Homeಮುಖಪುಟವಿಶ್ವಾಸಾರ್ಹ ಕಾಂಗ್ರೆಸ್ ಸರ್ಕಾರವನ್ನು ಮರಳಿ ತನ್ನಿ: ಛತ್ತೀಸ್‌ಗಢ ಜನತೆಗೆ ರಾಹುಲ್ ಕರೆ

ವಿಶ್ವಾಸಾರ್ಹ ಕಾಂಗ್ರೆಸ್ ಸರ್ಕಾರವನ್ನು ಮರಳಿ ತನ್ನಿ: ಛತ್ತೀಸ್‌ಗಢ ಜನತೆಗೆ ರಾಹುಲ್ ಕರೆ

- Advertisement -
- Advertisement -

ಛತ್ತೀಸ್‌ಗಢ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದ್ದು, ಪಕ್ಷದ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ರಾಜ್ಯದಲ್ಲಿ ವಿಶ್ವಾಸಾರ್ಹ ಕಾಂಗ್ರೆಸ್ ಸರ್ಕಾರವನ್ನು ಮರಳಿ ತನ್ನಿ ಎಂದು ಕರೆ ನೀಡಿದ್ದಾರೆ.

ಛತ್ತೀಸ್‌ಗಢದಲ್ಲಿ ಮಂಗಳವಾರ ಬೆಳಗ್ಗೆಯಿಂದ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ ಗಾಂಧಿ, ”ನೀವು ನಿಮ್ಮ ಮತವನ್ನು ಚಲಾಯಿಸುವಾಗ ರಾಜ್ಯ ಕಾಂಗ್ರೆಸ್‌ನ ವಿಶ್ವಾಸಾರ್ಹ ಸರ್ಕಾರವನ್ನು ನೆನಪಿಸಿಕೊಳ್ಳಿ” ಎಂದು ಅವರು ಹೇಳಿದ್ದಾರೆ.

”ಛತ್ತೀಸ್‌ಗಢಕ್ಕೆ ಕಾಂಗ್ರೆಸ್ ನೀಡಿರುವ ಭರವಸೆ: ರೈತರ ಸಾಲ ಮನ್ನಾ, ಪ್ರತಿ ಎಕರೆಗೆ 20 ಕ್ವಿಂಟಾಲ್ ಭತ್ತ ಖರೀದಿ, ಭೂರಹಿತರಿಗೆ ವರ್ಷಕ್ಕೆ 110,000 ಸಹಾಯ ಧನ, ಭತ್ತಕ್ಕೆ 33,200 ಎಂಎಸ್‌ಪಿ, 200 ಯೂನಿಟ್ ವಿದ್ಯುತ್ ಉಚಿತ; ಗ್ಯಾಸ್ ಸಿಲಿಂಡರ್‌ಗೆ 7500 ಸಬ್ಸಿಡಿ: ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣ, 710 ಲಕ್ಷದವರೆಗೆ ಉಚಿತ ಚಿಕಿತ್ಸೆ: 17.5 ಲಕ್ಷ ಕುಟುಂಬಗಳಿಗೆ ವಸತಿ, ಜಾತಿ ಗಣತಿ ಮುಂತಾದ ಚುನಾವಣಾ ಭರವಸೆಗಳನ್ನು ಪಕ್ಷ ಈಡೇರಿಸುತ್ತೇವೆ ಎಂದು ರಾಹುಲ್ ಹೇಳಿದರು.

“ನಾವು ಯಾವ ಭರವಸೆ ನೀಡುತ್ತೇವೆಯೋ ಆ ಎಲ್ಲವುಗಳನ್ನು ಈಡೇರಿಸುತ್ತೇವೆ” ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದರು.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ”ಇಂದು ಛತ್ತೀಸಗಢ ರಾಜ್ಯದಲ್ಲಿ ಮೊದಲ ಹಂತದ ಮತದಾನ ಪ್ರಾರಂಭವಾಗಿದೆ. ನಾವು ಪ್ರತಿಯೊಬ್ಬ ಮತದಾರರಿಗೆ, ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವಕರಿಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಛತ್ತೀಸಗಢದಲ್ಲಿ ನ್ಯಾಯಯುತವಾದ ಆಡಳಿತ ಮುಂದುವರಿಯುತ್ತದೆ ಮತ್ತು ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಹಾಗೇ ಉಳಿಯುತ್ತದೆ ಎಂದು ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ಅವರು ಹೇಳಿದರು.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ ಅವರು ಛತ್ತೀಸ್‌ಗಢದ ಜನರಿಗೆ ಕಾಂಗ್ರೆಸ್ ಭರವಸೆಗಳನ್ನು ಪುನರುಚ್ಚರಿಸಿದ್ದಾರೆ. ”ಛತ್ತೀಸ್‌ಗಢದ ಸಹೋದರ ಸಹೋದರಿಯರಿಗೆ ಕಾಂಗ್ರೆಸ್‌ನ ಭರವಸೆಯಲ್ಲಿ ನಂಬಿಕೆ ಇದೆ. ಛತ್ತೀಸ್‌ಗಢವನ್ನು ಅಭಿವೃದ್ಧಿಯ ಮಾದರಿಯನ್ನಾಗಿ ಮಾಡಿದ್ದೇವೆ” ಎಂದು ಹೇಳಿದರು.

‘ಛತ್ತೀಸ್‌ಗಢದಲ್ಲಿ ಮತ್ತೊಮ್ಮೆ ನಂಬಿಕಸ್ಥ ಕಾಂಗ್ರೆಸ್ ಸರ್ಕಾರ’ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 20 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು, 25 ಮಹಿಳೆಯರು ಸೇರಿದಂತೆ 223 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾರರ ಪಟ್ಟಿಯ ಪ್ರಕಾರ 40,78,681 ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 20 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಗೆ ಮುಕ್ತಾಯವಾಗಲಿದೆ. ಉಳಿದ 10 ಕ್ಷೇತ್ರಗಳಲ್ಲಿ ಮತದಾನ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರಕ್ಕಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಪೈಪೋಟಿ ಇದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...