Homeಮುಖಪುಟಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

ಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

ಈ ಬಗ್ಗೆ ತನಗೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಂದಿರುವ ಹಲವಾರು ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement -
- Advertisement -

ಪತ್ರಕರ್ತೆ ರಾಣಾ ಅಯೂಬ್ ಅವರು ಕಾಶ್ಮೀರದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ‘ಹಿಂದೂ ರಾಷ್ಟ್ರ’ ಎಂಬ ಸಾಮಾಜಿಕ ಜಾಲತಾಣದ ಖಾತೆಯೊಂದು ‘ಗೌರಿ ಲಂಕೇಶ್’ ಅವರನ್ನು ನೆನಪಿಸಿಕೊಳ್ಳುವಂತೆ ಹೇಳಿ ಜೀವ ಬೆದರಿಕೆನ್ನು ಹಾಕಿದೆ.

ಈ ಬಗ್ಗೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಂದಿರುವ ಹಲವಾರು ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯ ನಡುವೆ ಸಿಕ್ಕಿಬಿದ್ದ 65 ವರ್ಷದ ಶ್ರೀನಗರ ನಿವಾಸಿ ಬಶೀರ್ ಅಹ್ಮದ್ ಖಾನ್ ಅವರ ಹತ್ಯೆಯ ವಿರುದ್ಧ ಮಾತನಾಡಿದ ನಂತರ ಈ ಬೆದರಿಕೆಗಳು ಪ್ರಾರಂಭವಾದವು ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಮೂರು ವರ್ಷದ ಮೊಮ್ಮಗ ಅವರ ಶವದ ಮೇಲೆ ಕುಳಿತಿರುವ ಛಾಯಾಚಿತ್ರ ವೈರಲ್ ಆಗಿದ್ದು, ಈ ಹತ್ಯೆಯು ದೇಶದಾದ್ಯಂತ ಭಾರಿ ವಿವಾದಕ್ಕೆ ಕಾರಣವಾಯಿತು.

“ಕಾಶ್ಮೀರದ ಬಗ್ಗೆ ನಾನು ಮಾತನಾಡಿದಾಗೆಲ್ಲ ವಿವರಿಸಲಾಗದ ದ್ವೇಷ ಕಾರುತ್ತಾರೆ. ಈ ಸಮಯದಲ್ಲಿ ಅವರು ಅದನ್ನು ನಿರ್ದಯವಾಗಿ ಮಾಡುತ್ತಿದ್ದಾರೆಂದು ನಾನು ಭಾವಿಸುತ್ತೇನೆ. ಮುಂಚೆ ಅವರು ತಮ್ಮ ಮಾತುಗಳನ್ನು ಹಿಡಿತದಲ್ಲಿಟ್ಟಿದ್ದರು, ನಿರ್ದಿಷ್ಟವಲ್ಲದ ಭಾಷೆಯನ್ನು ಬಳಸುತ್ತಿದ್ದರು, ಆದರೆ ಈಗ ಅವು ನಿರ್ದಿಷ್ಟವಾಗಿರುತ್ತವೆ ಮತ್ತು ಯಾವುದಕ್ಕೂ ಹೆದರುತ್ತಿಲ್ಲ” ಎಂದು ರಾಣಾ ಅಯೂಬ್ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ, “ನನ್ನ ಟೈಮ್‌ಲೈನ್ ಹಾಗೂ ಇನ್‌ಬಾಕ್ಸ್ ಕಾಶ್ಮೀರದ ಬಗ್ಗೆ ಮಾತನಾಡಿದ್ದಕ್ಕಾಗಿ ಕಳೆದ ಎರಡು ದಿನಗಳಿಂದ ಸಾವು ಮತ್ತು ಅತ್ಯಾಚಾರ ಬೆದರಿಕೆಗಳಿಂದ ಮುಳುಗಿದೆ” ಎಂದು ಪ್ರಣಯ್ ಭೌಮಿಕ್ ಎಂಬವರ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳೊಂದಿಗೆ ಟ್ವೀಟ್ ಮಾಡಿದ್ದರು.

ಭೌಮಿಕ್ ಅತ್ಯಂತ ಕೆಟ್ಟ ಭಾಷೆಯನ್ನು ಬಳಸಿದ್ದಲ್ಲದೆ, ‘ಅತ್ಯಾಚಾರ ಬೆದರಿಕೆ’ ಕೂಡ ಹಾಕಿದ್ದಾರೆ ಎಂದು ಆ ಸಂದೇಶಗಳಲ್ಲಿ ಗಮನಿಸಬಹುದು. ಜೊತಗೆ ಕಾಶ್ಮೀರಿ ಮತ್ತು ಮುಸ್ಲಿಮರ ಮೇಲೆ ನಿಂದನೆಗಳನ್ನು ಕೂಡಾ ಮಾಡಿದ್ದಾರೆ.

ಮತ್ತೊಂದು ಸ್ಕ್ರೀನ್‌ಶಾಟ್‌ನಲ್ಲಿ, ‘ಗೌರಿ ಲಂಕೇಶ್’ ಅವರನ್ನು ನೆನಪಿಸಿಕೊಳ್ಳುವಂತೆ ‘ಹಿಂದೂ ರಾಷ್ಟ್ರ’ ಎಂಬ ಖಾತೆಯು ಅಯೂಬ್‌ಗೆ ಎಚ್ಚರಿಕೆ ನೀಡಿದೆ.

ಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

“ನನ್ನ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಸಂಪೂರ್ಣವಾಗಿ ದ್ವೇಷ ಮತ್ತು ಬೆದರಿಕೆಗಳಿಂದ ತುಂಬಿದೆ. ಅವರು ನನಗೆ ಗೌರಿ ಲಂಕೇಶ್ ಅವರನ್ನು ನೆನಪಿಸುತ್ತಿದ್ದಾರೆ. ನಾನು ಪ್ರತಿ ಭಾರಿ ಹೇಳಿಕೆ ನೀಡಿದಾಗಲೆಲ್ಲಾ ಹೀಗೆ ಆಗುತ್ತದೆ” ರಾಣಾಅಯೂಬ್ ಹೇಳಿದ್ದಾರೆ.

“ನನಗೆ ನೆನಪಿದೆ ಗೌರಿ ಸಾಯುವ ಮೂರು ದಿನಗಳ ಮೊದಲು, ನನ್ನ ಬಗ್ಗೆ ಸಾಕಷ್ಟು ದ್ವೇಷ ಕಾರುತ್ತಿರುವಾಗ ಗೌರಿ ನನ್ನ ಫೇಸ್‌ಬುಕ್ ಗೋಡೆಯ ಮೇಲೆ, ಏನೂ ಚಿಂತಿಸಬಾರದು ಮತ್ತು ಈ ಜನರು ಏನನ್ನೂ ಮಾಡುವುದಿಲ್ಲ ಎಂದು ಹೇಳಿ ಪೋಸ್ಟ್ ಮಾಡಿದ್ದರು. ಮೂರು ದಿನಗಳ ನಂತರ ಅವರು ಕೊಲ್ಲಲ್ಪಟ್ಟರು, ಆದ್ದರಿಂದ ಆನ್‌ಲೈನ್ ದ್ವೇಷವು ಆಫ್‌ಲೈನ್‌ನಲ್ಲಿ ಹೋಗುತ್ತದೆಯೇ ಎಂಬ ಭಯ ಯಾವಾಗಲೂ ಇರುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿದ ಎರಡು ಗಂಟೆಯೊಳಗೆ ಮುಂಬೈ ಪೊಲೀಸರು ಅವರ ನಿವಾಸಕ್ಕೆ ಭೇಟಿ ನೀಡಿ ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆಂದು ಹೇಳಿದ್ದಾರೆ.


ಓದಿ: ಕಾಶ್ಮೀರದ ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?: ಫ್ಯಾಕ್ ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...