Homeಸಿನಿಮಾಕ್ರೀಡೆಜಗತ್ತು ಕಂಡ ಪ್ರತಿಭಾವಂತ ಲೆಗ್‌ಸ್ಪಿನ್ ಬೌಲರ್ ಶೇನ್ ವಾರ್ನ್

ಜಗತ್ತು ಕಂಡ ಪ್ರತಿಭಾವಂತ ಲೆಗ್‌ಸ್ಪಿನ್ ಬೌಲರ್ ಶೇನ್ ವಾರ್ನ್

- Advertisement -
- Advertisement -

ಶೇನ್ ವಾರ್ನ್ ಕ್ರಿಕೆಟ್ ಜಗತ್ತು ಕಂಡ ಪ್ರತಿಭಾವಂತ ಲೆಗ್‌ಸ್ಪಿನ್ ಬೌಲರ್. ಒಂದು ಕಾಲದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಅವಿಭಾಜ್ಯ ಅಂಗವಾಗಿದ್ದವರು ಶೇನ್ ವಾರ್ನ್. ಎದುರಾಳಿ ತಂಡ ಯಾವುದೇ ಇರಲಿ ಗೆಲುವು ಮಾತ್ರ ಆಸ್ಟ್ರೇಲಿಯಾ ತಂಡದ್ದೆ ಎನ್ನುವ ಅಭಿಪ್ರಾಯವನ್ನು ಸಾರ್ವತ್ರಿಕ ಮಾಡಿದ್ದರಲ್ಲಿ ವಾರ್ನ್ ಪಾಲು ದೊಡ್ಡದಿದೆ. ಕ್ರಿಕೆಟ್ ಆಡುವ ಪಶ್ಚಿಮದ ದೇಶಗಳಲ್ಲಿ ಹೆಸರಾಂತ ವೇಗದ ಬೌಲರ್‌ಗಳು ಮುನ್ನೆಲೆಗೆ ಬಂದರು. ವಾಲ್ಷ್, ಅಂಬ್ರೋಸ್, ಮೆಕ್‌ಗ್ರಾತ್, ಬ್ರೆಟ್‌ಲೀ, ಶಾನ್ ಪೊಲಾಕ್, ಮಖಾಯಾ ಎಂಟಿನಿ, ಶೇನ್‌ಬಾಂಡ್, ಡರೆಲ್ ಟಫಿ, ಹೀತ್ ಸ್ಟ್ರೀಕ್, ಓಲಾಂಗ, ಡೇಲ್‌ಸ್ಟೇನ್ ಹೀಗೆ ಈ ಯಾದಿ ಸಾಗುತ್ತದೆ.

ಸ್ಪಿನ್ ಬೌಲಿಂಗ್‌ನಲ್ಲಿ ವಾರ್ನ್ ಪಡೆದಷ್ಟು ಪ್ರಸಿದ್ಧಿಯನ್ನು ಪಶ್ಚಿಮದ ದೇಶದ ಯಾವ ಸ್ಪಿನ್ನರ್ ಕೂಡ ಇದುವರೆಗೂ ಪಡೆಯಲು ಸಾಧ್ಯವಾಗಿಲ್ಲ. ಇಂಗ್ಲೆಂಡಿನ ಮೈಕ್ ಗ್ಯಾಟಿಂಗ್‌ಗೆ ವಾರ್ನ್ ಹಾಕಿದ ಒಂದು ಎಸೆತ ಶತಮಾನದ ಎಸೆತ ಎನಿಸಿಕೊಂಡಿದೆ. ಬಹುಶಃ ಅವತ್ತು ಗ್ಯಾಟಿಂಗ್ ಅಷ್ಟೆ ಅಲ್ಲ ದೇವರೆ ಕ್ರಿಸ್‌ನಲ್ಲಿ ಇದ್ದಿದ್ದರೂ ವಾರ್ನ್‌ನ ಆ ಎಸೆತದಿಂದ ಬೌಲ್ಡ್ ಆಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯವಿರಲಿಲ್ಲ.

ವಾರ್ನ್ ಚೆಂಡು ಕೈಗೆ ಬಂದ ಕೆಲವೆ ಸೆಕೆಂಡ್‌ಗಳಲ್ಲಿ ಬ್ಯಾಟ್ಸ್‌ಮೆನ್ ಫೇಸ್‌ರೀಡ್ ಮಾಡಿಬಿಡುತ್ತಿದ್ದ. ಬ್ಯಾಟ್ಸ್‌ಮೆನ್ ಮೈಮರೆಯುವ ಸೆಮಿಸೆಕೆಂಡ್ ಸಾಕಿತ್ತು ವಾರ್ನ್‌ಗೆ, ಅಷ್ಟರಲ್ಲಿ ಆ ಬ್ಯಾಟ್ಸ್‌ಮೆನ್ ವಾರ್ನ್‌ನ ಸ್ಪಿನ್ ಬಲೆಗೆ ಬಿದ್ದಿರುತ್ತಿದ್ದ. ವಾರ್ನ್‌ನ ಈ ಸೈಕಲಾಜಿಕಲ್ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದ್ದು ಸಚಿನ್ ತೆಂಡೂಲ್ಕರ್. ಶಾರ್ಜಾದಲ್ಲಿ ವಾರ್ನ್ ಎಸೆತಗಳಿಗೆ ಸಚಿನ್ ಹೊಡೆದ ಸಿಕ್ಸರ್‌ಗಳು ನನ್ನನ್ನು ನಿದ್ದೆಯಲ್ಲೂ ಬೆಚ್ಚಿಬೀಳಿಸುತ್ತಿದ್ದವು ಎಂದು ವಾರ್ನ್ ಹೇಳಿಕೊಂಡಿದ್ದ.

ಶೇನ್ ವಾರ್ನ್ ಪ್ರತಿಭಾವಂತ ಎನ್ನುವುದರಲ್ಲಿ ಅನುಮಾನವಿಲ್ಲ, ಆದರೆ ಶೇನ್ ವಾರ್ನ್‌ನ ಸಮಕಾಲೀನ ಕ್ರಿಕೆಟಿಗನಾಗಿದ್ದ ಶ್ರೀಲಂಕಾದ ಮುತ್ತಯ್ಯ ಮುರುಳೀಧರನ್‌ನಿಂದ ವಾರ್ನ್‌ಗೆ ತೀವ್ರವಾದ ಪೈಪೋಟಿ ಇತ್ತು. ಆದರೆ ಮುರುಳೀಧರನ್ ಬೌಲಿಂಗ್ ಶೈಲಿಯ ಬಗ್ಗೆ ಇದ್ದ ಆರೋಪಗಳು ಕೂಡ ಪರೋಕ್ಷವಾಗಿ ವಾರ್ನ್ ಖ್ಯಾತಿಯನ್ನು ಹೆಚ್ಚಿಸಲು ಸಹಕಾರಿಯಾಯಿತು.

ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಸೇರಿ ಸಾವಿರ ವಿಕೆಟ್‌ಗಳನ್ನು ಪಡೆದ ಖ್ಯಾತಿ ವಾರ್ನ್‌ನದು. ಆತ ಮಹಾನ್ ಕ್ರಿಕೆಟಿಗ ಎಂದು ಹೇಳಲು ನಾನು ಸ್ವಲ್ಪವೂ ಯೋಚಿಸುವುದಿಲ್ಲ ಎನ್ನುವ ಸುನಿಲ್ ಗಾವಸ್ಕರ್ ಮಾತಿಗೆ ಮಹತ್ವವಿದೆ. 2000ನೇ ಇಸವಿಯಲ್ಲಿ ಕ್ರಿಕೆಟ್ ಪರಿಣಿತರ ಸಮಿತಿಗೆ ಶತಮಾನದ ಐದು ಜನ ಕ್ರಿಕೆಟರ್‌ಗಳಲ್ಲಿ ಒಬ್ಬರಾಗಿ ಆಯ್ಕೆಯಾದದ್ದು ವಾರ್ನ್ ಹೆಗ್ಗಳಿಕೆ. ವಿಶೇಷವೇನೆಂದರೆ ಆ ಸಮಯದಲ್ಲಿ ವಾರ್ನ್ ಇನ್ನೂ ಆಸ್ಟ್ರೇಲಿಯಾ ಪರವಾಗಿ ಕ್ರಿಕೆಟ್ ಆಡುತ್ತಿದ್ದರು. ಇದೂವರೆಗೂ ಆ ಗೌರವ ಸಿಕ್ಕ ಏಕೈಕ ಬೌಲರ್ ವಾರ್ನ್. ಸುನಾಮಿಯಿಂದ ನಿರಾಶ್ರಿತರಾದವರಿಗೆ ಸಹಾಯ ಮಾಡಲು ಮೆಲ್ಬರ್ನ್‌ನಲ್ಲಿ ಒಂದು ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿತ್ತು, ಆ ತಂಡದಲ್ಲಿ ಶೇನ್ ವಾರ್ನ್ ಇದ್ದರು. ಇಷ್ಟೇ ಅಲ್ಲದೆ ಸುನಾಮಿಯ ದುಷ್ಪರಿಣಾಮಕ್ಕೆ ಒಳಗಾದ ಜನರಿಗೆ ಸಹಾಯ ಮಾಡಲು ತಮ್ಮ ದೀರ್ಘಾವಧಿಯ ಪ್ರತಿಸ್ಪರ್ಧಿ ಮುತ್ತಯ್ಯ ಮುರುಳೀಧರನ್ ಜೊತೆ ವಾರ್ನ್ ಕೈಜೋಡಿಸಿದರು. ಸುನಾಮಿ ದುರಂತದಿಂದ ಹಾನಿಗೊಳಗಾದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಸುಸ್ಥಿತಿಗೆ ತರಲು ವಾರ್ನ್ ಚಾರಿಟೇಬಲ್ ಟ್ರಸ್ಟ್‌ನಿಂದ ವಾರ್ನ್ ಸಹಾಯ ಮಾಡಿದ್ದರು.

ಕ್ರಿಕೆಟ್ ಮೈದಾನದ ಆಚೆಯ ಅತ್ಯಂತ ವರ್ಣರಂಜಿತ ವ್ಯಕ್ತಿತ್ವ ಶೇನ್ ವಾರ್ನ್‌ದು. ಯೌವ್ವನಿಗನಾಗಿ ಕಾಣಬೇಕೆಂಬ ಹಂಬಲ ವಾರ್ನ್‌ಗೆ ಬಹಳ ಇತ್ತು. ಕೂದಲಿನ ಬಣ್ಣದ ಕುರಿತು ಅವರಿಗೆ ಅಪಾರ ಕಾಳಜಿ. ಜೀವನವನ್ನು ಮೋಜಿನಿಂದ ಕಳೆಯಬೇಕು ಎನ್ನುವ ವಿಷಯದಲ್ಲಿ ವಾರ್ನ್‌ಗೆ ಯಾವುದೇ ಅನುಮಾನವಿರಲಿಲ್ಲ. ಹಣ, ಖ್ಯಾತಿ ಎಲ್ಲವು ಆತನನ್ನು ಹುಡುಕಿ ಬಂದಿತ್ತು. ಆಧುನಿಕ ಜಗತ್ತಿನ ಐಷಾರಾಮಿ ಬದುಕು ವಾರ್ನ್ ಜೀವನಶೈಲಿಯೆ ಆಗಿಹೋಗಿತ್ತು. ಬದುಕಿರುವಷ್ಟು ದಿನ ಜೀವನವನ್ನು ಸುಖಸಂತೋಷದಿಂದ ಕಳೆಯಬೇಕು ಎನ್ನುವ ವರ್ತಮಾನದ ಜಗತ್ತಿನ ಪ್ರತಿರೂಪವಾಗಿ ವಾರ್ನ್ ನಮಗೆ ಕಾಣುತ್ತಾನೆ. ಆತ ಅನೇಕ ಟಿ.ವಿ. ಷೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ. ಇದೆಲ್ಲವು ಆತ ಇನ್ನಷ್ಟು ಜನಪ್ರಿಯನಾಗಲು ಬಳಸುತ್ತಿದ್ದ ಮಾರ್ಗವಾಗಿತ್ತು.

ಬಹುಶಃ ತನ್ನ ವರ್ಣರಂಜಿತ ಬದುಕಿನ ಕಾರಣಕ್ಕಾಗಿ ಅನೇಕ ವಿವಾದಗಳಿಗೂ ಕೂಡ ವಾರ್ನ್ ಒಳಗಾಗಬೇಕಾಯಿತು. ವಾರ್ನ್ ಕ್ರಿಕೆಟ್ ಆಡುವ ಕಾಲದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕನಾಗಿದ್ದ ಸ್ಟೀವ್ ವಾನನ್ನು ಅತ್ಯಂತ ಸ್ವಾರ್ಥಿ ಕ್ರಿಕೆಟಿಗ ಎಂದು ವಾರ್ನ್ ದೂಷಿಸಿದ. 1999ರ ವೆಸ್ಟ್ ಇಂಡಿಸ್ ಪ್ರವಾಸಕ್ಕೆ ತನ್ನನ್ನು ಕೈ ಬಿಡುವುದಕ್ಕೆ ಸ್ಟೀವ್ ವಾ ಕಾರಣವೆಂದು ವಾರ್ನ್‌ನ ವಾದವಾಗಿತ್ತು. ಬ್ರಿಟಿಷ್ ನರ್ಸ್ ಒಬ್ಬರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ವಿವಾದವೂ ಕೂಡ ವಾರ್ನ್ ಮೇಲೆ ಬಂದಿತು. ಉದ್ದೀಪನ ಮದ್ದು ಸೇವನೆ ಮಾಡಿದ ಆರೋಪಕ್ಕೂ ವಾರ್ನ್ ಒಳಗಾದರು. ವೈವಾಹಿಕ ಜೀವನದಲ್ಲಿಯೂ ಹಲವು ಏರುಪೇರುಗಳನ್ನು ಕಂಡವರು ಅವರು.

ಇವುಗಳೆಲ್ಲದರ ಆಚೆ ವಾರ್ನ್ ಬೌಲಿಂಗ್ ಒಂದು ದೃಶ್ಯ ಕಾವ್ಯ. ನಾಲಿಗೆಯನ್ನು ತುಟಿಯಂಚಿಗೆ ಚಾಚಿ ಆತ ಹಾಕುತ್ತಿದ್ದ ಎಸೆತ ಇತ್ತಲ್ಲ ಅದು ಬ್ಯಾಟ್ಸ್‌ಮೆನ್‌ನನ್ನು ವಂಚಿಸುತ್ತಿದ್ದ ಪರಿ ಇತ್ತಲ್ಲ ಅದು ವರ್ಣನಾತೀತ. ಇನ್ನು ಬಹಳಷ್ಟು ಬದುಕಬೇಕಿದ್ದ ವಾರ್ನ್ ತನ್ನ 52 ವಯಸ್ಸಿನಲ್ಲಿ ಥೈಲ್ಯಾಂಡ್‌ನಲ್ಲಿ ನಿಧನ ಹೊಂದಿದ. ಆತ ಥೈಲ್ಯಾಂಡ್‌ನಲ್ಲಿ ತನ್ನ ಅಂತಿಮ ಕ್ಷಣಗಳನ್ನು ಕಳೆದಿದ್ದು ಒಂದು ರೀತಿಯ ಸೋಜಿಗವೆ. ವಿದಾಯ ವಾರ್ನ್.

ಡಾ. ನವೀನ್ ಮಂಡಗದ್ದೆ
ಉಪನ್ಯಾಸಕರು, ಕನ್ನಡಭಾರತಿ ಕುವೆಂಪು ವಿಶ್ವವಿದ್ಯಾಲಯ.


ಇದನ್ನೂ ಓದಿ: ಉದ್ಯಮವಾಗಿ ರೂಪುಗೊಳ್ಳುತ್ತಿರುವ ಕ್ರಿಕೆಟ್ ಮೈದಾನಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...