿಗೆ ಹುಡುಕಾಡುತ್ತಿರುವ ರೋಗಿಯ ಸಂಬಂಧಿಕರಿಗೆ ಮಹದುಪಕಾರ ಮಾಡುತ್ತಿರುವ ಪೋಸ್ ನೀಡಿ, ಈ ಕಾಳಸಂತೆಕೋರರ ಸಂಪರ್ಕ ನಂಬರ್‌ಗಳನ್ನು ಒದಗಿಸುತ್ತಾರೆ.
* ಕಾಳಸಂತೆಕೋರರು ತಾವು ಹೇಳಿದ ದರ ಸಿಕ್ಕಿದರೆ, ಈ ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ರೋಗಿಯ ಸಂಬಂಧಿಕರಿಗೆ ಒದಗಿಸುತ್ತಾರೆ. ತಮ್ಮ ಪ್ರೀತಿಪಾತ್ರರ ಬದುಕಿನ ಮುಂದೆ ಅವರಿಗೆ ಆ ಕ್ಷಣಕ್ಕೆ ಉಳಿದೆಲ್ಲ ಗೌಣವಾಗಿರುತ್ತದೆ.

ಎಲ್ಲ ಪರ್ಸೆಂಟೇಜ್ ವ್ಯವಹಾರ!
ಈ ಕಾಳಸಂತೆ ಆಟದಲ್ಲಿ ಆಸ್ಪತ್ರೆಯ ವೈದ್ಯರು ಮಾತ್ರವಲ್ಲದೇ ಇಲಾಖೆ, ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳಿಗೂ ಪಾಲಿರುತ್ತದೆ ಎಂದು ಹೇಳಲಾಗಿದೆ. ಇಷ್ಟು ಮಾತ್ರವಲ್ಲದೇ ಆಂಬ್ಯುಲೆನ್ಸ್ ಸೇವೆಗಳಲ್ಲಿ, ಬೇರೆ ದೂರದ ಸುಸಜ್ಜಿತ ಆಸ್ಪತ್ರೆಗಳಿಗೆ ರೆಫರಲ್‌ಗಳಲ್ಲೂ ಕಿಕ್ ಬ್ಯಾಕ್ ವ್ಯವಹಾರ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂತಹ ಸ್ಥಿತಿಯಲ್ಲೂ ಸರ್ಕಾರ ಇವನ್ನೆಲ್ಲ ಎಚ್ಚರದಿಂದ ಗಮನಿಸಿ ಕ್ರಮ ಕೈಗೊಳ್ಳದಿದ್ದರೆ, ಸ್ವತಃ ಸರ್ಕಾರದ ಮಟ್ಟದಲ್ಲೇ ಈ ಗೋಲ್‌ಮಾಲ್ ನಡೆಯುತ್ತಿದೆ ಎಂದೇ ಸಾರ್ವಜನಿಕರು ಊಹಿಸಿಕೊಳ್ಳಬೇಕಾಗುತ್ತದೆ.

– ವಿಶೇಷ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...