Homeನ್ಯಾಯ ಪಥರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

ರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

- Advertisement -
- Advertisement -

ಕೊರೊನಾ ಚಿಕಿತ್ಸೆಯಲ್ಲಿ ರೆಮ್‌ಡೆಸಿವಿರ್ “ಜೀವರಕ್ಷಕ” ಔಷಧಿಯೇನಲ್ಲ. ಹೆಚ್ಚೆಂದರೆ ಮಧ್ಯಮ ತೀವ್ರತೆಯ ರೋಗ ಇರುವವರಲ್ಲಿ ಅದು ಉಪಕಾರ ಮಾಡೀತು ಎಂದು ವೈದ್ಯಕೀಯ ಪರಿಣತರು ಮತ್ತೆ ಮತ್ತೆ ಹೇಳುತ್ತಿದ್ದರೂ, ಆ ಔಷಧಿಯ ಪ್ರಚಾರ-ಪ್ರಸಾರ ಭರಾಟೆ ಹಾಗೂ ಅದಕ್ಕೆ ಪ್ರಭುತ್ವದ ಹಿನ್ನೆಲೆ ಸಂಗೀತಗಳನ್ನು ಗಮನಿಸಿದಾಗ ಇದೆಲ್ಲ ಒಂದು ಉದ್ದೇಶಪೂರ್ವಕ ’ಸ್ಕ್ರಿಪ್ಟೆಡ್ ನಾಟಕದ ಒಂದು ಭಾಗ ಅನ್ನಿಸುವುದು ಸುಳ್ಳಲ್ಲ.

ರಾಜ್ಯದಲ್ಲಿ ರೆಮ್‌ಡೆಸಿವಿರ್ ಸರಬರಾಜಿನ ಹೊಣೆ ಹೊತ್ತಿರುವುದು ರಾಜ್ಯಸರ್ಕಾರದ ಅಧೀನದಲ್ಲೇ ಇರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST). ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆಯು ಎರಡನೇ ಅಲೆಗೆ ಹೆಚ್ಚ್ಚಾಗುತ್ತಾ ಹೋದಂತೆ, ರೆಮ್‌ಡೆಸಿವಿರ್ ಬೇಡಿಕೆ ಹೆಚ್ಚಾಗುತ್ತಾ ಹೋಗಿದೆ. ಈ ಏರುತ್ತಿರುವ ಬೇಡಿಕೆಯನ್ನು ನಿಭಾಯಿಸಲು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 21 ಏಪ್ರಿಲ್‌ನಿಂದ 30 ಏಪ್ರಿಲ್ ನಡುವೆ ಬಳಕೆಗಾಗಿ 1,22,000 ವಿಯಾಲ್ ರೆಮ್‌ಡೆಸಿವಿರ್ ಔಷಧಿ ಮಂಜೂರಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರು ಏಪ್ರಿಲ್ 24ರಂದು ಟ್ವೀಟ್ ಮಾಡಿದ್ದರು. ಇದಲ್ಲದೆ ಏಪ್ರಿಲ್21ರಂದು, ರೆಮ್‌ಡೆಸಿವಿರ್ ಮತ್ತು ಆಕ್ಸಿಜನ್ ಬೇಡಿಕೆ/ಲಭ್ಯತೆಯನ್ನು ನಿರ್ವಹಿಸಲು ವಾರ್ ರೂಂ ರಚಿಸಿ 24/7ಕೆಲಸ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿತ್ತು. ಏಪ್ರಿಲ್ 17ರಂದು ರಾಜ್ಯದೆಲ್ಲೆಡೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ರೆಮ್‌ಡೆಸಿವಿರ್ ವಿತರಣೆಯ ಮೇಲೆ ನಿಗಾ ಇರಿಸಲು ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯದ ಸ್ಥಿತಿಯಲ್ಲಿ ರಾಜ್ಯಕ್ಕೆ ರೆಮ್‌ಡೆಸಿವಿರ್ ಕೊರತೆ ಕಾಣಿಸಿಕೊಳ್ಳಬಾರದಿತ್ತು. ಆದರೆ, ಅದಕ್ಕೆ ವ್ಯತಿರಿಕ್ತವಾಗಿ ಎಲ್ಲೆಡೆ ಕಾಳಸಂತೆಯಲ್ಲಿ ಈ ಔಷಧಿ ಮಾರಾಟ ಆಗುತ್ತಿರುವುದು ಕಂಡುಬರುತ್ತಿದೆ.

ನೇರವಾಗಿ ಕೇಳಿದರೆ ಸಿಗದ, ಆದರೆ ಕಾಳಸಂತೆಯಲ್ಲಿ 15,000-25000 ರೂಗಳ ಮೊತ್ತದಲ್ಲಿ ಸಿಗುವ ರೆಮ್‌ಡೆಸಿವಿರ್ ಮಾರುಕಟ್ಟೆಯನ್ನು ಗಮನಿಸಿದಾಗ, ಸದ್ಯಕ್ಕೆ ಎರಡು ರೀತಿಯಲ್ಲಿ ಅವು ಕಾಳಸಂತೆಯಲ್ಲಿ ಲಭ್ಯವಿರುವುದು ಕಾಣಿಸುತ್ತದೆ. ಈ ಔಷಧಿಯ ಮೇಲೆ ಸರ್ಕಾರದ ಹದ್ದಿನ ಕಣ್ಣು ಇದ್ದರೂ ಕಾಳಸಂತೆಯಲ್ಲಿ ಹೇಗೆ ಲಭ್ಯವಾಗುತ್ತಿದೆ ಎಂಬುದನ್ನು ಪರಿಶೀಲಿಸಿದಾಗ ಕಂಡುಬಂದದ್ದು ಇಷ್ಟು:

ವೈದ್ಯ ರಣಹದ್ದುಗಳು

ಸರ್ಕಾರ ರೆಮ್‌ಡೆಸಿವಿರ್ ಮಾರುಕಟ್ಟೆಯ ಮೇಲೆ ನಿಯಂತ್ರಣ ಇರಿಸುವುದಕ್ಕಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅವೇನೆಂದರೆ, ಖಾಸಗಿ-ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ, ಒಬ್ಬರು ಕೊರೊನಾ ರೋಗಿಗೆ ರೆಮ್‌ಡೆಸಿವಿರ್ ಔಷಧಿ ಅಗತ್ಯ ಇದೆ ಎಂಬುದನ್ನು ತಜ್ಞ ವೈದ್ಯರು ಅಥವಾ ಅರಿವಳಿಕೆ ತಜ್ಞರು ಲಿಖಿತವಾಗಿ ಪ್ರಮಾಣೀಕರಿಸಬೇಕು. ಇದಲ್ಲದೇ, ಪ್ರತಿಯೊಂದು ರೆಮ್‌ಡೆಸಿವಿರ್ ಚುಚ್ಚುಮದ್ದು ನೀಡಿದ ಬಳಿಕ ಅದರ ಸ್ಟಿಕರ್‌ಅನ್ನು ರೋಗಿಯ ಕೇಸ್ ಶೀಟಿನ ಮೇಲೆ ಹಚ್ಚಬೇಕು. ಆಗ, ರೆಮ್‌ಡೆಸಿವಿರ್ ದುರ್ಬಳಕೆ ಆಗುವುದಿಲ್ಲ ಎಂಬುದು ಸರ್ಕಾರದ ತರ್ಕ. ಇಷ್ಟೆಲ್ಲ ಬಿಗಿ ಬಂದೋಬಸ್ತ್ ಇದ್ದರೂ ರೆಮ್‌ಡೆಸಿವಿರ್ ಕಾಳಸಂತೆ ಮಾರುಕಟ್ಟೆಯನ್ನು ತಲುಪುವುದು ಹೇಗೆ?

ಇದು ಬಹಳ ಸರಳವಾದ ಸರ್ಕಾರಿ ಪೆದ್ದುತನದ ಮತ್ತು ವೈದ್ಯಕೀಯ ಜಗತ್ತಿನಲ್ಲಿರುವ ಕೆಲವು ಕರಿಕುರಿಗಳ ಅನಾವರಣವಾಗಿದೆ. ಬೆಣ್ಣೆಯಿಂದ ಕೂದಲನ್ನು ಎತ್ತಿ ಎಸೆಯುವ ನಾಜೂಕುತನದಲ್ಲೇ ಖಾಸಗಿ ಮತ್ತು ಕೆಲವೆಡೆ ಸರ್ಕಾರಿ ವೈದ್ಯರು ಇದನ್ನು ನಿರ್ವಹಿಸುತ್ತಿದ್ದಾರೆ. ಅದನ್ನು ಹಂತ ಹಂತವಾಗಿ ಹೀಗೆ ವಿವರಿಸಬಹುದು:
* ಒಬ್ಬ ಕೊರೊನಾ ರೋಗಿಗೆ ಹೆಚ್ಚೇನೂ ರೋಗಲಕ್ಷಣಗಳಿಲ್ಲದಿರುವಾಗಲೂ, ಆತ/ಆಕೆಗೆ ರೆಮ್‌ಡೆಸಿವಿರ್ ಖಂಡಿತಕ್ಕೂ ಅಗತ್ಯವಿಲ್ಲ ಎಂದು ಗೊತ್ತಿರುವಾಗಲೂ “ರೆಮ್‌ಡೆಸಿವಿರ್ ಚಿಕಿತ್ಸೆ ಅಗತ್ಯವಿದೆ ಎಂದು ಆ ರೋಗಿಯ ಕೇಸ್ ಶೀಟಿನಲ್ಲಿ ದಾಖಲಿಸಲಾಗುತ್ತದೆ.
* ಆ ರೋಗಿಗೆ ರೆಮ್‌ಡೆಸಿವಿರ್ ಚುಚ್ಚದಿದ್ದರೂ, ಪ್ರತಿಯೊಂದು ಚುಚ್ಚುಮದ್ದನ್ನು ಕೇಸ್ ಶೀಟಿನಲ್ಲಿ ದಾಖಲಿಸಿ, ಅದರ ಸ್ಟಿಕರ್‌ಅನ್ನು ಕೇಸ್ ಶೀಟಿಗೆ ಅಂಟಿಸಲಾಗುತ್ತದೆ.
* ಅಲ್ಲಿಂದ ಬಳಕೆಯಾಗದ ರೆಮ್‌ಡೆಸಿವಿರ್ ಚುಚ್ಚುಮದ್ದು ಬಾಟಲಿಗಳು ಆಸ್ಪತ್ರೆಯ ಆಯಕಟ್ಟಿನ ಜಾಗದ ಸಿಬ್ಬಂದಿಗಳ ಮೂಲಕ ಕಾಳಸಂತೆಕೋರರನ್ನು ತಲುಪುತ್ತದೆ.
* ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಯಾವುದಾದರೂ ರೋಗಿಗೆ ನಿಜಕ್ಕೂ ರೆಮ್‌ಡೆಸಿವಿರ್ ಚುಚ್ಚುಮದ್ದು ಬೇಕಾದಾಗ, ಚಿಕಿತ್ಸೆ ನಡೆಸುವ ವೈದ್ಯರು ಅಥವಾ ನಿಗಾ ಇರಿಸುವ ನೋಡಲ್ ಅಧಿಕಾರಿ, ಕಂಗಾಲಾಗಿ ಔಷಧಿಗೆ ಹುಡುಕಾಡುತ್ತಿರುವ ರೋಗಿಯ ಸಂಬಂಧಿಕರಿಗೆ ಮಹದುಪಕಾರ ಮಾಡುತ್ತಿರುವ ಪೋಸ್ ನೀಡಿ, ಈ ಕಾಳಸಂತೆಕೋರರ ಸಂಪರ್ಕ ನಂಬರ್‌ಗಳನ್ನು ಒದಗಿಸುತ್ತಾರೆ.
* ಕಾಳಸಂತೆಕೋರರು ತಾವು ಹೇಳಿದ ದರ ಸಿಕ್ಕಿದರೆ, ಈ ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ರೋಗಿಯ ಸಂಬಂಧಿಕರಿಗೆ ಒದಗಿಸುತ್ತಾರೆ. ತಮ್ಮ ಪ್ರೀತಿಪಾತ್ರರ ಬದುಕಿನ ಮುಂದೆ ಅವರಿಗೆ ಆ ಕ್ಷಣಕ್ಕೆ ಉಳಿದೆಲ್ಲ ಗೌಣವಾಗಿರುತ್ತದೆ.

ಎಲ್ಲ ಪರ್ಸೆಂಟೇಜ್ ವ್ಯವಹಾರ!
ಈ ಕಾಳಸಂತೆ ಆಟದಲ್ಲಿ ಆಸ್ಪತ್ರೆಯ ವೈದ್ಯರು ಮಾತ್ರವಲ್ಲದೇ ಇಲಾಖೆ, ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳಿಗೂ ಪಾಲಿರುತ್ತದೆ ಎಂದು ಹೇಳಲಾಗಿದೆ. ಇಷ್ಟು ಮಾತ್ರವಲ್ಲದೇ ಆಂಬ್ಯುಲೆನ್ಸ್ ಸೇವೆಗಳಲ್ಲಿ, ಬೇರೆ ದೂರದ ಸುಸಜ್ಜಿತ ಆಸ್ಪತ್ರೆಗಳಿಗೆ ರೆಫರಲ್‌ಗಳಲ್ಲೂ ಕಿಕ್ ಬ್ಯಾಕ್ ವ್ಯವಹಾರ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂತಹ ಸ್ಥಿತಿಯಲ್ಲೂ ಸರ್ಕಾರ ಇವನ್ನೆಲ್ಲ ಎಚ್ಚರದಿಂದ ಗಮನಿಸಿ ಕ್ರಮ ಕೈಗೊಳ್ಳದಿದ್ದರೆ, ಸ್ವತಃ ಸರ್ಕಾರದ ಮಟ್ಟದಲ್ಲೇ ಈ ಗೋಲ್‌ಮಾಲ್ ನಡೆಯುತ್ತಿದೆ ಎಂದೇ ಸಾರ್ವಜನಿಕರು ಊಹಿಸಿಕೊಳ್ಳಬೇಕಾಗುತ್ತದೆ.

– ವಿಶೇಷ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ವಿತರಣಾ ಟೆಂಪೋದಿಂದ 27 ಎಲ್‌ಪಿಜಿ ಸಿಲಿಂಡರ್‌ಗಳು ಕಳವು; ತನಿಖೆ 

ಮುಂಬೈನಲ್ಲಿ ವಿತರಣಾ ವಾಹನದಿಂದ ಐದು ತುಂಬಿದ ಎಲ್‌ಪಿಜಿ ಸಿಲಿಂಡರ್‌ಗಳು ಸೇರಿದಂತೆ ಇಪ್ಪತ್ತೇಳು ಎಲ್‌ಪಿಜಿ ಸಿಲಿಂಡರ್‌ಗಳು ಕಳವಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯ...

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ 'ನೋ ಕಿಂಗ್ಸ್' ಪ್ರತಿಭಟನೆಗಳು ನಡೆದಿವೆ. ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ...

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...