Homeಮುಖಪುಟಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

ಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

ಈ ಬಗ್ಗೆ ತನಗೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಂದಿರುವ ಹಲವಾರು ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement -
- Advertisement -

ಪತ್ರಕರ್ತೆ ರಾಣಾ ಅಯೂಬ್ ಅವರು ಕಾಶ್ಮೀರದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ‘ಹಿಂದೂ ರಾಷ್ಟ್ರ’ ಎಂಬ ಸಾಮಾಜಿಕ ಜಾಲತಾಣದ ಖಾತೆಯೊಂದು ‘ಗೌರಿ ಲಂಕೇಶ್’ ಅವರನ್ನು ನೆನಪಿಸಿಕೊಳ್ಳುವಂತೆ ಹೇಳಿ ಜೀವ ಬೆದರಿಕೆನ್ನು ಹಾಕಿದೆ.

ಈ ಬಗ್ಗೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಂದಿರುವ ಹಲವಾರು ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯ ನಡುವೆ ಸಿಕ್ಕಿಬಿದ್ದ 65 ವರ್ಷದ ಶ್ರೀನಗರ ನಿವಾಸಿ ಬಶೀರ್ ಅಹ್ಮದ್ ಖಾನ್ ಅವರ ಹತ್ಯೆಯ ವಿರುದ್ಧ ಮಾತನಾಡಿದ ನಂತರ ಈ ಬೆದರಿಕೆಗಳು ಪ್ರಾರಂಭವಾದವು ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಮೂರು ವರ್ಷದ ಮೊಮ್ಮಗ ಅವರ ಶವದ ಮೇಲೆ ಕುಳಿತಿರುವ ಛಾಯಾಚಿತ್ರ ವೈರಲ್ ಆಗಿದ್ದು, ಈ ಹತ್ಯೆಯು ದೇಶದಾದ್ಯಂತ ಭಾರಿ ವಿವಾದಕ್ಕೆ ಕಾರಣವಾಯಿತು.

“ಕಾಶ್ಮೀರದ ಬಗ್ಗೆ ನಾನು ಮಾತನಾಡಿದಾಗೆಲ್ಲ ವಿವರಿಸಲಾಗದ ದ್ವೇಷ ಕಾರುತ್ತಾರೆ. ಈ ಸಮಯದಲ್ಲಿ ಅವರು ಅದನ್ನು ನಿರ್ದಯವಾಗಿ ಮಾಡುತ್ತಿದ್ದಾರೆಂದು ನಾನು ಭಾವಿಸುತ್ತೇನೆ. ಮುಂಚೆ ಅವರು ತಮ್ಮ ಮಾತುಗಳನ್ನು ಹಿಡಿತದಲ್ಲಿಟ್ಟಿದ್ದರು, ನಿರ್ದಿಷ್ಟವಲ್ಲದ ಭಾಷೆಯನ್ನು ಬಳಸುತ್ತಿದ್ದರು, ಆದರೆ ಈಗ ಅವು ನಿರ್ದಿಷ್ಟವಾಗಿರುತ್ತವೆ ಮತ್ತು ಯಾವುದಕ್ಕೂ ಹೆದರುತ್ತಿಲ್ಲ” ಎಂದು ರಾಣಾ ಅಯೂಬ್ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ, “ನನ್ನ ಟೈಮ್‌ಲೈನ್ ಹಾಗೂ ಇನ್‌ಬಾಕ್ಸ್ ಕಾಶ್ಮೀರದ ಬಗ್ಗೆ ಮಾತನಾಡಿದ್ದಕ್ಕಾಗಿ ಕಳೆದ ಎರಡು ದಿನಗಳಿಂದ ಸಾವು ಮತ್ತು ಅತ್ಯಾಚಾರ ಬೆದರಿಕೆಗಳಿಂದ ಮುಳುಗಿದೆ” ಎಂದು ಪ್ರಣಯ್ ಭೌಮಿಕ್ ಎಂಬವರ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳೊಂದಿಗೆ ಟ್ವೀಟ್ ಮಾಡಿದ್ದರು.

ಭೌಮಿಕ್ ಅತ್ಯಂತ ಕೆಟ್ಟ ಭಾಷೆಯನ್ನು ಬಳಸಿದ್ದಲ್ಲದೆ, ‘ಅತ್ಯಾಚಾರ ಬೆದರಿಕೆ’ ಕೂಡ ಹಾಕಿದ್ದಾರೆ ಎಂದು ಆ ಸಂದೇಶಗಳಲ್ಲಿ ಗಮನಿಸಬಹುದು. ಜೊತಗೆ ಕಾಶ್ಮೀರಿ ಮತ್ತು ಮುಸ್ಲಿಮರ ಮೇಲೆ ನಿಂದನೆಗಳನ್ನು ಕೂಡಾ ಮಾಡಿದ್ದಾರೆ.

ಮತ್ತೊಂದು ಸ್ಕ್ರೀನ್‌ಶಾಟ್‌ನಲ್ಲಿ, ‘ಗೌರಿ ಲಂಕೇಶ್’ ಅವರನ್ನು ನೆನಪಿಸಿಕೊಳ್ಳುವಂತೆ ‘ಹಿಂದೂ ರಾಷ್ಟ್ರ’ ಎಂಬ ಖಾತೆಯು ಅಯೂಬ್‌ಗೆ ಎಚ್ಚರಿಕೆ ನೀಡಿದೆ.

ಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

“ನನ್ನ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಸಂಪೂರ್ಣವಾಗಿ ದ್ವೇಷ ಮತ್ತು ಬೆದರಿಕೆಗಳಿಂದ ತುಂಬಿದೆ. ಅವರು ನನಗೆ ಗೌರಿ ಲಂಕೇಶ್ ಅವರನ್ನು ನೆನಪಿಸುತ್ತಿದ್ದಾರೆ. ನಾನು ಪ್ರತಿ ಭಾರಿ ಹೇಳಿಕೆ ನೀಡಿದಾಗಲೆಲ್ಲಾ ಹೀಗೆ ಆಗುತ್ತದೆ” ರಾಣಾಅಯೂಬ್ ಹೇಳಿದ್ದಾರೆ.

“ನನಗೆ ನೆನಪಿದೆ ಗೌರಿ ಸಾಯುವ ಮೂರು ದಿನಗಳ ಮೊದಲು, ನನ್ನ ಬಗ್ಗೆ ಸಾಕಷ್ಟು ದ್ವೇಷ ಕಾರುತ್ತಿರುವಾಗ ಗೌರಿ ನನ್ನ ಫೇಸ್‌ಬುಕ್ ಗೋಡೆಯ ಮೇಲೆ, ಏನೂ ಚಿಂತಿಸಬಾರದು ಮತ್ತು ಈ ಜನರು ಏನನ್ನೂ ಮಾಡುವುದಿಲ್ಲ ಎಂದು ಹೇಳಿ ಪೋಸ್ಟ್ ಮಾಡಿದ್ದರು. ಮೂರು ದಿನಗಳ ನಂತರ ಅವರು ಕೊಲ್ಲಲ್ಪಟ್ಟರು, ಆದ್ದರಿಂದ ಆನ್‌ಲೈನ್ ದ್ವೇಷವು ಆಫ್‌ಲೈನ್‌ನಲ್ಲಿ ಹೋಗುತ್ತದೆಯೇ ಎಂಬ ಭಯ ಯಾವಾಗಲೂ ಇರುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿದ ಎರಡು ಗಂಟೆಯೊಳಗೆ ಮುಂಬೈ ಪೊಲೀಸರು ಅವರ ನಿವಾಸಕ್ಕೆ ಭೇಟಿ ನೀಡಿ ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆಂದು ಹೇಳಿದ್ದಾರೆ.


ಓದಿ: ಕಾಶ್ಮೀರದ ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?: ಫ್ಯಾಕ್ ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...