Homeಮುಖಪುಟಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

ಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

ಈ ಬಗ್ಗೆ ತನಗೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಂದಿರುವ ಹಲವಾರು ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement -
- Advertisement -

ಪತ್ರಕರ್ತೆ ರಾಣಾ ಅಯೂಬ್ ಅವರು ಕಾಶ್ಮೀರದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ‘ಹಿಂದೂ ರಾಷ್ಟ್ರ’ ಎಂಬ ಸಾಮಾಜಿಕ ಜಾಲತಾಣದ ಖಾತೆಯೊಂದು ‘ಗೌರಿ ಲಂಕೇಶ್’ ಅವರನ್ನು ನೆನಪಿಸಿಕೊಳ್ಳುವಂತೆ ಹೇಳಿ ಜೀವ ಬೆದರಿಕೆನ್ನು ಹಾಕಿದೆ.

ಈ ಬಗ್ಗೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಂದಿರುವ ಹಲವಾರು ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯ ನಡುವೆ ಸಿಕ್ಕಿಬಿದ್ದ 65 ವರ್ಷದ ಶ್ರೀನಗರ ನಿವಾಸಿ ಬಶೀರ್ ಅಹ್ಮದ್ ಖಾನ್ ಅವರ ಹತ್ಯೆಯ ವಿರುದ್ಧ ಮಾತನಾಡಿದ ನಂತರ ಈ ಬೆದರಿಕೆಗಳು ಪ್ರಾರಂಭವಾದವು ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಮೂರು ವರ್ಷದ ಮೊಮ್ಮಗ ಅವರ ಶವದ ಮೇಲೆ ಕುಳಿತಿರುವ ಛಾಯಾಚಿತ್ರ ವೈರಲ್ ಆಗಿದ್ದು, ಈ ಹತ್ಯೆಯು ದೇಶದಾದ್ಯಂತ ಭಾರಿ ವಿವಾದಕ್ಕೆ ಕಾರಣವಾಯಿತು.

“ಕಾಶ್ಮೀರದ ಬಗ್ಗೆ ನಾನು ಮಾತನಾಡಿದಾಗೆಲ್ಲ ವಿವರಿಸಲಾಗದ ದ್ವೇಷ ಕಾರುತ್ತಾರೆ. ಈ ಸಮಯದಲ್ಲಿ ಅವರು ಅದನ್ನು ನಿರ್ದಯವಾಗಿ ಮಾಡುತ್ತಿದ್ದಾರೆಂದು ನಾನು ಭಾವಿಸುತ್ತೇನೆ. ಮುಂಚೆ ಅವರು ತಮ್ಮ ಮಾತುಗಳನ್ನು ಹಿಡಿತದಲ್ಲಿಟ್ಟಿದ್ದರು, ನಿರ್ದಿಷ್ಟವಲ್ಲದ ಭಾಷೆಯನ್ನು ಬಳಸುತ್ತಿದ್ದರು, ಆದರೆ ಈಗ ಅವು ನಿರ್ದಿಷ್ಟವಾಗಿರುತ್ತವೆ ಮತ್ತು ಯಾವುದಕ್ಕೂ ಹೆದರುತ್ತಿಲ್ಲ” ಎಂದು ರಾಣಾ ಅಯೂಬ್ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ, “ನನ್ನ ಟೈಮ್‌ಲೈನ್ ಹಾಗೂ ಇನ್‌ಬಾಕ್ಸ್ ಕಾಶ್ಮೀರದ ಬಗ್ಗೆ ಮಾತನಾಡಿದ್ದಕ್ಕಾಗಿ ಕಳೆದ ಎರಡು ದಿನಗಳಿಂದ ಸಾವು ಮತ್ತು ಅತ್ಯಾಚಾರ ಬೆದರಿಕೆಗಳಿಂದ ಮುಳುಗಿದೆ” ಎಂದು ಪ್ರಣಯ್ ಭೌಮಿಕ್ ಎಂಬವರ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳೊಂದಿಗೆ ಟ್ವೀಟ್ ಮಾಡಿದ್ದರು.

ಭೌಮಿಕ್ ಅತ್ಯಂತ ಕೆಟ್ಟ ಭಾಷೆಯನ್ನು ಬಳಸಿದ್ದಲ್ಲದೆ, ‘ಅತ್ಯಾಚಾರ ಬೆದರಿಕೆ’ ಕೂಡ ಹಾಕಿದ್ದಾರೆ ಎಂದು ಆ ಸಂದೇಶಗಳಲ್ಲಿ ಗಮನಿಸಬಹುದು. ಜೊತಗೆ ಕಾಶ್ಮೀರಿ ಮತ್ತು ಮುಸ್ಲಿಮರ ಮೇಲೆ ನಿಂದನೆಗಳನ್ನು ಕೂಡಾ ಮಾಡಿದ್ದಾರೆ.

ಮತ್ತೊಂದು ಸ್ಕ್ರೀನ್‌ಶಾಟ್‌ನಲ್ಲಿ, ‘ಗೌರಿ ಲಂಕೇಶ್’ ಅವರನ್ನು ನೆನಪಿಸಿಕೊಳ್ಳುವಂತೆ ‘ಹಿಂದೂ ರಾಷ್ಟ್ರ’ ಎಂಬ ಖಾತೆಯು ಅಯೂಬ್‌ಗೆ ಎಚ್ಚರಿಕೆ ನೀಡಿದೆ.

ಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

“ನನ್ನ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಸಂಪೂರ್ಣವಾಗಿ ದ್ವೇಷ ಮತ್ತು ಬೆದರಿಕೆಗಳಿಂದ ತುಂಬಿದೆ. ಅವರು ನನಗೆ ಗೌರಿ ಲಂಕೇಶ್ ಅವರನ್ನು ನೆನಪಿಸುತ್ತಿದ್ದಾರೆ. ನಾನು ಪ್ರತಿ ಭಾರಿ ಹೇಳಿಕೆ ನೀಡಿದಾಗಲೆಲ್ಲಾ ಹೀಗೆ ಆಗುತ್ತದೆ” ರಾಣಾಅಯೂಬ್ ಹೇಳಿದ್ದಾರೆ.

“ನನಗೆ ನೆನಪಿದೆ ಗೌರಿ ಸಾಯುವ ಮೂರು ದಿನಗಳ ಮೊದಲು, ನನ್ನ ಬಗ್ಗೆ ಸಾಕಷ್ಟು ದ್ವೇಷ ಕಾರುತ್ತಿರುವಾಗ ಗೌರಿ ನನ್ನ ಫೇಸ್‌ಬುಕ್ ಗೋಡೆಯ ಮೇಲೆ, ಏನೂ ಚಿಂತಿಸಬಾರದು ಮತ್ತು ಈ ಜನರು ಏನನ್ನೂ ಮಾಡುವುದಿಲ್ಲ ಎಂದು ಹೇಳಿ ಪೋಸ್ಟ್ ಮಾಡಿದ್ದರು. ಮೂರು ದಿನಗಳ ನಂತರ ಅವರು ಕೊಲ್ಲಲ್ಪಟ್ಟರು, ಆದ್ದರಿಂದ ಆನ್‌ಲೈನ್ ದ್ವೇಷವು ಆಫ್‌ಲೈನ್‌ನಲ್ಲಿ ಹೋಗುತ್ತದೆಯೇ ಎಂಬ ಭಯ ಯಾವಾಗಲೂ ಇರುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿದ ಎರಡು ಗಂಟೆಯೊಳಗೆ ಮುಂಬೈ ಪೊಲೀಸರು ಅವರ ನಿವಾಸಕ್ಕೆ ಭೇಟಿ ನೀಡಿ ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆಂದು ಹೇಳಿದ್ದಾರೆ.


ಓದಿ: ಕಾಶ್ಮೀರದ ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?: ಫ್ಯಾಕ್ ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...