Homeನ್ಯಾಯ ಪಥರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

ರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

- Advertisement -
- Advertisement -

ಕೊರೊನಾ ಚಿಕಿತ್ಸೆಯಲ್ಲಿ ರೆಮ್‌ಡೆಸಿವಿರ್ “ಜೀವರಕ್ಷಕ” ಔಷಧಿಯೇನಲ್ಲ. ಹೆಚ್ಚೆಂದರೆ ಮಧ್ಯಮ ತೀವ್ರತೆಯ ರೋಗ ಇರುವವರಲ್ಲಿ ಅದು ಉಪಕಾರ ಮಾಡೀತು ಎಂದು ವೈದ್ಯಕೀಯ ಪರಿಣತರು ಮತ್ತೆ ಮತ್ತೆ ಹೇಳುತ್ತಿದ್ದರೂ, ಆ ಔಷಧಿಯ ಪ್ರಚಾರ-ಪ್ರಸಾರ ಭರಾಟೆ ಹಾಗೂ ಅದಕ್ಕೆ ಪ್ರಭುತ್ವದ ಹಿನ್ನೆಲೆ ಸಂಗೀತಗಳನ್ನು ಗಮನಿಸಿದಾಗ ಇದೆಲ್ಲ ಒಂದು ಉದ್ದೇಶಪೂರ್ವಕ ’ಸ್ಕ್ರಿಪ್ಟೆಡ್ ನಾಟಕದ ಒಂದು ಭಾಗ ಅನ್ನಿಸುವುದು ಸುಳ್ಳಲ್ಲ.

ರಾಜ್ಯದಲ್ಲಿ ರೆಮ್‌ಡೆಸಿವಿರ್ ಸರಬರಾಜಿನ ಹೊಣೆ ಹೊತ್ತಿರುವುದು ರಾಜ್ಯಸರ್ಕಾರದ ಅಧೀನದಲ್ಲೇ ಇರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST). ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆಯು ಎರಡನೇ ಅಲೆಗೆ ಹೆಚ್ಚ್ಚಾಗುತ್ತಾ ಹೋದಂತೆ, ರೆಮ್‌ಡೆಸಿವಿರ್ ಬೇಡಿಕೆ ಹೆಚ್ಚಾಗುತ್ತಾ ಹೋಗಿದೆ. ಈ ಏರುತ್ತಿರುವ ಬೇಡಿಕೆಯನ್ನು ನಿಭಾಯಿಸಲು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 21 ಏಪ್ರಿಲ್‌ನಿಂದ 30 ಏಪ್ರಿಲ್ ನಡುವೆ ಬಳಕೆಗಾಗಿ 1,22,000 ವಿಯಾಲ್ ರೆಮ್‌ಡೆಸಿವಿರ್ ಔಷಧಿ ಮಂಜೂರಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರು ಏಪ್ರಿಲ್ 24ರಂದು ಟ್ವೀಟ್ ಮಾಡಿದ್ದರು. ಇದಲ್ಲದೆ ಏಪ್ರಿಲ್21ರಂದು, ರೆಮ್‌ಡೆಸಿವಿರ್ ಮತ್ತು ಆಕ್ಸಿಜನ್ ಬೇಡಿಕೆ/ಲಭ್ಯತೆಯನ್ನು ನಿರ್ವಹಿಸಲು ವಾರ್ ರೂಂ ರಚಿಸಿ 24/7ಕೆಲಸ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿತ್ತು. ಏಪ್ರಿಲ್ 17ರಂದು ರಾಜ್ಯದೆಲ್ಲೆಡೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ರೆಮ್‌ಡೆಸಿವಿರ್ ವಿತರಣೆಯ ಮೇಲೆ ನಿಗಾ ಇರಿಸಲು ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯದ ಸ್ಥಿತಿಯಲ್ಲಿ ರಾಜ್ಯಕ್ಕೆ ರೆಮ್‌ಡೆಸಿವಿರ್ ಕೊರತೆ ಕಾಣಿಸಿಕೊಳ್ಳಬಾರದಿತ್ತು. ಆದರೆ, ಅದಕ್ಕೆ ವ್ಯತಿರಿಕ್ತವಾಗಿ ಎಲ್ಲೆಡೆ ಕಾಳಸಂತೆಯಲ್ಲಿ ಈ ಔಷಧಿ ಮಾರಾಟ ಆಗುತ್ತಿರುವುದು ಕಂಡುಬರುತ್ತಿದೆ.

ನೇರವಾಗಿ ಕೇಳಿದರೆ ಸಿಗದ, ಆದರೆ ಕಾಳಸಂತೆಯಲ್ಲಿ 15,000-25000 ರೂಗಳ ಮೊತ್ತದಲ್ಲಿ ಸಿಗುವ ರೆಮ್‌ಡೆಸಿವಿರ್ ಮಾರುಕಟ್ಟೆಯನ್ನು ಗಮನಿಸಿದಾಗ, ಸದ್ಯಕ್ಕೆ ಎರಡು ರೀತಿಯಲ್ಲಿ ಅವು ಕಾಳಸಂತೆಯಲ್ಲಿ ಲಭ್ಯವಿರುವುದು ಕಾಣಿಸುತ್ತದೆ. ಈ ಔಷಧಿಯ ಮೇಲೆ ಸರ್ಕಾರದ ಹದ್ದಿನ ಕಣ್ಣು ಇದ್ದರೂ ಕಾಳಸಂತೆಯಲ್ಲಿ ಹೇಗೆ ಲಭ್ಯವಾಗುತ್ತಿದೆ ಎಂಬುದನ್ನು ಪರಿಶೀಲಿಸಿದಾಗ ಕಂಡುಬಂದದ್ದು ಇಷ್ಟು:

ವೈದ್ಯ ರಣಹದ್ದುಗಳು

ಸರ್ಕಾರ ರೆಮ್‌ಡೆಸಿವಿರ್ ಮಾರುಕಟ್ಟೆಯ ಮೇಲೆ ನಿಯಂತ್ರಣ ಇರಿಸುವುದಕ್ಕಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅವೇನೆಂದರೆ, ಖಾಸಗಿ-ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ, ಒಬ್ಬರು ಕೊರೊನಾ ರೋಗಿಗೆ ರೆಮ್‌ಡೆಸಿವಿರ್ ಔಷಧಿ ಅಗತ್ಯ ಇದೆ ಎಂಬುದನ್ನು ತಜ್ಞ ವೈದ್ಯರು ಅಥವಾ ಅರಿವಳಿಕೆ ತಜ್ಞರು ಲಿಖಿತವಾಗಿ ಪ್ರಮಾಣೀಕರಿಸಬೇಕು. ಇದಲ್ಲದೇ, ಪ್ರತಿಯೊಂದು ರೆಮ್‌ಡೆಸಿವಿರ್ ಚುಚ್ಚುಮದ್ದು ನೀಡಿದ ಬಳಿಕ ಅದರ ಸ್ಟಿಕರ್‌ಅನ್ನು ರೋಗಿಯ ಕೇಸ್ ಶೀಟಿನ ಮೇಲೆ ಹಚ್ಚಬೇಕು. ಆಗ, ರೆಮ್‌ಡೆಸಿವಿರ್ ದುರ್ಬಳಕೆ ಆಗುವುದಿಲ್ಲ ಎಂಬುದು ಸರ್ಕಾರದ ತರ್ಕ. ಇಷ್ಟೆಲ್ಲ ಬಿಗಿ ಬಂದೋಬಸ್ತ್ ಇದ್ದರೂ ರೆಮ್‌ಡೆಸಿವಿರ್ ಕಾಳಸಂತೆ ಮಾರುಕಟ್ಟೆಯನ್ನು ತಲುಪುವುದು ಹೇಗೆ?

ಇದು ಬಹಳ ಸರಳವಾದ ಸರ್ಕಾರಿ ಪೆದ್ದುತನದ ಮತ್ತು ವೈದ್ಯಕೀಯ ಜಗತ್ತಿನಲ್ಲಿರುವ ಕೆಲವು ಕರಿಕುರಿಗಳ ಅನಾವರಣವಾಗಿದೆ. ಬೆಣ್ಣೆಯಿಂದ ಕೂದಲನ್ನು ಎತ್ತಿ ಎಸೆಯುವ ನಾಜೂಕುತನದಲ್ಲೇ ಖಾಸಗಿ ಮತ್ತು ಕೆಲವೆಡೆ ಸರ್ಕಾರಿ ವೈದ್ಯರು ಇದನ್ನು ನಿರ್ವಹಿಸುತ್ತಿದ್ದಾರೆ. ಅದನ್ನು ಹಂತ ಹಂತವಾಗಿ ಹೀಗೆ ವಿವರಿಸಬಹುದು:
* ಒಬ್ಬ ಕೊರೊನಾ ರೋಗಿಗೆ ಹೆಚ್ಚೇನೂ ರೋಗಲಕ್ಷಣಗಳಿಲ್ಲದಿರುವಾಗಲೂ, ಆತ/ಆಕೆಗೆ ರೆಮ್‌ಡೆಸಿವಿರ್ ಖಂಡಿತಕ್ಕೂ ಅಗತ್ಯವಿಲ್ಲ ಎಂದು ಗೊತ್ತಿರುವಾಗಲೂ “ರೆಮ್‌ಡೆಸಿವಿರ್ ಚಿಕಿತ್ಸೆ ಅಗತ್ಯವಿದೆ ಎಂದು ಆ ರೋಗಿಯ ಕೇಸ್ ಶೀಟಿನಲ್ಲಿ ದಾಖಲಿಸಲಾಗುತ್ತದೆ.
* ಆ ರೋಗಿಗೆ ರೆಮ್‌ಡೆಸಿವಿರ್ ಚುಚ್ಚದಿದ್ದರೂ, ಪ್ರತಿಯೊಂದು ಚುಚ್ಚುಮದ್ದನ್ನು ಕೇಸ್ ಶೀಟಿನಲ್ಲಿ ದಾಖಲಿಸಿ, ಅದರ ಸ್ಟಿಕರ್‌ಅನ್ನು ಕೇಸ್ ಶೀಟಿಗೆ ಅಂಟಿಸಲಾಗುತ್ತದೆ.
* ಅಲ್ಲಿಂದ ಬಳಕೆಯಾಗದ ರೆಮ್‌ಡೆಸಿವಿರ್ ಚುಚ್ಚುಮದ್ದು ಬಾಟಲಿಗಳು ಆಸ್ಪತ್ರೆಯ ಆಯಕಟ್ಟಿನ ಜಾಗದ ಸಿಬ್ಬಂದಿಗಳ ಮೂಲಕ ಕಾಳಸಂತೆಕೋರರನ್ನು ತಲುಪುತ್ತದೆ.
* ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಯಾವುದಾದರೂ ರೋಗಿಗೆ ನಿಜಕ್ಕೂ ರೆಮ್‌ಡೆಸಿವಿರ್ ಚುಚ್ಚುಮದ್ದು ಬೇಕಾದಾಗ, ಚಿಕಿತ್ಸೆ ನಡೆಸುವ ವೈದ್ಯರು ಅಥವಾ ನಿಗಾ ಇರಿಸುವ ನೋಡಲ್ ಅಧಿಕಾರಿ, ಕಂಗಾಲಾಗಿ ಔಷಧಿಗೆ ಹುಡುಕಾಡುತ್ತಿರುವ ರೋಗಿಯ ಸಂಬಂಧಿಕರಿಗೆ ಮಹದುಪಕಾರ ಮಾಡುತ್ತಿರುವ ಪೋಸ್ ನೀಡಿ, ಈ ಕಾಳಸಂತೆಕೋರರ ಸಂಪರ್ಕ ನಂಬರ್‌ಗಳನ್ನು ಒದಗಿಸುತ್ತಾರೆ.
* ಕಾಳಸಂತೆಕೋರರು ತಾವು ಹೇಳಿದ ದರ ಸಿಕ್ಕಿದರೆ, ಈ ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ರೋಗಿಯ ಸಂಬಂಧಿಕರಿಗೆ ಒದಗಿಸುತ್ತಾರೆ. ತಮ್ಮ ಪ್ರೀತಿಪಾತ್ರರ ಬದುಕಿನ ಮುಂದೆ ಅವರಿಗೆ ಆ ಕ್ಷಣಕ್ಕೆ ಉಳಿದೆಲ್ಲ ಗೌಣವಾಗಿರುತ್ತದೆ.

ಎಲ್ಲ ಪರ್ಸೆಂಟೇಜ್ ವ್ಯವಹಾರ!
ಈ ಕಾಳಸಂತೆ ಆಟದಲ್ಲಿ ಆಸ್ಪತ್ರೆಯ ವೈದ್ಯರು ಮಾತ್ರವಲ್ಲದೇ ಇಲಾಖೆ, ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳಿಗೂ ಪಾಲಿರುತ್ತದೆ ಎಂದು ಹೇಳಲಾಗಿದೆ. ಇಷ್ಟು ಮಾತ್ರವಲ್ಲದೇ ಆಂಬ್ಯುಲೆನ್ಸ್ ಸೇವೆಗಳಲ್ಲಿ, ಬೇರೆ ದೂರದ ಸುಸಜ್ಜಿತ ಆಸ್ಪತ್ರೆಗಳಿಗೆ ರೆಫರಲ್‌ಗಳಲ್ಲೂ ಕಿಕ್ ಬ್ಯಾಕ್ ವ್ಯವಹಾರ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂತಹ ಸ್ಥಿತಿಯಲ್ಲೂ ಸರ್ಕಾರ ಇವನ್ನೆಲ್ಲ ಎಚ್ಚರದಿಂದ ಗಮನಿಸಿ ಕ್ರಮ ಕೈಗೊಳ್ಳದಿದ್ದರೆ, ಸ್ವತಃ ಸರ್ಕಾರದ ಮಟ್ಟದಲ್ಲೇ ಈ ಗೋಲ್‌ಮಾಲ್ ನಡೆಯುತ್ತಿದೆ ಎಂದೇ ಸಾರ್ವಜನಿಕರು ಊಹಿಸಿಕೊಳ್ಳಬೇಕಾಗುತ್ತದೆ.

– ವಿಶೇಷ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

"ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾದ ಸರ್ಕಾರ : ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ

ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಡ ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ. ಬುಧವಾರ (ಜ.21) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಎಐಎಸ್ಎಫ್,...

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ...

ಒಡಿಶಾ| ಪಾದ್ರಿ ಮೇಲೆ ಗುಂಪು ಹಲ್ಲೆ ನಡೆಸಿ ಅವಮಾನ; ಎರಡು ವಾರವಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು

ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಬಜರಂಗದಳ ಸದಸ್ಯರಿಂದ ಕ್ರೂರವಾಗಿ ಹಲ್ಲೆಗೊಳಗಾಗಿ ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾದ ಕ್ರಿಶ್ಚಿಯನ್ ಪಾದ್ರಿಯೊಬ್ಬರು, ತನ್ನ ಮೇಲೆ ದಾಳಿ ಮಾಡಿದವರನ್ನು ಕ್ಷಮಿಸಲು ನಿರ್ಧರಿಸಿದ್ದಾರೆ. ಘಟನೆ ನಡೆದು ಎರಡು ವಾರಗಳಿಗಿಂತ ಹೆಚ್ಚು ಕಾಲ...

ಕೆನಡಾ: ಸುಲಿಗೆ ಪ್ರಕರಣಗಳಲ್ಲಿ 111 ವಿದೇಶಿ ಪ್ರಜೆಗಳ ಪಾತ್ರದ ಬಗ್ಗೆ ತನಿಖೆ: ಹೆಚ್ಚಿನವರು ಪಂಜಾಬ್ ನಿಂದ ಬಂದ ಭಾರತೀಯರೆಂದು ವರದಿ  

ಚಂಡಿಗ್ರಾ: ಬ್ರಿಟಿಷ್ ಕೊಲಂಬಿಯಾ ಸುಲಿಗೆ ಕಾರ್ಯಪಡೆಯು ಕೆಳ ಮೇನ್‌ಲ್ಯಾಂಡ್‌ನಲ್ಲಿನ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಂಕಿಸಲಾಗಿರುವ 111 ವಿದೇಶಿ ಪ್ರಜೆಗಳ ತನಿಖೆ ನಡೆಸುತ್ತಿದೆ. ಇದರಲ್ಲಿ ಹೆಚ್ಚಿನವರು ಪಂಜಾಬ್‌ನಿಂದ ಬಂದಿರುವ ಭಾರತೀಯ...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ಸೇಲ್ಸ್...

ಪ್ರಿಯಕರನೊಂದಿಗೆ ವಾಸಿಸಲು ‘ಸುಳ್ಳು ಗೋಹತ್ಯೆ ಪ್ರಕರಣ’ದಲ್ಲಿ ಗಂಡನನ್ನು ಸಿಲುಕಿಸಿದ ಪತ್ನಿ

ತನ್ನ ಪ್ರಿಯಕರನೊಂದಿಗೆ ವಾಸಿಸಲು ವಿವಾಹಿತ ಮಹಿಳೆಯೊಬ್ಬಳು ಮಾಡಿದ ದುಷ್ಕೃತ್ಯವೊಂದರಲ್ಲಿ ಆಕೆಯ ಪತಿ ಸುಳ್ಳು ಗೋಹತ್ಯೆ ಪ್ರಕರಣಗಳಲ್ಲಿ ಎರಡು ಬಾರಿ ಪೊಲೀಸರಿಂದ ಬಂಧನಕ್ಕೆ ಒಳಗಾಗಬೇಕಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಇದೇ ಪ್ರಕರಣದ...

ಎಲ್‌ಐಸಿ ಕಚೇರಿ ಬೆಂಕಿ ಪ್ರಕರಣಕ್ಕೆ ತಿರುವು : ಅಕ್ರಮ ಮುಚ್ಚಿ ಹಾಕಲು ಸಹೋದ್ಯೋಗಿಯಿಂದ ವ್ಯವಸ್ಥಾಪಕಿಯ ಕೊಲೆ ಎಂದ ತನಿಖೆ

ಡಿಸೆಂಬರ್‌ನಲ್ಲಿ ಮಧುರೈನ ಜೀವ ವಿಮಾ ನಿಗಮ (ಎಲ್‌ಐಸಿ) ಕಚೇರಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಿರಿಯ ಮಹಿಳಾ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಆರಂಭದಲ್ಲಿ ನಂಬಿದಂತೆ ಅದು ಆಕಸ್ಮಿಕ ಸಾವಲ್ಲ, ಕೊಲೆ ಎಂದು ತಮಿಳುನಾಡು ಪೊಲೀಸರು ತೀರ್ಮಾನಿಸಿದ್ದಾರೆ....

‘ಅಕ್ರಮ ಗಣಿಗಾರಿಕೆ ಸರಿಪಡಿಸಲಾಗದ ಹಾನಿಗೆ ಕಾರಣವಾಗಬಹುದು’: ಅರಾವಳಿ ಸಮಗ್ರ ಪರೀಕ್ಷೆಗೆ ತಜ್ಞರ ಸಮಿತಿ ರಚಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಕ್ರಮ ಗಣಿಗಾರಿಕೆಯಿಂದ ಸರಿಪಡಿಸಲಾಗದ ಹಾನಿ ಉಂಟಾಗಬಹುದು ಎಂದು ಗಮನಿಸಿದ ಸುಪ್ರೀಂ ಕೋರ್ಟ್, ಅರಾವಳಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಸಮಸ್ಯೆಗಳ ಸಮಗ್ರ ಪರೀಕ್ಷೆಯನ್ನು ಕೈಗೊಳ್ಳಲು ಡೊಮೇನ್ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸುವುದಾಗಿ...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...