Homeನ್ಯಾಯ ಪಥರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

ರೆಮ್‌ಡೆಸಿವಿರ್ ರಣಹದ್ದುಗಳು; ಈ ಔಷಧಿ ಕೊರತೆಯ ಹಿಂದಿರಬಹುದಾದ ವ್ಯವಹಾರ!

- Advertisement -
- Advertisement -

ಕೊರೊನಾ ಚಿಕಿತ್ಸೆಯಲ್ಲಿ ರೆಮ್‌ಡೆಸಿವಿರ್ “ಜೀವರಕ್ಷಕ” ಔಷಧಿಯೇನಲ್ಲ. ಹೆಚ್ಚೆಂದರೆ ಮಧ್ಯಮ ತೀವ್ರತೆಯ ರೋಗ ಇರುವವರಲ್ಲಿ ಅದು ಉಪಕಾರ ಮಾಡೀತು ಎಂದು ವೈದ್ಯಕೀಯ ಪರಿಣತರು ಮತ್ತೆ ಮತ್ತೆ ಹೇಳುತ್ತಿದ್ದರೂ, ಆ ಔಷಧಿಯ ಪ್ರಚಾರ-ಪ್ರಸಾರ ಭರಾಟೆ ಹಾಗೂ ಅದಕ್ಕೆ ಪ್ರಭುತ್ವದ ಹಿನ್ನೆಲೆ ಸಂಗೀತಗಳನ್ನು ಗಮನಿಸಿದಾಗ ಇದೆಲ್ಲ ಒಂದು ಉದ್ದೇಶಪೂರ್ವಕ ’ಸ್ಕ್ರಿಪ್ಟೆಡ್ ನಾಟಕದ ಒಂದು ಭಾಗ ಅನ್ನಿಸುವುದು ಸುಳ್ಳಲ್ಲ.

ರಾಜ್ಯದಲ್ಲಿ ರೆಮ್‌ಡೆಸಿವಿರ್ ಸರಬರಾಜಿನ ಹೊಣೆ ಹೊತ್ತಿರುವುದು ರಾಜ್ಯಸರ್ಕಾರದ ಅಧೀನದಲ್ಲೇ ಇರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST). ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆಯು ಎರಡನೇ ಅಲೆಗೆ ಹೆಚ್ಚ್ಚಾಗುತ್ತಾ ಹೋದಂತೆ, ರೆಮ್‌ಡೆಸಿವಿರ್ ಬೇಡಿಕೆ ಹೆಚ್ಚಾಗುತ್ತಾ ಹೋಗಿದೆ. ಈ ಏರುತ್ತಿರುವ ಬೇಡಿಕೆಯನ್ನು ನಿಭಾಯಿಸಲು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 21 ಏಪ್ರಿಲ್‌ನಿಂದ 30 ಏಪ್ರಿಲ್ ನಡುವೆ ಬಳಕೆಗಾಗಿ 1,22,000 ವಿಯಾಲ್ ರೆಮ್‌ಡೆಸಿವಿರ್ ಔಷಧಿ ಮಂಜೂರಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವರು ಏಪ್ರಿಲ್ 24ರಂದು ಟ್ವೀಟ್ ಮಾಡಿದ್ದರು. ಇದಲ್ಲದೆ ಏಪ್ರಿಲ್21ರಂದು, ರೆಮ್‌ಡೆಸಿವಿರ್ ಮತ್ತು ಆಕ್ಸಿಜನ್ ಬೇಡಿಕೆ/ಲಭ್ಯತೆಯನ್ನು ನಿರ್ವಹಿಸಲು ವಾರ್ ರೂಂ ರಚಿಸಿ 24/7ಕೆಲಸ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿತ್ತು. ಏಪ್ರಿಲ್ 17ರಂದು ರಾಜ್ಯದೆಲ್ಲೆಡೆ ನೋಡಲ್ ಅಧಿಕಾರಿಗಳನ್ನು ನೇಮಿಸಿ, ರೆಮ್‌ಡೆಸಿವಿರ್ ವಿತರಣೆಯ ಮೇಲೆ ನಿಗಾ ಇರಿಸಲು ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸದ್ಯದ ಸ್ಥಿತಿಯಲ್ಲಿ ರಾಜ್ಯಕ್ಕೆ ರೆಮ್‌ಡೆಸಿವಿರ್ ಕೊರತೆ ಕಾಣಿಸಿಕೊಳ್ಳಬಾರದಿತ್ತು. ಆದರೆ, ಅದಕ್ಕೆ ವ್ಯತಿರಿಕ್ತವಾಗಿ ಎಲ್ಲೆಡೆ ಕಾಳಸಂತೆಯಲ್ಲಿ ಈ ಔಷಧಿ ಮಾರಾಟ ಆಗುತ್ತಿರುವುದು ಕಂಡುಬರುತ್ತಿದೆ.

ನೇರವಾಗಿ ಕೇಳಿದರೆ ಸಿಗದ, ಆದರೆ ಕಾಳಸಂತೆಯಲ್ಲಿ 15,000-25000 ರೂಗಳ ಮೊತ್ತದಲ್ಲಿ ಸಿಗುವ ರೆಮ್‌ಡೆಸಿವಿರ್ ಮಾರುಕಟ್ಟೆಯನ್ನು ಗಮನಿಸಿದಾಗ, ಸದ್ಯಕ್ಕೆ ಎರಡು ರೀತಿಯಲ್ಲಿ ಅವು ಕಾಳಸಂತೆಯಲ್ಲಿ ಲಭ್ಯವಿರುವುದು ಕಾಣಿಸುತ್ತದೆ. ಈ ಔಷಧಿಯ ಮೇಲೆ ಸರ್ಕಾರದ ಹದ್ದಿನ ಕಣ್ಣು ಇದ್ದರೂ ಕಾಳಸಂತೆಯಲ್ಲಿ ಹೇಗೆ ಲಭ್ಯವಾಗುತ್ತಿದೆ ಎಂಬುದನ್ನು ಪರಿಶೀಲಿಸಿದಾಗ ಕಂಡುಬಂದದ್ದು ಇಷ್ಟು:

ವೈದ್ಯ ರಣಹದ್ದುಗಳು

ಸರ್ಕಾರ ರೆಮ್‌ಡೆಸಿವಿರ್ ಮಾರುಕಟ್ಟೆಯ ಮೇಲೆ ನಿಯಂತ್ರಣ ಇರಿಸುವುದಕ್ಕಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅವೇನೆಂದರೆ, ಖಾಸಗಿ-ಸರ್ಕಾರಿ ಆಸ್ಪತ್ರೆ ವ್ಯವಸ್ಥೆಯಲ್ಲಿ, ಒಬ್ಬರು ಕೊರೊನಾ ರೋಗಿಗೆ ರೆಮ್‌ಡೆಸಿವಿರ್ ಔಷಧಿ ಅಗತ್ಯ ಇದೆ ಎಂಬುದನ್ನು ತಜ್ಞ ವೈದ್ಯರು ಅಥವಾ ಅರಿವಳಿಕೆ ತಜ್ಞರು ಲಿಖಿತವಾಗಿ ಪ್ರಮಾಣೀಕರಿಸಬೇಕು. ಇದಲ್ಲದೇ, ಪ್ರತಿಯೊಂದು ರೆಮ್‌ಡೆಸಿವಿರ್ ಚುಚ್ಚುಮದ್ದು ನೀಡಿದ ಬಳಿಕ ಅದರ ಸ್ಟಿಕರ್‌ಅನ್ನು ರೋಗಿಯ ಕೇಸ್ ಶೀಟಿನ ಮೇಲೆ ಹಚ್ಚಬೇಕು. ಆಗ, ರೆಮ್‌ಡೆಸಿವಿರ್ ದುರ್ಬಳಕೆ ಆಗುವುದಿಲ್ಲ ಎಂಬುದು ಸರ್ಕಾರದ ತರ್ಕ. ಇಷ್ಟೆಲ್ಲ ಬಿಗಿ ಬಂದೋಬಸ್ತ್ ಇದ್ದರೂ ರೆಮ್‌ಡೆಸಿವಿರ್ ಕಾಳಸಂತೆ ಮಾರುಕಟ್ಟೆಯನ್ನು ತಲುಪುವುದು ಹೇಗೆ?

ಇದು ಬಹಳ ಸರಳವಾದ ಸರ್ಕಾರಿ ಪೆದ್ದುತನದ ಮತ್ತು ವೈದ್ಯಕೀಯ ಜಗತ್ತಿನಲ್ಲಿರುವ ಕೆಲವು ಕರಿಕುರಿಗಳ ಅನಾವರಣವಾಗಿದೆ. ಬೆಣ್ಣೆಯಿಂದ ಕೂದಲನ್ನು ಎತ್ತಿ ಎಸೆಯುವ ನಾಜೂಕುತನದಲ್ಲೇ ಖಾಸಗಿ ಮತ್ತು ಕೆಲವೆಡೆ ಸರ್ಕಾರಿ ವೈದ್ಯರು ಇದನ್ನು ನಿರ್ವಹಿಸುತ್ತಿದ್ದಾರೆ. ಅದನ್ನು ಹಂತ ಹಂತವಾಗಿ ಹೀಗೆ ವಿವರಿಸಬಹುದು:
* ಒಬ್ಬ ಕೊರೊನಾ ರೋಗಿಗೆ ಹೆಚ್ಚೇನೂ ರೋಗಲಕ್ಷಣಗಳಿಲ್ಲದಿರುವಾಗಲೂ, ಆತ/ಆಕೆಗೆ ರೆಮ್‌ಡೆಸಿವಿರ್ ಖಂಡಿತಕ್ಕೂ ಅಗತ್ಯವಿಲ್ಲ ಎಂದು ಗೊತ್ತಿರುವಾಗಲೂ “ರೆಮ್‌ಡೆಸಿವಿರ್ ಚಿಕಿತ್ಸೆ ಅಗತ್ಯವಿದೆ ಎಂದು ಆ ರೋಗಿಯ ಕೇಸ್ ಶೀಟಿನಲ್ಲಿ ದಾಖಲಿಸಲಾಗುತ್ತದೆ.
* ಆ ರೋಗಿಗೆ ರೆಮ್‌ಡೆಸಿವಿರ್ ಚುಚ್ಚದಿದ್ದರೂ, ಪ್ರತಿಯೊಂದು ಚುಚ್ಚುಮದ್ದನ್ನು ಕೇಸ್ ಶೀಟಿನಲ್ಲಿ ದಾಖಲಿಸಿ, ಅದರ ಸ್ಟಿಕರ್‌ಅನ್ನು ಕೇಸ್ ಶೀಟಿಗೆ ಅಂಟಿಸಲಾಗುತ್ತದೆ.
* ಅಲ್ಲಿಂದ ಬಳಕೆಯಾಗದ ರೆಮ್‌ಡೆಸಿವಿರ್ ಚುಚ್ಚುಮದ್ದು ಬಾಟಲಿಗಳು ಆಸ್ಪತ್ರೆಯ ಆಯಕಟ್ಟಿನ ಜಾಗದ ಸಿಬ್ಬಂದಿಗಳ ಮೂಲಕ ಕಾಳಸಂತೆಕೋರರನ್ನು ತಲುಪುತ್ತದೆ.
* ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಯಾವುದಾದರೂ ರೋಗಿಗೆ ನಿಜಕ್ಕೂ ರೆಮ್‌ಡೆಸಿವಿರ್ ಚುಚ್ಚುಮದ್ದು ಬೇಕಾದಾಗ, ಚಿಕಿತ್ಸೆ ನಡೆಸುವ ವೈದ್ಯರು ಅಥವಾ ನಿಗಾ ಇರಿಸುವ ನೋಡಲ್ ಅಧಿಕಾರಿ, ಕಂಗಾಲಾಗಿ ಔಷಧಿಗೆ ಹುಡುಕಾಡುತ್ತಿರುವ ರೋಗಿಯ ಸಂಬಂಧಿಕರಿಗೆ ಮಹದುಪಕಾರ ಮಾಡುತ್ತಿರುವ ಪೋಸ್ ನೀಡಿ, ಈ ಕಾಳಸಂತೆಕೋರರ ಸಂಪರ್ಕ ನಂಬರ್‌ಗಳನ್ನು ಒದಗಿಸುತ್ತಾರೆ.
* ಕಾಳಸಂತೆಕೋರರು ತಾವು ಹೇಳಿದ ದರ ಸಿಕ್ಕಿದರೆ, ಈ ರೆಮ್‌ಡೆಸಿವಿರ್ ಚುಚ್ಚುಮದ್ದುಗಳನ್ನು ರೋಗಿಯ ಸಂಬಂಧಿಕರಿಗೆ ಒದಗಿಸುತ್ತಾರೆ. ತಮ್ಮ ಪ್ರೀತಿಪಾತ್ರರ ಬದುಕಿನ ಮುಂದೆ ಅವರಿಗೆ ಆ ಕ್ಷಣಕ್ಕೆ ಉಳಿದೆಲ್ಲ ಗೌಣವಾಗಿರುತ್ತದೆ.

ಎಲ್ಲ ಪರ್ಸೆಂಟೇಜ್ ವ್ಯವಹಾರ!
ಈ ಕಾಳಸಂತೆ ಆಟದಲ್ಲಿ ಆಸ್ಪತ್ರೆಯ ವೈದ್ಯರು ಮಾತ್ರವಲ್ಲದೇ ಇಲಾಖೆ, ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳಿಗೂ ಪಾಲಿರುತ್ತದೆ ಎಂದು ಹೇಳಲಾಗಿದೆ. ಇಷ್ಟು ಮಾತ್ರವಲ್ಲದೇ ಆಂಬ್ಯುಲೆನ್ಸ್ ಸೇವೆಗಳಲ್ಲಿ, ಬೇರೆ ದೂರದ ಸುಸಜ್ಜಿತ ಆಸ್ಪತ್ರೆಗಳಿಗೆ ರೆಫರಲ್‌ಗಳಲ್ಲೂ ಕಿಕ್ ಬ್ಯಾಕ್ ವ್ಯವಹಾರ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂತಹ ಸ್ಥಿತಿಯಲ್ಲೂ ಸರ್ಕಾರ ಇವನ್ನೆಲ್ಲ ಎಚ್ಚರದಿಂದ ಗಮನಿಸಿ ಕ್ರಮ ಕೈಗೊಳ್ಳದಿದ್ದರೆ, ಸ್ವತಃ ಸರ್ಕಾರದ ಮಟ್ಟದಲ್ಲೇ ಈ ಗೋಲ್‌ಮಾಲ್ ನಡೆಯುತ್ತಿದೆ ಎಂದೇ ಸಾರ್ವಜನಿಕರು ಊಹಿಸಿಕೊಳ್ಳಬೇಕಾಗುತ್ತದೆ.

– ವಿಶೇಷ ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...