Homeಮುಖಪುಟಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

ಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

ಈ ಬಗ್ಗೆ ತನಗೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಂದಿರುವ ಹಲವಾರು ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement -
- Advertisement -

ಪತ್ರಕರ್ತೆ ರಾಣಾ ಅಯೂಬ್ ಅವರು ಕಾಶ್ಮೀರದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ‘ಹಿಂದೂ ರಾಷ್ಟ್ರ’ ಎಂಬ ಸಾಮಾಜಿಕ ಜಾಲತಾಣದ ಖಾತೆಯೊಂದು ‘ಗೌರಿ ಲಂಕೇಶ್’ ಅವರನ್ನು ನೆನಪಿಸಿಕೊಳ್ಳುವಂತೆ ಹೇಳಿ ಜೀವ ಬೆದರಿಕೆನ್ನು ಹಾಕಿದೆ.

ಈ ಬಗ್ಗೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಂದಿರುವ ಹಲವಾರು ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯ ನಡುವೆ ಸಿಕ್ಕಿಬಿದ್ದ 65 ವರ್ಷದ ಶ್ರೀನಗರ ನಿವಾಸಿ ಬಶೀರ್ ಅಹ್ಮದ್ ಖಾನ್ ಅವರ ಹತ್ಯೆಯ ವಿರುದ್ಧ ಮಾತನಾಡಿದ ನಂತರ ಈ ಬೆದರಿಕೆಗಳು ಪ್ರಾರಂಭವಾದವು ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಮೂರು ವರ್ಷದ ಮೊಮ್ಮಗ ಅವರ ಶವದ ಮೇಲೆ ಕುಳಿತಿರುವ ಛಾಯಾಚಿತ್ರ ವೈರಲ್ ಆಗಿದ್ದು, ಈ ಹತ್ಯೆಯು ದೇಶದಾದ್ಯಂತ ಭಾರಿ ವಿವಾದಕ್ಕೆ ಕಾರಣವಾಯಿತು.

“ಕಾಶ್ಮೀರದ ಬಗ್ಗೆ ನಾನು ಮಾತನಾಡಿದಾಗೆಲ್ಲ ವಿವರಿಸಲಾಗದ ದ್ವೇಷ ಕಾರುತ್ತಾರೆ. ಈ ಸಮಯದಲ್ಲಿ ಅವರು ಅದನ್ನು ನಿರ್ದಯವಾಗಿ ಮಾಡುತ್ತಿದ್ದಾರೆಂದು ನಾನು ಭಾವಿಸುತ್ತೇನೆ. ಮುಂಚೆ ಅವರು ತಮ್ಮ ಮಾತುಗಳನ್ನು ಹಿಡಿತದಲ್ಲಿಟ್ಟಿದ್ದರು, ನಿರ್ದಿಷ್ಟವಲ್ಲದ ಭಾಷೆಯನ್ನು ಬಳಸುತ್ತಿದ್ದರು, ಆದರೆ ಈಗ ಅವು ನಿರ್ದಿಷ್ಟವಾಗಿರುತ್ತವೆ ಮತ್ತು ಯಾವುದಕ್ಕೂ ಹೆದರುತ್ತಿಲ್ಲ” ಎಂದು ರಾಣಾ ಅಯೂಬ್ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ, “ನನ್ನ ಟೈಮ್‌ಲೈನ್ ಹಾಗೂ ಇನ್‌ಬಾಕ್ಸ್ ಕಾಶ್ಮೀರದ ಬಗ್ಗೆ ಮಾತನಾಡಿದ್ದಕ್ಕಾಗಿ ಕಳೆದ ಎರಡು ದಿನಗಳಿಂದ ಸಾವು ಮತ್ತು ಅತ್ಯಾಚಾರ ಬೆದರಿಕೆಗಳಿಂದ ಮುಳುಗಿದೆ” ಎಂದು ಪ್ರಣಯ್ ಭೌಮಿಕ್ ಎಂಬವರ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳೊಂದಿಗೆ ಟ್ವೀಟ್ ಮಾಡಿದ್ದರು.

ಭೌಮಿಕ್ ಅತ್ಯಂತ ಕೆಟ್ಟ ಭಾಷೆಯನ್ನು ಬಳಸಿದ್ದಲ್ಲದೆ, ‘ಅತ್ಯಾಚಾರ ಬೆದರಿಕೆ’ ಕೂಡ ಹಾಕಿದ್ದಾರೆ ಎಂದು ಆ ಸಂದೇಶಗಳಲ್ಲಿ ಗಮನಿಸಬಹುದು. ಜೊತಗೆ ಕಾಶ್ಮೀರಿ ಮತ್ತು ಮುಸ್ಲಿಮರ ಮೇಲೆ ನಿಂದನೆಗಳನ್ನು ಕೂಡಾ ಮಾಡಿದ್ದಾರೆ.

ಮತ್ತೊಂದು ಸ್ಕ್ರೀನ್‌ಶಾಟ್‌ನಲ್ಲಿ, ‘ಗೌರಿ ಲಂಕೇಶ್’ ಅವರನ್ನು ನೆನಪಿಸಿಕೊಳ್ಳುವಂತೆ ‘ಹಿಂದೂ ರಾಷ್ಟ್ರ’ ಎಂಬ ಖಾತೆಯು ಅಯೂಬ್‌ಗೆ ಎಚ್ಚರಿಕೆ ನೀಡಿದೆ.

ಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

“ನನ್ನ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಸಂಪೂರ್ಣವಾಗಿ ದ್ವೇಷ ಮತ್ತು ಬೆದರಿಕೆಗಳಿಂದ ತುಂಬಿದೆ. ಅವರು ನನಗೆ ಗೌರಿ ಲಂಕೇಶ್ ಅವರನ್ನು ನೆನಪಿಸುತ್ತಿದ್ದಾರೆ. ನಾನು ಪ್ರತಿ ಭಾರಿ ಹೇಳಿಕೆ ನೀಡಿದಾಗಲೆಲ್ಲಾ ಹೀಗೆ ಆಗುತ್ತದೆ” ರಾಣಾಅಯೂಬ್ ಹೇಳಿದ್ದಾರೆ.

“ನನಗೆ ನೆನಪಿದೆ ಗೌರಿ ಸಾಯುವ ಮೂರು ದಿನಗಳ ಮೊದಲು, ನನ್ನ ಬಗ್ಗೆ ಸಾಕಷ್ಟು ದ್ವೇಷ ಕಾರುತ್ತಿರುವಾಗ ಗೌರಿ ನನ್ನ ಫೇಸ್‌ಬುಕ್ ಗೋಡೆಯ ಮೇಲೆ, ಏನೂ ಚಿಂತಿಸಬಾರದು ಮತ್ತು ಈ ಜನರು ಏನನ್ನೂ ಮಾಡುವುದಿಲ್ಲ ಎಂದು ಹೇಳಿ ಪೋಸ್ಟ್ ಮಾಡಿದ್ದರು. ಮೂರು ದಿನಗಳ ನಂತರ ಅವರು ಕೊಲ್ಲಲ್ಪಟ್ಟರು, ಆದ್ದರಿಂದ ಆನ್‌ಲೈನ್ ದ್ವೇಷವು ಆಫ್‌ಲೈನ್‌ನಲ್ಲಿ ಹೋಗುತ್ತದೆಯೇ ಎಂಬ ಭಯ ಯಾವಾಗಲೂ ಇರುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿದ ಎರಡು ಗಂಟೆಯೊಳಗೆ ಮುಂಬೈ ಪೊಲೀಸರು ಅವರ ನಿವಾಸಕ್ಕೆ ಭೇಟಿ ನೀಡಿ ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆಂದು ಹೇಳಿದ್ದಾರೆ.


ಓದಿ: ಕಾಶ್ಮೀರದ ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?: ಫ್ಯಾಕ್ ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...